logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Hd Kumaraswamy: ಮಹಿಳೆಗೆ ಡಿಸಿಎಂ ಸ್ಥಾನ ನೀಡುವ ಭರವಸೆ ನೀಡಿದ ಹೆಚ್‌ಡಿಕೆ:‌ ಕೋಲಾರ ಚುನಾವಣಾ ಅಖಾಡದಲ್ಲಿ ರಣಕೇಕೆ!

HD Kumaraswamy: ಮಹಿಳೆಗೆ ಡಿಸಿಎಂ ಸ್ಥಾನ ನೀಡುವ ಭರವಸೆ ನೀಡಿದ ಹೆಚ್‌ಡಿಕೆ:‌ ಕೋಲಾರ ಚುನಾವಣಾ ಅಖಾಡದಲ್ಲಿ ರಣಕೇಕೆ!

Nov 22, 2022 12:52 PM IST

ಕೋಲಾರ: 2023ರ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್‌, ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಘೋಷಿಸಿದೆ. ಪಂಚರತ್ನ ರಥಯಾತ್ರೆ ಮೂಲಕ ರಾಜ್ಯದ ಮೂಲೆ ಮೂಲೆಯನ್ನು ತಲುಪುವ ನಿರ್ಧಾರ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ, ಸದ್ಯ ಕೋಲಾರ ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಮಧ್ಯೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದೆ, ಮಹಿಳೆಯೋರ್ವರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡುವುದಾಗಿ ಹೆಚ್‌ಡಿಕೆ ಘೋಷಣೆ ಮಾಡಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ..

