logo
ಕನ್ನಡ ಸುದ್ದಿ  /  Nation And-world  /  After Delhi Shocker, Womans Mutilated Body Found In Well In Up

UP crime: ದೆಹಲಿ ಘಟನೆ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ತುಂಡು ತುಂಡಾಗಿ ಕತ್ತರಿಸಿ ಯುವತಿಯ ಕೊಲೆ

HT Kannada Desk HT Kannada

Nov 16, 2022 04:37 PM IST

ಸಾಂದರ್ಭಿಕ ಚಿತ್ರ

    • ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಅಂತಹದ್ದೇ ಘಟನೆಯೊಂದು ನಡೆದಿದೆ. ಉತ್ತರ ಪ್ರದೇಶದ ಅಜಂಗಢದ ಅಹ್ರೌಲಾ ಪ್ರದೇಶದ ಬಾವಿಯಲ್ಲಿ ಯುವತಿಯೊಬ್ಬರ ದೇಹದ ತುಂಡರಿಸಿದ ಭಾಗಗಳು ಪತ್ತೆಯಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಜಂಗಢ (ಉತ್ತರ ಪ್ರದೇಶ): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಅಂತಹದ್ದೇ ಘಟನೆಯೊಂದು ನಡೆದಿದೆ. ಉತ್ತರ ಪ್ರದೇಶದ ಅಜಂಗಢದ ಅಹ್ರೌಲಾ ಪ್ರದೇಶದ ಬಾವಿಯಲ್ಲಿ ಯುವತಿಯೊಬ್ಬರ ದೇಹದ ತುಂಡರಿಸಿದ ಭಾಗಗಳು ಪತ್ತೆಯಾಗಿವೆ.

ಟ್ರೆಂಡಿಂಗ್​ ಸುದ್ದಿ

ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿದ್ದೀರಾ? ಮೊದಲ ಪ್ರಯತ್ನ ನಿಮ್ಮದಾಗಿದ್ದರೆ ಈ 9 ಸಲಹೆಗಳನ್ನು ಮೊದಲು ಓದಿಕೊಳ್ಳಿ

ಕೇರಳ, ತಮಿಳುನಾಡು ಕರಾವಳಿಯಲ್ಲಿ ಕಲ್ಲಕಡಲ್ ವಿದ್ಯಮಾನ ಎಚ್ಚರಿಕೆ; ಮೀನುಗಾರರಿಗೆ ಎಚ್ಚರಿಕೆ, ಏನಿದು ಬೆಳವಣಿಗೆ?

Bank Holidays: ಕಾರ್ಮಿಕರ ದಿನ, ಬಸವ ಜಯಂತಿಗೆ ಬ್ಯಾಂಕ್‌ಗಳಿಗೆ ರಜೆ; ಮೇ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿ ಬಿಡುಗಡೆ

Video: ಕೇರಳದಲ್ಲಿ ಬರೋಬ್ಬರಿ 150 ಜೋಡಿ ಅವಳಿಗಳ ಸಮಾಗಮ; ಒಂದೆಡೆ ಸೇರಲು ನೆರವಾಯ್ತು ವಾಟ್ಸಾಪ್ ಗ್ರೂಪ್

ಅಜಂಗಢದ ಪಶ್ಚಿಮ್​​ ಕಾ ಪುರ ಗ್ರಾಮದಿಂದ ಸುಮಾರು 150 ಮೀಟರ್ ದೂರದಲ್ಲಿರುವ ಬಾವಿಯಲ್ಲಿ ಶವದ ಭಾಗಗಳನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಹ್ರಾಲಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೇಲಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

ಬಾವಿಯೊಳಗೆ ಕಾಲುಗಳು ಮತ್ತು ಕೈಗಳು ಹಾಗೂ ಯುವತಿಯ ಒಳ ಉಡುಪು ಕಂಡುಬಂದಿದೆ. ತುಂಡರಿಸಿದ ತಲೆ ನಾಪತ್ತೆಯಾಗಿದೆ. ರುಂಡ ಪತ್ತೆಮಾಡಲು ಬಾವಿಯ ನೀರನ್ನು ಪಂಪ್​ ಮೂಲಕ ಖಾಲಿ ಮಾಡಲಾಯಿತಾದರೂ ಅದು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಿವಿಜ್ಞಾನ ತಜ್ಞರು ಮತ್ತು ಶ್ವಾನದಳವನ್ನು ಕೂಡ ಕರೆಸಲಾಗಿದ್ದು, ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕೊಲೆಯಾದ ಯುವತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪತ್ತೆಯಾದ ದೇಹದ ಭಾಗಗಳನ್ನು ಮೂರು ದಿನಗಳ ಕಾಲ ಶವಾಗಾರದಲ್ಲಿ ಇರಿಸಿ, ಯುವತಿಯನ್ನು ಗುರುತಿಸಿ ನಂತರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

