logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gyanvapi Case: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಗೆ ವಾರಾಣಸಿ ನ್ಯಾಯಾಲಯ ಅನುಮತಿ

Gyanvapi Case: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಗೆ ವಾರಾಣಸಿ ನ್ಯಾಯಾಲಯ ಅನುಮತಿ

HT Kannada Desk HT Kannada

Jul 21, 2023 05:42 PM IST

ಜ್ಞಾನವಾಪಿ ಮಸೀದಿ ಸಂಕೀರ್ಣ (ಕಡತ ಚಿತ್ರ)

  • Gyanvapi Case: ಉತ್ತರ ಪ್ರದೇಶದ ವಾರಾಣಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ನಡೆಸಲು ನಿರ್ದೇಶನ ನೀಡಿದೆ. ಸೀಲ್ ಮಾಡಲಾದ ವಾಜು ಟ್ಯಾಂಕ್ ಹೊರತುಪಡಿಸಿ ಸಮೀಕ್ಷೆ ನಡೆಸುವಂತೆ ಅದು ಹೇಳಿದೆ ಎಂದು ಪ್ರಕರಣದಲ್ಲಿ ಹಿಂದೂ ಪರ ಪ್ರತಿನಿಧಿ ವಿಷ್ಣು ಶಂಕರ್ ಜೈನ್ ಶುಕ್ರವಾರ ಹೇಳಿದರು.

ಜ್ಞಾನವಾಪಿ ಮಸೀದಿ ಸಂಕೀರ್ಣ (ಕಡತ ಚಿತ್ರ)
ಜ್ಞಾನವಾಪಿ ಮಸೀದಿ ಸಂಕೀರ್ಣ (ಕಡತ ಚಿತ್ರ) (PTI)

ವಾರಾಣಸಿ (ಉತ್ತರ ಪ್ರದೇಶ): ವಾರಾಣಸಿ ನ್ಯಾಯಾಲಯವು (Varanasi Court) ಜ್ಞಾನವಾಪಿ ಮಸೀದಿ ಸಂಕೀರ್ಣ (Gyanvapi Mosque Complex)ದ ಎಎಸ್‌ಐ ಸಮೀಕ್ಷೆಯನ್ನು ನಡೆಸುವಂತೆ ನಿರ್ದೇಶನ ನೀಡಿದೆ, ಅದನ್ನು ಸೀಲ್ ಮಾಡಲಾದ ವಾಜು ಟ್ಯಾಂಕ್ ಹೊರತುಪಡಿಸಿ ನಡೆಸುವಂತೆ ಕೋರ್ಟ್‌ ಹೇಳಿದೆ ಎಂದು ಪ್ರಕರಣದಲ್ಲಿ ಹಿಂದೂ ಪರ ಪ್ರತಿನಿಧಿ ವಿಷ್ಣು ಶಂಕರ್ ಜೈನ್ ಶುಕ್ರವಾರ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಟ್ರೆಂಡಿಂಗ್​ ಸುದ್ದಿ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಸಾಯಿ ಬಾಬಾ ಮತ್ತೆ ಹುಟ್ಟಿದ್ರಾ, ಈ ಬಾಲಕ ಅವರ ಪುನರವತಾರವೇ, ಏನಿದು ವಿದೇಶೀಯರ ವರ್ತನೆ! - ವೈರಲ್ ವಿಡಿಯೋ

Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ನನ್ನ ಅರ್ಜಿಯನ್ನು ಅನುಮೋದಿಸಲಾಗಿದೆ ಮತ್ತು ಸೀಲ್ ಮಾಡಲಾದ ವಾಜು ಟ್ಯಾಂಕ್ ಹೊರತುಪಡಿಸಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ನಡೆಸಲು ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದೆ ಎಂಬ ಮಾಹಿತಿ ನನಗೆ ಸಿಕ್ಕಿದೆ. ಮೂರರಿಂದ ಆರು ತಿಂಗಳೊಳಗೆ ಸಮೀಕ್ಷೆ ಪೂರ್ಣಗೊಳ್ಳಬಹುದು ಎಂದು ಭಾವಿಸುತ್ತೇನೆ’’ ಎಂದು ವಿಷ್ಣು ಶಂಕರ್‌ ಜೈನ್‌ ಹೇಳಿದರು.

ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂ ಪರವಾಗಿಯೂ ಪ್ರತಿನಿಧಿಸುವ ಸುಭಾಷ್ ನಂದನ್ ಚತುರ್ವೇದಿ, ನ್ಯಾಯಾಲಯದ ತೀರ್ಪು ಪ್ರಕರಣದಲ್ಲಿ ಮಹತ್ವದ ತಿರುವು ನೀಡುತ್ತಿದೆ. ಎಎಸ್‌ಐ ಸಮೀಕ್ಷೆಗೆ ನಮ್ಮ ಅರ್ಜಿಯನ್ನು ಸ್ವೀಕರಿಸಲಾಗಿದೆ ಎಂದು ಹೇಳಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸಂಪೂರ್ಣ ಜ್ಞಾನವಾಪಿ ಮಸೀದಿ ಆವರಣದ "ವೈಜ್ಞಾನಿಕ ಸಮೀಕ್ಷೆ"ಗೆ ನಿರ್ದೇಶನ ಕೋರಿ ಹಿಂದೂ ಕಡೆಯವರು ಸಲ್ಲಿಸಿದ ಅರ್ಜಿಯ ಮೇಲೆ ನ್ಯಾಯಾಲಯವು ತನ್ನ ಆದೇಶವನ್ನು ಪ್ರಕಟಿಸಿದೆ.

