logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Ukp: ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ: ಗೋವಿಂದ ಕಾರಜೋಳ ಸ್ಪಷ್ಟನೆ

UKP: ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ: ಗೋವಿಂದ ಕಾರಜೋಳ ಸ್ಪಷ್ಟನೆ

Oct 27, 2022 03:32 PM IST

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ, ಡಿಸೆಂಬರ್ ಅಂತ್ಯದೊಳಗೆ 3,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಕಾರಜೋಳ, ಪರಿಹಾರ ವಿತರಣೆ ಪ್ರಕ್ರಿಯೆನ್ನು ಚುರುಕುಗೊಳಿಸಲು ಆದೇಶ ನೀಡಿದರು.

  • ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ, ಡಿಸೆಂಬರ್ ಅಂತ್ಯದೊಳಗೆ 3,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಕಾರಜೋಳ, ಪರಿಹಾರ ವಿತರಣೆ ಪ್ರಕ್ರಿಯೆನ್ನು ಚುರುಕುಗೊಳಿಸಲು ಆದೇಶ ನೀಡಿದರು.
ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು ಅಗತ್ಯವಿರುವ 76000 ಎಕರೆಗಳ ಪೈಕಿ 37000 ಎಕರೆ ಪ್ರದೇಶದ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದಂತಾಗುತ್ತದೆ. ಅಣೆಕಟ್ಟೆಯ ಎತ್ತರವನ್ನು 524.256 ಮೀ. ಹೆಚ್ಚಿಸುವುದರಿಂದ ಮುಳುಗಡೆಯಾಗುವ 20 ಹಳ್ಳಿಗಳ ಪೈಕಿ 4 ಹಳ್ಳಿಗಳ ಎಲ್ಲಾ 3,700 ಕಟ್ಟಡಗಳಿಗೂ ಪರಿಹಾರ ಧನವನ್ನು ಪಾವತಿ ಮಾಡುವಂತೆ ಗೋವಿಂದ ಕಾರಜೋಳ ಸೂಚನೆ ನೀಡಿದರು.
(1 / 5)
ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು ಅಗತ್ಯವಿರುವ 76000 ಎಕರೆಗಳ ಪೈಕಿ 37000 ಎಕರೆ ಪ್ರದೇಶದ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದಂತಾಗುತ್ತದೆ. ಅಣೆಕಟ್ಟೆಯ ಎತ್ತರವನ್ನು 524.256 ಮೀ. ಹೆಚ್ಚಿಸುವುದರಿಂದ ಮುಳುಗಡೆಯಾಗುವ 20 ಹಳ್ಳಿಗಳ ಪೈಕಿ 4 ಹಳ್ಳಿಗಳ ಎಲ್ಲಾ 3,700 ಕಟ್ಟಡಗಳಿಗೂ ಪರಿಹಾರ ಧನವನ್ನು ಪಾವತಿ ಮಾಡುವಂತೆ ಗೋವಿಂದ ಕಾರಜೋಳ ಸೂಚನೆ ನೀಡಿದರು.(HT)
ಈಗಾಗಲೇ ಹಳೆಯ ಭೂಸ್ವಾಧೀನ ಕಾಯ್ದೆ 4(1) ಅಥವಾ ಪ್ರಸ್ತುತ ಭೂಸ್ವಾಧೀನ ಕಾಯ್ದೆ 11(1)ರಡಿಯಲ್ಲಿ ಅಧಿಸೂಚಿಸಲ್ಪಟ್ಟು ಕಾರಣಾಂತರದಿಂದ ನಿಷ್ಪರಿಣಾಮಕಾರಿಯಾಗಿ ನಿಷ್ಕ್ರಿಯಗೊಂಡಿರುವ ಅಧಿಸೂಚನೆಗಳ ಜಮೀನು ಮಾಲೀಕ ರೈತರು ನೇರ ಖರೀದಿ ಮತ್ತು ಸಮ್ಮತಿ ಐತೀರ್ಪಿಗೆ ಒಪ್ಪಿದಲ್ಲಿ ಅಂತಹವುಗಳನ್ನು ಕೂಡ ಜಿಲ್ಲಾಧಿಕಾರಿಗಳ ಮುಖಾಂತರ ಭೂಸ್ವಾಧೀನ ಕಾಯ್ದೆಯಡಿ ಪರಿಹಾರ ನೀಡಲು ಕ್ರಮ ಕೈಗೊಂಡು ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.
(2 / 5)
