ಮಕರ ರಾಶಿ ಭವಿಷ್ಯ ಜುಲೈ 23: ಆದಾಯ ಹೆಚ್ಚಿಸಲು ಇದು ಸಕಾಲ, ಸಂಗಾತಿಯೊಂದಿಗೆ ಮುಕ್ತವಾಗಿ ಭಾವನೆಗಳನ್ನು ಹಂಚಿಕೊಳ್ಳಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮಕರ ರಾಶಿ ಭವಿಷ್ಯ ಜುಲೈ 23: ಆದಾಯ ಹೆಚ್ಚಿಸಲು ಇದು ಸಕಾಲ, ಸಂಗಾತಿಯೊಂದಿಗೆ ಮುಕ್ತವಾಗಿ ಭಾವನೆಗಳನ್ನು ಹಂಚಿಕೊಳ್ಳಿ

ಮಕರ ರಾಶಿ ಭವಿಷ್ಯ ಜುಲೈ 23: ಆದಾಯ ಹೆಚ್ಚಿಸಲು ಇದು ಸಕಾಲ, ಸಂಗಾತಿಯೊಂದಿಗೆ ಮುಕ್ತವಾಗಿ ಭಾವನೆಗಳನ್ನು ಹಂಚಿಕೊಳ್ಳಿ

Capricorn Daily Horoscope July 23, 2024: ರಾಶಿಚಕ್ರಗಳ ಪೈಕಿ 10 ನೇ ಚಿಹ್ನೆ ಮಕರ ರಾಶಿಯದ್ದು. ಜನನದ ಸಮಯದಲ್ಲಿ ಚಂದ್ರನು ಮಕರದಲ್ಲಿ ಸಾಗುತ್ತಿರುವ ಜನರು ಮಕರ ರಾಶಿಯವರು. ಜುಲೈ 23ರಂದು ನಿಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ. ಆರೋಗ್ಯದ ಕಡೆ ಗಮನ ಹರಿಸುವುದು ಬಹಳ ಮುಖ್ಯ.

ಮಕರ ರಾಶಿ ಭವಿಷ್ಯ ಜುಲೈ 23: ಆದಾಯ ಹೆಚ್ಚಿಸಲು ಇದು ಸಕಾಲ, ಸಂಗಾತಿಯೊಂದಿಗೆ ಮುಕ್ತವಾಗಿ ಭಾವನೆಗಳನ್ನು ಹಂಚಿಕೊಳ್ಳಿ
ಮಕರ ರಾಶಿ ಭವಿಷ್ಯ ಜುಲೈ 23: ಆದಾಯ ಹೆಚ್ಚಿಸಲು ಇದು ಸಕಾಲ, ಸಂಗಾತಿಯೊಂದಿಗೆ ಮುಕ್ತವಾಗಿ ಭಾವನೆಗಳನ್ನು ಹಂಚಿಕೊಳ್ಳಿ

ಮಕರ ರಾಶಿ ಭವಿಷ್ಯ ಜುಲೈ 23, 2024: ಈ ರಾಶಿಯವರಿಗೆ ಇಂದು ಅವಕಾಶಗಳು ಮತ್ತು ಧನಾತ್ಮಕ ಬದಲಾವಣೆಗಳ ದಿನವಾಗಿದೆ. ನಿಮ್ಮ ದಾರಿಯಲ್ಲಿ ಬರುವ ಹೊಸ ಸವಾಲುಗಳನ್ನು ಧೈರ್ಯದಿಂದ ಸ್ವೀಕರಿಸಿ. ಸವಾಲುಗಳನ್ನು ಸುಲಭವಾಗಿ ಎದುರಿಸಲು ಧನಾತ್ಮಕ ಚಿಂತನೆಯನ್ನು ಕಾಪಾಡಿಕೊಳ್ಳಿ. ವೃತ್ತಿಯಲ್ಲಿ ಗಮನಾರ್ಹ ಬದಲಾವಣೆಗಳಾಗಲಿವೆ. ದೈಹಿಕ, ಮಾನಸಿಕ ಆರೋಗ್ಯಕ್ಕೆ ಗಮನ ನೀಡಿ. ಎಲ್ಲಾ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.

