logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Congress Protest: ರಾಹುಲ್ ಗಾಂಧಿ ಪರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ; ಬಾಯಿಗೆ ಕಪ್ಪು ಪಟ್ಟಿ ಧರಿಸಿದ ಸಿದ್ದು, ಡಿಕೆಶಿ

Congress Protest: ರಾಹುಲ್ ಗಾಂಧಿ ಪರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ; ಬಾಯಿಗೆ ಕಪ್ಪು ಪಟ್ಟಿ ಧರಿಸಿದ ಸಿದ್ದು, ಡಿಕೆಶಿ

Jul 12, 2023 12:44 PM IST

Congress Protest: ಮೋದಿ ಮನೆತನದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪವನ್ನು ಎದುರಿಸುತ್ತಿರುವ ರಾಹುಲ್​ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್​ ವಜಾಗೊಳಿಸಿದೆ. ಹಾಗಾಗಿ ಕರ್ನಾಟಕದ ಕಾಂಗ್ರೆಸ್​ ನಾಯಕರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.

  • Congress Protest: ಮೋದಿ ಮನೆತನದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪವನ್ನು ಎದುರಿಸುತ್ತಿರುವ ರಾಹುಲ್​ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್​ ವಜಾಗೊಳಿಸಿದೆ. ಹಾಗಾಗಿ ಕರ್ನಾಟಕದ ಕಾಂಗ್ರೆಸ್​ ನಾಯಕರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.
ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ವಿಚಾರವಾಗಿ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್​​ ನಾಯಕರಿಂದ ಮೌನ ಪ್ರತಿಭಟನೆ ನಡೆಯಿತು.
(1 / 9)
ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ವಿಚಾರವಾಗಿ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್​​ ನಾಯಕರಿಂದ ಮೌನ ಪ್ರತಿಭಟನೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕರ್ನಾಟಕದ ಪ್ರಮುಖ ಕಾಂಗ್ರೆಸ್​ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಮೌನ ಪ್ರತಿಭಟನೆ ನಡೆಸಿದರು.
(2 / 9)
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕರ್ನಾಟಕದ ಪ್ರಮುಖ ಕಾಂಗ್ರೆಸ್​ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಮೌನ ಪ್ರತಿಭಟನೆ ನಡೆಸಿದರು.
ರಾಹುಲ್ ಗಾಂಧಿ ವಿರುದ್ದ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್​​ ನಡೆಸುತ್ತಿದ್ದ ಮೌನ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ 
(3 / 9)
ರಾಹುಲ್ ಗಾಂಧಿ ವಿರುದ್ದ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್​​ ನಡೆಸುತ್ತಿದ್ದ ಮೌನ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ 
ರಾಹುಲ್ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಪ್ರದರ್ಶಿಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
(4 / 9)
ರಾಹುಲ್ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ ಪ್ರದರ್ಶಿಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ಮನೆತನದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ರಾಹುಲ್​ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್​ ವಜಾಗೊಳಿಸಿದೆ.
(5 / 9)
ಮೋದಿ ಮನೆತನದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ರಾಹುಲ್​ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್​ ವಜಾಗೊಳಿಸಿದೆ.
ಈ ಕಾರಣಕ್ಕೆ ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
(6 / 9)
ಈ ಕಾರಣಕ್ಕೆ ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸುವ ಸಲುವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಬಿಜೆಪಿಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಳಗಲಿ, ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂಬ ಭಿತ್ತಿ ಪತ್ರಗಳನ್ನೂ ಸಿದ್ಧರಾಮಯ್ಯ, ಸುರ್ಜೇವಾಲಾ ಪ್ರದರ್ಶಿಸಿದರು.
(7 / 9)
ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಬಿಜೆಪಿಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಳಗಲಿ, ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂಬ ಭಿತ್ತಿ ಪತ್ರಗಳನ್ನೂ ಸಿದ್ಧರಾಮಯ್ಯ, ಸುರ್ಜೇವಾಲಾ ಪ್ರದರ್ಶಿಸಿದರು.
ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಯುಬಿ ಬಣಕಾರ್, ಎಆರ್ ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
(8 / 9)
ಸಚಿವರಾದ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಯುಬಿ ಬಣಕಾರ್, ಎಆರ್ ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಮತ್ತು 2 ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡುವಂತೆ ರಾಹುಲ್ ಗಾಂಧಿ ಮಾಡಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇದರಿಂದಾಗಿ ಅವರ ಸಂಸತ್ ಸದಸ್ಯತ್ವ ಕಳೆದುಕೊಳ್ಳಬೇಕಾಯಿತು.
(9 / 9)
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಮತ್ತು 2 ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡುವಂತೆ ರಾಹುಲ್ ಗಾಂಧಿ ಮಾಡಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇದರಿಂದಾಗಿ ಅವರ ಸಂಸತ್ ಸದಸ್ಯತ್ವ ಕಳೆದುಕೊಳ್ಳಬೇಕಾಯಿತು.

    ಹಂಚಿಕೊಳ್ಳಲು ಲೇಖನಗಳು