ಮೂರನೇ ವ್ಯಕ್ತಿಯಿಂದ ದಂಪತಿ ನಡುವೆ ಮನಸ್ತಾಪ, ಮತ್ತೊಬ್ಬರ ಹಣಕಾಸಿನ ವ್ಯವಹಾರಕ್ಕೆ ತಲೆ ಹಾಕದಿರಿ; ಮೇ 10ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮೂರನೇ ವ್ಯಕ್ತಿಯಿಂದ ದಂಪತಿ ನಡುವೆ ಮನಸ್ತಾಪ, ಮತ್ತೊಬ್ಬರ ಹಣಕಾಸಿನ ವ್ಯವಹಾರಕ್ಕೆ ತಲೆ ಹಾಕದಿರಿ; ಮೇ 10ರ ರಾಶಿಫಲ

ಮೂರನೇ ವ್ಯಕ್ತಿಯಿಂದ ದಂಪತಿ ನಡುವೆ ಮನಸ್ತಾಪ, ಮತ್ತೊಬ್ಬರ ಹಣಕಾಸಿನ ವ್ಯವಹಾರಕ್ಕೆ ತಲೆ ಹಾಕದಿರಿ; ಮೇ 10ರ ರಾಶಿಫಲ

10 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (10th May 2024 Daily Horoscope).

ಮೇ 10 ರ ರಾಶಿಫಲ
ಮೇ 10 ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(10th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ: ತದಿಗೆ ರಾತ್ರಿ 04.40 ರವರೆಗೂ ಇದ್ದು ನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ: ರೋಹಿಣಿ ನಕ್ಷತ್ರವು 12.22 ರವರೆಗೂ ಇದ್ದು ನಂತರ ಮೃಗಶಿರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.54

ಸೂರ್ಯಾಸ್ತ: ಸಂಜೆ 06.35

ರಾಹುಕಾಲ: 10.44 ರಿಂದ 12.19

ರಾಶಿಫಲ

ಧನಸ್ಸು

ಒಂದು ದಿಟ್ಟ ನಿರ್ಧಾರ ತೆಗೆದುಕೊಳ್ಳುವ ಮೂಲಕ ಮಕ್ಕಳ ಭವಿಷ್ಯವನ್ನು ಬದಲಿಸುವಿರಿ. ಉದ್ಯೋಗವನ್ನು ಬದಲಿಸುವ ಸಾಧ್ಯತೆ ಹೆಚ್ಚಾಗಿದೆ. ಸಂಗಾತಿಯ ಜೊತೆ ವಿದೇಶಕ್ಕೆ ತೆರಳುವ ಯೋಗವಿದೆ. ತಾಯಿಗೆ ಶ್ವಾಸಕೋಶದ ತೊಂದರೆ ಇರುತ್ತದೆ. ವ್ಯವಸಾಯದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಜನಸಾಮಾನ್ಯರಿಗೆ ನರ್ಸಿಂಗ್ ಹೋಮ್ ಆರಂಭಿಸುವ ಯೋಚನೆ ಮಾಡುವಿರಿ. ವಿದ್ಯಾರ್ಥಿಗಳಿಗೆ ಶುಭ ವರ್ತಮಾನ ಬರಲಿದೆ. ಮುಂಗೋಪದ ಕಾರಣ ಆತ್ಮೀಯರು ನಿಮ್ಮಿಂದ ದೂರ ಉಳಿಯುತ್ತಾರೆ. ಶಾಲಾ ಕಾಲೇಜು ಆರಂಭಿಸಲು ಸರರ್ಕಾರದ ಅನುಮೋದನೆ ಪಡೆಯುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗುತ್ತವೆ. ಧಾರ್ಮಿಕ ಕೇಂದ್ರಕ್ಕೆ ಹಾಲಿನ ವ್ಯವಸ್ಥೆ ಮಾಡುವಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ಮಕರ

ಪರಿಚಯಸ್ಥರ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವ್ಯವಸಾಯಕ್ಕೆ ಅಗತ್ಯವಾದ ಪದಾರ್ಥಗಳ ಸರಬರಾಜಿನಲ್ಲಿ ಲಾಭವಿದೆ. ಸೋದರನ ವ್ಯಾಪಾರದಲ್ಲಿ ಸಹಪಾಲು ಪಡೆಯುವಿರಿ. ಸಂಚಾರಕ್ಕೆ ಸಂಬಂಧಿಸಿದ ಸಂಸ್ಥೆಯನ್ನು ಆರಂಭಿಸುವಿರಿ. ಕುಟುಂಬದ ನಿರ್ವಹಣೆಗಾಗಿ ತಂದೆಯವರಿಂದ ಹಣದ ಸಹಾಯ ದೊರೆಯುತ್ತದೆ. ಬೆಲೆ ಬಾಳುವ ಗೃಹೋಪಯೋಗಿ ವಸ್ತುಗಳಿಗೆ ಹಣ ಖರ್ಚಾಗುತ್ತದೆ. ಮಾತಿನಿಂದ ಕೆಲಸ ಸಾಧಿಸುವಲ್ಲಿ ಯಶಸ್ವಿಯಾಗುವಿರಿ. ಸಂಗೀತ ನಾಟ್ಯಗಳ ಪರಿಣಿತರಿಗೆ ದೇಶಾದ್ಯಂತ ಉತ್ತಮ ಅವಕಾಶ ಮತ್ತು ಗೌರವ ಲಭ್ಯವಾಗುತ್ತದೆ. ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಕುಟುಂಬದಲ್ಲಿ ಒಮ್ಮತದ ಕೊರತೆ ಇರುತ್ತದೆ. ಬಡವರ ಮದುವೆಗೆ ಸಹಾಯ ಮಾಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಕುಂಭ

ಕುಟುಂಬದ ಆಸ್ತಿ ಪಾಲಿನಲ್ಲಿ ತಂದೆಯವರಿಗೆ ಕಡಿಮೆ ಪಾಲು ದೊರೆಯುತ್ತದೆ. ದಾಂಪತ್ಯದಲ್ಲಿ ನೆರೆ ಹೊರೆಯವರ ಕಾರಣಕ್ಕಾಗಿ ವಿರಸವಿರುತ್ತದೆ. ಸೋದರಿಯ ಅರೋಗ್ಯದಲ್ಲಿನ ಸಮಸ್ಯೆಯನ್ನು ಪರಿಹರಿಸುವಿರಿ. ಸ್ವಂತ ಬಳಕೆಗಾಗಿ ಐಷಾರಾಮಿ ವಾಹನವನ್ನು ಕೊಳ್ಳುವಿರಿ. ಉದ್ಯೋಗದಲ್ಲಿ ಯಾವುದೇ ಸಮಸ್ಯೆ ಎದುರಾಗದು. ಕುಟುಂಬದಲ್ಲಿ ಮಂಗಳ ಕಾರ್ಯವೊಂದು ನಡೆಯಲಿದೆ. ಸೋದರಿಗೆ ಕೌಟುಂಬಿಕ ಜೀವನದಲ್ಲಿ ಇದ್ದ ವಿವಾದವನ್ನು ದೂರ ಮಾಡುವಿರಿ. ಕೈಹಿಡಿದ ಕೆಲಸ ಯಶಸ್ವಿಯಾಗುವವರೆಗೂ ನಿಮ್ಮ ಯೋಜನೆಗಳನ್ನು ರಹಸ್ಯವಾಗಿಡುವಿರಿ. ತಂದೆಯ ಆರೋಗ್ಯದ ಬಗ್ಗೆ ಗಮನ ಇರಲಿ. ವಿದ್ಯಾರ್ಥಿಗಳ ಆಸೆ ಈಡೇರಲಿದೆ. ಹೈನು ವ್ಯಾಪಾರದಲ್ಲಿ ಲಾಭ ಇರುತ್ತದೆ.

ಪರಿಹಾರ : ತಾಯಿಯ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ಮೀನ

ನಿಮ್ಮ ಅಭಿವೃದ್ದಿಗೆ ಬಂದು ಬಳಗದವರೇ ಅಡ್ಡಿಯಾಗುತ್ತಾರೆ. ಯಂತ್ರ ವಾಹನದಿಂದ ತೊಂದರೆ ಆಗಬಹುದು. ನೀವು ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಬೇರೆಯವರ ಹಣಕಾಸಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿದರೆ ತೊಂದರೆ ಅನುಭವಿಸುವಿರಿ. ವೈದ್ಯಕೀಯ ಉಪಕರಣಗಳ ತಯಾರಿಕಾ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಹಣಕಾಸಿಗೆ ಸಂಬಂಧಿಸಿದ ವಿಚಾರದಲ್ಲಿ ಸಾಕ್ಷಿದಾರರಾಗದಿರಿ. ವಿದ್ಯಾರ್ಥಿಗಳು ದೊಡ್ಡ ಸಾಧನೆಗೆ ಪಾತ್ರರಾಗುತ್ತಾರೆ. ಕುಟುಂಬದಲ್ಲಿ ಅಶಾಂತಿಯ ವಾತಾವರಣ ಇರುತ್ತದೆ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗಣ್ಯಸ್ಥಾನ ಲಭಿಸುತ್ತದೆ. ಧಾರ್ಮಿಕ ಕೇಂದ್ರಕ್ಕೆ ಹಣ ದೇಣಿಗೆ ನೀಡುವಿರಿ. ಜಾನುವಾರುಗಳಿಗೆ ನೀರಿನ ವ್ಯವಸ್ಥೆ ಮಾಡಲು ಹಣ ಹೊಂದಿಸುವಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಕೇಸರಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.