ವೃಷಭ ರಾಶಿ ಭವಿಷ್ಯ ಜು. 26: ವೃತ್ತಿಯಲ್ಲಿ ತಮ್ಮ ಪ್ರತಿಭೆ ಸಾಬೀತುಪಡಿಸಲು ಈ ದಿನ ಚೆನ್ನಾಗಿದೆ, ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ದೊರೆಯಬಹುದು
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವೃಷಭ ರಾಶಿ ಭವಿಷ್ಯ ಜು. 26: ವೃತ್ತಿಯಲ್ಲಿ ತಮ್ಮ ಪ್ರತಿಭೆ ಸಾಬೀತುಪಡಿಸಲು ಈ ದಿನ ಚೆನ್ನಾಗಿದೆ, ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ದೊರೆಯಬಹುದು

ವೃಷಭ ರಾಶಿ ಭವಿಷ್ಯ ಜು. 26: ವೃತ್ತಿಯಲ್ಲಿ ತಮ್ಮ ಪ್ರತಿಭೆ ಸಾಬೀತುಪಡಿಸಲು ಈ ದಿನ ಚೆನ್ನಾಗಿದೆ, ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ದೊರೆಯಬಹುದು

Taurus Daily Horoscope 26 July 2024: ರಾಶಿಚಕ್ರಗಳ ಪೈಕಿ ಎರಡನೆಯದು ವೃಷಭ. ಜನನದ ಸಮಯದಲ್ಲಿ ಚಂದ್ರನು ವೃಷಭದಲ್ಲಿ ಸಾಗುತ್ತಿರುವ ಜನರ ರಾಶಿಚಕ್ರ ಚಿಹ್ನೆಯೇ ವೃಷಭ ರಾಶಿ. ಇಂದಿನ ಜಾತಕದ ಪ್ರಕಾರ ನಿಮ್ಮ ಪ್ರೇಮ ಸಂಬಂಧ ಇಂದು ರೊಮ್ಯಾಂಟಿಕ್‌ ಆಗಿರಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಪ್ರತಿಭೆ ಸಾಬೀತುಪಡಿಸಲು ಇಂದು ಒಳ್ಳೆಯದು.

ವೃಷಭ ರಾಶಿ ದಿನ ಭವಿಷ್ಯ ಜು. 26:  ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ದೊರೆಯಬಹುದು, ವೃತ್ತಿಯಲ್ಲಿರುವವರಿಗೆ ತಮ್ಮ ಪ್ರತಿಭೆ ಸಾಬೀತುಪಡಿಸಲು ಈ ದಿನ ಚೆನ್ನಾಗಿದೆ
ವೃಷಭ ರಾಶಿ ದಿನ ಭವಿಷ್ಯ ಜು. 26: ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ದೊರೆಯಬಹುದು, ವೃತ್ತಿಯಲ್ಲಿರುವವರಿಗೆ ತಮ್ಮ ಪ್ರತಿಭೆ ಸಾಬೀತುಪಡಿಸಲು ಈ ದಿನ ಚೆನ್ನಾಗಿದೆ

ವೃಷಭ ರಾಶಿ ಭವಿಷ್ಯ ಜುಲೈ 26: ಪ್ರೀತಿ-ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಲಿದ್ದೀರಿ, ವೃತ್ತಿಪರ ಬಿಕ್ಕಟ್ಟನ್ನು ಸಹ ಆತ್ಮವಿಶ್ವಾಸದಿಂದ ನಿಭಾಯಿಸಬೇಕಿದೆ. ಹಣಕಾಸಿನ ವಿಚಾರದಲ್ಲಿ ನಿಮ್ಮ ಉಳಿತಾಯದ ಯೋಜನೆ ನಿಮ್ಮ ಭವಿಷ್ಯಕ್ಕೆ ಬೆಂಗಾವಲಾಗಿರುತ್ತದೆ. ಆರೋಗ್ಯವೂ ಚೆನ್ನಾಗಿರುತ್ತದೆ. ನಿಮ್ಮ ಪ್ರೇಮ ಸಂಬಂಧ ಇಂದು ರೊಮ್ಯಾಂಟಿಕ್‌ ಆಗಿರಲಿದೆ. ಅಂದ ಹಾಗೆ, ಎಲ್ಲ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.

ವೃಷಭ ರಾಶಿ ಪ್ರೇಮ ಭವಿಷ್ಯ (Taurus Love Horoscope)

ಪ್ರೀತಿಯ ವಿಷಯದಲ್ಲಿ ಇಂದು ದಿನ ಚೆನ್ನಾಗಿದೆ. ನೀವು ಎಲ್ಲಡೆ ಪ್ರೀತಿ ಕಾಣಲಿದ್ದೀರಿ. ಸಂಬಂಧವು ಸಂತೋಷದಿಂದ ಕೂಡಿರುತ್ತದೆ. ಪ್ರೀತಿಯನ್ನು ಹುಡುಕುತ್ತಿರುವ ಒಂಟಿ ಹೆಣ್ಣುಮಕ್ಕಳು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಹೊಸ ವ್ಯಕ್ತಿಯನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾಗುತ್ತಾರೆ. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಿ ಮತ್ತು ಸಂಗಾತಿಯ ಭಾವನೆಗಳಿಗೆ ಯಾವಾಗಲೂ ಗೌರವ ನೀಡಿ. ಒಟ್ಟಿಗೆ ಹೆಚ್ಚು ಸಮಯ ಕಳೆಯಲು ಇತರ ವಿಷಯಗಳನ್ನು ಪಕ್ಕಕ್ಕೆ ಇಡಿ. ನಿಮ್ಮ ಪ್ರೇಮಕ್ಕೆ ಪೋಷಕರ ಬೆಂಬಲ ಇರುತ್ತದೆ. ಕೆಲವು ವಿವಾಹಿತ ವೃಷಭ ರಾಶಿಯ ಪುರುಷ ಸ್ಥಳೀಯರು ಕಚೇರಿ ಪ್ರಣಯದಲ್ಲಿ ಸಿಕ್ಕಿಬೀಳಬಹುದು. ಅದರಿಂದ ವೈವಾಹಿಕ ಜೀವನದಲ್ಲಿ ಅವ್ಯವಸ್ಥೆ ಉಂಟಾಗಬಹುದು.

ವೃಷಭ ರಾಶಿ ವೃತ್ತಿ ಭವಿಷ್ಯ (Taurus Professional Horoscope)

ನೀವು ಪ್ರತಿ ಹೊಸ ಕೆಲಸವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಕಚೇರಿಯಲ್ಲಿ ಹಿರಿಯರು ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಡುತ್ತಾರೆ. ಕಲೆ, ಸಂಗೀತ ಮತ್ತು ಸೃಜನಶೀಲ ಕ್ಷೇತ್ರಗಳಲ್ಲಿ ತೊಡಗಿರುವವರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶಗಳನ್ನು ನೋಡುತ್ತಾರೆ ಆದರೆ ಶಿಕ್ಷಣ ತಜ್ಞರು, ಸಸ್ಯಶಾಸ್ತ್ರಜ್ಞರು ಮತ್ತು ಬ್ಯಾಂಕರ್‌ಗಳಿಗೆ ಇಂದು ಬ್ಯುಸಿ ದಿನವಾಗಿದೆ. ಭವಿಷ್ಯದಲ್ಲಿ ಸಹಾಯಕವಾಗಬಹುದಾದ ಹೊಸ ಜನರೊಂದಿಗೆ ವ್ಯಾಪಾರಸ್ಥರು ಸಂಪರ್ಕ ಸಾಧಿಸುತ್ತಾರೆ. ನೀವು ಕೆಲಸವನ್ನು ತೊರೆಯಲು ಬಯಸಿದರೆ, ದಿನದ ಎರಡನೇ ಭಾಗವು ಉತ್ತಮವಾಗಿದೆ.

ವೃಷಭ ರಾಶಿಯ ಆರ್ಥಿಕ ಭವಿಷ್ಯ (Taurus Money Horoscope)

ಜೀವನದಲ್ಲಿ ಆರ್ಥಿಕ ಸಮೃದ್ಧಿ ಇರುತ್ತದೆ. ಹಿಂದಿನ ಹೂಡಿಕೆಯಿಂದಲೂ ಸಂಪತ್ತು ಬರುತ್ತದೆ. ಕೆಲವು ವೃಷಭ ರಾಶಿಯ ಸ್ಥಳೀಯರು ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆಯಲಿದ್ದಾರೆ. ನಿಮ್ಮ ಸಂಪತ್ತನ್ನು ಕಾಪಾಡಿಕೊಳ್ಳಲು ವಿವಿಧ ಆಯ್ಕೆಗಳಲ್ಲಿ ಹೂಡಿಕೆ ಮಾಡಲು ಪ್ರಯತ್ನಿಸಿ. ಗೊತ್ತಿಲ್ಲದ ಕ್ಷೇತ್ರದಲ್ಲಿ ಹಣ ಹೂಡಿಕೆ ಮಾಡಿ ಕಳೆದುಕೊಳ್ಳುವ ಬದಲಿಗೆ ಸುಮ್ಮನಿರುವುದು ಒಳ್ಳೆಯದು.

ವೃಷಭ ರಾಶಿಯ ಆರೋಗ್ಯ ಭವಿಷ್ಯ (Taurus Health Horoscope)

ಇಂದು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಎದುರಾಗುವುದರಿಂದ ಜಾಗರೂಕರಾಗಿರಿ. ಆಲ್ಕೋಹಾಲ್ ಮತ್ತು ತಂಬಾಕಿನಿಂದ ದೂರವಿದ್ದರೆ ಒಳ್ಳೆಯದು. ವ್ಯಾಯಾಮವನ್ನು ದಿನಚರಿಯ ಭಾಗವಾಗಿಸಿ ಮತ್ತು ಪೌಷ್ಟಿಕ ಆಹಾರದ ಸೇವನೆಯತ್ತ ಗಮನ ಹರಿಸಿ. ಕೆಲವು ಹಿರಿಯರು ಉಸಿರಾಟಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯನ್ನು ಎದುರಿಸಬಹುದು. ಮಕ್ಕಳಿಗೆ ವೈರಲ್ ಜ್ವರ, ಗಂಟಲು ನೋವು ಮತ್ತು ಕಫಕ್ಕೆ ಸಂಬಂಧಿತ ಸಮಸ್ಯೆಗಳಿರುತ್ತವೆ.

ವೃಷಭ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು

ವೃಷಭ ರಾಶಿಗೆ ಅಧಿಪತಿ: ಶುಕ್ರ, ವೃಷಭ ರಾಶಿಯವರಿಗೆ ಶುಭ ದಿನಾಂಕಗಳು: 5, 6, 15, 18, 19, 20, 25, 29. ವೃಷಭ ರಾಶಿಯವರಿಗೆ ಶುಭ ದಿನಗಳು: ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ. ವೃಷಭ ರಾಶಿಯವರಿಗೆ ಶುಭ ಸಂಖ್ಯೆಗಳು: 5, 6, 8. ವೃಷಭ ರಾಶಿಯವರಿಗೆ ಶುಭ ವರ್ಣ: ಪಿಂಕ್, ಹಸಿರು ಮತ್ತು ಬಿಳಿ. ವೃಷಭ ರಾಶಿಯವರಿಗೆ ಅಶುಭ ವರ್ಣ: ಕೆಂಪು ಮತ್ತು ಹಳದಿ. ವೃಷಭ ರಾಶಿಯವರಿಗೆ ಶುಭ ದಿಕ್ಕು: ದಕ್ಷಿಣ ಮತ್ತು ನೈರುತ್ಯ. ವೃಷಭ ರಾಶಿಯವರಿಗೆ ಶುಭ ತಿಂಗಳು: ಜನವರಿ 15 ರಿಂದ ಏಪ್ರಿಲ್15. ವೃಷಭ ರಾಶಿಯವರಿಗೆ ಶುಭ ಹರಳು: ಹಸಿರು ಪಚ್ಚೆ ಮತ್ತು ನೀಲಮಣಿ. ವೃಷಭ ರಾಶಿಯವರಿಗೆ ಶುಭ ರಾಶಿ: ಮಿಥುನ, ಕನ್ಯಾ ಮತ್ತು ಮಕರ. ವೃಷಭ ರಾಶಿಯವರಿಗೆ ಅಶುಭ ರಾಶಿ: ಕಟಕ, ಧನುಸ್ಸು ಮತ್ತು ಮೇಷ.

ವೃಷಭ ರಾಶಿಯವರಿಗೆ ಶುಭಫಲಕ್ಕಾಗಿ ಸರಳ ಪರಿಹಾರಗಳು

1) ಇಂದ್ರಾಕ್ಷಿ ಸ್ತೋತ್ರ: ಪ್ರತಿದಿನ ಶ್ರೀ ಇಂದ್ರಾಕ್ಷಿ ಸ್ತೋತ್ರ ಪಠಿಸುವುದರಿಂದ ಅಥವಾ ಕೇಳಿಸಿಕೊಳ್ಳುವುದರಿಂದ ಆತ್ಮಶಕ್ತಿಯು ಹೆಚ್ಚುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.

2) ಈ ದಾನಗಳಿಂದ ಶುಭ ಫಲ: ಬಿಳಿಬಣ್ಣದ ಬಟ್ಟೆ ಮತ್ತು ಗೋಧಿ ಅಥವಾ ರವೆಯನ್ನು ದಾನ ನೀಡುವುದರಿಂದ ಖರ್ಚುವೆಚ್ಚಗಳು ಕಡಿಮೆ ಆಗಲಿವೆ.

3) ದೇವಸ್ಥಾನ ಮತ್ತು ದೇವರ ಪೂಜೆ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಗೆ ಪಂಚಾಮೃತ ಅಭಿಷೇಕ ಮಾಡಿಸುವುದು ಕ್ಷೇಮಕರ. ಮನೆಯಲ್ಲಿಯೂ ಶ್ರೀ ಸತ್ಯನಾರಾಯಣ ಪೂಜೆ ಮಾಡಬಹುದು. ಹೂ ಬಿಡುವ ಗಿಡಗಳನ್ನು ಪೋಷಿಸಿದಲ್ಲಿ ಎಲ್ಲಾರೀತಿಯ ಸಮಸ್ಯೆಗಳು ದೂರವಾಗುತ್ತವೆ.

4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ನೀಲಿ ಮತ್ತು ಹಸಿರು ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.

ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ದೇವಾಲಯಗಳು, ಆಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬಸಂಸ್ಕೃತಿಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.