ಮಕರ ರಾಶಿಯ ಇಂದಿನ ಪ್ರೇಮ ಜೀವನ (Capricorn Love Horoscope)

ಇಂದು ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಭಾವನಾತ್ಮಕವಾಗಿ ಸಂಪರ್ಕ ಹೊಂದಬಹುದು. ನಿಮ್ಮ ಭಾವನೆಗಳು ಮತ್ತು ಗುರಿಗಳ ಬಗ್ಗೆ ಮುಕ್ತವಾಗಿ ಮತ್ತು ಪ್ರಾಮಾಣಿಕವಾಗಿ ಮಾತನಾಡಲು ಇದು ಉತ್ತಮ ಸಮಯ. ಒಬ್ಬಂಟಿಯಾಗಿರುವವರು ವ್ಯಕ್ತಿಯೊಬ್ಬರನ್ನು ಭೇಟಿ ಆಗಲಿದ್ದೀರಿ. ನಿಮ್ಮ ಅಂತಃಪ್ರಜ್ಞೆಯನ್ನು ನಂಬಿ. ನಿಮ್ಮ ಮನಸ್ಸಿನ ಭಾವನೆಗಳನ್ನು ಹಂಚಿಕೊಳ್ಳಲು ಹಿಂಜರಿಯದಿರಿ. ಬಲವಾದ ಭಾವನಾತ್ಮಕ ಸಂಪರ್ಕಗಳನ್ನು ನಿರ್ಮಿಸುವುದು ನಿಮ್ಮ ಮೊದಲ ಆದ್ಯತೆ ಆಗಿರಲಿ. ಪ್ರೀತಿಯ ಸಣ್ಣ ಸಣ್ಣ ವಿಚಾರಗಳು ನಿಮ್ಮ ಸಂಬಂಧವನ್ನು ಬಲಪಡಿಸುತ್ತದೆ.

ಮಕರ ರಾಶಿ ಇಂದಿನ ವೃತ್ತಿ ಭವಿಷ್ಯ (Capricorn Professional Horoscope)

ಇಂದು ನಿಮ್ಮ ವೃತ್ತಿಪರ ಜೀವನದಲ್ಲಿ ಕೆಲವು ರೋಚಕ ಬದಲಾವಣೆಗಳನ್ನು ಕಾಣಬಹುದು. ನಿಮಗೆ ದೊರೆಯುವ ಹೊಸ ಜವಾಬ್ದಾರಿಗಳು ಅಥವಾ ಯೋಜನೆಗಳನ್ನು ಸ್ವೀಕರಿಸಿ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯನ್ನು ನಿಮ್ಮ ಹಿರಿಯರು ಪರೀಕ್ಷಿಸಬಹುದು. ಆದ್ದರಿಂದ ಗಮನವಿಟ್ಟು ಕೆಲಸ ಮಾಡಿ. ನಿಮಗೆ ಸಾಧ್ಯವಾದಷ್ಟೂ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಿ. ನಿಮಗಿರುವ ವಿವಿಧ ಸಂಪರ್ಕಗಳು ವೃತ್ತಿಯಲ್ಲಿ ನಿಮಗೆ ಸಹಾಯ ಮಾಡಬಹುದು. ಅದ್ದರಿಂದ ಒಂದು ಗುಂಪಾಗಿ ಕೆಲಸ ಮಾಡಿ. ನಿಮ್ಮ ಆಲೋಚನೆಗಳನ್ನು ಸಹದ್ಯೋಗಿಗಳೊಂದಿಗೆ ಹಂಚಿಕೊಳ್ಳಿ. ಸಕಾರಾತ್ಮಕ ಮನೋಭಾವವು ಯಾವುದೇ ಸವಾಲನ್ನು ಎದುರಿಸಲು ಮತ್ತು ವೃತ್ತಿಜೀವನದ ಪ್ರಗತಿಯ ಹಾದಿಯಲ್ಲಿ ನಿಮ್ಮನ್ನು ಕರೆದೊಯ್ಯಲು ಸಹಾಯ ಮಾಡುತ್ತದೆ.

ಮಕರ ರಾಶಿ ಇಂದಿನ ಆರ್ಥಿಕ ಭವಿಷ್ಯ (Capricorn Money Horoscope)

ನಿಮ್ಮ ಸಂಪನ್ಮೂಲಗಳನ್ನು ನೀವು ಬುದ್ಧಿವಂತಿಕೆಯಿಂದ ಬಳಸಿದರೆ, ಇಂದು ಹಣದ ವಿಷಯದಲ್ಲಿ ಧನಾತ್ಮಕ ದಿನವಾಗಿ ಬದಲಾಗುತ್ತದೆ. ನಿಮ್ಮ ಆದಾಯವನ್ನು ಹೆಚ್ಚಿಸಲು ಹೊಸ ಹೂಡಿಕೆ ಅವಕಾಶಗಳು ಅಥವಾ ಮಾರ್ಗಗಳನ್ನು ನೀವು ಕಾಣಬಹುದು. ಇಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸುವುದು ಅವಶ್ಯಕ. ನೀವು ಸರಿಯಾದ ಆಯ್ಕೆಯನ್ನು ಮಾಡುತ್ತಿದ್ದೀರಿ ಎಂದು ಖಚಿತಪಡಿಸಿಕೊಳ್ಳಲು ಹಣಕಾಸು ತಜ್ಞರಿಂದ ಸಲಹೆ ಪಡೆದುಕೊಳ್ಳಿ. ಬಜೆಟ್ ಮತ್ತು ಯೋಜನೆಯು ನಿಮಗೆ ಟ್ರ್ಯಾಕ್‌ನಲ್ಲಿ ಉಳಿಯಲು ಮತ್ತು ನಿಮ್ಮ ಹಣಕಾಸಿನ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ನಿಮ್ಮ ಖರ್ಚುಗಳ ಮೇಲೆ ನಿಗಾ ಇರಿಸಿ ಮತ್ತು ಹಣಕಾಸಿನ ಸಮತೋಲನವನ್ನು ಕಾಪಾಡಿಕೊಳ್ಳಲು ಅನಗತ್ಯ ವೆಚ್ಚಗಳನ್ನು ತಪ್ಪಿಸಿ.

ಮಕರ ರಾಶಿ ಇಂದಿನ ಆರೋಗ್ಯ ಭವಿಷ್ಯ (Capricorn Health Horoscope)

ಆರೋಗ್ಯದ ವಿಷಯದಲ್ಲಿ, ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡಕ್ಕೂ ಗಮನ ಕೊಡಲು ಇಂದು ಉತ್ತಮ ದಿನವಾಗಿದೆ. ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಲು, ನಿಮ್ಮ ಜೀವನಶೈಲಿಯಲ್ಲಿ ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮವನ್ನು ಸೇರಿಸಿ. ಧ್ಯಾನ ಅಥವಾ ಯೋಗದಂತಹ ಚಟುವಟಿಕೆಗಳು ಒತ್ತಡವನ್ನು ನಿರ್ವಹಿಸಲು ಮತ್ತು ಭಾವನಾತ್ಮಕ ಸಮತೋಲನವನ್ನು ಕಾಪಾಡಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ದೇಹದಲ್ಲಿ ಯಾವುದೇ ಬದಲಾವಣೆಗಳಾದರೂ ಕಡೆಗಣಿಸದಿರಿ. ವಿಶ್ರಾಂತಿಗೆ ಹೆಚ್ಚಿನ ಒತ್ತು ನೀಡಿ. ಅನಾರೋಗ್ಯಕರ ಆಹಾರ ಅಭ್ಯಾಸಗಳನ್ನು ತಪ್ಪಿಸಿ ಆರೋಗ್ಯದ ಕಡೆ ಗಮನ ಹರಿಸಿ. ಸ್ವಯಂ-ಆರೈಕೆಗೆ ಆದ್ಯತೆ ನೀಡುವುದರಿಂದ ದೀರ್ಘಾವಧಿಯ ಆರೋಗ್ಯ ಪ್ರಯೋಜನಗಳು ಮತ್ತು ಸುಧಾರಿತ ಜೀವನದ ಗುಣಮಟ್ಟವನ್ನು ಪಡೆಯಬಹುದು.

