Captain Pranjal : ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ನೆನೆದು ಕಣ್ಣೀರಾದ ಶಿಕ್ಷಕರು ; ಬಾಲ್ಯದಲ್ಲೇ ದೇಶ ಸೇವೆಯ ಕನಸು
Nov 24, 2023 01:01 PM IST
ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ದಕ್ಷಿಣ ಕನ್ನಡ ಮೂಲದ 63ನೇ ರಾಷ್ಟ್ರೀಯ ರೈಫಲ್ಸ್ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಹುತಾತ್ಮರಾಗಿದ್ದಾರೆ. ಮಂಗಳೂರಿನ ಎಂಆರ್ ಪಿಎಲ್ ನ ಡೆಲ್ಲಿ ಸ್ಕೂಲ್ ನಲ್ಲಿ ಎಲ್ ಕೆಜಿಯಿಂದ ಎಸ್ಎಸ್ಎಲ್ ಸಿವರೆಗೆ ವಿದ್ಯಾಭ್ಯಾಸ ಪಡೆದ ಬಳಿಕ ಅವರು ನಗರದ ಮಹೇಶ್ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಷನ್ ನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದು ಸೇನೆಗೆ ಸೇರಿದ್ದರು. ಎಂ.ವಿ.ಪ್ರಾಂಜಲ್ ಹುತಾತ್ಮರಾದ ವಿಚಾರವನ್ನು ನೆನೆದು ಕಣ್ಣೀರಾದ ಶಿಕ್ಷಕಿ ಕೃಪಾ ಸಂಜೀವ್, ಅವನು ಶಾಲೆಯಲ್ಲಿದ್ದಾಗಲೇ ಪರ್ಫೆಕ್ಟ್ ಸ್ಟೂಡೆಂಟ್ ಆಗಿದ್ದ. ಆದ್ದರಿಂದ ಎಲ್ಲಾ ಶಿಕ್ಷಕರ ಫೇವರೇಟ್ ವಿದ್ಯಾರ್ಥಿಯಾಗಿದ್ದ. ಮೊದಲು ಈ ವಿಚಾರ ಕಿವಿಗೆ ಬಿದ್ದಾಗ ಈ ಘಟನೆಯನ್ನು ಅರಗಿಸಲು ಸಾಧ್ಯವಾಗಿಲ್ಲ. ನಮಗೆ ಈ ದುಃಖದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ದೇಶಕ್ಕಾಗಿ ಅವನು ಮಾಡಿರುವ ತ್ಯಾಗಕ್ಕೆ ಸೆಲ್ಯೂಟ್ ಮಾಡುತ್ತೇವೆ ಎಂದಿದ್ದಾರೆ.