ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Bbc Tax Row: ಬಿಬಿಸಿ ವಿಷಯ ಪ್ರಸ್ತಾಪಿಸಿದ ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿಗೆ ದೃಢ ಉತ್ತರ ನೀಡಿದ ಎಸ್‌. ಜೈಶಂಕರ್‌

BBC Tax Row: ಬಿಬಿಸಿ ವಿಷಯ ಪ್ರಸ್ತಾಪಿಸಿದ ಬ್ರಿಟನ್‌ ವಿದೇಶಾಂಗ ಕಾರ್ಯದರ್ಶಿಗೆ ದೃಢ ಉತ್ತರ ನೀಡಿದ ಎಸ್‌. ಜೈಶಂಕರ್‌

Praveen Chandra B HT Kannada

Mar 01, 2023 05:59 PM IST

ಡಾ. ಎಸ್‌. ಜೈಶಂಕರ್‌ (ಸಂಗ್ರಹ ಚಿತ್ರ)

    • UK minister flags BBC offices I-T 'survey': ಭಾರತದ ವಿದೇಶಾಂಗ ಸಚಿವರಾದ ಜೈಶಂಕರ್‌ ಅವರು "ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಘಟಕಗಳು ನೆಲದ ಕಾನೂನನ್ನು ಅನುಸರಿಸಬೇಕು" ಎಂದು ದೃಢವಾಗಿ ಉತ್ತರಿಸಿದ್ದಾರೆ.
ಡಾ. ಎಸ್‌. ಜೈಶಂಕರ್‌ (ಸಂಗ್ರಹ ಚಿತ್ರ)
ಡಾ. ಎಸ್‌. ಜೈಶಂಕರ್‌ (ಸಂಗ್ರಹ ಚಿತ್ರ) (ANI)

ನವದೆಹಲಿ: ಇಂದು ನಡೆದ ದ್ವಿಪಕ್ಷೀಯ ಸಭೆಯಲ್ಲಿ ಬ್ರಿಟಿಷ್ ವಿದೇಶಾಂಗ ಸಚಿವ ಜೇಮ್ಸ್ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಬಿಬಿಸಿ ತೆರಿಗೆ ವಿಷಯವನ್ನು ಜಾಣತನದಿಂದ ಪ್ರಸ್ತಾಪಿಸಿದ್ದಾರೆ. ಇದಕ್ಕೆ ಭಾರತದ ವಿದೇಶಾಂಗ ಸಚಿವರಾದ ಜೈಶಂಕರ್‌ ಅವರು "ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಘಟಕಗಳು ನೆಲದ ಕಾನೂನನ್ನು ಅನುಸರಿಸಬೇಕು" ಎಂದು ದೃಢವಾಗಿ ಉತ್ತರಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಯಶೋಗಾಥೆ: ಬರಪೀಡಿತ ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದಲ್ಲಿ ಜಲಕ್ರಾಂತಿ ಹುಟ್ಟುಹಾಕಿದ ಸೂರತ್ಕಲ್‌ ಹಳೆ ವಿದ್ಯಾರ್ಥಿ

ಸಿಬಿಎಸ್‌ಇ ಫಲಿತಾಂಶ 2024; ಮುಂದಿನವಾರವೇ 10, 12 ನೇ ತರಗತಿ ಫಲಿತಾಂಶ ನಿರೀಕ್ಷೆ, ರಿಸಲ್ಟ್ ನೋಡುವುದು ಹೀಗೆ

Gold Rate Today: ಎರಡು ದಿನಗಳ ಇಳಿಕೆಯ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ದರ; ಶನಿವಾರವೂ ಬೆಳ್ಳಿ ದರ ಹೆಚ್ಚಳ

ಹವಾಮಾನ ಬದಲಾವಣೆ ಎಫೆಕ್ಟ್; ತನ್ನ ಎಲ್ಲಾ ಹಿಮನದಿಗಳನ್ನು ಕಳೆದುಕೊಂಡ ಮೊದಲ ದೇಶ ವೆನೆಜುವೆಲಾ; ಏನಿದು ಬೆಳವಣಿಗೆ

"ಭಾರತದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಘಟಕಗಳು ಈ ದೇಶಕ್ಕೆ ಸಂಬಂಧಿತ ಕಾನೂನುಗಳು ಮತ್ತು ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಸರಿಸಬೇಕು" ಎಂದು ಯುಕೆ ವಿದೇಶಾಂಗ ಸಚಿವರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತೆರಿಗೆ ಪಾವತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿಗಳಲ್ಲಿ ಮೂರು ದಿನಗಳ ಕಾಲ ಶೋಧ ನಡೆಸಿತ್ತು.

