logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತೀರಾ, ಗಮನಿಸಿ 4 ಜಿಲ್ಲೆಗಳ ಚೆಕ್‌ಪೋಸ್ಟ್‌ನಲ್ಲಿ ಚುನಾವಣೆ ತಪಾಸಣೆ ಚುರುಕು Photos

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚರಿಸುತ್ತೀರಾ, ಗಮನಿಸಿ 4 ಜಿಲ್ಲೆಗಳ ಚೆಕ್‌ಪೋಸ್ಟ್‌ನಲ್ಲಿ ಚುನಾವಣೆ ತಪಾಸಣೆ ಚುರುಕು Photos

Mar 18, 2024 05:35 PM IST

ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ವಾಹನಗಳ ತಪಾಸಣೆಯೂ ಚುರುಕುಗೊಂಡಿದೆ. ಬೆಂಗಳೂರು, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಪಾಸಣೆ ಹೆಚ್ಚಿದೆ. 

  • ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ವಾಹನಗಳ ತಪಾಸಣೆಯೂ ಚುರುಕುಗೊಂಡಿದೆ. ಬೆಂಗಳೂರು, ರಾಮನಗರ, ಮಂಡ್ಯ ಹಾಗೂ ಮೈಸೂರು ಜಿಲ್ಲೆ ವ್ಯಾಪ್ತಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತಪಾಸಣೆ ಹೆಚ್ಚಿದೆ. 
ಬೆಂಗಳೂರು ಮೈಸೂರು ಹೆದ್ದಾರಿ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ತಪಾಸಣೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚಿಸಲಾಗಿದೆ. ಅಕ್ರಮ ಹಣ, ಉಡುಗೊರೆ, ಮದ್ಯ ಸಾಗಣೆ ಮೇಲೆ ನಿಗಾ ಇರಿಸಲಾಗಿದೆ.
(1 / 6)
ಬೆಂಗಳೂರು ಮೈಸೂರು ಹೆದ್ದಾರಿ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ತಪಾಸಣೆಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚಿಸಲಾಗಿದೆ. ಅಕ್ರಮ ಹಣ, ಉಡುಗೊರೆ, ಮದ್ಯ ಸಾಗಣೆ ಮೇಲೆ ನಿಗಾ ಇರಿಸಲಾಗಿದೆ.
ಬೆಂಗಳೂರು ಸಮೀಪದ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಚುರುಕುಗೊಂಡಿದ್ದು. ಪೊಲೀಸರು ತಪಾಸಣೆಯನ್ನು ರಾತ್ರಿಯೂ ಮಾಡುತ್ತಿದ್ದಾರೆ. 
(2 / 6)
ಬೆಂಗಳೂರು ಸಮೀಪದ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಚುರುಕುಗೊಂಡಿದ್ದು. ಪೊಲೀಸರು ತಪಾಸಣೆಯನ್ನು ರಾತ್ರಿಯೂ ಮಾಡುತ್ತಿದ್ದಾರೆ. 
ಮಂಡ್ಯ ಜಿಲ್ಲೆಯ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ಸಂಚಾರ ವಹೀ ದಾಖಲೆಯನ್ನು ಡಿಸಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಅವರು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.
(3 / 6)
ಮಂಡ್ಯ ಜಿಲ್ಲೆಯ ಚೆಕ್‌ಪೋಸ್ಟ್‌ನಲ್ಲಿ ವಾಹನಗಳ ಸಂಚಾರ ವಹೀ ದಾಖಲೆಯನ್ನು ಡಿಸಿ ಡಾ.ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಅವರು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.
ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿ ಸ್ಥಾಪನೆ ಮಾಡಲಾಗಿರುವ ವಿಶಾಲ ಚೆಕ್‌ಪೋಸ್ಟ್‌ನಲ್ಲಿ ಬೆಂಗಳೂರು ಕಡೆ ಹೋಗುವ ಹಾಗೂ ಅಲ್ಲಿಂದ ಬರುವ ವಾಹನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
(4 / 6)
ಮದ್ದೂರು ತಾಲ್ಲೂಕಿನ ನಿಡಘಟ್ಟ ಬಳಿ ಸ್ಥಾಪನೆ ಮಾಡಲಾಗಿರುವ ವಿಶಾಲ ಚೆಕ್‌ಪೋಸ್ಟ್‌ನಲ್ಲಿ ಬೆಂಗಳೂರು ಕಡೆ ಹೋಗುವ ಹಾಗೂ ಅಲ್ಲಿಂದ ಬರುವ ವಾಹನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಮೈಸೂರು ನಗರದ ಹೊರ ವಲಯದಲ್ಲೂ ಲೋಕಸಭೆ ಚುನಾವಣೆ ತಪಾಸಣೆ ಚಟುವಟಿಕೆಯನ್ನು ಪೊಲೀಸರು ಹೆಚ್ಚಿಸಿದ್ದಾರೆ,
(5 / 6)
ಮೈಸೂರು ನಗರದ ಹೊರ ವಲಯದಲ್ಲೂ ಲೋಕಸಭೆ ಚುನಾವಣೆ ತಪಾಸಣೆ ಚಟುವಟಿಕೆಯನ್ನು ಪೊಲೀಸರು ಹೆಚ್ಚಿಸಿದ್ದಾರೆ,
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮಂಡ್ಯ ಜಿಲ್ಲೆಯೊಂದರಲ್ಲೇ 25 ಚೆಕ್ ಪೋಸ್ಟ್ ಗಳನ್ನು ಸ್ಥಾಪನೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ: ಕುಮಾರ  ಮದ್ದೂರು ತಾಲ್ಲೂಕಿನ ಕೊಂಗಬೋರನದೊಡ್ಡಿ ಗೇಟ್ ಮತ್ತು ನಿಡಘಟ್ಟದ ಬಳಿ ಸ್ಥಾಪಿತವಾಗಿರುವ ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳ ನಿಯೋಜನೆ, ಸಿ.ಸಿ. ಕ್ಯಾಮರಾ, ವಾಹನಗಳ ತಪಾಸಣೆ ಕುರಿತು ಮಾಹಿತಿ ಪಡೆದುಕೊಂಡರು.
(6 / 6)
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಮಂಡ್ಯ ಜಿಲ್ಲೆಯೊಂದರಲ್ಲೇ 25 ಚೆಕ್ ಪೋಸ್ಟ್ ಗಳನ್ನು ಸ್ಥಾಪನೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ: ಕುಮಾರ  ಮದ್ದೂರು ತಾಲ್ಲೂಕಿನ ಕೊಂಗಬೋರನದೊಡ್ಡಿ ಗೇಟ್ ಮತ್ತು ನಿಡಘಟ್ಟದ ಬಳಿ ಸ್ಥಾಪಿತವಾಗಿರುವ ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳ ನಿಯೋಜನೆ, ಸಿ.ಸಿ. ಕ್ಯಾಮರಾ, ವಾಹನಗಳ ತಪಾಸಣೆ ಕುರಿತು ಮಾಹಿತಿ ಪಡೆದುಕೊಂಡರು.

    ಹಂಚಿಕೊಳ್ಳಲು ಲೇಖನಗಳು