ಮಕರ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು

ಮಕರ ರಾಶಿಯ ಅಧಿಪತಿ: ಶನಿ, ಮಕರ ರಾಶಿಯವರಿಗೆ ಶುಭ ದಿನಾಂಕಗಳು: 6, 8 ಮತ್ತು 9. ಮಕರ ರಾಶಿಯವರಿಗೆ ಶುಭ ವಾರಗಳು: ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ. ಮಕರ ರಾಶಿಯವರಿಗೆ ಶುಭ ವರ್ಣ: ನೀಲಿ, ಬಿಳಿ ಮತ್ತು ಕೆಂಪು. ಮಕರ ರಾಶಿಯವರಿಗೆ ಅಶುಭ ವರ್ಣ: ಹಳದಿ ಮತ್ತು ಬಾದಾಮಿ ಬಣ್ಣ. ಮಕರ ರಾಶಿಯವರಿಗೆ ಶುಭ ದಿಕ್ಕು: ದಕ್ಷಿಣ ಮತ್ತು ಪಶ್ಚಿಮ. ಮಕರ ರಾಶಿಯವರಿಗೆ ಶುಭ ತಿಂಗಳು: ಸೆಪ್ಟೆಂಬರ್ 15ರಿಂದ ಅಕ್ಟೋಬರ್ 14. ಮಕರ ರಾಶಿಯವರಿಗೆ ಶುಭ ಹರಳು: ನೀಲಮಣಿ, ಝೆರ್ಕೋನ್ ಮತ್ತು ಹಸಿರು ಪಚ್ಚೆ. ಮಕರ ರಾಶಿಯವರಿಗೆ ಹೊಂದಾಣಿಕೆ ಇರುವ ರಾಶಿ: ಕುಂಭ, ವೃಷಭ ಮತ್ತು ಕನ್ಯಾ. ಮಕರ ರಾಶಿಯವರಿಗೆ ಹೊಂದಾಣಿಕೆ ಕಷ್ಟವಾಗುವ ರಾಶಿ: ಕಟಕ, ಸಿಂಹ ಮತ್ತು ಧನು.

ಮಕರ ರಾಶಿಯವರಿಗೆ ಶುಭ ಫಲಕ್ಕಾಗಿ ಸರಳ ಪರಿಹಾರಗಳು

1) ಮಹಾ ಮೃತ್ಯುಂಜಯ ಮಂತ್ರ: ಪ್ರತಿದಿನ ಮಹಾ ಮೃತ್ಯುಂಜಯ ಮಂತ್ರ ಪಠಿಸುವುದರಿಂದ ಅಥವಾ ಕೇಳುವುದರಿಂದ ಮಾತಿನ ಮೇಲೆ ಹತೋಟಿ ಸಾಧಿಸುವಿರಿ. ಹಣಕಾಸಿನ ತೊಂದರೆ ಉಂಟಾಗುವುದಿಲ್ಲ.

2) ಈ ದಾನಗಳಿಂದ ಶುಭ ಫಲ: ಕಡಲೆ ಬೇಳೆ ಮತ್ತು ಹಳದಿ ವಸ್ತ್ರವನ್ನು ದಾನ ನೀಡುವುದರಿಂದ ಕೆಲಸ ಕಾರ್ಯಗಳಲ್ಲಿ ಜಯ ಲಭಿಸುತ್ತದೆ.

3) ದೇವಸ್ಥಾನ ಮತ್ತು ದೇವರ ಪೂಜೆ: ಶ್ರೀ ವಿಷ್ಣು ದೇವಾಲಯದಲ್ಲಿ ಪೂಜೆ ಮಾಡಿಸಿದಲ್ಲಿ ಉತ್ತಮ ಆರೋಗ್ಯ ಲಭಿಸುತ್ತದೆ. ಶ್ರೀ ಪಂಚಮುಖಿ ಆಂಜನೇಯಸ್ವಾಮಿ ಪೂಜೆ ಮಾಡುವುದರಿಂದ ಮನದ ಆತಂಕ ದೂರವಾಗಲಿದೆ. ದಂಪತಿ ನಡುವೆ ಉತ್ತಮ ಸಾಮರಸ್ಯ ಏರ್ಪಡುತ್ತದೆ.

4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ಹಸಿರು ಮತ್ತು ನೀಲಿ ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.

ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ದೇವಾಲಯಗಳು, ಆಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.