ನಾಳೆ ನಡೆಯಲಿರುವ ಜಿ20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಜೇಮ್ಸ್‌ ಭಾರತಕ್ಕೆ ಆಗಮಿಸಿದ್ದು, ಇಂದು ನಡೆದ ಮಾತುಕತೆಯಲ್ಲಿ ಬಿಬಿಸಿ ವಿಷಯ ಪ್ರಸ್ತಾಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿರುವ ಸಮಯ ಆಕಸ್ಮಿಕವಲ್ಲ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಇದು ಇನ್ನೊಂದು ರೀತಿಯ ರಾಜಕೀಯ ವಿಧಾನ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. "ನೀವು ಹಠಾತ್‌ ಆಗಿ ಈ ಕೆಲಸ ಆರಂಭಿಸಿದ್ದೀರಿ. ಇದು ಸತ್ಯದ ಅನ್ವೇಷಣೆ ಎಂದು ಹೇಳಿದ್ದೀರಿ. ಇಪ್ಪತ್ತು ವರ್ಷಗಳ ಬಳಿಕ ಇದನ್ನು ಹೊರಹಾಕಲು ನಿರ್ಧರಿಸಿರುವುದು ಆಕಸ್ಮಿಕವೆಂದು ನೀವು ಭಾವಿಸುವಿರಾ? ಚುನಾವಣೆಯ ಋತುವು ಆರಂಭವಾಗಿರುವ ಸಮಯದಲ್ಲಿ ಇದನ್ನು ಬಿಡುಗಡೆ ಮಾಡಿರುವುದರ ಔಚಿತ್ಯವೇನು? ಈ ರಾಜಕೀಯ ಲಂಡನ್‌ ಮತ್ತು ನ್ಯೂಯಾರ್ಕ್‌ನಲ್ಲಿ ಆರಂಭವಾಗಿದೆ" ಎಂದು ಜೈಶಂಕರ್‌ ಎಂದು ಅಭಿಪ್ರಾಯಪಟ್ಟಿದ್ದರು.

ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ)ನ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಇತ್ತೀಚಿಗೆ ಐಟಿ ಅಧಿಕಾರಿಗಳು ನಡೆಸಿದ ಸಮೀಕ್ಷೆ ವೇಳೆ ನಮ್ಮ ಪತ್ರಕರ್ತರಿಗೆ ಗಂಟೆಗಟ್ಟಲೆ ಕೆಲಸ ಮಾಡಲು ಬಿಟ್ಟಿಲ್ಲ ಮತ್ತು ನಮ್ಮ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಬಿಬಿಸಿ ಆರೋಪಿಸಿತ್ತು.

ಬಿಬಿಸಿ ಕಚೇರಿಗಳಲ್ಲಿ ಪತ್ರಕರ್ತರ ಕೆಲಸಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸಮೀಕ್ಷೆ ಕೈಗೊಳ್ಳಲಾಗಿತ್ತು ಎಂದು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟ್ ಟ್ಯಾಕ್ಸ್‌ (CBDT) ಹೇಳಿತ್ತು. ಆದರೆ ಪತ್ರಕರ್ತರಿಗೆ ಹಲವು ಗಂಟೆಗಳ ಕಾಲ ಕೆಲಸ ಮಾಡಲು ಅವಕಾಶವಿರಲಿಲ್ಲ. ಅಲ್ಲದೇ ಆದಾಯ ತೆರಿಗೆ ಇಲಾಖೆಯ ಸಿಬ್ಬಂದಿ ಮತ್ತು ಪೊಲೀಸರು ಹಲವಾರು ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಿಬಿಸಿ ಹಿಂದಿ ವೆಬ್‌ಸೈಟ್‌ ವರದಿ ಮಾಡಿತ್ತು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