ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶ ಕಾರಣ, ಬೆಂಗಳೂರು ಅರಮನೆ ಮೈದಾನ ಸುತ್ತಮುತ್ತ ಸಂಚಾರ ವ್ಯತ್ಯಯ
Bengaluru Traffic Advisory: ಇನ್ವೆಸ್ಟ್ ಕರ್ನಾಟಕ ಫೋರಂ ಬೆಂಗಳೂರು ಅರಮನೆ ಮೈದಾನದಲ್ಲಿ ಫೆ 11 ರಿಂದ 14ರ ತನಕ 'ಇನ್ವೆಸ್ಟ್ ಕರ್ನಾಟಕ-2025' ಗ್ಲೋಬಲ್ ಇನ್ವೆಸ್ಟರ್ ಮೀಟ್ ಕಾರ್ಯಕ್ರಮ ಆಯೋಜಿಸಿರುವ ಕಾರಣ, ಬೆಂಗಳೂರು ಅರಮನೆ ಮೈದಾನ ಸುತ್ತಮುತ್ತ ಸಂಚಾರ ವ್ಯತ್ಯಯವಾಗಲಿದೆ.

Bengaluru Traffic Advisory: ಬೆಂಗಳೂರು ಅರಮನೆ ಮೈದಾನದಲ್ಲಿ ಫೆ 11 ರಿಂದ 14ರ ತನಕ ಇನ್ವೆಸ್ಟ್ ಕರ್ನಾಟಕ ಫೋರಂನ 'ಇನ್ವೆಸ್ಟ್ ಕರ್ನಾಟಕ-2025' ಗ್ಲೋಬಲ್ ಇನ್ವೆಸ್ಟರ್ ಮೀಟ್ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಅರಮನೆ ಮೈದಾನದ ಸುತ್ತಮುತ್ತ ಫೆ 11 ರಿಂದ ಫೆ 14ರ ತನಕ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆ ತನಕ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಸಚಿವರು, ಉದ್ದಿಮೆದಾರರು, ವಿದೇಶಿ ಗಣ್ಯರು ಸೇರಿ ಸಾರ್ವಜನಿಕರು ಕೂಡ ಬರುವ ಕಾರಣ ಸಂಚಾರ ದಟ್ಟಣೆ ಹೆಚ್ಚಾಗಬಹುದು ಎಂಬ ಕಾರಣಕ್ಕೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶ; ಬೆಂಗಳೂರು ಅರಮನೆ ಮೈದಾನ ಸುತ್ತಮುತ್ತ ಸಂಚಾರ ವ್ಯತ್ಯಯ
ಬಸ್ಸುಗಳಲ್ಲಿ ಬರುವವರು, ಬೆಂಗಳೂರು ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು: ಬಸವೇಶ್ವರ ಸರ್ಕಲ್-ಒಲ್ಡ್ ಹೈಗೌಂಡ್ ಜಂಕ್ಷನ್-ಕಲ್ಪನ- ಎಂ.ಸಿ.ಸಿ-ವಸಂತನಗರ ಅಂಡರ್ ಬ್ರಿಡ್ಜ್ ಬಲತಿರುವು ಪಡೆದು ಮುಖ್ಯ ಅರಮನೆ ಮೈದಾನದ ಮಾವಿನಕಾಯಿ ಮಂಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ವಾಪಸ್ ಹೊರಗೆ ಹೋಗಬೇಕಾದರೆ, ಅರಮನೆ ಮೈದಾನದ ಮಾವಿನಕಾಯಿ ಮಂಡಿಯಲ್ಲಿ ನಿಲುಗಡೆಮಾಡಿರುವವರು, ಸ್ನೋವರ್ಲ್ಡ್ ಗೇಟ್ ಮುಖಾಂತರ ಹೊರಬಂದು ಜಯಮಹಲ್ ರಸ್ತೆ ಮೂಲಕ ಸಂಚರಿಸಬಹುದು.
ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು: ಮೇಕ್ರಿ ಸರ್ಕಲ್ ಅಂಡರ್ ಪಾಸ್ ಮುಖಾಂತರ ಹೋಗಿ ಕಾವೇರಿ ಜಂಕ್ಷನ್, ಪಿ.ಜಿ ಹಳ್ಳಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ,ಪ್ಯಾಲೇಸ್ ಕ್ರಾಸ್ನಲ್ಲಿ ಎಡತಿರುವು ಪಡೆದು, ಚಕ್ರವರ್ತಿ ಲೇಔಟ್ ಎಡ ತಿರುವು ಪಡೆದು ಸರ್ವಿಸ್ ರಸ್ತೆಯಲ್ಲಿ ಎಡತಿರುವು ಪಡೆದು, ಮುಖ್ಯ ಅರಮನೆ ಮೈದಾನದ ಮಾವಿನಕಾಯಿ ಮಂಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ಅದೇ ರೀತಿ, ಅರಮನೆ ಮೈದಾನದ ಮಾವಿನಕಾಯಿ ಮಂಡಿಯಲ್ಲಿ ವಾಹನ ನಿಲುಗಡೆ ಮಾಡಿರುವವರು ಸ್ಪೋವರ್ಡ್ ಗೇಟ್ ಮೂಲಕ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇತ್ರಿ ಸರ್ಕಲ್ ಮುಖಾಂತರ ಸಂಚರಿಸಬಹುದು.
ಯಶವಂತಪುರ ಕಡೆಯಿಂದ ಬರುವ ವಾಹನಗಳು: ಸರ್.ಸಿ.ವಿ.ರಾಮನ್ ರಸ್ತೆಯ ಬಿ.ಹೆಚ್.ಇ.ಎಲ್ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಸರ್ವಿಸ್ ರಸ್ತೆಯಲ್ಲಿ ಸಾಗಿ, ಕಾವೇರಿ ಜಂಕ್ಷನ್.ಪಿ.ಜಿ ಹಳ್ಳಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ, ಪ್ಯಾಲೇಸ್ ಕ್ರಾಸ್ ನಲ್ಲಿ ಎಡತಿರುವು ಪಡೆದು ಚಕ್ರವರ್ತಿ ಲೇಔಟ್ ಎಡ ತಿರುವು ಪಡೆದು ಮುಖ್ಯ ಅರಮನೆ ಮೈದಾನದ ಮಾವಿನಕಾಯಿ ಮಂಡಿಯನಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ನಿರ್ಗಮನಕ್ಕಾಗಿ, ಅರಮನೆ ಮೈದಾನದ ಮಾವಿನಕಾಯಿ ಮಂಡಿಯಲ್ಲಿ ನಿಲುಗಡೆ ಮಾಡಿರುವವರು, ಸ್ಕೋವರ್ಡ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಸ್ತ್ರಿ ಸರ್ಕಲ್ ಮುಖಾಂತರ ಸಂಚರಿಸಬಹುದು.
ಕಂಟೋನ್ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಯಿಂದ ಬರುವ ವಾಹನಗಳು: ಜಯಮಹಲ್ ರಸ್ತೆಯಲ್ಲಿ ಸಾಗಿ ಟಿ.ವಿ.ಟವರ್ ಜಂಕ್ಷನ್-ಜಯಮಹಲ್ ರಸ್ತೆಯಲ್ಲಿ ಸಾಗಿ ಮೇಕ್ರಿ ಸರ್ಕಲ್ ಎಡತಿರುವು ಪಡೆದು ಸರ್ವಿಸ್ ರಸ್ತೆಯಲ್ಲಿ ಸಾಗಿ, ಕಾವೇರಿ ಜಂಕ್ಷನ್.ಪಿ.ಜಿ ಹಳ್ಳಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ಪ್ಯಾಲೇಸ್ ಕ್ರಾಸ್ ನಲ್ಲಿ ಎಡತಿರುವು ಪಡೆದು ಚಕ್ರವರ್ತಿ ಲೇಔಟ್ ಎಡ ತಿರುವು ಪಡೆದು ಮುಖ್ಯ ಅರಮನೆ ಮೈದಾನದ ಮಾವಿನಕಾಯಿ ಮಂಡಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ, ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ನಿರ್ಗಮನಕ್ಕಾಗಿ, ಅರಮನೆ ಮೈದಾನದ ಮಾವಿನಕಾಯಿ ಮಂಡಿಯಲ್ಲಿ ವಾಹನ ನಿಲುಗಡೆ ಮಾಡಿರುವವರು. ಸ್ಕೋವರ್ಡ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇತ್ರಿ ಸರ್ಕಲ್ ಮುಖಾಂತರ ಸಂಚರಿಸಬಹುದು.
ಟೆಂಪೋ ಟ್ರಾವೆಲರ್, ಕಾರುಗಳು ಮತ್ತು ದ್ವಿಚಕ್ರ ವಾಹನಗಳಲ್ಲಿ ಬರುವವರು
ನಗರದ ಒಳಭಾಗದಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು: ಬಸವೇಶ್ವರ ಸರ್ಕಲ್-ಒಲ್ಡ್ ಹೈಗೌಂಡ್ ಜಂಕ್ಷನ್-ಕಲ್ಪನ-ಎಂ.ಸಿ.ಸಿ-ವಸಂತನಗರ ಅಂಡರ್ ಬ್ರಿಡ್ಜ್ ಬಲತಿರುವು ಪಡೆದು ಮುಖ್ಯ ಅರಮನೆ ಮೈದಾನದ ಮಾವಿನಕಾಯಿ ಮಂಡಿಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ, ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳಕ್ಕೆ ತಲುಪಬಹುದು.
ನಿರ್ಗಮನಕ್ಕಾಗಿ, ಅರಮನೆ ಮೈದಾನದ ಶಾರೂಕ್ ಖಾನ್ ಗ್ರೌಂಡ್ನಲ್ಲಿ ನಿಲುಗಡೆ ಮಾಡಿರುವವರು ಸ್ನೋವರ್ಲ್ಡ್ ಗೇಟ್ ಮುಖಾಂತರ ಹೊರಬಂದು ಜಯಮಹಲ್ ರಸ್ತೆ ಮೂಲಕ ಸಂಚರಿಸಬಹುದು.
ಬಳ್ಳಾರಿ ರಸ್ತೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು: ಮೇಕ್ರಿ ಸರ್ಕಲ್ ಅಂಡರ್ಪಾಸ್ ಮುಖಾಂತರ ಹೋಗಿ ಕಾವೇರಿ ಜಂಕ್ಷನ್,ಪಿ ಜಿ ಹಳ್ಳಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ಪ್ಯಾಲೇಸ್ ಕ್ರಾಸ್ ನಲ್ಲಿ ಎಡತಿರುವು ಪಡೆದು ಚಕ್ರವರ್ತಿ ಲೇಔಟ್ ಎಡ ತಿರುವು ಪಡೆದು ಸರ್ವಿಸ್ ರಸ್ತೆಯಲ್ಲಿ ಎಡತಿರುವು ಪಡೆದು ಮುಖ್ಯ ಅರಮನೆ ಮೈದಾನದ ಶಾರೂಕ್ ಖಾನ್ ಗ್ರೌಂಡ್ನಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ನಿರ್ಗಮನಕ್ಕಾಗಿ, ಅರಮನೆ ಮೈದಾನದ ಶಾರೂಕ್ ಖಾನ್ ಗೌಂಡ್ ನಲ್ಲಿ ವಾಹನ ನಿಲುಗಡೆ ಮಾಡಿರುವವರು ವಾಹನಗಳು ಸ್ನೋವರ್ಲ್ಡ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇತ್ರಿ ಸರ್ಕಲ್ ಮುಖಾಂತರ ಸಂಚರಿಸಬಹುದು.
ಯಶವಂತಪುರ ಕಡೆಯಿಂದ ಬರುವ ವಾಹನಗಳು:ಸರ್.ಸಿ.ವಿ.ರಾಮನ್ ರಸ್ತೆಯ ಬಿ.ಹೆಚ್.ಇ.ಎಲ್ ಸರ್ಕಲ್-ಸದಾಶಿವನಗರ ಪಿ.ಎಸ್ ಜಂಕ್ಷನ್-ಮೇಕ್ರಿ ಸರ್ಕಲ್ ಬಲತಿರುವು ಪಡೆದು ಸರ್ವಿಸ್ ರಸ್ತೆಯಲ್ಲಿ ಸಾಗಿ ಕಾವೇರಿ ಜಂಕ್ಷನ್.ಪಿ.ಜಿ ಹಳ್ಳಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ಪ್ಯಾಲೇಸ್ ಕ್ರಾಸ್ ನಲ್ಲಿ ಎಡತಿರುವು ಪಡೆದು ಚಕ್ರವರ್ತಿ ಲೇಔಟ್ ಎಡ ತಿರುವು ಪಡೆದು ಮುಖ್ಯ ಅರಮನೆ ಮೈದಾನದ ಶಾರೂಕ್ ಖಾನ್ ಗೌಂಡ್ ನಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ನಿರ್ಗಮನಕ್ಕಾಗಿ, ಅರಮನೆ ಮೈದಾನದ ಶಾರೂಕ್ ಖಾನ್ ಗೌಂಡ್ ನಲ್ಲಿ ನಿಲುಗಡೆ ಮಾಡಿರುವವರು, ಸ್ನೋವರ್ಲ್ಡ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಕ್ರಿ ಸರ್ಕಲ್ ಮುಖಾಂತರ ಸಂಚರಿಸಬಹುದು.
ಕಂಟೋನ್ಮೆಂಟ್ (ದಂಡು) ರೈಲ್ವೆ ಸ್ಟೇಷನ್ ಕಡೆಯಿಂದ ಬರುವ ವಾಹನಗಳು ಜಯಮಹಲ್ ರಸ್ತೆಯಲ್ಲಿ ಸಾಗಿ ಟಿ.ವಿ.ಟವರ್ ಜಂಕ್ಷನ್- ಜಯಮಹಲ್ ರಸ್ತೆಯಲ್ಲಿಸಾಗಿ, ಮೇಕ್ರಿ ಸರ್ಕಲ್ ಎಡತಿರುವು ಪಡೆದು ಸರ್ವಿಸ್ ರಸ್ತೆಯಲ್ಲಿ ಸಾಗಿ ಕಾವೇರಿ ಜಂಕ್ಷನ್, ಪಿ.ಜಿ ಹಳ್ಳಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ, ಪ್ಯಾಲೇಸ್ ಕ್ರಾಸ್ ನಲ್ಲಿ ಎಡತಿರುವು ಪಡೆದು ಚಕ್ರವರ್ತಿ ಲೇಔಟ್ ಎಡ ತಿರುವು ಪಡೆದು ಮುಖ್ಯ ಅರಮನೆ ಮೈದಾನದ ಶಾರೂಕ್ ಖಾನ್ ಗೌಂಡ್ ನಲ್ಲಿ ವಾಹನಗಳನ್ನು ನಿಲುಗಡೆ ಮಾಡಿ ನಂತರ ಕಾಲ್ನಡಿಗೆಯಲ್ಲಿ ಸೂಚನಾ ಫಲಕಗಳು ತೋರಿಸುವಂತೆ ಕಾರ್ಯಕ್ರಮದ ಸ್ಥಳ ತಲುಪಬಹುದು.
ನಿರ್ಗಮನಕ್ಕಾಗಿ, ಅರಮನೆ ಮೈದಾನದ ಶಾರೂಕ್ ಖಾನ್ ಗೌಂಡ್ ನಲ್ಲಿ ನಿಲುಗಡೆ ಮಾಡಿರುವವರು, ಸ್ಕೋವರ್ಡ್ ಗೇಟ್ ಜಯಮಹಲ್ ರಸ್ತೆಯಲ್ಲಿ ಹೊರಬಂದು ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸಬಹುದು.
