ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Lok Sabha Election 2024: ಬಿಜೆಪಿ ಚುನಾವಣಾ ಪ್ರಣಾಳಿಕೆಯ ಸಂಕಲ್ಪ ಪತ್ರದಲ್ಲಿರುವ ಅಗ್ರ 20 ಭರವಸೆಗಳಿವು

Lok Sabha Election 2024: ಬಿಜೆಪಿ ಚುನಾವಣಾ ಪ್ರಣಾಳಿಕೆಯ ಸಂಕಲ್ಪ ಪತ್ರದಲ್ಲಿರುವ ಅಗ್ರ 20 ಭರವಸೆಗಳಿವು

Raghavendra M Y HT Kannada

Apr 14, 2024 01:57 PM IST

ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2024ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು.

  • ಇಂಡೋ-ಚೀನಾ, ಇಂಡೋ-ಪಾಕಿಸ್ತಾನ ಹಾಗೂ ಇಂಡೋ-ಮ್ಯಾನ್ಮಾರ್ ಗಡಿಗಳಲ್ಲಿ ದೃಢವಾದ ಮೂಲಸೌಕರ್ಯಗಳ ಅಭಿವೃದ್ಧಿಗೆ ವೇಗವನ್ನು ನೀಡಲಾಗುತ್ತದೆೆ ಎಂದು ಬಿಜೆಪಿ ಚುನಾವಣಾ ಭರವಸೆ ನೀಡಿದೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2024ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2024ರ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು. (HT)

ದೆಹಲಿ: ಲೋಕಸಭೆಯ (Lok Sabha Election 2024) ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿ ಇವತ್ತು (ಏಪ್ರಿಲ್ 14, ಭಾನುವಾರ) ಚುನಾವಣಾ ಪ್ರಣಾಳಿಕೆಯನ್ನು (BJP Election Manifesto) ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಇತರ ಹಿರಿಯ ಬಿಜೆಪಿ ನಾಯಕರು 'ಸಂಕಲ್ಪ ಪತ್ರ' (Sankalp Patra) ಹೆಸರಿನ ಭರವಸೆಗಳ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಏಕರೂಪ ನಾಗರಿಕ ಸಂಹಿತೆ ಮತ್ತು ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ಜಾರಿಗೆ ತರುವ ಭರವಸೆ ನೀಡಿದೆ. ಅಲ್ಲದೆ, ಹೊಸ ಐಐಟಿಗಳು, ಐಐಎಂಗಳು ಹಾಗೂ ಏಮ್ಸ್‌ಗಳನ್ನು ಸ್ಥಾಪಿಸುವ ಬಗ್ಗೆಯೂ ಇದು ತಮ್ಮ ಪ್ರಣಾಣಿಕೆಯಲ್ಲಿ ಬಿಜೆಪಿ ಹೇಳಿದೆ.

ಟ್ರೆಂಡಿಂಗ್​ ಸುದ್ದಿ

SBI FD Rate Hike: ಸ್ಥಿರ ಠೇವಣಿಗಳ ಬಡ್ಡಿದರ ಹೆಚ್ಚಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ; ಎಸ್‌ಬಿಐ ಎಫ್‌ಡಿಗಳ ಬಡ್ಡಿದರ ವಿವರ ಹೀಗಿದೆ

Monsoon2024: ಮೇ19ಕ್ಕೆ ಮಾನ್ಸೂನ್ ಭಾರತ ಪ್ರವೇಶ, ಬೇಗನೇ ಮಳೆ ಆರಂಭದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Gold Rate Today: ಆಭರಣ ಪ್ರಿಯರಿಗೆ ಇಲ್ಲಿದೆ ಭರ್ಜರಿ ಸುದ್ದಿ, ಚಿನ್ನದೊಂದಿಗೆ ಬೆಳ್ಳಿ ಬೆಲೆಯೂ ಇಳಿಕೆ; ರಾಜ್ಯದಲ್ಲಿಂದು ದರ ಎಷ್ಟಿದೆ ಗಮನಿಸಿ

Explainer:ಊಟಿ, ಕೊಡೈಕೆನಾಲ್‌ಗೆ ಸ್ವಂತ ವಾಹನದಲ್ಲಿ ಹೊರಟಿದ್ದೀರಾ, ಇ ಪಾಸ್‌ ಕಡ್ಡಾಯ, ಪಡೆಯುವುದು ಹೀಗೆ

ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಟಾಪ್ 20 ಭರವಸೆಗಳು ಇಲ್ಲಿವೆ

  1. ಇಂಡೋ-ಚೀನಾ, ಇಂಡೋ-ಪಾಕಿಸ್ತಾನ ಹಾಗೂ ಇಂಡೋ-ಮ್ಯಾನ್ಮಾರ್ ಗಡಿಗಳಲ್ಲಿ ದೃಢವಾದ ಮೂಲಸೌಕರ್ಯಗಳ ಅಭಿವೃದ್ಧಿಗೆ ವೇಗವನ್ನು ನೀಡುವುದು. "ಗಡಿ ಬೇಲಿಯನ್ನು ಸ್ಮಾರ್ಟ್ ಮಾಡಲು ಕ್ರಮ
  2. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದು, ಎಲ್ಲಾ ಅರ್ಹ ಜನರಿಗೆ ಪೌರತ್ವ ನೀಡುವುದು
  3. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವುದು. ಸಂವಿಧಾನದ 44 ನೇ ವಿಧಿಯು ಏಕರೂಪ ನಾಗರಿಕ ಸಂಹಿತೆಯನ್ನು ರಾಜ್ಯ ನೀತಿಯ ನಿರ್ದೇಶಕ ತತ್ವಗಳಲ್ಲಿ ಒಂದಾಗಿದೆ.
  4. ಒಂದು ರಾಷ್ಟ್ರ, ಒಂದು ಚುನಾವಣೆಯನ್ನು ಜಾರಿಗೆ ತರುವುದು. "ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಸಮಸ್ಯೆಗಳನ್ನು ಪರಿಶೀಲಿಸಲು ನಾವು ಉನ್ನತಾಧಿಕಾರ ಸಮಿತಿಯನ್ನು ರಚಿಸಿದ್ದೇವೆ, ಸಮಿತಿ. ಇದರ ಶಿಫಾರಸುಗಳ ಅನುಷ್ಠಾನಕ್ಕೆ ಕೆಲಸ ಮಾಡುತ್ತೇವೆ" ಎಂದು ಬಿಜೆಪಿ ಹೇಳಿದೆ.
  5. ಐಐಟಿ, ಐಐಎಂ ಮತ್ತು ಏಮ್ಸ್ ನಂತಹ ಸಂಸ್ಥೆಗಳನ್ನು ಬಲಪಡಿಸಲು ಬದ್ಧ. ಕೇಂದ್ರೀಕೃತ ಧನಸಹಾಯ, ಸಾಮರ್ಥ್ಯ ವರ್ಧನೆ, ಮೂಲಸೌಕರ್ಯ ಉನ್ನತೀಕರಣ ಮತ್ತು ಮೀಸಲಾದ ಸಂಶೋಧನಾ ಅನುದಾನಗಳ ಮೂಲಕ ಅಸ್ತಿತ್ವದಲ್ಲಿರುವ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸುವುದನ್ನು ಮುಂದುವರಿಸುವುದು.
  6. ಈಶಾನ್ಯದಲ್ಲಿ ಶಾಂತಿಯನ್ನು ಉತ್ತೇಜಿಸುವ ಪ್ರಯತ್ನ ಮುಂದುವರಿಕೆ. "ಪ್ರಕ್ಷುಬ್ಧ ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಎಎಫ್ಎಸ್‌ಪಿಎಯನ್ನು ಹಂತಹಂತವಾಗಿ ತೆಗೆದುಹಾಕುವ ಪ್ರಯತ್ನ ಮುಂದುವರಿಸುವುದು. ನಿರಂತರ ಪ್ರಯತ್ನಗಳ ಮೂಲಕ ಈಶಾನ್ಯ ರಾಜ್ಯಗಳ ನಡುವಿನ ಅಂತರರಾಜ್ಯ ಗಡಿ ವಿವಾದಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತಷ್ಟು ಕೆಲಸ.
  7. ಭಾರತವು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ. "ಒಂದು ದಶಕದಲ್ಲಿ, ಭಾರತವನ್ನು 11 ನೇ ಅತಿದೊಡ್ಡ ಆರ್ಥಿಕ ಶಕ್ತಿಯಿಂದ 5 ನೇ ಅತಿದೊಡ್ಡ ಆರ್ಥಿಕ ಶಕ್ತಿಗೆ ತಂದಿದ್ದೇವೆ. ಸರಿಯಾದ ನೀತಿಗಳು, ಕೇಂದ್ರೀಕೃತ ಅನುಷ್ಠಾನ ಮತ್ತು ನಿಖರವಾದ ಯೋಜನೆಯಿಂದಾಗಿ ಇದು ಸಾಧ್ಯವಾಗಿದೆ.
  8. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಮುಂದಿನ ಐದು ವರ್ಷಗಳವರೆಗೆ 80 ಕೋಟಿ ನಾಗರಿಕರಿಗೆ ಉಚಿತ ಪಡಿತರವನ್ನು ನೀಡುವುದು.
  9. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಬಡ ಕುಟುಂಬಗಳಿಗೆ ಉಚಿತ ವಿದ್ಯುತ್
