logo
ಕನ್ನಡ ಸುದ್ದಿ  /  Latest News  /  Mysuru News Literary Critique Pro Gh Nayak Passed Away Cremation Details Of Gh Nayak Literature News In Kannada Kub

GHNayak: ಕನ್ನಡದ ಹಿರಿಯ ಸಾಹಿತಿ ಪ್ರೊ.ಜಿ.ಎಚ್.ನಾಯಕ್‌ ಮೈಸೂರಿನಲ್ಲಿ ಶುಕ್ರವಾರ ನಿಧನ

HT Kannada Desk HT Kannada

May 26, 2023 02:00 PM IST

ಮೈಸೂರಿನಲ್ಲಿ ಹಿರಿಯ ಸಾಹಿತಿ ಜಿ.ಎಚ್‌.ನಾಯಕ ಶುಕ್ರವಾರ ನಿಧನರಾದರು

    • ಉತ್ತರ ಕನ್ನಡದ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ ೧೯೩೫ ಸೆಪ್ಟಂಬರ ೧೮ರಂದು ಜನಿಸಿದ್ದ ಜಿ.ಎಚ್‌.ನಾಯಕ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರಿಗರೇ ಆಗಿ ಹೋಗಿದ್ದರು.
ಮೈಸೂರಿನಲ್ಲಿ ಹಿರಿಯ ಸಾಹಿತಿ ಜಿ.ಎಚ್‌.ನಾಯಕ ಶುಕ್ರವಾರ ನಿಧನರಾದರು
ಮೈಸೂರಿನಲ್ಲಿ ಹಿರಿಯ ಸಾಹಿತಿ ಜಿ.ಎಚ್‌.ನಾಯಕ ಶುಕ್ರವಾರ ನಿಧನರಾದರು

ಮೈಸೂರು: ತಮ್ಮ ನಿಷ್ಠುರ ಮಾತು, ವಿಮರ್ಶೆಯಿಂದ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಸಿದ್ದರಾಗಿದ್ದ ಹಿರಿಯ ಸಾಹಿತಿ ಪ್ರೊ.ಜಿ.ಎಚ್‌.ನಾಯಕ್‌ ಬಹುಕಾಲದ ಅಸೌಖ್ಯದ ನಂತರ ಶುಕ್ರವಾರ ನಿಧನರಾದರು.

ಟ್ರೆಂಡಿಂಗ್​ ಸುದ್ದಿ

ಒಂದಲ್ಲ ಎರಡಲ್ಲ ಇವರು 3 ಸಾವಿರ ವಸ್ತುಗಳ ಅನ್ವೇಷಕ, ನೀವು ಬಳಸುವ ಪ್ರತಿ ವಸ್ತುಗಳು ಇವರದ್ದೇ, ಯಾರವರು?

kalaburgi News: ಟ್ರಾಕ್ಟರ್‌ ಹತ್ತಿಸಿ ಪೊಲೀಸ್‌ ಹತ್ಯೆ: ಮರಳು ದಂಧೆ ತಡೆಯಲು ಹೋದಾಗ ಕಲಬುರಗಿ ಜಿಲ್ಲೆಯಲ್ಲಿ ಕೃತ್ಯ

KCET Results: ಸಿಇಟಿ ಫಲಿತಾಂಶ ಪ್ರಕಟ; ಯಾವ ವಿಷಯದಲ್ಲಿ ಯಾರು ಟಾಪರ್‌

Free bus service: ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಶುರು; ಮೊದಲ ದಿನವೇ ರಶ್‌

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರಿಗೆ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾನಾಯಕ. ಪುತ್ರಿ ದೀಪಾ ಇದ್ದಾರೆ.

ನುಡಿದಂತೆಯೇ ನಡೆದು ಸರಳವಾಗಿಯೇ ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದ ಜಿ.ಎಚ್‌.ನಾಯಕ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿದ್ದಾರೆ.

ಉತ್ತರ ಕನ್ನಡದ ಜಿಲ್ಲೆಯ ಅಂಕೋಲ ತಾಲ್ಲೂಕಿನ ಸೂರ್ವೆಯಲ್ಲಿ 1935ರ ಸೆಪ್ಟಂಬರ್‌ 18ರಂದು ಜನಿಸಿದ್ದ ಅವರಿಗೆ 88 ವರ್ಷ ವಯಸ್ಸಾಗಿತ್ತು. ವಿದ್ಯಾರ್ಥಿ ದೆಸೆಯಿಂದಲೂ ಮೈಸೂರಿನಲ್ಲಿಯೇ ನೆಲೆಸಿದ್ದ ಅವರು ಮೈಸೂರಿಗರೇ ಆಗಿ ಹೋಗಿದ್ದರು.

ಕನ್ನಡ ಸಾಹಿತ್ಯ ಲೋಕದಲ್ಲಿ ಜಿ.ಎಚ್.ನಾಯಕ ಎಂದು ಚಿರಪರಿಚಿತರಾಗಿದ್ದ ಅವರ ಪೂರ್ಣ ಹೆಸರು ಗೋವಿಂದರಾಯ ಹಮ್ಮಣ್ಣ ನಾಯಕ . ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ಬಾಳು ಎನ್ನುವುದು ಅವರ ಆತ್ಮಕಥನ.

ಸಮಕಾಲೀನ (1973 ), ಅನಿವಾರ್ಯ (1980), ನಿರಪೇಕ್ಷೆ (1984), ನಿಜದನಿ (1988), ವಿನಯ ವಿಮರ್ಶೆ (1991), ಸಕಾಲಿಕ (1995), ಗುಣ ಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ಕೃತಿ ಸಾಕ್ಷಿ (2006), ಸ್ಥಿತಿ ಪ್ರಜ್ಞೆ (2007)

ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009), ಉತ್ತರಾರ್ಧ (2011) ಅವರ ಪ್ರಮುಖ ಕೃತಿಗಳು.

ಉತ್ತರಾರ್ಧ ಕೃತಿಗೆ 2019 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಿರಪೇಕ್ಷ ವಿಮರ್ಶಾ ಕೃತಿಗೆ 'ಕರ್ನಾಟಕ ಸಾಹಿತ್ಯ ಅಕಾಡೆಮಿ'ಯ ಪ್ರಶಸ್ತಿ. ನಿಜದನಿ ವಿಮರ್ಶಾ ಕೃತಿಗೆ 'ವಿ.ಎಂ.ಇನಾಂದಾರ ಸ್ಮಾರಕ ಜಿ.ಎಚ್‌.ನಾಯಕ ಅವರಿಗೆ ಲಭಿಸಿವೆ.

ಅಡಿಗರ ಗೌರವ ಗ್ರಂಥ ಸಂವೇದನೆ , ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, ಶತಮಾನದ ಕನ್ನಡ ಸಾಹಿತ್ಯ 1,2 ನೇ ಸಂಪುಟಗಳಿಗೆ ಸಂಪಾದಕರೂ ಆಗಿದ್ದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು