logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Pm Modi Speech In Hubballi: ಯುವ ಶಕ್ತಿಯ ಕನಸುಗಳು ಭಾರತದ ದಿಕ್ಕನ್ನು ನಿರ್ಧರಿಸುತ್ತವೆ: ಹುಬ್ಬಳ್ಳಿಯಲ್ಲಿ ಮೋದಿ ಅಭಿಮತ

PM Modi Speech in Hubballi: ಯುವ ಶಕ್ತಿಯ ಕನಸುಗಳು ಭಾರತದ ದಿಕ್ಕನ್ನು ನಿರ್ಧರಿಸುತ್ತವೆ: ಹುಬ್ಬಳ್ಳಿಯಲ್ಲಿ ಮೋದಿ ಅಭಿಮತ

Jan 12, 2023 07:00 PM IST

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು(ಜ.12-ಗುರುವಾರ), ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿ ಭಾಷಣ ಮಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಭಾರತದ ಯುವಶಕ್ತಿಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಯುವ ಶಕ್ತಿಯ ಕನಸುಗಳು ಭಾರತದ ದಿಕ್ಕನ್ನು ನಿರ್ಧರಿಸುತ್ತವೆ ಎಂದು ಹೇಳಿದರು. ಈ ಕುರಿತು ಇಲ್ಲಿದೆ ಮಾಹಿತಿ..

  • ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು(ಜ.12-ಗುರುವಾರ), ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಿ ಭಾಷಣ ಮಾಡಿದರು. ರಾಷ್ಟ್ರ ನಿರ್ಮಾಣದಲ್ಲಿ ಭಾರತದ ಯುವಶಕ್ತಿಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಯುವ ಶಕ್ತಿಯ ಕನಸುಗಳು ಭಾರತದ ದಿಕ್ಕನ್ನು ನಿರ್ಧರಿಸುತ್ತವೆ ಎಂದು ಹೇಳಿದರು. ಈ ಕುರಿತು ಇಲ್ಲಿದೆ ಮಾಹಿತಿ..
ಯುವ ಶಕ್ತಿಯ ಕನಸುಗಳು ಭಾರತದ ದಿಕ್ಕನ್ನು ನಿರ್ಧರಿಸುತ್ತವೆ. ಯುವ ಶಕ್ತಿಯ ಆಕಾಂಕ್ಷೆಗಳು ಭಾರತದ ಗಮ್ಯಸ್ಥಾನವನ್ನು ನಿರ್ಧರಿಸುತ್ತವೆ. ಯುವ ಶಕ್ತಿಯ ಉತ್ಸಾಹವು ಭಾರತದ ಶಕ್ತಿಯನ್ನು ನಿರ್ಧರಿಸುತ್ತದೆ ಎಂದು  ಪ್ರಧಾನಿ ಮೋದಿ ಈ ವೇಳೆ ಅಭಿಪ್ರಾಯಟ್ಟರು.
(1 / 5)
ಯುವ ಶಕ್ತಿಯ ಕನಸುಗಳು ಭಾರತದ ದಿಕ್ಕನ್ನು ನಿರ್ಧರಿಸುತ್ತವೆ. ಯುವ ಶಕ್ತಿಯ ಆಕಾಂಕ್ಷೆಗಳು ಭಾರತದ ಗಮ್ಯಸ್ಥಾನವನ್ನು ನಿರ್ಧರಿಸುತ್ತವೆ. ಯುವ ಶಕ್ತಿಯ ಉತ್ಸಾಹವು ಭಾರತದ ಶಕ್ತಿಯನ್ನು ನಿರ್ಧರಿಸುತ್ತದೆ ಎಂದು  ಪ್ರಧಾನಿ ಮೋದಿ ಈ ವೇಳೆ ಅಭಿಪ್ರಾಯಟ್ಟರು.(ANI)
ದೇಶ ಈಗ ಅಮೃತ ಕಾಲದಲ್ಲಿದ್ದು, ಯುವಕರು ತಮ್ಮ ರಾಷ್ಟ್ರೀಯ ಕರ್ತವ್ಯಗಳ ಮೇಲೆ ಹೆಚ್ಚಿನ ಒತ್ತು ನೀಡಬೇಕಿದೆ. ನಾವು ರಾಷ್ಟ್ರವನ್ನು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ. ಭಾರತದ ಯುವ ಸಮುದಾಯ ಸದಾಕಾಲ ಸ್ವಾಮಿ ವಿವೇಕಾನಂದ ಅವರಿಂದ ಸ್ಪೂರ್ತಿಯನ್ನು ಪಡೆದಿದೆ ಎಂದು ಪ್ರಧಾನಿ ಮೋದಿ ನುಡಿದರು.
(2 / 5)
ದೇಶ ಈಗ ಅಮೃತ ಕಾಲದಲ್ಲಿದ್ದು, ಯುವಕರು ತಮ್ಮ ರಾಷ್ಟ್ರೀಯ ಕರ್ತವ್ಯಗಳ ಮೇಲೆ ಹೆಚ್ಚಿನ ಒತ್ತು ನೀಡಬೇಕಿದೆ. ನಾವು ರಾಷ್ಟ್ರವನ್ನು ಮುಂದಕ್ಕೆ ಕೊಂಡೊಯ್ಯಬೇಕಾಗಿದೆ. ಭಾರತದ ಯುವ ಸಮುದಾಯ ಸದಾಕಾಲ ಸ್ವಾಮಿ ವಿವೇಕಾನಂದ ಅವರಿಂದ ಸ್ಪೂರ್ತಿಯನ್ನು ಪಡೆದಿದೆ ಎಂದು ಪ್ರಧಾನಿ ಮೋದಿ ನುಡಿದರು.(ANI)
ಇಂದು(ಜ.12-ಗುರುವಾರ) ಸ್ವಾಮಿ ವಿವೇಕಾನಂದ ಅವರ 160ನೇ ಜನ್ಮದಿನ. ಯುವ ಸಮುದಾಯಕ್ಕೆ ಸದಾ ಮಾರ್ಗದರ್ಶಕರಾಗಿರುವ ಸ್ವಾಮಿ ವಿವೇಕಾನಂದ ಅವರು, ಭಾರತದ ಯುವಕರಿಗೆ ಸರಿಯಾದ ದಾರಿಯನ್ನು ತೋರುತ್ತಿದ್ದಾರೆ. ರಾಷ್ಟೀಯ ಯುವಜನೋತ್ಸವದ ಈ ಶುಭ ಸಂದರರ್ಭದಲ್ಲಿ ನಾನು ಸ್ವಾಮಿ ವಿವೇಕಾನಂದ ಅವರಿಗೆ ನಮಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
(3 / 5)
ಇಂದು(ಜ.12-ಗುರುವಾರ) ಸ್ವಾಮಿ ವಿವೇಕಾನಂದ ಅವರ 160ನೇ ಜನ್ಮದಿನ. ಯುವ ಸಮುದಾಯಕ್ಕೆ ಸದಾ ಮಾರ್ಗದರ್ಶಕರಾಗಿರುವ ಸ್ವಾಮಿ ವಿವೇಕಾನಂದ ಅವರು, ಭಾರತದ ಯುವಕರಿಗೆ ಸರಿಯಾದ ದಾರಿಯನ್ನು ತೋರುತ್ತಿದ್ದಾರೆ. ರಾಷ್ಟೀಯ ಯುವಜನೋತ್ಸವದ ಈ ಶುಭ ಸಂದರರ್ಭದಲ್ಲಿ ನಾನು ಸ್ವಾಮಿ ವಿವೇಕಾನಂದ ಅವರಿಗೆ ನಮಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.(ANI)
ಭಾರತವು ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಭಾರತ ವಿಶ್ವದ ಅಗ್ರ 3ನೇ ಆರ್ಥಿಕತೆಯನ್ನು ಹೊಂದಿದ ರಾಷ್ಟ್ರವಾಗುವ ದಿನಗಳು ದೂರವಿಲ್ಲ. ದೇಶದ ಈ ಆರ್ಥಿಕ ಬೆಳವಣಿಗೆಯು ನಮ್ಮ ಯುವಕರಿಗೆ ಅಪಾರ ಅವಕಾಶಗಳನ್ನು ತರುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ವ್ಯಕ್ತಪಡಿಸಿದರು.
(4 / 5)
ಭಾರತವು ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಭಾರತ ವಿಶ್ವದ ಅಗ್ರ 3ನೇ ಆರ್ಥಿಕತೆಯನ್ನು ಹೊಂದಿದ ರಾಷ್ಟ್ರವಾಗುವ ದಿನಗಳು ದೂರವಿಲ್ಲ. ದೇಶದ ಈ ಆರ್ಥಿಕ ಬೆಳವಣಿಗೆಯು ನಮ್ಮ ಯುವಕರಿಗೆ ಅಪಾರ ಅವಕಾಶಗಳನ್ನು ತರುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ವ್ಯಕ್ತಪಡಿಸಿದರು.(ANI)
ಕ್ರೀಡೆಯಲ್ಲಿಯೂ ಸಹ, ಭಾರತವು ಪ್ರಮುಖ ಜಾಗತಿಕ ಶಕ್ತಿಯಾಗುವತ್ತ ಮುನ್ನಡೆಯುತ್ತಿದೆ. ಭಾರತದ ಯುವಕರ ಸಾಮರ್ಥ್ಯದಿಂದಾಗಿ ಇದು ಸಾಧ್ಯವಾಗುತ್ತಿದೆ. ಮುಂದಿನ 25 ವರ್ಷಗಳು ಭಾರತಕ್ಕೆ ಅತ್ಯಂತ ಮುಖ್ಯವಾಗಿದ್ದು, ಯುವ ಸಮುದಾಯ ರಾಷ್ಟ್ರ ನಿರ್ಮಾಣದಲ್ಲಿ ತನ್ನ ಪಾತ್ರವನ್ನು ನಿರ್ಮಿಸಬೇಕು ಎಂದು ಪ್ರಧಾನಿ ಮೋದಿ ಇದೇ ವೇಳೆ ಕರೆ ನೀಡಿದರು.
(5 / 5)
ಕ್ರೀಡೆಯಲ್ಲಿಯೂ ಸಹ, ಭಾರತವು ಪ್ರಮುಖ ಜಾಗತಿಕ ಶಕ್ತಿಯಾಗುವತ್ತ ಮುನ್ನಡೆಯುತ್ತಿದೆ. ಭಾರತದ ಯುವಕರ ಸಾಮರ್ಥ್ಯದಿಂದಾಗಿ ಇದು ಸಾಧ್ಯವಾಗುತ್ತಿದೆ. ಮುಂದಿನ 25 ವರ್ಷಗಳು ಭಾರತಕ್ಕೆ ಅತ್ಯಂತ ಮುಖ್ಯವಾಗಿದ್ದು, ಯುವ ಸಮುದಾಯ ರಾಷ್ಟ್ರ ನಿರ್ಮಾಣದಲ್ಲಿ ತನ್ನ ಪಾತ್ರವನ್ನು ನಿರ್ಮಿಸಬೇಕು ಎಂದು ಪ್ರಧಾನಿ ಮೋದಿ ಇದೇ ವೇಳೆ ಕರೆ ನೀಡಿದರು.(ANI)

    ಹಂಚಿಕೊಳ್ಳಲು ಲೇಖನಗಳು