logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 29; ಉತ್ತರ ಒಳನಾಡಿನ ಹಲವೆಡೆ ಉಷ್ಣದ ಅಲೆಗಳ ಎಚ್ಚರಿಕೆ; ಬೆಂಗಳೂರಲ್ಲಿ ಗರಿಷ್ಠ ತಾಪಮಾನ

ಕರ್ನಾಟಕ ಹವಾಮಾನ ಮಾರ್ಚ್ 29; ಉತ್ತರ ಒಳನಾಡಿನ ಹಲವೆಡೆ ಉಷ್ಣದ ಅಲೆಗಳ ಎಚ್ಚರಿಕೆ; ಬೆಂಗಳೂರಲ್ಲಿ ಗರಿಷ್ಠ ತಾಪಮಾನ

Umesh Kumar S HT Kannada

Mar 29, 2024 06:31 AM IST

ಕರ್ನಾಟಕ ಹವಾಮಾನ ಮಾರ್ಚ್ 29; ಉತ್ತರ ಒಳನಾಡಿನ ಹಲವೆಡೆ ಉಷ್ಣದ ಅಲೆಗಳ ಎಚ್ಚರಿಕೆ

  • ಕರ್ನಾಟಕ ಹವಾಮಾನ ಮಾರ್ಚ್ 29; ರಾಜ್ಯದ ಉತ್ತರ ಒಳನಾಡಿನ ಹಲವೆಡೆ ಉಷ್ಣದ ಅಲೆ ಅಥವಾ ಶಾಖ ತರಂಗಗಳ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ನಡುವೆ ಬೆಂಗಳೂರು ಸುತ್ತಮುತ್ತ ತಾಪಮಾನ ಹೆಚ್ಚಳದ ಮುನ್ಸೂಚನೆಯನ್ನೂ ಹವಾಮಾನ ಮುನ್ಸೂಚನೆ ವರದಿ ನೀಡಿದೆ.

ಕರ್ನಾಟಕ ಹವಾಮಾನ ಮಾರ್ಚ್ 29; ಉತ್ತರ ಒಳನಾಡಿನ ಹಲವೆಡೆ ಉಷ್ಣದ ಅಲೆಗಳ ಎಚ್ಚರಿಕೆ
ಕರ್ನಾಟಕ ಹವಾಮಾನ ಮಾರ್ಚ್ 29; ಉತ್ತರ ಒಳನಾಡಿನ ಹಲವೆಡೆ ಉಷ್ಣದ ಅಲೆಗಳ ಎಚ್ಚರಿಕೆ

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಇಂದು (ಮಾರ್ಚ್‌ 29) ಉಷ್ಣದ ಅಲೆಗಳ ಎಚ್ಚರಿಕೆಯನ್ನು ನೀಡಿರುವ ಭಾರತದ ಹವಾಮಾನ ಇಲಾಖೆ, ಬೆಂಗಳೂರು ಸುತ್ತಮುತ್ತ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿ ಇರಲಿದೆ ಎಂದು ಎಚ್ಚರಿಸಿದೆ. ಇಂದು ಎಲ್ಲೂ ಮಳೆಯ ಮುನ್ಸೂಚನೆ ಇಲ್ಲ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಮಂಗಳೂರು ಖಾಸಗಿ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ; ಆರೋಪಿ ಬಂಧನ

ಬೆಂಗಳೂರಿನಲ್ಲಿ ಸತತ ಎರಡನೇ ದಿನವೂ ಮಳೆ, ತೊಂದರೆ ಅನುಭವಿಸಿದರೂ ಮಳೆಯಾಗಿದ್ದಕ್ಕೆ ಖುಷಿಪಟ್ಟ ನಾಗರಿಕರು

ಕರ್ನಾಟಕ ಹವಾಮಾನ ಮೇ 10; ಮೈಸೂರು, ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಸಾಧಾರಣ ಮಳೆ, ತುಮಕೂರು ಸೇರಿ 6 ಜಿಲ್ಲೆಗಳಲ್ಲಿ ಒಣಹವೆ

ಬೆಂಗಳೂರು ಗುಡ್‌ಗಿಂಗ್ ಅಂಡ್ ಮಿಂಚಿಂಗ್ ಹೆವಿಲಿ: ಮಳೆ ಕಂಡು ಖುಷಿಯಾದ ನೆಟ್ಟಿಗರು ಹಂಚಿಕೊಂಡ ಖುಷಿ ವಿಡಿಯೊಗಳು ಇಲ್ಲಿವೆ

ಆದಾಗ್ಯೂ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಬುಧವಾರ ಹೇಳಿತ್ತು.

ಕರ್ನಾಟಕ, ಗುಜರಾತ್ ಮತ್ತು ರಾಜಸ್ಥಾನಗಳಲ್ಲಿ ಕೆಲವು ಕಡೆಗಳಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಹೀಗಾಗಿ ಶಾಖದ ಅಲೆಗಳ ಮುನ್ನೆಚ್ಚರಿಕೆಯನ್ನು ನೀಡಿರುವ ಭಾರತದ ಹವಾಮಾನ ಇಲಾಖೆಯು, ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹೇಳಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಾರ್ಚ್ 27 ರಿಂದ 29 ರವರೆಗೆ ಅಂದರೆ ಇಂದು ಕೂಡ ಉಷ್ಣದ ಅಲೆಗಳ ಅಬ್ಬರ ಇರಲಿದೆ. ವಿಶೇಷವಾಗಿ ಹಾವೇರಿ, ವಿಜಯಪುರ, ಕೊಪ್ಪಳ, ದಾವಣಗೆರೆ, ಕಲಬುರಗಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಶಾಖತರಂಗ ಹೆಚ್ಚಳವಾಗಲಿದೆ ಎಂದು ವರದಿ ಎಚ್ಚರಿಸಿದೆ. ಅದೇ ರೀತಿ, ಕರ್ನಾಟಕದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು 2- 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು. ಇಂದು ಕೂಡ ಬಿಸಿಗಾಳಿಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉಷ್ಣ ಅಲೆಯ ಎಚ್ಚರಿಕೆ: ಮುಂದಿನ 2 ದಿನಗಳಲ್ಲಿ ರಾಜ್ಯದ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರುವ ಸಾಧ್ಯತೆ ಇದ್ದು. ಮುಂದಿನ 5 ದಿನಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3̊ ಡಿಗ್ರಿ ಸೆಲ್ಶಿಯಸ್‌ ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿನ್ನೆ (ಮಾರ್ಚ್ 28) ತಿಳಿಸಿದೆ.

ಬೆಂಗಳೂರು ಹವಾಮಾನ ಇಂದು (ಮಾ.29) ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮಾರ್ಚ್ 29) ತಾಪಮಾನ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.28) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 28) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 21.5 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 28 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 48)

ಮಂಗಳೂರು – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಚಿತ್ರದುರ್ಗ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 32)

ಗದಗ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 32)

ಹೊನ್ನಾವರ – 31 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66)

ಕಲಬುರಗಿ – 31.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 47)

ಬೆಳಗಾವಿ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70)

ಕಾರವಾರ – 33.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು