ಕಟಕ ರಾಶಿ ಭವಿಷ್ಯ ಜುಲೈ 12; ಶಾಂತ ಮನಸ್ಸಿನಿಂದ ಸವಾಲುಗಳನ್ನು ಎದುರಿಸಿ, ಅನಗತ್ಯ ಖರ್ಚು ಕಡಿಮೆ ಮಾಡಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕಟಕ ರಾಶಿ ಭವಿಷ್ಯ ಜುಲೈ 12; ಶಾಂತ ಮನಸ್ಸಿನಿಂದ ಸವಾಲುಗಳನ್ನು ಎದುರಿಸಿ, ಅನಗತ್ಯ ಖರ್ಚು ಕಡಿಮೆ ಮಾಡಿ

ಕಟಕ ರಾಶಿ ಭವಿಷ್ಯ ಜುಲೈ 12; ಶಾಂತ ಮನಸ್ಸಿನಿಂದ ಸವಾಲುಗಳನ್ನು ಎದುರಿಸಿ, ಅನಗತ್ಯ ಖರ್ಚು ಕಡಿಮೆ ಮಾಡಿ

Cancer Daily Horoscope July 12, 2024: ರಾಶಿಚಕ್ರಗಳ ಪೈಕಿ ನಾಲ್ಕನೇಯದು ಕಟಕ. ಜನನದ ಸಮಯದಲ್ಲಿ ಚಂದ್ರನು ಕರ್ಕಾಟಕದಲ್ಲಿ ಸಾಗುತ್ತಿರುವ ಜನರ ರಾಶಿಚಕ್ರ ಚಿಹ್ನೆ ಕರ್ಕ ಅಥವಾ ಕಟಕ ರಾಶಿ. ಜುಲೈ 12 ರ ಕಟಕ ರಾಶಿ ಭವಿಷ್ಯ ಪ್ರಕಾರ, ಈ ದಿನ ಶುಭ ಫಲವಿದೆ. ಆದರೆ, ಶಾಂತ ಮನಸ್ಸಿನಿಂದ ಸವಾಲುಗಳನ್ನು ಎದುರಿಸಿ, ಅನಗತ್ಯ ಖರ್ಚು ಕಡಿಮೆ ಮಾಡಿ.

ಕಟಕ ರಾಶಿ ಭವಿಷ್ಯ ಜುಲೈ 12; ಶಾಂತ ಮನಸ್ಸಿನಿಂದ ಸವಾಲುಗಳನ್ನು ಎದುರಿಸಿ, ಅನಗತ್ಯ ಖರ್ಚು ಕಡಿಮೆ ಮಾಡಿ.
ಕಟಕ ರಾಶಿ ಭವಿಷ್ಯ ಜುಲೈ 12; ಶಾಂತ ಮನಸ್ಸಿನಿಂದ ಸವಾಲುಗಳನ್ನು ಎದುರಿಸಿ, ಅನಗತ್ಯ ಖರ್ಚು ಕಡಿಮೆ ಮಾಡಿ.

ಕರ್ಕ ರಾಶಿಯ ಜನರು ಇಂದು (ಜುಲೈ 12) ಭಾವುಕರಾಗಬಹುದು. ಆದರೆ ಇಂದು ನೀವು ನಿಮ್ಮ ದೃಷ್ಟಿಕೋನವನ್ನು ಸಮತೋಲನದಲ್ಲಿಟ್ಟುಕೊಳ್ಳಬೇಕು. ಶಾಂತ ಮನಸ್ಸಿನಿಂದ ಸವಾಲುಗಳನ್ನು ಎದುರಿಸಿ. ಇಂದು ನೀವು ಭೋಜನಕ್ಕೆ ಹೋಗಬಹುದು ಅಥವಾ ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಬಹುದು. ಅದು ನಿಮ್ಮ ಸಂಬಂಧವನ್ನು ಬಲಪಡಿಸುತ್ತದೆ. ಅಂದ ಹಾಗೆ, ಎಲ್ಲ ರಾಶಿಗಳದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.

ಕಟಕ ರಾಶಿಯವರ ಪ್ರೇಮ ಜೀವನ (Cancer Love Horoscope): ಈ ದಿನ ಕಟಕ ರಾಶಿಯವರ ಭಾವನೆಗಳು ನಿಮ್ಮ ಪ್ರೀತಿಯ ಜೀವನಕ್ಕೆ ಶಕ್ತಿ ತುಂಬುವುದಷ್ಟೇ ಅಲ್ಲ. ಸವಾಲುಗಳನ್ನೂ ಎಸೆಯಲಿವೆ. ಮುಕ್ತ ಭಾವದಿಂದ ಮಾತನಾಡುವ ಅಗತ್ಯವಿದೆ. ಒಂಟಿಯಾಗಿರುವವರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ವಿಶೇಷ ವ್ಯಕ್ತಿಯನ್ನು ಕಾಣಬಹುದು. ಆದರೆ, ದಂಪತಿಯಾಗಿರುವವರು ಇಂದು ತಮ್ಮ ಸಂಗಾತಿ ಹೇಳುವುದನ್ನು ಎಚ್ಚರಿಕೆಯಿಂದ ಆಲಿಸಬೇಕು. ಇಂದು ಹಠಾತ್ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಅದರ ಬದಲಿಗೆ ಯೋಚಿಸಲು ಸಮಯ ತೆಗೆದುಕೊಳ್ಳಿ.

ಕಟಕ ರಾಶಿ ದಿನ ಭವಿಷ್ಯ ಜುಲೈ 12; ಉದ್ಯೋಗ, ಆದಾಯ, ಆರೋಗ್ಯ

ಕಟಕ ರಾಶಿಯವರ ವೃತ್ತಿ ಭವಿಷ್ಯ (Cancer Professional Horoscope): ವೃತ್ತಿ ಜೀವನ ಇಂದು ಉತ್ತಮವಾಗಿರಲಿದೆ. ಬಾಕಿಯಿರುವ ಕಾರ್ಯಗಳನ್ನು ಪೂರ್ಣಗೊಳಿಸುವುದರ ಕಡೆಗೆ ಗಮನಹರಿಸಿ. ಹೊಸ ಯೋಜನೆಗಳನ್ನು ಪ್ರಾರಂಭಿಸುವುದನ್ನು ತಪ್ಪಿಸಿ. ಇಂದು ಹಿರಿಯರು ನಿಮ್ಮ ಕೆಲಸವನ್ನು ಹೊಗಳುತ್ತಾರೆ. ಇಂದು ನಿಮ್ಮ ಕೆಲಸಗಳು ಮಾತನಾಡಬೇಕು. ಕೆಲಸದ ಸ್ಥಳದಲ್ಲಿ ಉದ್ಭವಿಸುವ ಎಲ್ಲ ಸಮಸ್ಯೆಗಳನ್ನು, ಸವಾಲುಗಳನ್ನು ನೀವು ಸುಲಭವಾಗಿ ಎದುರಿಸುತ್ತೀರಿ. ನಿಮ್ಮ ವೃತ್ತಿಜೀವನದ ಗುರಿಗಳನ್ನು ಸಾಧಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ, ಅದು ನಿಮ್ಮ ಮನಸ್ಸನ್ನು ಸಂತೋಷವಾಗಿರಿಸುತ್ತದೆ.

ಕಟಕ ರಾಶಿಯವರ ಆರ್ಥಿಕ ಜೀವನ (Cancer Money Horoscope): ಅನಗತ್ಯವಾಗಿ ಆರ್ಥಿಕವಾಗಿ ಖರ್ಚು ಮಾಡುವ ಬದಲು ಎಚ್ಚರಿಕೆಯಿಂದ ಯೋಜಿಸುವ ದಿನ. ನಿಮ್ಮ ಬಜೆಟ್ ಅನ್ನು ಪರಿಶೀಲಿಸಿ ಮತ್ತು ನೀವು ಖರ್ಚುಗಳನ್ನು ಕಡಿತಗೊಳಿಸಬಹುದಾದ ವಿಷಯಗಳನ್ನು ನೋಡಿ. ಇಂದು ದೊಡ್ಡ ಹೂಡಿಕೆಗಳು ಅಥವಾ ಅಪಾಯಗಳನ್ನು ತಪ್ಪಿಸಿ. ನೀವು ಸಾಲದಲ್ಲಿದ್ದರೆ, ಅದನ್ನು ಮರುಪಾವತಿಸಲು ಹಣಕಾಸಿನ ಯೋಜನೆಯನ್ನು ಮಾಡಿ. ಆದಾಗ್ಯೂ, ಸಂಜೆಯ ವೇಳೆಗೆ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಸಾಧ್ಯ.