  • ಕೋಲಾರ: 2023ರ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್‌, ಈಗಾಗಲೇ ಹಲವು ಆಕರ್ಷಕ ಯೋಜನೆಗಳನ್ನು ಘೋಷಿಸಿದೆ. ಪಂಚರತ್ನ ರಥಯಾತ್ರೆ ಮೂಲಕ ರಾಜ್ಯದ ಮೂಲೆ ಮೂಲೆಯನ್ನು ತಲುಪುವ ನಿರ್ಧಾರ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ, ಸದ್ಯ ಕೋಲಾರ ಜಿಲ್ಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಮಧ್ಯೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದೆ, ಮಹಿಳೆಯೋರ್ವರಿಗೆ ಉಪಮುಖ್ಯಮಂತ್ರಿ ಪಟ್ಟ ನೀಡುವುದಾಗಿ ಹೆಚ್‌ಡಿಕೆ ಘೋಷಣೆ ಮಾಡಿದ್ದಾರೆ. ಈ ಕುರಿತಾದ ಮಾಹಿತಿ ಇಲ್ಲಿದೆ..
ಸಾಮಾಜಿಕ ನ್ಯಾಯದ ಪೆರಿಕಲ್ಪನೆ ಅಡಿಯಲ್ಲಿ, ಈಗಾಗಲೇ ದಲಿತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಘೋಷಣೆ ಮಾಡಿರುವ ಹೆಚ್‌ಡಿ ಕುಮಾರಸ್ವಾಮಿ, ಇದೀಗ ಮಹಿಲಾ ಸಬಲೀಕರಣದ ಉದ್ದೇಶದಿಂದ ಯಾವುದೇ ಸಮುದಾಯದ ಮಹಿಳೆಯೋರ್ವರನ್ನು ಡಿಸಿಎಂ ಮಾಡುವುದಾಗಿ ಭರವಸೆ ನೀಡಿದ್ದಾರೆ.
(1 / 5)
ಸಾಮಾಜಿಕ ನ್ಯಾಯದ ಪೆರಿಕಲ್ಪನೆ ಅಡಿಯಲ್ಲಿ, ಈಗಾಗಲೇ ದಲಿತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಘೋಷಣೆ ಮಾಡಿರುವ ಹೆಚ್‌ಡಿ ಕುಮಾರಸ್ವಾಮಿ, ಇದೀಗ ಮಹಿಲಾ ಸಬಲೀಕರಣದ ಉದ್ದೇಶದಿಂದ ಯಾವುದೇ ಸಮುದಾಯದ ಮಹಿಳೆಯೋರ್ವರನ್ನು ಡಿಸಿಎಂ ಮಾಡುವುದಾಗಿ ಭರವಸೆ ನೀಡಿದ್ದಾರೆ.(Verified Twitter)
ಕೋಲಾರ ತಾಲೂಕಿನ ಕ್ಯಾಲನೂರಿನಲ್ಲಿ ಗ್ರಾಮ ವಾಸ್ತವ್ಯದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌ಡಿಕೆ, ದಲಿತ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡುತ್ತೇನೆಂದು ಈಗಾಗಲೇ ಹೇಳಿದ್ದೇನೆ. ಹಾಗೆಯೇ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ ಬಳಿಕ, ಮಹಿಳೆಯರ ಸಬಲೀಕರಣಕ್ಕಾಗಿ ಡಿಸಿಎಂ ಸ್ಥಾನ ಕೊಡಲು ಬದ್ದನಾಗಿದ್ದೇನೆ ಎಂದು ಹೇಳಿದರು.
(2 / 5)
ಕೋಲಾರ ತಾಲೂಕಿನ ಕ್ಯಾಲನೂರಿನಲ್ಲಿ ಗ್ರಾಮ ವಾಸ್ತವ್ಯದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌ಡಿಕೆ, ದಲಿತ ಸಮುದಾಯದವರಿಗೆ ಡಿಸಿಎಂ ಸ್ಥಾನ ನೀಡುತ್ತೇನೆಂದು ಈಗಾಗಲೇ ಹೇಳಿದ್ದೇನೆ. ಹಾಗೆಯೇ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದ ಬಳಿಕ, ಮಹಿಳೆಯರ ಸಬಲೀಕರಣಕ್ಕಾಗಿ ಡಿಸಿಎಂ ಸ್ಥಾನ ಕೊಡಲು ಬದ್ದನಾಗಿದ್ದೇನೆ ಎಂದು ಹೇಳಿದರು.(Verified Twitter)
ನಮ್ಮ ಪಕ್ಷದಲ್ಲಿ ಹೆಬ್ಬೆಟ್ಟಿನ ಉಪಮುಖ್ಯಮಂತ್ರಿ ಇರುವುದಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ಡಿಸಿಎಂ ಮಾಡುತ್ತೇವೆ. ಕೇವಲ ಚುನಾವಣಾ ಲಾಭಕ್ಕಾಗಿ ಈ ಭರವಸೆಗಳನ್ನು ನೀಡುತ್ತಿಲ್ಲ. ಬದಲಿಗೆ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಇದೇ ವೇಳೆ ಹೆಚ್‌ಡಿಕೆ ವಾಗ್ದಾನ ಮಾಡಿದರು.
(3 / 5)
ನಮ್ಮ ಪಕ್ಷದಲ್ಲಿ ಹೆಬ್ಬೆಟ್ಟಿನ ಉಪಮುಖ್ಯಮಂತ್ರಿ ಇರುವುದಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡುವವರನ್ನು ಡಿಸಿಎಂ ಮಾಡುತ್ತೇವೆ. ಕೇವಲ ಚುನಾವಣಾ ಲಾಭಕ್ಕಾಗಿ ಈ ಭರವಸೆಗಳನ್ನು ನೀಡುತ್ತಿಲ್ಲ. ಬದಲಿಗೆ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಇದೇ ವೇಳೆ ಹೆಚ್‌ಡಿಕೆ ವಾಗ್ದಾನ ಮಾಡಿದರು.(Verified Twitter)
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆಂದು ಹೇಳಲಾಗುತ್ತಿದೆ‌. ಆದ್ದರಿಂದ ಜೆಡಿಎಸ್ ಅಭ್ಯರ್ಥಿಯನ್ನು ಬದಲಾವಣೆ ಮಾಡುತ್ತಾರೆಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಈ ಹಿಂದೆ ಘೋಷಣೆ ಮಾಡಿದಂತೆ ಸಿಎಂಆರ್ ಶ್ರೀನಾಥ್ ಅವರೇ ನಮ್ಮ ಪಕ್ಷದ ಅಭ್ಯರ್ಥಿ ಎಂದು ಹೆಚ್‌ಡಿಕೆ ಇದೇ ವೇಳೆ ಪುನರುಚ್ಚರಿಸಿದರು.
(4 / 5)
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆಂದು ಹೇಳಲಾಗುತ್ತಿದೆ‌. ಆದ್ದರಿಂದ ಜೆಡಿಎಸ್ ಅಭ್ಯರ್ಥಿಯನ್ನು ಬದಲಾವಣೆ ಮಾಡುತ್ತಾರೆಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಈ ಹಿಂದೆ ಘೋಷಣೆ ಮಾಡಿದಂತೆ ಸಿಎಂಆರ್ ಶ್ರೀನಾಥ್ ಅವರೇ ನಮ್ಮ ಪಕ್ಷದ ಅಭ್ಯರ್ಥಿ ಎಂದು ಹೆಚ್‌ಡಿಕೆ ಇದೇ ವೇಳೆ ಪುನರುಚ್ಚರಿಸಿದರು.(Verified Twitter)
ಕೋಲಾರ ಕ್ಷೇತ್ರದಲ್ಲಿ ಯಾತ್ರೆ ವೇಳೆ ಒಂದು ಲಕ್ಷಕ್ಕೂ ಅಧಿಕ ಜನರನ್ನು ಭೇಟಿ ಮಾಡಿದ್ದೇನೆ. ಕೋಲಾರ - ಚಿಕ್ಕಬಳ್ಳಾಪುರ ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳ ಪಟಟ್ಟಿ ಅಂತಿಮಗೊಂಡಿದೆ. ಇದರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂಧು ಹೆಚ್‌ಡಿ ಕುಮಾರಸ್ವಾಮಿ ಇದೇ ವೇಳೆ ಸ್ಪಷ್ಟಪಡಿಸಿದರು.
(5 / 5)
ಕೋಲಾರ ಕ್ಷೇತ್ರದಲ್ಲಿ ಯಾತ್ರೆ ವೇಳೆ ಒಂದು ಲಕ್ಷಕ್ಕೂ ಅಧಿಕ ಜನರನ್ನು ಭೇಟಿ ಮಾಡಿದ್ದೇನೆ. ಕೋಲಾರ - ಚಿಕ್ಕಬಳ್ಳಾಪುರ ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳ ಪಟಟ್ಟಿ ಅಂತಿಮಗೊಂಡಿದೆ. ಇದರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂಧು ಹೆಚ್‌ಡಿ ಕುಮಾರಸ್ವಾಮಿ ಇದೇ ವೇಳೆ ಸ್ಪಷ್ಟಪಡಿಸಿದರು.(Verified Twitter)

    ಹಂಚಿಕೊಳ್ಳಲು ಲೇಖನಗಳು