ದಿನ ಭವಿಷ್ಯ ಜುಲೈ 17; ಮಿಥುನ ರಾಶಿಯವರಿಗೆ ಉದ್ಯೋಗದಲ್ಲಿ ನಿರಾಸಕ್ತಿ, ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ದಿನ ಭವಿಷ್ಯ ಜುಲೈ 17; ಮಿಥುನ ರಾಶಿಯವರಿಗೆ ಉದ್ಯೋಗದಲ್ಲಿ ನಿರಾಸಕ್ತಿ, ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ

ದಿನ ಭವಿಷ್ಯ ಜುಲೈ 17; ಮಿಥುನ ರಾಶಿಯವರಿಗೆ ಉದ್ಯೋಗದಲ್ಲಿ ನಿರಾಸಕ್ತಿ, ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ

Daily Horoscope Today July 17; ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಅಂದಹಾಗೆ, ಜುಲೈ 17 ರ ದಿನ ಭವಿಷ್ಯ ಪ್ರಕಾರ ಮಿಥುನ ರಾಶಿಯವರಿಗೆ ಉದ್ಯೋಗದಲ್ಲಿ ನಿರಾಸಕ್ತಿ ಇರಬಹುದು. ಈ ದಿನದ ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ ಹೀಗಿದೆ. (ಬರಹ- ಎಚ್‌. ಸತೀಶ್, ಜ್ಯೋತಿಷಿ).

ದಿನ ಭವಿಷ್ಯ ಜುಲೈ 17; ಮಿಥುನ ರಾಶಿಯವರಿಗೆ ಉದ್ಯೋಗದಲ್ಲಿ ನಿರಾಸಕ್ತಿ, ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ
ದಿನ ಭವಿಷ್ಯ ಜುಲೈ 17; ಮಿಥುನ ರಾಶಿಯವರಿಗೆ ಉದ್ಯೋಗದಲ್ಲಿ ನಿರಾಸಕ್ತಿ, ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ

Daily Horoscope Today July 17; ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮಋತು, ಆಷಾಡ ಮಾಸ, ಶುಕ್ಲಪಕ್ಷ, ಬುಧವಾರ.

ತಿಥಿ : ಏಕಾದಶಿ ಸಾ. 05.37 ರವರೆಗು ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ : ಅನೂರಾದ ನಕ್ಷತ್ರವು ರಾ. 01.03 ರವರೆಗು ಇದ್ದು ಆನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ ಬೆ.06.01

ಸೂರ್ಯಾಸ್ತ ಸ.06.49

ರಾಹುಕಾಲ : ಹ. 12.29 ರಿಂದ ಹ. 02.05

ದಿನ ಭವಿಷ್ಯ ಜುಲೈ 17; ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ರಾಶಿ ಭವಿಷ್ಯ

ಮೇಷ ರಾಶಿ; ಹೆಚ್ಚಿನ ಶ್ರಮ ವಹಿಸದೆ ಕೆಲಸ ಕಾರ್ಯವನ್ನು ಮಾಡಲೇಬೇಕೆಂಬ ಮನಸಿರುತ್ತದೆ. ಸಮಯವನ್ನು ಗೌರವಿಸುವ ನೀವು ಬೇರೆಯವರ ಕೆಲಸ ಕಾರ್ಯದಲ್ಲಿಯೂ ಸಹಾಯ ಮಾಡುವಿರಿ. ಉದ್ಯೋಗದಲ್ಲಿ ಕಾರ್ಯದ ಒತ್ತಡವಿದ್ದರೂ ಯಾವುದೇ ಪ್ರಭಾವ ನಿಮ್ಮ ಮೇಲೆ ಬೀರದು. ನಿಮ್ಮಿಂದಾಗಿ ಕುಟುಂಬದಲ್ಲಿ ಸೌಹಾರ್ದಯುತ ವಾತಾವರಣ ಇರುತ್ತದೆ. ವಿದ್ಯಾರ್ಥಿಗಳು ಉನ್ನತ ವಿಧ್ಯಾಭ್ಯಾಸಕ್ಕಾಗಿ ಆತ್ಮೀಯರ ಸಹಾಯದಿಂದ ವಿದೇಶಕ್ಕೆ ತೆರಳುತ್ತಾರೆ. ಸ್ವಂತ ವ್ಯವಹಾರ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರಮಾನ ಕಂಡುಬರುತ್ತದೆ. ದ್ರವರೂಪದ ಆಹಾರ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಲಾಭಾಂಶ ದೊರೆಯುತ್ತದೆ. ಪುಟ್ಟ ಮಕ್ಕಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ.

ಪರಿಹಾರ : ತಲೆಗೆ ಹಾಲಲ್ಲಿಟ್ಟು ಸ್ನಾನ ಮಾಡಿದ ನಂತರ ದಿನದ ಕೆಲಸ ಆರಂಭಿಸಿರಿ

ಅದೃಷ್ಟದ ಸಂಖ್ಯೆ 12

ಅದೃಷ್ಟದ ದಿಕ್ಕು : ನೈಋತ್ಯ

ಅದೃಷ್ಟದ ಬಣ್ಣ : ರಕ್ತದ ಬಣ್ಣ

ವೃಷಭ ರಾಶಿ; ಸೋಲಿನ ನಡುವೆಯೂ ಆತ್ಮವಿಶ್ವಾಸದಿಂದ ಗೆಲುವನ್ನು ಸಾಧಿಸುವಿರಿ. ನಿಮ್ಮ ಕಠಿಣ ನಿರ್ಧಾರಗಳು ಬೇರೆಯವರಿಗೆ ಬೇಸರವನ್ನು ಉಂಟುಮಾಡುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಬಾರದು. ಆದರೆ ಕೆಲಸದ ಒತ್ತಡ ಅಧಿಕವಾಗಿ ಇರುತ್ತದೆ. ಸ್ಟಾಕ್‌ ಮತ್ತು ಷೇರಿನ ವ್ಯವಹಾರದಲ್ಲಿ ಹೆಚ್ಚಿನ ಆದಾಯ ದೊರೆಯುತ್ತದೆ. ಹಣಕಾಸಿಗೆ ಸಂಬಂಧಿಸಿದ ಸಂಸ್ಥೆಯ ಒಡೆಯರಾಗಿದ್ದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನಕ್ಕೆ ಅಪರೂಪದ ಅವಕಾಶ ದೊರೆಯುತ್ತದೆ. ನಿಮ್ಮ ಮನಸ್ಸು ಬದಲಾಯಿಸದೆ ಆತ್ಮೀಯರ ಸಹಾಯ ಪಡೆಯುವಿರಿ. ಆಮದು ರಫ್ತಿನ ವ್ಯವಹಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಆದರೆ ಅನಪೇಕ್ಷಿತ ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಸಾದ್ಯವಾಗುವುದಿಲ್ಲ.

ಪರಿಹಾರ : ಹಣೆಯಲ್ಲಿ ತಿಲಕವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

ಮಿಥುನ ರಾಶಿ; ಸೋಲು ಗೆಲುವನ್ನು ಸಮನಾಗಿ ಪರಿಗಣಿಸಿ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ಕುಟುಂಬದಲ್ಲಿ ಹೊಂದಾಣಿಕೆಯ ಮನೋಭಾವನೆ ಕೂಡಿರುತ್ತದೆ. ಉದ್ಯೋಗದಲ್ಲಿ ಆಸಕ್ತಿ ಇರದಿದ್ದರೂ ಕರ್ತವ್ಯ ನಿರ್ವಹಿಸುವಿರಿ. ಮಧ್ಯಮ ಮಟ್ಟದ ಪ್ರಗತಿಯು ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಇರುವುದಿಲ್ಲ. ವಿದ್ಯಾರ್ಥಿಗಳು ಓದಿನಲ್ಲಿ ವಿಶೇಷವಾದ ಆಸಕ್ತಿಯನ್ನು ತೋರುತ್ತಾರೆ. ತಂದೆಯವರ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಅವಿವಾಹಿತರಿಗೆ ಬಂಧುಗಳ ಸಹಾಯದಿಂದ ಅನುಕೂಲತೆಗಳು ದೊರೆಯಲಿವೆ. ಉತ್ತಮ ಹಾಸ್ಯದ ಮನೋಭಾವನೆ ಹೊಂದಿರುವ ಕಾರಣ ಸಮಾಜದಲ್ಲಿ ವಿಶೇಷ ಗೌರವ ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಕಟಕ ರಾಶಿ; ಕ್ರಿಯಾಶೀಲತೆಯಿಂದ ಜೀವನದಲ್ಲಿ ಉತ್ತಮ ಉತ್ತಮ ಅವಕಾಶವನ್ನು ಪಡೆಯುವಿರಿ. ಪ್ರಸಕ್ತ ಉದ್ಯೋಗದಲ್ಲಿಯೇ ತೃಪ್ತಿಯನ್ನು ಗಳಿಸುವಿರಿ. ಹೊಸ ಉದ್ಯೋಗಾವಕಾಶವನ್ನು ತಿರಸ್ಕರಿಸುವಿರಿ. ಅತಿಯಾದ ಆಸೆ ಇರದ ಕಾರಣ ನೆರೆಹೊರೆಯವರ ನಂಬಿಕೆಯನ್ನು ಗಳಿಸುವಿರಿ. ಸಂಘ ಸಂಸ್ಥೆಯೊಂದರ ಹಣಕಾಸಿನ ಜವಾಬ್ದಾರಿ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಹಣದ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂದಿರುತ್ತಾರೆ. ಶುಚಿಯಾದ ಆಹಾರ ಸೇವನೆಯ ಕಾರಣ ಆರೋಗ್ಯವನ್ನು ಉಳಿಸಿಕೊಳ್ಳಬಹುದು. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯ್ಕ ಮಾಡುವಿರಿ. ಮಕ್ಕಳ ಬಗ್ಗೆ ಅನಾವಶ್ಯಕ ಯೋಚನೆ ಇರುತ್ತದೆ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ. .

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.