logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸ್ವರ್ಣವಲ್ಲಿ ಸಂಸ್ಥಾನ ಶಿಷ್ಯ ಸ್ವೀಕಾರ ಮಹೋತ್ಸವ: ಜಲಾಶಯಗಮನ, ಸಾವಿತ್ರಿಪ್ರವೇಶ, ಪ್ರೇಷೋಚ್ಚಾರಣೆ; ಸಾವಿರಾರು ಭಕ್ತರ ಹರ್ಷೋದ್ಗಾರ - ಚಿತ್ರಗಳು

ಸ್ವರ್ಣವಲ್ಲಿ ಸಂಸ್ಥಾನ ಶಿಷ್ಯ ಸ್ವೀಕಾರ ಮಹೋತ್ಸವ: ಜಲಾಶಯಗಮನ, ಸಾವಿತ್ರಿಪ್ರವೇಶ, ಪ್ರೇಷೋಚ್ಚಾರಣೆ; ಸಾವಿರಾರು ಭಕ್ತರ ಹರ್ಷೋದ್ಗಾರ - ಚಿತ್ರಗಳು

Feb 23, 2024 09:19 AM IST

Shree Swarnavalli Matha: ಕಾರವಾರ ಜಿಲ್ಲೆಯ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದಲ್ಲಿ ಫೆ.18ರಿಂದ ಶಿಷ್ಯ ಸ್ವೀಕಾರ ಮಹೋತ್ಸವ ಆರಂಭವಾಗಿ ಕೊನೇ ದಿನವಾದ ಶೋಭನ ಸಂವತ್ಸರದ ಮಾಘ ಶುಕ್ರ ತ್ರಯೋದಶಿ ಗುರುವಾರ ಬೆಳಗ್ಗೆ 10 ಗಂಟೆಯಿಂದ 10.10ರ ಅವಧಿಯಲ್ಲಿ ನೂತನ ಶ್ರೀಗಳಿಗೆ ಸನ್ಯಾಸ ದೀಕ್ಷೆ ಮಾಡಲಾಯಿತು. (ಚಿತ್ರ ವರದಿ: ಹರೀಶ್‌ ಮಾಂಬಾಡಿ)