  10. ಮೂರು ಕೋಟಿ ಗ್ರಾಮೀಣ ಮಹಿಳೆಯರು ಲಖ್ಪತಿ ದೀದಿಗಳಾಗಲಿದ್ದಾರೆ.
  11. ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರಗಳ ಬಳಿ ಮಹಿಳಾ ಹಾಸ್ಟೆಲ್‌ಗಳು ಮತ್ತು ಶಿಶುವಿಹಾರಗಳಂತಹ ಮೂಲಸೌಕರ್ಯಗಳನ್ನು ರಚಿಸುವುದು.
  12. ಮಹಿಳೆಯರ ಆರೋಗ್ಯಕರ ಜೀವನವನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಸೇವೆಗಳ ವಿಸ್ತರಣೆ
  13. ಮಹಿಳೆಯರಲ್ಲಿನ ರಕ್ತಹೀನತೆ, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಆಸ್ಟಿಯೊಪೊರೋಸಿಸ್ ಪ್ರಕರಣಗಳನ್ನು ತಡೆಗಟ್ಟಲು, ಕಡಿಮೆ ಮಾಡಲು ಗಮನ ಹರಿಸುವುದು.
  14. ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ನಾರಿ ಶಕ್ತಿ ವಂದನ್ ಅಧಿನಿಯಮ್ ಅನ್ನು ವ್ಯವಸ್ಥಿತವಾಗಿ ಜಾರಿಗೆ ತರುವುದು.
  15. ಆಯುಷ್ಮಾನ್ ಭಾರತ್ ಯೋಜನೆಯು ಎಲ್ಲಾ ಹಿರಿಯ ನಾಗರಿಕರಿಗೆ ವಿಸ್ತರಣೆ. ಉಚಿತ ಮತ್ತು ಗುಣಮಟ್ಟದ ಆರೋಗ್ಯ ರಕ್ಷಣೆಗೆ ಕ್ರಮ.
  16. ಕಾಲಕಾಲಕ್ಕೆ ಬೆಳೆಗಳ ಮೇಲಿನ ಎಂಎಸ್‌ಪಿ ಹೆಚ್ಚಳ. "ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ 6,000 ರೂ.ಗಳ ಆರ್ಥಿಕ ನೆರವು ನೀಡುತ್ತಿದ್ದೇವೆ. ನಮ್ಮ ರೈತರಿಗೆ ನಿರಂತರ ಆರ್ಥಿಕ ಬೆಂಬಲ ನೀಡಲು ನಾವು ಬದ್ಧರಾಗಿದ್ದೇವೆ" ಎಂದು ಬಿಜೆಪಿ ಹೇಳಿದೆ.
  17. ಶೇಖರಣಾ ಸೌಲಭ್ಯಗಳು, ನೀರಾವರಿ, ಶ್ರೇಣೀಕರಣ ಮತ್ತು ವಿಂಗಡಣೆ ಘಟಕಗಳು, ಕೋಲ್ಡ್ ಸ್ಟೋರೇಜ್ ಸೌಲಭ್ಯಗಳು ಹಾಗೂ ಆಹಾರ ಸಂಸ್ಕರಣೆ ಮುಂತಾದ ಕೃಷಿ ಮೂಲಸೌಕರ್ಯ ಯೋಜನೆಗಳ ಸಮಗ್ರ ಯೋಜನೆ ಮತ್ತು ಸಂಘಟಿತ ಅನುಷ್ಠಾನಕ್ಕಾಗಿ ಕೃಷಿ ಮೂಲಸೌಕರ್ಯ ಮಿಷನ್ ಅನ್ನು ಪ್ರಾರಂಭಿಸುವ ಭರವಸೆ.
  18. ಬೆಳೆ ಮುನ್ಸೂಚನೆ, ಕೀಟನಾಶಕಗಳ ಬಳಕೆ, ನೀರಾವರಿ, ಮಣ್ಣಿನ ಆರೋಗ್ಯ ಮತ್ತು ಹವಾಮಾನ ಮುನ್ಸೂಚನೆಯಂತಹ ಕೃಷಿ ಸಂಬಂಧಿತ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸುವ ಕೃಷಿ ಉಪಗ್ರಹವನ್ನು ಉಡಾವಣೆ ಮಾಡುವ ಭರವಸೆ.
  19. ಆಟೋ, ಟ್ಯಾಕ್ಸಿ, ಟ್ರಕ್ ಮತ್ತು ಇತರ ಚಾಲಕರನ್ನು ಎಲ್ಲಾ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಸೇರಿಸಲಾಗುತ್ತೆ
  20. ಒಎನ್‌ಡಿಸಿಯೊಂದಿಗೆ ಸಣ್ಣ ವ್ಯಾಪಾರಿಗಳು ಮತ್ತು ಎಂಎಸ್‌ಎಂಇಗಳನ್ನು ಸಬಲೀಕರಣಗೊಳಿಸುವುದು: "ನಾವು ಸಣ್ಣ ವ್ಯಾಪಾರಿಗಳು ಮತ್ತು ಎಂಎಸ್ ಎಂಇಗಳನ್ನು ಒಎನ್‌ಡಿಸಿಯನ್ನು ಅಳವಡಿಸಿಕೊಳ್ಳಲು ಮತ್ತು ತಂತ್ರಜ್ಞಾನದ ಶಕ್ತಿಯನ್ನು ಬಳಸಿಕೊಂಡು ವ್ಯವಹಾರಗಳನ್ನು ವಿಸ್ತರಿಸಲು ಪ್ರೋತ್ಸಾಹ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