ಮಕರ ರಾಶಿ ಭವಿಷ್ಯ ಆ.2: ಕಚೇರಿ ಕೆಲಸದಿಂದ ಒತ್ತಡ ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ,ಅನಿರೀಕ್ಷಿತ ಆದಾಯ ಮೂಲಗಳಿಂದ ಹಣಕಾಸಿನ ಸ್ಥಿತಿ ಸುಧಾರಿಸಲಿದೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮಕರ ರಾಶಿ ಭವಿಷ್ಯ ಆ.2: ಕಚೇರಿ ಕೆಲಸದಿಂದ ಒತ್ತಡ ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ,ಅನಿರೀಕ್ಷಿತ ಆದಾಯ ಮೂಲಗಳಿಂದ ಹಣಕಾಸಿನ ಸ್ಥಿತಿ ಸುಧಾರಿಸಲಿದೆ

ಮಕರ ರಾಶಿ ಭವಿಷ್ಯ ಆ.2: ಕಚೇರಿ ಕೆಲಸದಿಂದ ಒತ್ತಡ ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ,ಅನಿರೀಕ್ಷಿತ ಆದಾಯ ಮೂಲಗಳಿಂದ ಹಣಕಾಸಿನ ಸ್ಥಿತಿ ಸುಧಾರಿಸಲಿದೆ

Capricorn Daily Horoscope 2nd August 2024: ಜನನದ ಸಮಯದಲ್ಲಿ ಚಂದ್ರನು ಮಕರದಲ್ಲಿ ಸಾಗುತ್ತಿರುವ ಜನರ ರಾಶಿಚಕ್ರ ಚಿಹ್ನೆಯನ್ನು ಮಕರ ರಾಶಿ ಎಂದು ಪರಿಗಣಿಸಲಾಗುತ್ತದೆ. ಇದು ನೀವು ಸಂಗಾತಿಗೆ ಗಿಫ್ಟ್‌ ನೀಡಿ ಅವರಿಗೆ ಸರ್ಪ್ರೈಸ್‌ ನೀಡಲಿದ್ದೀರಿ, ಕಚೇರಿಯಲ್ಲಿ ಸಹೋದ್ಯೋಗಿಗಳ ಸಹಕಾರ ನಿಮಗೆ ಯಶಸ್ಸು ತರಲಿದೆ.

ಮಕರ ರಾಶಿ ಭವಿಷ್ಯ ಆ.2: ಕಚೇರಿ ಕೆಲಸದಿಂದ ಒತ್ತಡ ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ,ಅನಿರೀಕ್ಷಿತ ಆದಾಯ ಮೂಲಗಳಿಂದ ಹಣಕಾಸಿನ ಸ್ಥಿತಿ ಸುಧಾರಿಸಲಿದೆ
ಮಕರ ರಾಶಿ ಭವಿಷ್ಯ ಆ.2: ಕಚೇರಿ ಕೆಲಸದಿಂದ ಒತ್ತಡ ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ,ಅನಿರೀಕ್ಷಿತ ಆದಾಯ ಮೂಲಗಳಿಂದ ಹಣಕಾಸಿನ ಸ್ಥಿತಿ ಸುಧಾರಿಸಲಿದೆ

ಮಕರ ರಾಶಿ ಭವಿಷ್ಯ ಆಗಸ್ಟ್‌ 2: ಇಂದು, ಮಕರ ರಾಶಿಯವರು ತಮ್ಮ ಜೀವನದ ಅನೇಕ ವಿಚಾರಗಳಲ್ಲಿ ಸಂತೋಷ ಕಾಣುತ್ತಾರೆ. ನಿಮ್ಮ ಸಂಬಂಧ ಗಟ್ಟಿಯಾಗುತ್ತದೆ. ವೃತ್ತಿ ಜೀವನದಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ, ಆದರೆ ನಿಮ್ಮ ಆರೋಗ್ಯದ ಬಗ್ಗೆ ಗಮನ ಕೊಡುವುದನ್ನು ಮರೆಯಬೇಡಿ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಿ. ಮಕರ ರಾಶಿಯ ವಿವರವಾದ ಜಾತಕ ನೋಡೋಣ. ಅಂದ ಹಾಗೆ, ಎಲ್ಲ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.

ಮಕರ ರಾಶಿಯ ಇಂದಿನ ಪ್ರೇಮ ಜೀವನ (Capricorn Love Horoscope)

ಇಂದು ನಿಮ್ಮ ಪ್ರೇಮ ಜೀವನ ತುಂಬಾ ಉತ್ತಮವಾಗಿರುತ್ತದೆ. ನೀವು ಒಬ್ಬಂಟಿಯಾಗಿದ್ದರೆ, ವಿಶೇಷ ವ್ಯಕ್ತಿಯೊಬ್ಬರ ಬಗ್ಗೆ ನಿಮಗೆ ಆಕರ್ಷಣೆ ಹೆಚ್ಚಾಗಬಹುದು. ಸಂಬಂಧದಲ್ಲಿರುವವರು, ತಮ್ಮ ಸಂಗಾತಿಯೊಂದಿಗೆ ಮಾತನಾಡುವುದು ಬಹಳ ಮುಖ್ಯವಾಗಿದೆ. ಇಂದು ನಿಮ್ಮ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಮತ್ತು ನಿಮ್ಮ ಭಾವನೆಗಳನ್ನು ಅವರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿ. ನಿಮ್ಮ ಸಂಗಾತಿಯನ್ನು ಪ್ರೀತಿಯಿಂದ ನೋಡಿಕೊಳ್ಳಿ. ಅವರಿಗೆ ಉಡುಗೊರೆಗಳ ಮೂಲಕ ಸರ್ಪ್ರೈಸ್‌ ಕೊಡಿ. ಇದು ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಬಲಪಡಿಸುತ್ತದೆ. ಸಂಬಂಧಗಳಲ್ಲಿ ಆಪ್ತತೆ ಹೆಚ್ಚಲಿದೆ.

ಮಕರ ರಾಶಿ ಇಂದಿನ ವೃತ್ತಿ ಭವಿಷ್ಯ (Capricorn Professional Horoscope)

ಇಂದು ನೀವು ವೃತ್ತಿ ಪ್ರಗತಿಗೆ ಹೊಸ ಅವಕಾಶಗಳನ್ನು ಪಡೆಯುತ್ತೀರಿ. ಕಚೇರಿಯಲ್ಲಿ ನೆಟ್‌ವರ್ಕಿಂಗ್ ಹೆಚ್ಚಾಗಲಿದೆ. ದೀರ್ಘಾವಧಿಯ ಗುರಿಗಳನ್ನು ಪೂರೈಸಲು ನೀವು ಹೊಸ ಅವಕಾಶಗಳನ್ನು ಪಡೆಯುತ್ತೀರಿ. ನಿಮ್ಮ ಅಂತಃಪ್ರಜ್ಞೆಗೆ ಗಮನ ಕೊಡಿ. ನಿಮ್ಮ ವೃತ್ತಿಗೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ನಿಮಗೆ ಸಹಾಯ ಮಾಡುತ್ತದೆ. ಕಚೇರಿಯಲ್ಲಿ ತಂಡದೊಂದಿಗೆ ಒಟ್ಟಾಗಿ ಮಾಡಿದ ಕೆಲಸಗಳು ಅತ್ಯುತ್ತಮ ಫಲಿತಾಂಶಗಳನ್ನು ನೀಡುತ್ತವೆ. ಆದ್ದರಿಂದ ಟೀಮ್ ವರ್ಕ್ ಮೇಲೆ ಗಮನ ಹರಿಸಿ. ಹಿರಿಯ ಅಧಿಕಾರಿಗಳು ಮತ್ತು ಸಹೋದ್ಯೋಗಿಗಳಿಂದ ನಿಮ್ಮ ಕೆಲಸದ ಬಗ್ಗೆ ಪ್ರತಿಕ್ರಿಯೆ ಪಡೆಯಲು ಹಿಂಜರಿಯಬೇಡಿ. ಇದು ನಿಮ್ಮ ವೃತ್ತಿ ಬೆಳವಣಿಗೆಗೆ ಸಾಕಷ್ಟು ಪ್ರಯೋಜನ ನೀಡಲಿದೆ.

