logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಕೇಂದ್ರ ಬಜೆಟ್ 2024: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ; ರಾಮ ಮಂದಿರ, ನಾರಿಶಕ್ತಿ ಬಣ್ಣನೆ, 10 ಮುಖ್ಯ ಅಂಶ

ಕೇಂದ್ರ ಬಜೆಟ್ 2024: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ; ರಾಮ ಮಂದಿರ, ನಾರಿಶಕ್ತಿ ಬಣ್ಣನೆ, 10 ಮುಖ್ಯ ಅಂಶ

Umesh Kumar S HT Kannada

Jan 31, 2024 01:11 PM IST

ಹೊಸ ಸಂಸತ್ ಭವನದಲ್ಲಿ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮೊದಲ ಬಾರಿಗೆ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. ಇದರೊಂದಿಗೆ ಕೇಂದ್ರ ಬಜೆಟ್ ಅಧಿವೇಶನ ಶುರುವಾಗಿದೆ.

  • Union Budget 2024: ಲೋಕಸಭೆ ಚುನಾವಣೆ ಸಮೀಪದಲ್ಲಿ, ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು. ಸುದೀರ್ಘ ಭಾಷಣದಲ್ಲಿ ಅವರು, ಅಯೋಧ್ಯೆ ರಾಮ ಮಂದಿರ, ನಾರಿ ಶಕ್ತಿ ಅಧಿನಿಯಮ ಸೇರಿ ಕೇಂದ್ರ ಸರ್ಕಾರದ ಸಾಧನೆಗಳ ಪಟ್ಟಿಯನ್ನು ಸಂಸತ್ತಿನ ಮೂಲಕ ದೇಶವಾಸಿಗಳ ಮುಂದೆ ಪ್ರಸ್ತುತಿ ಮಾಡಿದರು. 

ಹೊಸ ಸಂಸತ್ ಭವನದಲ್ಲಿ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮೊದಲ ಬಾರಿಗೆ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. ಇದರೊಂದಿಗೆ ಕೇಂದ್ರ ಬಜೆಟ್ ಅಧಿವೇಶನ ಶುರುವಾಗಿದೆ.
ಹೊಸ ಸಂಸತ್ ಭವನದಲ್ಲಿ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮೊದಲ ಬಾರಿಗೆ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು. ಇದರೊಂದಿಗೆ ಕೇಂದ್ರ ಬಜೆಟ್ ಅಧಿವೇಶನ ಶುರುವಾಗಿದೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಜ.31) ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿ, ಕೇಂದ್ರ ಬಜೆಟ್ (Union Budget 2024) ಅಧಿವೇಶನಕ್ಕೆ ಚಾಲನೆ ನೀಡಿದರು. ಲೋಕಸಭೆ ಚುನಾವಣೆಗೆ ಸಮೀಪದಲ್ಲಿರುವಾಗ ನಡೆಯುತ್ತಿರುವ ಈ ಅಧಿವೇಶನದಲ್ಲಿ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಭಾಷಣದಲ್ಲಿ ಅಯೋಧ್ಯೆ ರಾಮ ಮಂದಿರ, ನಾರಿ ಶಕ್ತಿ ಅಧಿನಿಯಮ ಸೇರಿ ಕೇಂದ್ರ ಸರ್ಕಾರದ ಹತ್ತಾರು ಸಾಧನೆಗಳತ್ತ ದೇಶವಾಸಿಗಳ ಗಮನಸೆಳೆದರು. ಫೆ.9ಕ್ಕೆ ಅಧಿವೇಶನ ಕೊನೆಯಾಗಲಿದೆ.

ಟ್ರೆಂಡಿಂಗ್​ ಸುದ್ದಿ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

“ಈ ಹೊಸ (ಸಂಸತ್ತು) ಕಟ್ಟಡದಲ್ಲಿ ನಾವು ಸಕಾರಾತ್ಮಕ ಚರ್ಚೆ ನಡೆಸುತ್ತೇವೆ. ನಾರಿ ಶಕ್ತಿ ವಂದನ್ ಅಧಿನಿಯಮ್ (ಮಹಿಳಾ ಮೀಸಲಾತಿ ಮಸೂದೆ) ಅಂಗೀಕಾರಕ್ಕಾಗಿ ನಾನು ಸದಸ್ಯರನ್ನು ಶ್ಲಾಘಿಸುತ್ತೇನೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಈ ಅಧಿವೇಶನವನ್ನು "ನಾರಿ ಶಕ್ತಿ ಹಬ್ಬ" ವನ್ನು ಶ್ಲಾಘಿಸಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅಧ್ಯಕ್ಷ ದ್ರೌಪದಿ ಮುರ್ಮು ಅವರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಹ್ಯಾಟ್ರಿಕ್ ಗೆಲುವು ಸಾಧಿಸುವ ಮೂಲಕ ಮೂರನೇ ಅವಧಿಗೆ ಅಧಿಕಾರ ಚುಕ್ಕಾಣಿ ಹಿಡಿಯಲಿದೆ. ಬಳಿಕ ಪೂರ್ಣ ಬಜೆಟ್ ಮಂಡಿಸಲಾಗುವುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಹೊಸ ಸಂಸತ್ ಕಟ್ಟಡದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿಯವರ ಭಾಷಣದ 10 ಅಂಶ:

1) ಹೊಸ ಸಂಸತ್ ಕಟ್ಟಡದಲ್ಲಿ ಇದು ನನ್ನ ಮೊದಲ ಭಾಷಣ. ಈ ಹೊಸ (ಸಂಸತ್ತು) ಕಟ್ಟಡವನ್ನು 'ಅಮೃತ ಕಾಲ'ದ ಆರಂಭದಲ್ಲಿ ನಿರ್ಮಿಸಲಾಗಿದೆ ಮತ್ತು ಇದು 'ಏಕ್ ಭಾರತ್ ಶ್ರೇಷ್ಠ ಭಾರತ್' ನ ಸಾರವನ್ನು ಹೊಂದಿದೆ.

2) ದೇಶದ ಮಟ್ಟಿಗೆ 2023 ಐತಿಹಾಸಿಕ ವರ್ಷ. ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆ ಎಂಬ ಟ್ಯಾಗ್ ಅನ್ನು ಭಾರತ ಉಳಿಸಿಕೊಂಡಿದೆ. ಜಾಗತಿಕ ಬಿಕ್ಕಟ್ಟಿನ ಹೊರತಾಗಿಯೂ ಪ್ರಮುಖ ಆರ್ಥಿಕತೆಗಳ ಪೈಕಿ ವೇಗವಾಗಿ ಬೆಳೆಯಿತು. ಸತತ ಎರಡು ತ್ರೈಮಾಸಿಕಗಳಲ್ಲಿ ಭಾರತವು ಶೇಕಡಾ 7.5 ರಷ್ಟು ಬೆಳವಣಿಗೆ ಸಾಧಿಸಿದೆ.

3) ಕಳೆದ 10 ವರ್ಷಗಳಲ್ಲಿ, ಭಾರತವು 'ದುರ್ಬಲ 5'ರ ಪಟ್ಟಿಯಿಂದ ಅಗ್ರ 5 ಆರ್ಥಿಕತೆಗಳ ಪಟ್ಟಿಯಲ್ಲಿ ಒಂದಾಗಿರುವುದನ್ನು ನಾವು ನೋಡಿದ್ದೇವೆ. ದೇಶದ ಹಣದುಬ್ಬರ ದರವು ಎರಡಂಕಿಗಳಲ್ಲಿತ್ತು. ಅದು ಈಗ ಶೇಕಡ 4 ರೊಳಗೆ ಇದೆ.

