ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  ಭಾರತೀಯ ಚುನಾವಣಾ ಆಯೋಗದ ಚುನಾವಣಾ ಆಯುಕ್ತರಾಗಿ ಮಾಜಿ ಅಧಿಕಾರಿಗಳಾದ ಸುಖ್‌ಬೀರ್ ಸಿಂಗ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

ಭಾರತೀಯ ಚುನಾವಣಾ ಆಯೋಗದ ಚುನಾವಣಾ ಆಯುಕ್ತರಾಗಿ ಮಾಜಿ ಅಧಿಕಾರಿಗಳಾದ ಸುಖ್‌ಬೀರ್ ಸಿಂಗ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

Umesh Kumar S HT Kannada

Mar 14, 2024 02:53 PM IST

ಚುನಾವಣಾ ಆಯುಕ್ತರಾಗಿ ಮಾಜಿ ಅಧಿಕಾರಿಗಳಾದ ಸುಖ್‌ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

  • ಭಾರತದ ಚುನಾವಣಾ ಆಯೋಗ ನೂತನ ಚುನಾವಣಾ ಆಯುಕ್ತರಾಗಿ ಮಾಜಿ ಅಧಿಕಾರಿಗಳಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್‌ ಕುಮಾರ್ ನೇಮಕವಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ಈ ನೇಮಕಾತಿಯನ್ನು ಅಂತಿಮಗೊಳಿಸಿದೆ ಎಂದು ಆಯ್ಕೆ ಸಮಿತಿ ಸದಸ್ಯ ಅಧೀರ್ ರಂಜನ್ ಚೌಧರಿ ಹೇಳಿದರು. 

ಚುನಾವಣಾ ಆಯುಕ್ತರಾಗಿ ಮಾಜಿ ಅಧಿಕಾರಿಗಳಾದ ಸುಖ್‌ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ
ಚುನಾವಣಾ ಆಯುಕ್ತರಾಗಿ ಮಾಜಿ ಅಧಿಕಾರಿಗಳಾದ ಸುಖ್‌ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಭಾರತದ ಚುನಾವಣಾ ಆಯೋಗದಲ್ಲಿ ಖಾಲಿ ಇದ್ದ ಎರಡು ಚುನಾವಣಾ ಆಯುಕ್ತರ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಮಾಜಿ ಅಧಿಕಾರಿಗಳಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಅವರನ್ನು ನೇಮಕ ಮಾಡಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಅಡ್ಡ ಬಂದ ಕೋತಿ ತಪ್ಪಿಸಲು ಹೋಗಿ ಅಪಘಾತ, ಬ್ಯಾಂಕ್‌ ಅಧಿಕಾರಿ,ಸಿಬ್ಬಂದಿ ಸೇರಿ ಮೂವರ ದುರ್ಮರಣ

4ನೇ ಹಂತದ ಲೋಕಸಭೆ ಚುನಾವಣೆ; ಬೆಳಗ್ಗೆ 11ರ ವರೆಗೆ ಶೇ 25 ರಷ್ಟು ಮತದಾನ, ಈವರೆಗೆ ತಿಳಿಯಬೇಕಾದ 10 ಅಂಗಳಿವು

CBSE 10th Result: ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಬಿಡುಗಡೆ; ಶೇ 93.60 ರಷ್ಟು ವಿದ್ಯಾರ್ಥಿಗಳು ತೇರ್ಗಡೆ

CBSE 12th Result: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ; ಶೇ 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರೇ ಮೇಲುಗೈ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿಗಳಾದ ಸುಖ್ಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ಹೊಸ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ ಎಂದು ಸಮಿತಿ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಗುರುವಾರ ತಿಳಿಸಿದ್ದಾರೆ.