  • Shree Swarnavalli Matha: ಕಾರವಾರ ಜಿಲ್ಲೆಯ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದಲ್ಲಿ ಫೆ.18ರಿಂದ ಶಿಷ್ಯ ಸ್ವೀಕಾರ ಮಹೋತ್ಸವ ಆರಂಭವಾಗಿ ಕೊನೇ ದಿನವಾದ ಶೋಭನ ಸಂವತ್ಸರದ ಮಾಘ ಶುಕ್ರ ತ್ರಯೋದಶಿ ಗುರುವಾರ ಬೆಳಗ್ಗೆ 10 ಗಂಟೆಯಿಂದ 10.10ರ ಅವಧಿಯಲ್ಲಿ ನೂತನ ಶ್ರೀಗಳಿಗೆ ಸನ್ಯಾಸ ದೀಕ್ಷೆ ಮಾಡಲಾಯಿತು. (ಚಿತ್ರ ವರದಿ: ಹರೀಶ್‌ ಮಾಂಬಾಡಿ)
Shree Swarnavalli Matha: ಕಾರವಾರ ಜಿಲ್ಲೆಯ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದಲ್ಲಿ ಫೆ.18ರಿಂದ ಶಿಷ್ಯ ಸ್ವೀಕಾರ ಮಹೋತ್ಸವ ಆರಂಭವಾಗಿ ಕೊನೇ ದಿನವಾದ ಶೋಭನ ಸಂವತ್ಸರದ ಮಾಘ ಶುಕ್ರ ತ್ರಯೋದಶಿ ಗುರುವಾರ ಬೆಳಗ್ಗೆ 10 ಗಂಟೆಯಿಂದ 10.10ರ ಅವಧಿಯಲ್ಲಿ ನೂತನ ಶ್ರೀಗಳಿಗೆ ಸನ್ಯಾಸ ದೀಕ್ಷೆ ಮಾಡಲಾಯಿತು. 
(1 / 8)
Shree Swarnavalli Matha: ಕಾರವಾರ ಜಿಲ್ಲೆಯ ಸೋಂದಾ ಸ್ವರ್ಣವಲ್ಲಿ ಸಂಸ್ಥಾನದಲ್ಲಿ ಫೆ.18ರಿಂದ ಶಿಷ್ಯ ಸ್ವೀಕಾರ ಮಹೋತ್ಸವ ಆರಂಭವಾಗಿ ಕೊನೇ ದಿನವಾದ ಶೋಭನ ಸಂವತ್ಸರದ ಮಾಘ ಶುಕ್ರ ತ್ರಯೋದಶಿ ಗುರುವಾರ ಬೆಳಗ್ಗೆ 10 ಗಂಟೆಯಿಂದ 10.10ರ ಅವಧಿಯಲ್ಲಿ ನೂತನ ಶ್ರೀಗಳಿಗೆ ಸನ್ಯಾಸ ದೀಕ್ಷೆ ಮಾಡಲಾಯಿತು. 
ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ 55ನೇ ಯತಿಗಳಾಗಿ ಆನಂದಬೋಧೇಂದ್ರ ಸರಸ್ವತಿ ಸ್ವಾಮೀಜಿ ಅವರು ಗುರುವಾರ ನಿಯೋಜನೆಗೊಂಡಿದ್ದಾರೆ. ನಿಯೋಜಿತ ಯತಿಗಳಿಗೆ ಶಾಲ್ಮಲಾ ನದಿಯಲ್ಲಿ ಜಲಾಶಯಗಮನ, ಸಾವಿತ್ರಿಪ್ರವೇಶ, ಪ್ರೇಷೋಚ್ಚಾರಣೆ, ಕಾಷಾಯ ವಸ್ತ್ರಧಾರಣೆ, ಪ್ರಣವ ಮಹಾವಾಕ್ಯೋಪದೇಶದಂಥ ಧಾರ್ಮಿಕ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆದವು. 
(2 / 8)
ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ 55ನೇ ಯತಿಗಳಾಗಿ ಆನಂದಬೋಧೇಂದ್ರ ಸರಸ್ವತಿ ಸ್ವಾಮೀಜಿ ಅವರು ಗುರುವಾರ ನಿಯೋಜನೆಗೊಂಡಿದ್ದಾರೆ. ನಿಯೋಜಿತ ಯತಿಗಳಿಗೆ ಶಾಲ್ಮಲಾ ನದಿಯಲ್ಲಿ ಜಲಾಶಯಗಮನ, ಸಾವಿತ್ರಿಪ್ರವೇಶ, ಪ್ರೇಷೋಚ್ಚಾರಣೆ, ಕಾಷಾಯ ವಸ್ತ್ರಧಾರಣೆ, ಪ್ರಣವ ಮಹಾವಾಕ್ಯೋಪದೇಶದಂಥ ಧಾರ್ಮಿಕ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆದವು. 
ಶಂಕರಾಚಾರ್ಯ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ 55ನೇ ನೂತನ ಯತಿಗಳಾಗಿ ಬ್ರಹ್ಮಚಾರಿ ವಿದ್ವಾನ್ ನಾಗರಾಜ ಭಟ್ಟ ಗಂಗೆಮನೆ ಅವರು ಆಯ್ಕೆಗೊಂಡಿದ್ದರು.  ನೂತನ ಯತಿಗಳಿಗೆ ಆನಂದಬೋದೇಂದ್ರ ಸರಸ್ವತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದೆ. 
(3 / 8)
ಶಂಕರಾಚಾರ್ಯ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಉತ್ತರಾಧಿಕಾರಿಗಳಾಗಿ 55ನೇ ನೂತನ ಯತಿಗಳಾಗಿ ಬ್ರಹ್ಮಚಾರಿ ವಿದ್ವಾನ್ ನಾಗರಾಜ ಭಟ್ಟ ಗಂಗೆಮನೆ ಅವರು ಆಯ್ಕೆಗೊಂಡಿದ್ದರು.  ನೂತನ ಯತಿಗಳಿಗೆ ಆನಂದಬೋದೇಂದ್ರ ಸರಸ್ವತಿ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದೆ. 