ಕಟಕ ರಾಶಿಯವರ ಆರೋಗ್ಯ ಜಾತಕ (Cancer Healht Horoscope): ನಿಮ್ಮ ಆರೋಗ್ಯಕ್ಕೆ ಗಮನ ಕೊಡಿ. ಏಕೆಂದರೆ ಒತ್ತಡವು ನಿಮ್ಮ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಿಮ್ಮ ಶಕ್ತಿಯ ಮಟ್ಟವನ್ನು ಸ್ಥಿರವಾಗಿಡಲು ಶರೀರದಲ್ಲಿ ನೀರಿನ ಮಟ್ಟ ಕುಸಿಯದಂತೆ ನೋಡಿಕೊಳ್ಳಿ. ನಿಮ್ಮ ದೇಹದ ಸಂಕೇತಗಳನ್ನು ಆಲಿಸಿ. ಅಗತ್ಯವಿದ್ದಾಗ ವಿರಾಮಗಳನ್ನು ತೆಗೆದುಕೊಳ್ಳಿ. ಸಾಕಷ್ಟು ನಿದ್ದೆ ಮಾಡಿ.

ಕಟಕ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು

ಕಟಕ ರಾಶಿಯ ಅಧಿಪತಿ: ಚಂದ್ರ, ಶುಭ ದಿನಾಂಕಗಳು: 4, 5, 6, 15, 16, 30. ಶುಭ ದಿನಗಳು: ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ ಮತ್ತು ಶುಕ್ರವಾರ. ಶುಭ ಸಂಖ್ಯೆಗಳು: 1, 2, 3, 4, 6, 7, 9. ಶುಭ ವರ್ಣ: ಕೆಂಪು, ಹಳದಿ, ಬಿಳಿ ಮತ್ತು ಹಸಿರು. ಅಶುಭ ವರ್ಣ: ನೀಲಿ ಮಿಶ್ರಿತ ಹಸಿರು. ಶುಭ ದಿಕ್ಕು: ಪೂರ್ವ ಮತ್ತು ಉತ್ತರ. ಶುಭ ತಿಂಗಳು: ಏಪ್ರಿಲ್ 15 ರಿಂದ ಮೇ 14, ಆಗಸ್ಟ್ 15ರಿಂದ ಸೆಪ್ಟೆಂಬರ್ 14. ಶುಭ ಹರಳು: ಮಾಣಿಕ್ಯ, ಹವಳ ಮತ್ತು ಹಳದಿ ಪುಷ್ಯ ರಾಗ. ಶುಭ ರಾಶಿ: ಸಿಂಹ, ವೃಶ್ಚಿಕ ಮತ್ತು ಮೀನ. ಅಶುಭ ರಾಶಿ: ಕನ್ಯಾ, ಮಕರ, ಕುಂಭ ಮತ್ತು ಮಿಥುನ.

ಕಟಕ ರಾಶಿಯವರಿಗೆ ಶುಭ ಫಲಕ್ಕಾಗಿ ಸರಳ ಪರಿಹಾರಗಳು

1) ದಕ್ಷಿಣಾಮೂರ್ತಿ ಸ್ತೋತ್ರ: ಪ್ರತಿದಿನ ದಕ್ಷಿಣಾಮೂರ್ತಿಯ ಸ್ತೋತ್ರ ಪಠಿಸುವುದರಿಂದ ಅಥವ ಕೇಳುವುದರಿಂದ ಆತ್ಮಶಕ್ತಿ ಹೆಚ್ಚುತ್ತದೆ. ವಾಕ್ ಶುದ್ಧಿ ಉಂಟಾಗಲಿದೆ.

2) ಈ ದಾನಗಳಿಂದ ಶುಭ ಫಲ: ಬಂಗಾರದ ಬಣ್ಣದ ಬಟ್ಟೆ ಮತ್ತು ಅಕ್ಕಿಯನ್ನು ದಾನ ನೀಡುವುದರಿಂದ ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ.

3) ದೇವಸ್ಥಾನ ಮತ್ತು ದೇವರ ಪೂಜೆ: ಲಕ್ಷ್ಮೀ ನರಸಿಂಹ ಸ್ವಾಮಿಗೆ ಪಂಚಾಮೃತ ಅಭಿಷೇಕ ಮಾಡಿಸುವುದು ಕ್ಷೇಮ. ಮನೆಯಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಪೂಜೆ ಮಾಡಬಹುದು. ಗುರುಗಳನ್ನು ಸತ್ಕರಿಸಿದಲ್ಲಿ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗುತ್ತವೆ.

4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ಬಿಳಿ ಮತ್ತು ಕೆಂಪು ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.

ದೇವಾಲಯಗಳು,ಅಧ್ಯಾತ್ಮ,ದಿನ ಭವಿಷ್ಯ, ಗ್ರಹಗಳ ಸಂಚಾರ,ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ,ಹಬ್ಬ,ಸಂಸ್ಕೃತಿ,ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯವಿಭಾಗ ನೋಡಿ.

ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.