Renukacharya : ಬಿಜೆಪಿಗೆ ಇನ್ನೂ ರಾಜ್ಯಾಧ್ಯಕ್ಷರೇ ಸಿಕ್ಕಿಲ್ಲ ; ನಾವು ಸುಧಾಕರ್ ಕೈಗೆ ಪ್ರಣಾಳಿಕೆ ಕೊಡಬಾರದಿತ್ತು
Jun 28, 2023 05:07 PM IST
- ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಸಾಕಷ್ಟು ನಾಯಕರು ಟೀಕೆ ಟಿಪ್ಪಣಿ ನೀಡುತ್ತಿದ್ದಾರೆ. ಇದೀಗ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಕೂಡ ತಮ್ಮ ಪಕ್ಷ ತೆಗೆದುಕೊಂಡಿದ್ದ ನಿರ್ಧಾರಗಳ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಒಳ ಮೀಸಲಾತಿ ಕೊಟ್ಟಿದ್ದು, ಅನ್ನಭಾಗ್ಯದ ಅಕ್ಕಿ ಕಡಿತಗೊಳಿಸಿದ್ದು, ಅನನುಭವಿ ಸುಧಾಕರ್ ಕೈಗೆ ಪ್ರಣಾಳಿಕೆ ಕೊಟ್ಟು ಸತ್ವ ಇಲ್ಲದಂತೆ ಮಾಡಿದ್ದು, 70 ಜನರಿಗೆ ಟಿಕೆಟ್ ತಪ್ಪಿಸಿದ್ದು, ಜೊತೆಗೆ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಅವರಂತಹ ನಾಯಕರಿಗೆ ಟಿಕೆಟ್ ಕೊಡದೇ ಇದ್ದಿದ್ದು ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಎಂದು ಟೀಕಿಸಿದ್ದಾರೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅಧಿಕಾರ ಕಿತ್ತುಕೊಂಡಿದ್ದು ದೊಡ್ಡ ಪ್ರಮಾದ ಎಂದು ಹೊನ್ನಾಳಿಯ ಮಾಜಿ ಶಾಸಕ ರೇಣುಕಾಚಾರ್ಯ ಅಭಿಪ್ರಾಯ ಪಟ್ಟಿದ್ದಾರೆ.