4) ನೀತಿ ಆಯೋಗದ ವರದಿ ಪ್ರಕಾರ ನನ್ನ ಸರ್ಕಾರದ 10 ವರ್ಷಗಳ ಆಡಳಿತದಲ್ಲಿ ಸುಮಾರು 25 ಕೋಟಿ ಜನ ಬಡತನದಿಂದ ಹೊರಬಂದಿದ್ದಾರೆ.

5) ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಜನರು ಶತಮಾನಗಳಿಂದ ಭರವಸೆ ಹೊಂದಿದ್ದರು ಮತ್ತು ಆ ಕನಸು ಈಗ ಈಡೇರಿದೆ. ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಪಡಿಸಬೇಕೆಂದು ಜನರು ಬಯಸಿದ್ದರು. ಈಗ 370ನೇ ವಿಧಿಯೂ ಇತಿಹಾಸವಾಗಿದೆ. ಈ ಸಂಸತ್ತು ತ್ರಿವಳಿ ತಲಾಖ್ ವಿರುದ್ಧ ಕಠಿಣ ಕಾನೂನನ್ನು ಮಾಡಿದೆ.

6) ನನ್ನ ಸರ್ಕಾರವು 'ಒನ್ ರ‍್ಯಾಂಕ್ ಒನ್ ಪೆನ್ಷನ್' ಅನ್ನು ಸಹ ಜಾರಿಗೆ ತಂದಿದೆ. ಒಆರ್‌ಒಪಿ ಜಾರಿಗೆ ಬಂದ ನಂತರ ಮಾಜಿ ಸಶಸ್ತ್ರ ಪಡೆಗಳ ಅಧಿಕಾರಿಗಳು ಸುಮಾರು 1 ಲಕ್ಷ ಕೋಟಿ ರೂಪಾಯಿಯನ್ನು ಪಡೆದಿದ್ದಾರೆ.

7) ನಾವು ಆರ್ಥಿಕತೆಯ ವಿವಿಧ ಆಯಾಮಗಳನ್ನು ನೋಡಿದರೆ, ಭಾರತವು ಸರಿಯಾದ ದಿಕ್ಕಿನಲ್ಲಿದೆ ಎಂಬ ವಿಶ್ವಾಸ ಬೆಳೆಯುತ್ತದೆ

8) ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಭಾರತದಲ್ಲಿ ವ್ಯವಹಾರವನ್ನು ಸುಲಭಗೊಳಿಸಲು ಮತ್ತು ಅದಕ್ಕೆ ಸೂಕ್ತ ವಾತಾವರಣವನ್ನು ಸೃಷ್ಟಿಸಲು ನಿರಂತರವಾಗಿ ಕೆಲಸ ಮಾಡಿದೆ. ಎಂಎಸ್ಎಂಇಗಳು ಮತ್ತು ಸಣ್ಣ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಸರ್ಕಾರದ ಬದ್ಧವಾಗಿದೆ.

9) ಮೇಡ್ ಇನ್ ಇಂಡಿಯಾ ರಕ್ಷಣಾ ಉಪಕರಣಗಳು ರಾಷ್ಟ್ರದ ಹೆಮ್ಮೆಯಾಗಿದೆ.

10) ತೆರಿಗೆಯ ದೊಡ್ಡ ಭಾಗವನ್ನು ಯುವಕರು, ಮಹಿಳೆಯರು, ರೈತರು, ಬಡವರನ್ನು ಸಬಲೀಕರಣಗೊಳಿಸಲು ಬಳಸಲಾಗಿದೆ. ಅಭಿವೃದ್ಧಿ ಹೊಂದಿದ ಭಾರತದ ಭವ್ಯ ಕಟ್ಟಡವು ಯುವ ಶಕ್ತಿ, ಮಹಿಳಾ ಶಕ್ತಿ, ರೈತರು, ಬಡವರು ಎಂಬ ನಾಲ್ಕು ಬಲವಾದ ಸ್ತಂಭಗಳ ಮೇಲೆ ನಿಲ್ಲುತ್ತದೆ ಎಂದು ನನ್ನ ಸರ್ಕಾರ ನಂಬಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