ಜ್ಞಾನವಾಪಿ ಮಸೀದಿ ಸಮೀಕ್ಷೆ ಕೋರಿ ಅರ್ಜಿ ಸಲ್ಲಿಸಿದ್ದ ಹಿಂದೂಗಳು

ವಿಶ್ವನಾಥ ದೇಗುಲದಲ್ಲಿರುವ ಜ್ಞಾನವಾಪಿ ಮಸೀದಿಯ ಸಂಪೂರ್ಣ ಸಂಕೀರ್ಣವನ್ನು ಎಎಸ್‌ಐ ಅಧ್ಯಯನ ಮಾಡುವಂತೆ ಹಿಂದೂ ಕಡೆಯವರು ವಾರಾಣಸಿ ನ್ಯಾಯಾಲಯದಲ್ಲಿ ಅರ್ಜಿ ಪತ್ರವನ್ನು ಸಲ್ಲಿಸಿದ್ದರು. ಹಿಂದೂ ಪರ ವಕೀಲರು ಮತ್ತು ಬೆಂಬಲಿಗರು ಆಶಾದಾಯಕವಾಗಿ ಮತ್ತು ಅರ್ಜಿಯ ಕುರಿತು ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದರು.

ಕಳೆದ ಶುಕ್ರವಾರ ಅರ್ಜಿಯೊಂದರ ವಾದವನ್ನು ನ್ಯಾಯಾಲಯ ಪೂರ್ಣಗೊಳಿಸಿದೆ. ಈ ವರ್ಷದ ಮೇ ತಿಂಗಳಲ್ಲಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಅವರು ಮತ್ತೊಂದು ಮನವಿಯಲ್ಲಿ ಈ ಹಿಂದೆ ದೇಗುಲ ಸಂಕೀರ್ಣದೊಳಗಿನ "ಶೃಂಗಾರ ಗೌರಿ ಸ್ಥಳ" ನಲ್ಲಿ ಪ್ರಾರ್ಥನೆ ಮಾಡಲು ಅನುಮತಿ ಕೋರಿದ್ದರು. ಒಂದು ಭಾಗದಲ್ಲಿ "ಶಿವಲಿಂಗ" ಮತ್ತು ಇನ್ನೊಂದು ಬದಿಯಲ್ಲಿ "ಕಾರಂಜಿ" ಎಂದು ಹೇಳಲಾಗುವ ರಚನೆ - ಮಸೀದಿ ಆವರಣದಲ್ಲಿ ಕಂಡುಬಂದಿದೆ.

ವಝುಖಾನಾ ಹೊರತುಪಡಿಸಿ ಸಮೀಕ್ಷೆಗೆ ಅನುಮತಿ ನೀಡಿದ ಕೋರ್ಟ್

ಸಮೀಕ್ಷೆಯು 'ಶಿವಲಿಂಗ'ದಂತಹ ರಚನೆಯನ್ನು ಹೊಂದಿರುವ ವಝುಖಾನಾವನ್ನು ಹೊರತುಪಡಿಸುತ್ತದೆ. ಆ ಪ್ರದೇಶವನ್ನು ಸೀಲ್ ಮಾಡಲಾಗಿದ್ದು, ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಈ ಆದೇಶವನ್ನು ಮುಸ್ಲಿಂ ಕಡೆಯವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ.

"ಗೌರವಾನ್ವಿತ ಸುಪ್ರೀಂ ಕೋರ್ಟ್ ಮೇ 21 ರಂದು ನಮ್ಮ ಪರವಾಗಿ ತೀರ್ಪು ನೀಡಿತು.. ನಾವು ಜಿಲ್ಲಾ ನ್ಯಾಯಾಲಯದ ಮುಂದೆ ನಮ್ಮ ದೃಷ್ಟಿಕೋನವನ್ನು ಎಎಸ್ಐ ಮೂಲಕ ತನಿಖೆ ಮಾಡಬೇಕೆಂದು ಕೋರಿ ನಮ್ಮ ದೃಷ್ಟಿಕೋನವನ್ನು ಇರಿಸಿದ್ದೇವೆ ... ನ್ಯಾಯಾಲಯದ ಆದೇಶಕ್ಕಾಗಿ ಕಾಯೋಣ.ವಿಷ್ಣು ಶಂಕರ್ ಜೈನ್ ಅವರು ನಮ್ಮ ವಿಚಾರವನ್ನು ಜುಲೈ 14 ರಂದು ನ್ಯಾಯಾಲಯದ ಮುಂದೆ ಇಡಲಾಗಿತ್ತು" ಎಂದು ಹೇಳಿದ್ದರು.

ಜ್ಞಾನವಾಪಿ ಪ್ರಕರಣದ ಹಿಂದೂ ಅರ್ಜಿದಾರರು, ಕಳೆದ ವರ್ಷ ಜುಲೈ 6 ರಂದು ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ "ಶಿವಲಿಂಗ" ದ ಕಾರ್ಬನ್ ಡೇಟಿಂಗ್ ಸೇರಿದಂತೆ "ವೈಜ್ಞಾನಿಕ ಸಮೀಕ್ಷೆ" ನಡೆಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸುವ ಅರ್ಜಿಯನ್ನು ಶೀಘ್ರವಾಗಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