ಯತಿಗಳಾದ ಯಡತೊರೆ ಶ್ರೀ ಶಂಕರ ಭಾರತಿ ಮಹಾಸ್ವಾಮೀಜಿ, ಹರಿಹರಪುರದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸ್ವರೂಪಿ ಮಹಾಸ್ವಾಮೀಜಿ, ಬೆಂಗಳೂರಿನ ಕೂಡ್ಲಿ ಶೃಂಗೇರಿ ಮಠದ ವಿಶ್ವೇಶ್ವರ ಭಾರತಿ ಮಹಾಸ್ವಾಮೀಜಿ ಸಮ್ಮುಖ ಸ್ವರ್ಣವಲ್ಲೀ ಪೀಠದ 54ನೇ ಯತಿಗಳಾದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ನೂತನ ಯತಿಗಳಿಗೆ ಆನಂದಬೋದೇಂದ್ರ ಸರಸ್ವತಿ ಸ್ವಾಮೀಜಿ ಎಂದು ಮೂರು ಬಾರಿ ಘೋಷಿಸುವ ಮೂಲಕ ನಾಮಕರಣ ಮಾಡಿದರು. 
(4 / 8)
ಯತಿಗಳಾದ ಯಡತೊರೆ ಶ್ರೀ ಶಂಕರ ಭಾರತಿ ಮಹಾಸ್ವಾಮೀಜಿ, ಹರಿಹರಪುರದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸ್ವರೂಪಿ ಮಹಾಸ್ವಾಮೀಜಿ, ಬೆಂಗಳೂರಿನ ಕೂಡ್ಲಿ ಶೃಂಗೇರಿ ಮಠದ ವಿಶ್ವೇಶ್ವರ ಭಾರತಿ ಮಹಾಸ್ವಾಮೀಜಿ ಸಮ್ಮುಖ ಸ್ವರ್ಣವಲ್ಲೀ ಪೀಠದ 54ನೇ ಯತಿಗಳಾದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ನೂತನ ಯತಿಗಳಿಗೆ ಆನಂದಬೋದೇಂದ್ರ ಸರಸ್ವತಿ ಸ್ವಾಮೀಜಿ ಎಂದು ಮೂರು ಬಾರಿ ಘೋಷಿಸುವ ಮೂಲಕ ನಾಮಕರಣ ಮಾಡಿದರು. 
ಮುಂಜಾನೆ 5 ಗಂಟೆಯಿಂದಲೇ ನಾನಾ ಧಾರ್ಮಿಕ ಹಾಗೂ ಕಾರ್ಯಶೋಧನ ಕಾರ್ಯಕ್ರಮಗಳು ಶ್ರೀಮಠದಲ್ಲಿ ನಡೆದವು. 
(5 / 8)
ಮುಂಜಾನೆ 5 ಗಂಟೆಯಿಂದಲೇ ನಾನಾ ಧಾರ್ಮಿಕ ಹಾಗೂ ಕಾರ್ಯಶೋಧನ ಕಾರ್ಯಕ್ರಮಗಳು ಶ್ರೀಮಠದಲ್ಲಿ ನಡೆದವು. 
ಬೆಳಗ್ಗೆ 9.40ರಸುಮಾರಿಗೆ ಶ್ರೀಮಠದಿಂದ ಸುಮಾರು 1 ಕಿ.ಮೀ. ದೂರದ ಶಾಲ್ಮಲಾ ನದಿಯತ್ತ ಜಲಾಶಯಗಮನ ಮಾಡಲಾಯಿತು. 
(6 / 8)
ಬೆಳಗ್ಗೆ 9.40ರಸುಮಾರಿಗೆ ಶ್ರೀಮಠದಿಂದ ಸುಮಾರು 1 ಕಿ.ಮೀ. ದೂರದ ಶಾಲ್ಮಲಾ ನದಿಯತ್ತ ಜಲಾಶಯಗಮನ ಮಾಡಲಾಯಿತು. 
ನೂತನ ಉತ್ತರಾಧಿಕಾರಿಗಳು ಸ್ನಾನ ಪೂರ್ಣಗೊಳಿಸಿ, ಮೇಲ್ಮುಖವಾಗಿ ಜನಿವಾರ ತೆಗೆದು, ಶಿರದ ಮೇಲಿನ ಆರು ಕೂದಲು ಹರಿದು, ಸಂಸಾರದ ಬಂಧ ಸಹಿತ ಸರ್ವಸ್ವವನ್ನೂ ತ್ಯಾಗ ಮಾಡಿ ಏಳು ಹೆಜ್ಜೆ ಇಟ್ಟರು. ಪ್ರಪಂಚ ಬಂಧನ ಬಿಟ್ಟ ಅವರಿಗೆ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕಾಷಾಯ ವಸ್ತ್ರ ನೀಡಿದರು.
(7 / 8)
ನೂತನ ಉತ್ತರಾಧಿಕಾರಿಗಳು ಸ್ನಾನ ಪೂರ್ಣಗೊಳಿಸಿ, ಮೇಲ್ಮುಖವಾಗಿ ಜನಿವಾರ ತೆಗೆದು, ಶಿರದ ಮೇಲಿನ ಆರು ಕೂದಲು ಹರಿದು, ಸಂಸಾರದ ಬಂಧ ಸಹಿತ ಸರ್ವಸ್ವವನ್ನೂ ತ್ಯಾಗ ಮಾಡಿ ಏಳು ಹೆಜ್ಜೆ ಇಟ್ಟರು. ಪ್ರಪಂಚ ಬಂಧನ ಬಿಟ್ಟ ಅವರಿಗೆ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕಾಷಾಯ ವಸ್ತ್ರ ನೀಡಿದರು.
ಧಾರ್ಮಿಕ ಮತ್ತು ಅಧ್ಯಾತ್ಮ ಸುದ್ದಿ ಮಾಹಿತಿಗಳಿಗಾಗಿ ಹಿಂದೂಸ್ತಾನ್‌ ಟೈಮ್ಸ್‌ ಕನ್ನಡಕ್ಕೆ ಭೇಟಿ ನೀಡಿ
(8 / 8)
ಧಾರ್ಮಿಕ ಮತ್ತು ಅಧ್ಯಾತ್ಮ ಸುದ್ದಿ ಮಾಹಿತಿಗಳಿಗಾಗಿ ಹಿಂದೂಸ್ತಾನ್‌ ಟೈಮ್ಸ್‌ ಕನ್ನಡಕ್ಕೆ ಭೇಟಿ ನೀಡಿ

    ಹಂಚಿಕೊಳ್ಳಲು ಲೇಖನಗಳು