ಸಭೆ ಮುಗಿದ ಕೂಡಲೇ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚೌಧರಿ, ಇಬ್ಬರು ಚುನಾವಣಾ ಆಯುಕ್ತರ ಸ್ಥಾನ ಭರ್ತಿ ಮಾಡುವುದಕ್ಕಾಗಿ ಆಯ್ಕೆ ಸಮಿತಿಯ ಮುಂದೆ ಆರು ಹೆಸರುಗಳ ಶಿಫಾರಸು ಬಂದಿದ್ದವು. ಸಂಧು ಮತ್ತು ಕುಮಾರ್ ಅವರ ಹೆಸರುಗಳನ್ನು ಉನ್ನತಾಧಿಕಾರ ಸಮಿತಿಯ ಹೆಚ್ಚಿನ ಸದಸ್ಯರು ಅಂತಿಮಗೊಳಿಸಿದರು ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಈ ಆಯ್ಕೆ ಬಗ್ಗೆ ಅಸಮಾಧಾನ ಹೊಂದಿದ್ದು, ಸುದ್ದಿಗಾರರ ಜತೆಗೆ ಮಾತನಾಡುತ್ತ ಅದನ್ನು ಬಹಿರಂಗಗೊಳಿಸಿದರು.

ಆದಾಗ್ಯೂ, ಭಾರತದ ಮುಖ್ಯ ನ್ಯಾಯಮೂರ್ತಿ ಆಯ್ಕೆ ಸಮಿತಿಯ ಭಾಗವಾಗಬೇಕಿತ್ತು. ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಗೆ 200ಕ್ಕೂ ಹೆಚ್ಚು ಅಭ್ಯರ್ಥಿಗಳ ಹೆಸರು ಬಂದಿದ್ದವು. ಅವುಗಳಲ್ಲಿ ಆರು ಅಭ್ಯರ್ಥಿಗಳ ಹೆಸರುಗಳನ್ನು ಹೇಗೆ ಅಂತಿಮಗೊಳಿಸಲಾಯಿತು ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಅಧೀರ್ ರಂಜನ್‌ ಹೇಳಿದರು.

ಆಯ್ಕೆ ಸಮಿತಿಗೆ ಶಿಫಾರಸು ಆಗಿದ್ದ ಆರು ಹೆಸರುಗಳಿವು

ಮಾಜಿ ಅಧಿಕಾರಿಗಳಾದ ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖ್ಬೀರ್ ಸಿಂಗ್ ಸಂಧು, ಸುಧೀರ್ ಕುಮಾರ್ ಗಂಗಾಧರ್ ರಹಾಟೆ ಅವರ ಹೆಸರುಗಳನ್ನು ಶೋಧ ಸಮಿತಿ ಅಂತಿಮಗೊಳಿಸಿತ್ತು.

"ಆರು ಹೆಸರುಗಳಲ್ಲಿ, ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಚುನಾವಣಾ ಆಯುಕ್ತರಾಗಿ ನೇಮಕ ಮಾಡಲು ಅಂತಿಮಗೊಳಿಸಲಾಗಿದೆ" ಎಂದು ಅಧೀರ್ ರಂಜನ್‌ ಹೇಳಿದರು.

ಗೃಹ ಸಚಿವಾಲಯದಲ್ಲಿದ್ದಾಗ, ಜ್ಞಾನೇಶ್ ಕುಮಾರ್ ಅವರು 370 ನೇ ವಿಧಿಯನ್ನು ರದ್ದುಪಡಿಸುವ ಮೇಲ್ವಿಚಾರಣೆ ನಡೆಸಿದವರು. ಫೆಬ್ರವರಿ 14 ರಂದು ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿ ಮತ್ತು ಅರುಣ್ ಗೋಯೆಲ್ ಅವರು ದಿಢೀರ್ ರಾಜೀನಾಮೆ ನೀಡಿದ ಕಾರಣ ಈ ಹುದ್ದೆಗಳು ಖಾಲಿಯಾಗಿದ್ದವು.

(This copy first appeared in Hindustan Times Kannada website. To read more on Lok Sabha Elections, Political developments, Lok Sabha Constituency profiles, Political Analysis in Kannada please visit kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