ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಏಪ್ರಿಲ್‌ 17; ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಮಂಡ್ಯ, ದಾವಣಗೆರೆ ಸೇರಿ 20 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ಏಪ್ರಿಲ್‌ 17; ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಮಂಡ್ಯ, ದಾವಣಗೆರೆ ಸೇರಿ 20 ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Umesh Kumar S HT Kannada

Apr 17, 2024 06:08 AM IST

ಕರ್ನಾಟಕ ಹವಾಮಾನ ಏಪ್ರಿಲ್ 17; ಹೀಗಿದೆ ಇಂದಿನ ಹವಾಮಾನ

  • ಕರ್ನಾಟಕ ಹವಾಮಾನ ಏಪ್ರಿಲ್ 17: ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಮಂಡ್ಯ, ದಾವಣಗೆರೆ ಸೇರಿ 20 ಜಿಲ್ಲೆಗಳಲ್ಲಿ ಕೆಲವು ಕಡೆ ಹಗುರ ಚದುರಿದ ಮಳೆ ನಿರೀಕ್ಷೆ ಮಾಡಬಹುದು. ಉಳಿದಂತೆ ರಾಜ್ಯದಲ್ಲಿ ವ್ಯಾಪಕವಾಗಿ ಒಣಹವೆಯೇ ಮುಂದುವರಿಯಲಿದೆ.

ಕರ್ನಾಟಕ ಹವಾಮಾನ ಏಪ್ರಿಲ್ 17; ಹೀಗಿದೆ ಇಂದಿನ ಹವಾಮಾನ
ಕರ್ನಾಟಕ ಹವಾಮಾನ ಏಪ್ರಿಲ್ 17; ಹೀಗಿದೆ ಇಂದಿನ ಹವಾಮಾನ

ಬೆಂಗಳೂರು: ಕರ್ನಾಟಕದಲ್ಲಿ ಇಂದು ವ್ಯಾಪಕವಾಗಿ ಒಣಹವೆ ಇದ್ದರೂ, ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಮಂಡ್ಯ, ದಾವಣಗೆರೆ ಸೇರಿ 20 ಜಿಲ್ಲೆಗಳಲ್ಲಿ ಕೆಲವು ಕಡೆ ಹಗುರ ಚದುರಿದ ಮಳೆ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನಾ ವರದಿ ಹೇಳಿದೆ. ಇದರಂತೆ, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 18ರ ಬೆಳಗ್ಗೆ 8.30ರ ತನಕ ಒಣಹವೆ, ಹೆಚ್ಚು ಉಷ್ಣಾಂಶ ಮತ್ತು ಆರ್ದ್ರತೆ ಇರಲಿದೆ. ಇನ್ನು ಏಪ್ರಿಲ್ 18ರಿಂದ 20ರ ತನಕ ಈ ಮೂರೂ ಜಿಲ್ಲೆಗಳಲ್ಲಿ ಇದೇ ಹವಾಮಾನ ಮುಂದುವರಿಯಲಿದೆ. ಆದಾಗ್ಯೂ, 19 ಮತ್ತು 20ರಂದು ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ. ಇರಬಹುದು ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

Bangalore News: ಅಜಾಗರೂಕತೆಯಿಂದ ಕಾರು ಚಾಲನೆ, ಬೆಂಗಳೂರಲ್ಲಿ ಬಾಲಕ ಸಾವು, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Hassan Scandal: ತಿರುವು ಪಡೆದುಕೊಳ್ಳುತ್ತಿರುವ ಪ್ರಜ್ವಲ್‌ ರೇವಣ್ಣ ಪ್ರಕರಣ, ಜೆಡಿಎಸ್‌ ಶಾಸಕನ ವಿರುದ್ದವೇ ಆರೋಪ, ಮತ್ತಿಬ್ಬರ ಬಂಧನ

ಶಕ್ತಿ ಯೋಜನೆ ನಂತರವೂ ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಏರಿಕೆ, ದೂರದ ಪ್ರಯಾಣ ಬೆಳೆಸುವ ಮಹಿಳೆಯರ ಬೇಡಿಕೆಗಳೇನು?

Migratory Birds day: ವಿಶ್ವ ವಲಸೆ ಹಕ್ಕಿಗಳಿಗೂ ಉಂಟು ವರ್ಷದಲ್ಲಿ ಎರಡು ದಿನ, ಯಾವಾಗ, ಏನಿದರ ವಿಶೇಷ

ಇನ್ನುಳಿದಂತೆ ಉತ್ತರ ಒಳನಾಡಿನ ಹಾವೇರಿಯಲ್ಲಿ ಒಣಹವೆ ಇರಲಿದೆ. ಮಳೆಯ ಸೂಚನೆ ಈ ಜಿಲ್ಲೆಯಲ್ಲಿ ಇಲ್ಲ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಹಗುರವಾದ ಚದುರಿದ ಮಳೆ ಬೀಳಬಹುದು. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರುಗಳಲ್ಲಿ ಹಗುರ, ಚದುರಿದ ಮಳೆಯನ್ನು ನಿರೀಕ್ಷಿಸಬಹುದು. ದಕ್ಷಿಣ ಒಳನಾಡಿನ ವಿಜಯನಗರ, ಶಿವಮೊಗ್ಗ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರಗಳಲ್ಲಿ ಮಳೆಯ ಸುಳಿವೇ ಇಲ್ಲ. ಒಣಹವೆ ಮತ್ತು ತಾಪಮಾನ ಹೆಚ್ಚಳ ಇರಲಿದೆ ಆದಾಗ್ಯೂ ಏಪ್ರಿಲ್ 19 ಮತ್ತು 20ರಂದು ಕೆಲವು ಕಡೆಗೆ ಬಿರುಗಾಳಿ ಸಹಿತ ಗುಡುಗು ಮಿಂಚು ಇರಬಹುದು. ಬಿರುಗಾಳಿಯ ವೇಗ 30ರಿಂದ 40 ಕಿ.ಮೀ. ಇರಬಹುದು ಎಂದು ವರದಿ ಹೇಳಿದೆ.

ಬೆಂಗಳೂರು ಹವಾಮಾನ ಇಂದು (ಏಪ್ರಿಲ್‌ 17), ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್‌ 17) ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 16) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 35.9 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 16) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 36.2 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21.4 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 17) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 46)

ಮಂಗಳೂರು – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 75)

ಚಿತ್ರದುರ್ಗ – 37.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 15)

ಗದಗ – 30.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62)

ಹೊನ್ನಾವರ – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)

ಕಲಬುರಗಿ – 32.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 59)

ಬೆಳಗಾವಿ – 31.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 59)

ಕಾರವಾರ – 35 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