logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Delhi Crime: ಶ್ರದ್ಧಾ ಹತ್ಯೆಯಂತೆ ಮತ್ತೊಂದು ಕೇಸ್​.. ಪತಿಯನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ಪತ್ನಿ-ಮಗ

Delhi Crime: ಶ್ರದ್ಧಾ ಹತ್ಯೆಯಂತೆ ಮತ್ತೊಂದು ಕೇಸ್​.. ಪತಿಯನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ಪತ್ನಿ-ಮಗ

HT Kannada Desk HT Kannada

Nov 28, 2022 02:54 PM IST

ಪತಿಯನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ಪತ್ನಿ-ಮಗ

    • ಶ್ರದ್ಧಾ ವಾಕರ್ ಹತ್ಯೆಯಂತೆಯೇ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಗನೊಂದಿಗೆ ಸೇರಿಕೊಂಡು ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಂದು, ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಘಟನೆ ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ನಡೆದಿದೆ.
ಪತಿಯನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ಪತ್ನಿ-ಮಗ
ಪತಿಯನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟ ಪತ್ನಿ-ಮಗ

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆಯಂತೆಯೇ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಗನೊಂದಿಗೆ ಸೇರಿಕೊಂಡು ಮಹಿಳೆಯೊಬ್ಬರು ತನ್ನ ಪತಿಯನ್ನು ಕೊಂದು, ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಘಟನೆ ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ನಡೆದಿದೆ.

ಟ್ರೆಂಡಿಂಗ್​ ಸುದ್ದಿ

Gold Rate Today: ವಾರಾಂತ್ಯದಲ್ಲಿ ತುಸು ಇಳಿಕೆಯಾದ ಹಳದಿ ಲೋಹದ ಬೆಲೆ; ಶನಿವಾರ ಬೆಳ್ಳಿ ದರ ತಟಸ್ಥ

Gold Rate Today: ಶುಕ್ರವಾರವೂ ಏರಿಕೆಯಾದ ಚಿನ್ನ, ಬೆಳ್ಳಿ ದರ; ದೇಶದಲ್ಲಿಂದು ಆಭರಣ ದರ ಎಷ್ಟಾಗಿದೆ ಗಮನಿಸಿ

ಇಪಿಎಫ್‌ಒ; ಈ 3 ಕಾರಣ ನೀಡಿದ್ರೆ ಇಪಿಎಫ್‌ ಹಣ ಬೇಗ ಹಿಂಪಡೆಯಬಹುದು, ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ ನೋಡಿ

ಗುವಾಹಟಿ ಬೀದಿಯಲ್ಲಿ ಸೋಷಿಯಲ್ ಮೀಡಿಯಾ ಪ್ರಭಾವಿಯ ಮಂಜುಲಿಕಾ ನೃತ್ಯನಾಟಕ, ದಂಗಾಗಿ ನೋಡುತ್ತ ನಿಂತ ಜನ-ವೈರಲ್ ವಿಡಿಯೋ

ಈ ಘಟನೆ ಕೂಡ ಕಳೆದ ಮೇ ತಿಂಗಳಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಅಂಜನ್ ದಾಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಅಂಜನ್ ದಾಸ್ ಪೂನಂ ಮತ್ತು ಮಗ ದೀಪಕ್ ಎಂದು ಗುರುತಿಸಲಾಗಿದೆ. ದೇಹದ ಭಾಗಗಳನ್ನು ತಾಯಿ-ಮಗ ವಿಲೇವಾರಿ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಂಜನ್ ದಾಸ್ ಅವರನ್ನು ಮೇ 30 ರಂದು ಕೊಲ್ಲಲಾಗಿದ್ದು, ಜೂನ್ 5 ರಂದು ಪೂರ್ವ ದೆಹಲಿಯ ಕಲ್ಯಾಣಪುರಿಯಲ್ಲಿರುವ ರಾಮಲೀಲಾ ಮೈದಾನದಲ್ಲಿ ಮೃತದೇಹದ ಆರು ಭಾಗಗಳು ಪೊಲೀಸರಿಗೆ ಸಿಕ್ಕಿತ್ತು. ದಾಸ್ ತನ್ನ ಮಲಮಗಳು ಮತ್ತು ಮಲಮಗನ ಹೆಂಡತಿಯ ಮೇಲೆ ಕಣ್ಣಿಟ್ಟಿದ್ದಾನೆ ಎಂಬ ಅನುಮಾನದ ಮೇಲೆ ಇವರಿಬ್ಬರು ದಾಸ್ ಅವರನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ಯದಲ್ಲಿ ನಿದ್ದೆ ಬರುವ ಮಾತ್ರೆಯನ್ನು ಹಾಕಿ ಅಂಜನ್​​ ದಾಸ್​ಗೆ ನೀಡಿದ್ದ ತಾಯಿ ಮಗ, ಆತನನ್ನು ಕೊಂದು 10 ಭಾಗಗಳಾಗಿ ಕತ್ತರಿಸಿ ಪ್ರಿಡ್ಜ್​​ನಲ್ಲಿ ಇರಿಸಿದ್ದರು. ಬಳಿಕ ಪೂನಂ ಮತ್ತು ಮಗ ದೀಪಕ್ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಪೂರ್ವ ದೆಹಲಿಯ ವಿವಿಧ ಸ್ಥಳಗಳಲ್ಲಿ ಕತ್ತರಿಸಿದ ದೇಹದ ಭಾಗಗಳನ್ನು ವಿಲೇವಾರಿ ಮಾಡಿ, ತಲೆಬುರುಡೆಯನ್ನು ಹೂಳಿದ್ದರು.