ಮಕರ ರಾಶಿ ಇಂದಿನ ಆರ್ಥಿಕ ಭವಿಷ್ಯ (Capricorn Money Horoscope)

ಇಂದು ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ. ಅನಿರೀಕ್ಷಿತ ಆದಾಯದ ಮೂಲಗಳಿಂದ ಆರ್ಥಿಕ ಲಾಭಗಳು ಅಥವಾ ಹಣವನ್ನು ಉಳಿಸಲು ಹೊಸ ಅವಕಾಶಗಳಿವೆ. ಆದರೂ, ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. ಅಗತ್ಯ ವಸ್ತುಗಳನ್ನು ಮಾತ್ರ ಖರೀದಿಸಿ. ಹೂಡಿಕೆ ಸಂಬಂಧಿತ ನಿರ್ಧಾರಗಳನ್ನು ಯೋಚಿಸಿ ತೆಗೆದುಕೊಳ್ಳಿ. ಬಜೆಟ್ ಪರಿಶೀಲಿಸಲು ಮತ್ತು ಹೊಸ ಹಣಕಾಸು ಯೋಜನೆಯನ್ನು ಮಾಡಲು ಇದು ಉತ್ತಮ ಸಮಯ. ಹಣಕಾಸಿನ ವಿಷಯಗಳಲ್ಲಿ ಆರ್ಥಿಕ ಸಲಹೆಗಾರರಿಂದ ಸಹಾಯ ಪಡೆಯಲು ಹಿಂಜರಿಯಬೇಡಿ. ದೀರ್ಘಕಾಲೀನ ಆರ್ಥಿಕ ಗುರಿಗಳ ಮೇಲೆ ಗಮನ ಕೇಂದ್ರೀಕರಿಸಿ.

ಮಕರ ರಾಶಿ ಇಂದಿನ ಆರೋಗ್ಯ ಭವಿಷ್ಯ (Capricorn Health Horoscope)

ಇಂದು ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ, ಆದರೆ ಸಮತೋಲನದ ದಿನಚರಿಯನ್ನು ಅನುಸರಿಸಿ. ಪ್ರತಿದಿನ ವ್ಯಾಯಾಮ ಮಾಡಿ. ನಿಮ್ಮ ಆಹಾರದಲ್ಲಿ ಪ್ರೋಟೀನ್ ಮತ್ತು ಪೋಷಣೆಯಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇರಿಸಿ. ನಿಮ್ಮ ಮಾನಸಿಕ ಆರೋಗ್ಯಕ್ಕೆ ಗಮನ ಕೊಡಿ. ಧ್ಯಾನ ಮಾಡಿ. ಕಚೇರಿಯಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ. ನಿಮ್ಮ ಒಟ್ಟಾರೆ ಆರೋಗ್ಯಕ್ಕೆ ಗಮನ ಕೊಡಿ. ಇಂದು ನೀವು ವೈದ್ಯಕೀಯ ತಪಾಸಣೆಗೆ ಸಹ ಹೋಗಬಹುದು. ಉತ್ತಮ ಆರೋಗ್ಯ ನಿಮಗೆ ಧನಾತ್ಮಕ ಭಾವನೆಯನ್ನು ನೀಡುತ್ತದೆ.