ಈಗಾಗಲೇ ಹಳೆಯ ಭೂಸ್ವಾಧೀನ ಕಾಯ್ದೆ 4(1) ಅಥವಾ ಪ್ರಸ್ತುತ ಭೂಸ್ವಾಧೀನ ಕಾಯ್ದೆ 11(1)ರಡಿಯಲ್ಲಿ ಅಧಿಸೂಚಿಸಲ್ಪಟ್ಟು ಕಾರಣಾಂತರದಿಂದ ನಿಷ್ಪರಿಣಾಮಕಾರಿಯಾಗಿ ನಿಷ್ಕ್ರಿಯಗೊಂಡಿರುವ ಅಧಿಸೂಚನೆಗಳ ಜಮೀನು ಮಾಲೀಕ ರೈತರು ನೇರ ಖರೀದಿ ಮತ್ತು ಸಮ್ಮತಿ ಐತೀರ್ಪಿಗೆ ಒಪ್ಪಿದಲ್ಲಿ ಅಂತಹವುಗಳನ್ನು ಕೂಡ ಜಿಲ್ಲಾಧಿಕಾರಿಗಳ ಮುಖಾಂತರ ಭೂಸ್ವಾಧೀನ ಕಾಯ್ದೆಯಡಿ ಪರಿಹಾರ ನೀಡಲು ಕ್ರಮ ಕೈಗೊಂಡು ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.(HT)
20 ಬಾಧಿತ ಹಳ್ಳಿಗಳ ಪೂರ್ಣ ಪುನರ್ವಸತಿ ಕಾರ್ಯಕ್ರಮ ಪೂರ್ಣಗೊಳಿಸಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪುನರ್ವಸತಿ ಕೇಂದ್ರಗಳ ಸ್ಥಾಪನೆಗೆ ಅಗತ್ಯವಿರುವ 6437 ಎಕರೆ ಪೈಕಿ 3278 ಎಕರೆ ಪ್ರದೇಶವನ್ನು ಈಗಾಗಲೇ ಭೂಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳುಇ ಇದೇ ವೇಳೆ ಮಾಹಿತಿ ನೀಡಿದರು.
(3 / 5)
20 ಬಾಧಿತ ಹಳ್ಳಿಗಳ ಪೂರ್ಣ ಪುನರ್ವಸತಿ ಕಾರ್ಯಕ್ರಮ ಪೂರ್ಣಗೊಳಿಸಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪುನರ್ವಸತಿ ಕೇಂದ್ರಗಳ ಸ್ಥಾಪನೆಗೆ ಅಗತ್ಯವಿರುವ 6437 ಎಕರೆ ಪೈಕಿ 3278 ಎಕರೆ ಪ್ರದೇಶವನ್ನು ಈಗಾಗಲೇ ಭೂಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳುಇ ಇದೇ ವೇಳೆ ಮಾಹಿತಿ ನೀಡಿದರು.(HT)
ಪುನರ್ವಸತಿ ಕೇಂದ್ರಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಗೆ ಪ್ರತ್ಯೇಕ ಉಪ ಕೇಂದ್ರ ಅಗತ್ಯವಿಲ್ಲ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಭೆಯಲ್ಲಿ ಗೋವಿಂದ ಕಾರಜೋಳ ತಿಳಿಸಿದರು.
(4 / 5)
ಪುನರ್ವಸತಿ ಕೇಂದ್ರಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಗೆ ಪ್ರತ್ಯೇಕ ಉಪ ಕೇಂದ್ರ ಅಗತ್ಯವಿಲ್ಲ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಭೆಯಲ್ಲಿ ಗೋವಿಂದ ಕಾರಜೋಳ ತಿಳಿಸಿದರು.(HT)
ಭೂಸ್ವಾಧೀನ ಪ್ರಕ್ರಿಯೆ ಸಂದರ್ಭದಲ್ಲಿ ಸಿಬ್ಬಂಧಿ ಕೊರತೆಯಾಗದಂತೆ ನಿವೃತ್ತ ಕಂದಾಯ ಅಧಿಕಾರಿಗಳನ್ನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಗಿಸಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.
(5 / 5)
ಭೂಸ್ವಾಧೀನ ಪ್ರಕ್ರಿಯೆ ಸಂದರ್ಭದಲ್ಲಿ ಸಿಬ್ಬಂಧಿ ಕೊರತೆಯಾಗದಂತೆ ನಿವೃತ್ತ ಕಂದಾಯ ಅಧಿಕಾರಿಗಳನ್ನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಗಿಸಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.(HT)

    ಹಂಚಿಕೊಳ್ಳಲು ಲೇಖನಗಳು