ಆರೋಪಿಗಳ ವಿರುದ್ಧ ಪಾಂಡವ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯಗಳ ಕಣ್ಮರೆ ಮತ್ತು ತಪ್ಪು ಮಾಹಿತಿ ನೀಡುವಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಾಯಿ-ಮಗನನ್ನು ಬಂಧಿಸಿದ್ದಾರೆ.

ಶ್ರದ್ಧಾಳನ್ನು ಕೊಂದು, 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟು ಎಸೆದಿದ್ದ ಅಫ್ತಾಬ್​

ಕೆಲ ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಇಂತಹದ್ದೇ ಭೀಕರ ಘಟನೆ ಬೆಳಕಿಗೆ ಬಂದಿತ್ತು. ಮಹಾರಾಷ್ಟ್ರದ ಪಾಲ್ಘರ್‌ ಮೂಲದ ಶ್ರದ್ಧಾ ವಾಕರ್ (27) ಮುಂಬೈನಲ್ಲಿ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಡೇಟಿಂಗ್ ಅಪ್ಲಿಕೇಶನ್ ಮೂಲಕ ಅಫ್ತಾಬ್ ಅಮೀನ್ ಪೂನಾವಲ್ಲಾ (28) ಹಾಗೂ ಶ್ರದ್ಧಾಗೆ ಪರಿಚಯವಾಗಿದೆ. ಇಬ್ಬರೂ ಪ್ರೀತಿಯಲ್ಲಿ ಬಿದ್ದಿದ್ದಾರೆ. ಇಬ್ಬರೂ ಮುಂಬೈನಲ್ಲಿ ಲಿವಿಂಗ್​ ರಿಲೇಶನ್​ಶಿಪ್​ನಲ್ಲಿ ವಾಸಿಸಲು ಪ್ರಾರಂಭಿಸಿದ್ದಾರೆ. ಈ ವಿಚಾರ ತಿಳಿದ ಶ್ರದ್ಧಾ ಪೋಷಕರು ವಿರೋಧ ವ್ಯಕ್ತಪಡಿಸಿ ಜಗಳವಾಡಿದ್ದಾರೆ. ಹೀಗಾಗಿ ಅಫ್ತಾಬ್ ಹಾಗೂ ಶ್ರದ್ಧಾ ಮುಂಬೈ ತೊರೆದು ದೆಹಲಿಯಲ್ಲಿ ವಾಸಿಸುತ್ತಿದ್ದರು.

ಒಟ್ಟು ಮೂರು ವರ್ಷಗಳಿಂದ ಇಬ್ಬರು ಲಿವಿಂಗ್​ ಟುಗೆದರ್​ನಲ್ಲಿದ್ದರು. ಇಬ್ಬರೂ ದೆಹಲಿಗೆ ಸ್ಥಳಾಂತರಗೊಂಡ ನಂತರ, ಶ್ರದ್ಧಾ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಲು ಶುರು ಮಾಡಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. 2022ರ ಮೇ 18 ರಂದು ಇದೇ ವಿಚಾರಕ್ಕೆ ನಡೆದ ಜಗಳ ತಾರಕಕ್ಕೇರಿದೆ. ಆಕೆಯ ಕತ್ತು ಹಿಸುಕಿದ ಅಫ್ತಾಬ್, ಆಕೆಯನ್ನು 35 ತುಂಡುಗಳಾಗಿ ಕತ್ತರಿಸಿದ್ದಾನೆ. ಹೊಸ ಫ್ರಿಡ್ಜ್​ ಖರೀದಿಸಿ ಅವಳ ದೇಹದ ಭಾಗಗಳನ್ನು ಅದರಲ್ಲಿ ಸಂಗ್ರಹಿಸಿಟ್ಟಿದ್ದಾನೆ. 18 ದಿನಗಳ ನಂತರ ರಾತ್ರಿ ಸಮಯದಲ್ಲಿ ಅದನ್ನು ಕಾಡು ಪ್ರದೇಶ ಸೇರಿದಂತೆ ಇತರೆಡೆ ಎಸೆದಿದ್ದನು. ಸದ್ಯ ಆರೋಪಿ ಅಫ್ತಾಬ್​ ನ್ಯಾಯಾಂಗ ಬಂಧನದಲ್ಲಿದ್ದಾನೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