ಮಕರ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು

ಮಕರ ರಾಶಿಯ ಅಧಿಪತಿ: ಶನಿ, ಮಕರ ರಾಶಿಯವರಿಗೆ ಶುಭ ದಿನಾಂಕಗಳು: 6, 8 ಮತ್ತು 9. ಮಕರ ರಾಶಿಯವರಿಗೆ ಶುಭ ವಾರಗಳು: ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ. ಮಕರ ರಾಶಿಯವರಿಗೆ ಶುಭ ವರ್ಣ: ನೀಲಿ, ಬಿಳಿ ಮತ್ತು ಕೆಂಪು. ಮಕರ ರಾಶಿಯವರಿಗೆ ಅಶುಭ ವರ್ಣ: ಹಳದಿ ಮತ್ತು ಬಾದಾಮಿ ಬಣ್ಣ. ಮಕರ ರಾಶಿಯವರಿಗೆ ಶುಭ ದಿಕ್ಕು: ದಕ್ಷಿಣ ಮತ್ತು ಪಶ್ಚಿಮ. ಮಕರ ರಾಶಿಯವರಿಗೆ ಶುಭ ತಿಂಗಳು: ಸೆಪ್ಟೆಂಬರ್ 15ರಿಂದ ಅಕ್ಟೋಬರ್ 14. ಮಕರ ರಾಶಿಯವರಿಗೆ ಶುಭ ಹರಳು: ನೀಲಮಣಿ, ಝೆರ್ಕೋನ್ ಮತ್ತು ಹಸಿರು ಪಚ್ಚೆ. ಮಕರ ರಾಶಿಯವರಿಗೆ ಹೊಂದಾಣಿಕೆ ಇರುವ ರಾಶಿ: ಕುಂಭ, ವೃಷಭ ಮತ್ತು ಕನ್ಯಾ. ಮಕರ ರಾಶಿಯವರಿಗೆ ಹೊಂದಾಣಿಕೆ ಕಷ್ಟವಾಗುವ ರಾಶಿ: ಕಟಕ, ಸಿಂಹ ಮತ್ತು ಧನು.

ಮಕರ ರಾಶಿಯವರಿಗೆ ಶುಭ ಫಲಕ್ಕಾಗಿ ಸರಳ ಪರಿಹಾರಗಳು

1) ಮಹಾ ಮೃತ್ಯುಂಜಯ ಮಂತ್ರ: ಪ್ರತಿದಿನ ಮಹಾ ಮೃತ್ಯುಂಜಯ ಮಂತ್ರ ಪಠಿಸುವುದರಿಂದ ಅಥವಾ ಕೇಳುವುದರಿಂದ ಮಾತಿನ ಮೇಲೆ ಹತೋಟಿ ಸಾಧಿಸುವಿರಿ. ಹಣಕಾಸಿನ ತೊಂದರೆ ಉಂಟಾಗುವುದಿಲ್ಲ.

2) ಈ ದಾನಗಳಿಂದ ಶುಭ ಫಲ: ಕಡಲೆ ಬೇಳೆ ಮತ್ತು ಹಳದಿ ವಸ್ತ್ರವನ್ನು ದಾನ ನೀಡುವುದರಿಂದ ಕೆಲಸ ಕಾರ್ಯಗಳಲ್ಲಿ ಜಯ ಲಭಿಸುತ್ತದೆ.

3) ದೇವಸ್ಥಾನ ಮತ್ತು ದೇವರ ಪೂಜೆ: ಶ್ರೀ ವಿಷ್ಣು ದೇವಾಲಯದಲ್ಲಿ ಪೂಜೆ ಮಾಡಿಸಿದಲ್ಲಿ ಉತ್ತಮ ಆರೋಗ್ಯ ಲಭಿಸುತ್ತದೆ. ಶ್ರೀ ಪಂಚಮುಖಿ ಆಂಜನೇಯಸ್ವಾಮಿ ಪೂಜೆ ಮಾಡುವುದರಿಂದ ಮನದ ಆತಂಕ ದೂರವಾಗಲಿದೆ. ದಂಪತಿ ನಡುವೆ ಉತ್ತಮ ಸಾಮರಸ್ಯ ಏರ್ಪಡುತ್ತದೆ.

4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ಹಸಿರು ಮತ್ತು ನೀಲಿ ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.

ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ದೇವಾಲಯಗಳು, ಆಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.