ದಿನ ಭವಿಷ್ಯ ಜುಲೈ 17; ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಗಳ ರಾಶಿ ಭವಿಷ್ಯ
Daily Horoscope Today July 17; ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಅಂದಹಾಗೆ, ಜುಲೈ 17ರ ದಿನ ಭವಿಷ್ಯ ಪ್ರಕಾರ, ಕೆಲವರಿಗೆ ಆರೋಗ್ಯ ಸಮಸ್ಯೆ, ಹಣಕಾಸಿನ ಬಿಕ್ಕಟ್ಟು ಇದ್ದರೂ, ಶುಭಫಲವಿದೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಫಲ ಹೀಗಿದೆ. (ರಾಶಿಭವಿಷ್ಯ- ಎಚ್. ಸತೀಶ್, ಜ್ಯೋತಿಷಿ).
Daily Horoscope Today July 17; ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th July 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮಋತು, ಆಷಾಡ ಮಾಸ, ಶುಕ್ಲಪಕ್ಷ, ಬುಧವಾರ.
ತಿಥಿ : ಏಕಾದಶಿ ಸಾ. 05.37 ರವರೆಗು ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.
ನಕ್ಷತ್ರ : ಅನೂರಾದ ನಕ್ಷತ್ರವು ರಾ. 01.03 ರವರೆಗು ಇದ್ದು ಆನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ ಬೆ.06.01
ಸೂರ್ಯಾಸ್ತ ಸ.06.49
ರಾಹುಕಾಲ : ಹ. 12.29 ರಿಂದ ಹ. 02.05
ದಿನ ಭವಿಷ್ಯ ಜುಲೈ 17; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಗಳ ರಾಶಿ ಭವಿಷ್ಯ
ಸಿಂಹ ರಾಶಿ; ಅತಿಯಾದ ಧೈರ್ಯವಿರುವ ಕಾರಣ ಅಸಾಧ್ಯ ಎನಿಸುವ ಕೆಲಸವನ್ನು ಮಾಡಲಿಚ್ಚಿಸುವಿರಿ. ಕುಟುಂಬದ ಸಲುವಾಗಿ ಯಾವುದೇ ತ್ಯಾಗವನ್ನು ಮಾಡಬಲ್ಲಿರಿ. ಉದ್ಯೋಗದಲ್ಲಿ ನಿಮ್ಮದೇ ಗುಂಪಿನ ನೇತೃತ್ವವನ್ನು ವಹಿಸುವಿರಿ. ಕುಟುಂಬದಲ್ಲಿನ ಏಕತೆ ಉಳಿಯಲು ಸಫಲರಾಗುವಿರಿ. ಆತ್ಮೀಯರು ಮತ್ತು ಬಂಧು ಬಳಗದವರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ. ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸುವಿರಿ. ವಿದ್ಯಾರ್ಥಿಗಳಲ್ಲಿ ಅಪರೂಪದ ಸಂಘಟನಾ ಶಕ್ತಿ ಕಂಡುಬರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ವರಮಾನ ದೊರೆಯುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ಸಹನೆಯಿಂದ ನಿಮ್ಮ ಕೆಲಸವನ್ನು ಸಾಧಿಸಬಲ್ಲಿರಿ. ಸಮಯಕ್ಕೆ ತಕ್ಕಂತೆ ವರ್ತಿಸಬಲ್ಲಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕೆಂಪು ಬಣ್ಣ
ಕನ್ಯಾ ರಾಶಿ; ಬೇರೆಯವರ ಚಿಕ್ಕ ಪುಟ್ಟ ತಪ್ಪುಗಳನ್ನು ಖಂಡಿಸುವಿರಿ. ಇದರಿಂದ ಅನಾವಶ್ಯಕವಾಗಿ ವಿವಾದಕ್ಕೆ ಸಿಲುಕುವಿರಿ. ಪ್ರೀತಿ ವಿಶ್ವಾಸದಿಂದ ಕುಟುಂಬದವರ ಮನಸ್ಸನ್ನು ಗೆಲ್ಲವಿರಿ. ಕುಟುಂಬದ ಶಾಂತಿ ನೆಮ್ಮದಿಯ ವಾತಾವರಣ ಇರುತ್ತದ್ದೆ. ಮಕ್ಕಳ ಯಶಸ್ವೀ ಜೀವನಕ್ಕೆ ಕಾರಣರಾಗುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಾಯಿಸಿದಲ್ಲಿ ತೊಂದರೆ ಎದುರಾಗುತ್ತದೆ. ಉದ್ಯೋಗದಲ್ಲಿ ಅಡಚಣೆಗಳು ಎದುರಾಗುವ ಕಾರಣ ಉದ್ಯೋಗದ ಬದಲಾಯಿಸುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಶುಭ ಫಲಗಳು ದೊರೆಯುತ್ತವೆ. ಅನಾವಶ್ಯಕ ವಾದ ಖರ್ಚು ವೆಚ್ಚಗಳಲ್ಲಿ ತೊಡಗುವಿರಿ. ವ್ಯಾಪಾರ ವ್ಯವಹಾರದಲ್ಲಿ ನಷ್ಟ ಉಂಟಾಗದು. ಹಣಕಾಸಿನ ಯೋಜನೆಯಲ್ಲಿ ಹಣವನ್ನು ತೊಡಗಿಸುವಿರಿ.
ಪರಿಹಾರ : ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು ನೈಋತ್ಯ
ಅದೃಷ್ಟದ ಬಣ್ಣ ಕಿತ್ತಳೆ ಬಣ್ಣ
ತುಲಾ ರಾಶಿ; ದೊರೆಯುವ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಅಭಿವೃದ್ಧಿಗೆ ಬರುವಿರಿ. ಆದರೆ ನಿಮಗೆ ಯಾರ ಸಹಾಯವೂ ದೊರೆಯುವುದಿಲ್ಲ. ಆತುರ ಪಟ್ಟಲ್ಲಿ ತೊಂದರೆ ಖಂಡಿತ. ಯಾವುದೇ ಭೇದ ಭಾವ ತೋರದೆ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸುವಿರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರುವುದಿಲ್ಲ. ಮಕ್ಕಳ ಜೊತೆ ಇದ್ದರೆ ಸಂತೋಷದಿಂದ ಬಾಳುವಿರಿ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳು ಎದುರಾಗಲಿವೆ. ಮನದಲ್ಲಿ ಚಿಂತೆಯೊಂದು ಸದಾ ಇರಲಿದೆ. ಸ್ವಂತ ಹಣಕಾಸಿನ ವ್ಯವಹಾರದಲ್ಲಿ ಹಿನ್ನೆಡೆ ಇರುತ್ತದೆ. ವಿದ್ಯಾರ್ಥಿಗಳು ಮನರಂಜನೆ ಮತ್ತು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರುವರು. ವಂಶಕ್ಕೆ ಸೇರಿದ ಆಸ್ತಿಯ ವಿಚಾರದಲ್ಲಿ ಒಮ್ಮತ ಇರುವುದಿಲ್ಲ.
ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು ಪಶ್ಚಿಮ
ಅದೃಷ್ಟದ ಬಣ್ಣ ಹಳದಿ ಬಣ್ಣ
ವೃಶ್ಚಿಕ ರಾಶಿ; ಬೇರೆಯವರ ಸಲಹೆ ಸೂಚನೆಯನ್ನು ಸುಲಭವಾಗಿ ಒಪ್ಪುವುದಿಲ್ಲ. ನಿಮಗೆ ಅತಿಯಾದ ಆತ್ಮವಿಶ್ವಾಸ ಇರುತ್ತದೆ. ನೀವೆ ಸರಿ ಎಂಬ ಬಾವನೆ ನಿಮ್ಮಲ್ಲಿರುತ್ತದೆ. ನಿಮ್ಮ ಸಿಡುಕಿನ ವ್ಯಕ್ತಿತ್ವದಿಂದಾಗಿ ಆತ್ಮೀಯರ ವಿರೋದ ಇರಲಿದೆ. ಬಂಧು ಬಳಗದವರಿಂದ ದೂರವಿರಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ಬಿಗುವಿನ ವಾತಾವರಣ ಕಂಡುಬರುತ್ತದೆ. ಉದ್ಯೋಗದಲ್ಲಿ ನಿಮ್ಮ ಮನಸ್ಸಿಗೆ ಬೇಸರ ಉಂಟಾಗುವ ಸನ್ನಿವೇಶ ಎದುರಾಗುತ್ತದೆ. ಪ್ರೀತಿ ವಿಶ್ವಾಸದಿಂದ ಎಲ್ಲರ ಮನಸ್ಸನ್ನು ಗೆಲ್ಲಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥಮಾಡದೆ ಕಲಿಕೆಯಲ್ಲಿ ನಿರತರಾಗುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿಸಿದ ಲಾಭ ದೊರೆಯಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ.
ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಸಿರುಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ದೇವಾಲಯಗಳು, ಅಧ್ಯಾತ್ಮ,ದಿನ ಭವಿಷ್ಯ, ಗ್ರಹಗಳ ಸಂಚಾರ,ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ,ಹಬ್ಬ,ಸಂಸ್ಕೃತಿ,ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯವಿಭಾಗ ನೋಡಿ.
ವಿಭಾಗ