20-30 ವರ್ಷ ವಯಸ್ಸಿನ ಮಹಿಳೆ ಕಾಣೆಯಾಗಿದ್ದಾರೆಯೇ ಎಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳನ್ನು ವಿಚಾರಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಅಂತಹ ಯಾವುದೇ ನಾಪತ್ತೆ ಪ್ರಕರಣ ವರದಿಯಾಗಿಲ್ಲ. ರಾಜ್ಯದ ಇತರ ಜಿಲ್ಲೆಗಳ ಪೊಲೀಸ್​ ಠಾಣೆಗಳಿಗೂ ಮಾಹಿತಿ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ದೆಹಲಿಯ ಶ್ರದ್ಧಾ ವಾಕರ್ ಭೀಕರ ಕೊಲೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ ಮೇ ತಿಂಗಳಲ್ಲಿ ನಡೆದ ಕೊಲೆಯನ್ನು ಪೊಲೀಸರು ಇದೀಗ ಭೇದಿಸಿದ್ದಾರೆ. ಪ್ರೀತಿಸಿದವನನ್ನು ನಂಬಿ ಮನೆ ಬಿಟ್ಟು ಬಂದಿದ್ದ ಯುವತಿಯನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯ ಅರಣ್ಯ ಪ್ರದೇಶ ಹಾಗೂ ಇತರ ಸ್ಥಳಗಳಲ್ಲಿ ಎಸೆದಿದ್ದಾನೆ ಈ ಭೂಪ. ಬಲಿಯಾದ ಯುವತಿಯನ್ನು ಶ್ರದ್ಧಾ ವಾಕರ್ (27)​ ಎಂದು ಹಾಗೂ ಕೊಲೆ ಮಾಡಿದ ಆರೋಪಿಯನ್ನು ಅಫ್ತಾಬ್ ಅಮೀನ್ ಪೂನಾವಲ್ಲಾ (28) ಎಂದು ಗುರುತಿಸಲಾಗಿದೆ. ಮೃತಳ ತಂದೆಯ ದೂರಿನ ಆಧಾರದ ಮೇಲೆ ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಪಾಲ್ಘರ್‌ ಮೂಲದ ಶ್ರದ್ಧಾ ಮುಂಬೈನಲ್ಲಿ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಡೇಟಿಂಗ್ ಅಪ್ಲಿಕೇಶನ್ ಮೂಲಕ ಅಫ್ತಾಬ್ ಹಾಗೂ ಶ್ರದ್ಧಾಗೆ ಪರಿಚಯವಾಗಿದೆ. ಇಬ್ಬರೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ಇಬ್ಬರೂ ಮುಂಬೈನಲ್ಲಿ ಲಿವಿಂಗ್​ ರಿಲೇಶನ್​ಶಿಪ್​ನಲ್ಲಿ ವಾಸಿಸಲು ಪ್ರಾರಂಭಿಸಿದ್ದಾರೆ. ಈ ವಿಚಾರ ತಿಳಿದ ಶ್ರದ್ಧಾ ಪೋಷಕರು ವಿರೋಧ ವ್ಯಕ್ತಪಡಿಸಿ ಜಗಳವಾಡಿದ್ದಾರೆ. ಹೀಗಾಗಿ ಅಫ್ತಾಬ್ ಹಾಗೂ ಶ್ರದ್ಧಾ ಮುಂಬೈ ತೊರೆದು ದೆಹಲಿಯಲ್ಲಿ ವಾಸಿಸುತ್ತಿದ್ದರು.

ಒಟ್ಟು ಮೂರು ವರ್ಷಗಳಿಂದ ಇಬ್ಬರು ಲಿವಿಂಗ್​ ಟುಗೆದರ್​ನಲ್ಲಿದ್ದರು. ಇಬ್ಬರೂ ದೆಹಲಿಗೆ ಸ್ಥಳಾಂತರಗೊಂಡ ನಂತರ, ಶ್ರದ್ಧಾ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಲು ಶುರು ಮಾಡಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. 2022ರ ಮೇ 18 ರಂದು ಇದೇ ವಿಚಾರಕ್ಕೆ ನಡೆದ ಜಗಳ ತಾರಕಕ್ಕೇರಿದೆ. ಆಕೆಯ ಕತ್ತು ಹಿಸುಕಿದ ಅಫ್ತಾಬ್, ಆಕೆಯನ್ನು 35 ತುಂಡುಗಳಾಗಿ ಕತ್ತರಿಸಿದ್ದಾನೆ. ಹೊಸ ಫ್ರಿಡ್ಜ್​ ಖರೀದಿಸಿ ಅವಳ ದೇಹದ ಭಾಗಗಳನ್ನು ಅದರಲ್ಲಿ ಸಂಗ್ರಹಿಸಿಟ್ಟಿದ್ದಾನೆ. 18 ದಿನಗಳ ನಂತರ ರಾತ್ರಿ ಸಮಯದಲ್ಲಿ ಅದನ್ನು ಕಾಡು ಪ್ರದೇಶ ಸೇರಿದಂತೆ ಇತರೆಡೆ ಎಸೆದಿದ್ದಾನೆ ಎಂದು ದಕ್ಷಿಣ ದೆಹಲಿಯ ಹೆಚ್ಚುವರಿ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು