Horoscope Today: ಅನಿರೀಕ್ಷಿತವಾಗಿ ಆಗಮಿಸುವ ವ್ಯಕ್ತಿಯಿಂದ ನಿಮಗೆ ಸಹಾಯ, ಧನಲಾಭವಿದೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅನಿರೀಕ್ಷಿತವಾಗಿ ಆಗಮಿಸುವ ವ್ಯಕ್ತಿಯಿಂದ ನಿಮಗೆ ಸಹಾಯ, ಧನಲಾಭವಿದೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

Horoscope Today: ಅನಿರೀಕ್ಷಿತವಾಗಿ ಆಗಮಿಸುವ ವ್ಯಕ್ತಿಯಿಂದ ನಿಮಗೆ ಸಹಾಯ, ಧನಲಾಭವಿದೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಮಾರ್ಚ್​ 11, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (11 March 2024 Daily Horoscope).

ಮಾರ್ಚ್​ 11ರ ದಿನಭವಿಷ್ಯ
ಮಾರ್ಚ್​ 11ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ

ತಿಥಿ : ಪಾಡ್ಯ ಬೆ.12.58 ರವರೆಗು ಇದ್ದು ಆನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ : ಉತ್ತರಾಭಾದ್ರ ನಕ್ಷತ್ರವು ರಾ.01.58 ರವರೆಗೆ ಇರುತ್ತದೆ. ಆನಂತರ ರೇವತಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ. 07.30 ರಿಂದ ಬೆ.09.00

ರಾಶಿ ಫಲಗಳು

ಧನಸ್ಸು

ಎಲ್ಲರೂ ಅಚ್ಚರಿ ಪಡುವಂತಹ ಬದಲಾವಣೆಗಳು ನಿಮ್ಮಲ್ಲಿ ಉಂಟಾಗಲಿವೆ. ಸಾಂಪ್ರದಾಯಿಕ ಕಲೆಗಳಲ್ಲಿ ವಿಶೇಷ ಅಭಿರುಚಿ ಬೆಳೆಯುತ್ತದೆ. ಮಾನಸಿಕ ಸದೃಢತೆ ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ಕುಟುಂಬದ ಆರ್ಥಿಕ ಸಮಸ್ಯೆಗಳು ದೂರವಾಗಲಿವೆ. ಕುಟುಂಬದಲ್ಲಿನ ಅಂತಿಮ ನಿರ್ಧಾರ ನಿಮ್ಮದೇ ಆಗುತ್ತದೆ. ನಿಮ್ಮ ಮನಸ್ಸಿಗೆ ಒಪ್ಪುವ ಕೆಲಸಗಳನ್ನು ಮಾತ್ರ ಆಯ್ದುಕೊಳ್ಳುವಿರಿ. ನಿಮ್ಮಲ್ಲಿನ ವ್ಯಕ್ತಿತ್ವ ಎನ್ನರ ಗಮನ ಸೆಳೆಯುತ್ತದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಯಶಸ್ಸು ದೊರೆಯಲಿದೆ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಮುಂದುವರೆಯುತ್ತದೆ. ಮನರಂಜನೆಯನ್ನು ಸವಿಯಲು ಹೆಚ್ಚಿನ ವೇಳೆಯನ್ನು ಮೀಸಲಿಡುವಿರಿ. ಸೋದರರ ಜೊತೆಯಲ್ಲಿ ಹಣಕಾಸಿನ ವ್ಯವಹಾರವನ್ನು ಆರಂಭಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ಮಕರ

ಧೈರ್ಯದಿಂದ ಕುಟುಂಬದ ತೊಂದರೆಗಳನ್ನು ಪರಿಹರಿಸುವಿರಿ. ನಿಧಾನವಾದರೂ ಉದ್ಯೋಗ ಬದಲಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಿರಿ. ದೈಹಿಕವಾಗಿ ಸದೃಡರಾದ ಕಾರಣ ಆರೋಗ್ಯದಲ್ಲಿ ತೊಂದರೆ ಇರುವುದಿಲ್ಲ. ಹಣಕಾಸಿನ ಕೊರತೆ ಇರುವುದಿಲ್ಲ. ಮನೆಯಲ್ಲಿ ಪುಟ್ಟ ಮಕ್ಕಳಿದ್ದರೆ ಅದರ ಆರೋಗ್ಯದ ಬಗ್ಗೆ ಗಮನವಿರಬೇಕು. ವ್ಯಾಪಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಯಾವುದೇ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸುವಿರಿ. ಮಕ್ಕಳು ಎಲ್ಲರೂ ಹೆಮ್ಮೆ ಪಡುವಂತಹ ಸಾಧನೆ ಮಾಡಲಿದ್ದಾರೆ. ಅನಿರೀಕ್ಷಿತವಾಗಿ ಆಗಮಿಸುವ ವ್ಯಕ್ತಿಯೊಬ್ಬರು ನಿಮಗೆ ಸಹಾಯ ನೀಡುತ್ತಾರೆ. ಸೋಲುವ ಸಂದರ್ಭದಲ್ಲಿ ಉದಾಸೀನತೆ ತೋರುವಿರಿ. ದಾಂಪತ್ಯದಲ್ಲಿ ಇದ್ದ ಮನಸ್ತಾಪವು ಕೊನೆಗೊಳ್ಳುತ್ತದೆ. ಕುಟುಂಬದವರೊಡನೆ ಹೆಚ್ಚಿನ ಸಮಯವನ್ನು ಕಳೆಯುವುದು ಇಷ್ಟಪಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕುಂಭ

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಿರಿ. ಸಂಸಾರದ ಸುಧಾರಣೆಗೆ ಹೆಚ್ಚಿನ ಪ್ರಯತ್ನ ಪಡುವಿರಿ. ಅನಿರೀಕ್ಷಿತ ಧನ ಲಾಭವಿರುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ದುಡುಕಿ ಮಾತನಾಡುವುದರಿಂದ ಕುಟುಂಬದಲ್ಲಿ ನೆಮ್ಮದಿ ಇರುವುದಿಲ್ಲ. ಪ್ರಯೋಜನವಿಲ್ಲದ ಮಾತನ್ನು ಕಡಿಮೆ ಮಾಡಿ. ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಗಮನ ಸೆಳೆಯುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಸ್ನೇಹಿತರ ಜೊತೆಯಲ್ಲಿ ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಕೆಟ್ಟ ಹವ್ಯಾಸಗಳಿಂದ ದೂರವಾಗುವುದು ಒಳಿತು. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳು ಉಂಟಾಗಲಿವೆ. ಬಿಡುವಿನ ಸಮಯದಲ್ಲಿ ಜನಸೇವೆಯನ್ನು ಮಾಡುವಿರಿ. ಬೇಸರ ಕಳೆಯಲು ಕುಟುಂಬದ ಎಲ್ಲದೊಂದಿಗೆ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿಮಿಶ್ರಿತ ಬಿಳಿ ಬಣ್ಣ

ಮೀನ

ಕೆಲಸ ಕಾರ್ಯಗಳ ನಡುವೆಯೂ ವಿಶ್ವಾಸದಿಂದ ಕುಟುಂಬದಲ್ಲಿ ಬೆರೆಯುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಯಾವುದೇ ವಿಚಾರವಾದರೂ ಕೂಲಂಕುಶವಾಗಿ ಯೋಚಿಸಿ ಮುಂದುವರೆಯಿರಿ. ಯಾವುದೇ ರೀತಿಯ ಹಿಂಜರಿಕೆ ಇಲ್ಲದೆ ಉದ್ಯೋಗದಲ್ಲಿ ಬದಲಾವಣೆಗಳನ್ನು ತರುವಿರಿ. ವ್ಯಾಪಾರ ವ್ಯವಹಾರಗಳು ನಷ್ಟವಿಲ್ಲದೆ ನಡೆಯಲಿವೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಗುಟ್ಟಾಗಿ ಹಣವನ್ನು ಉಳಿಸಲು ಪ್ರಯತ್ನಿಸುವಿರಿ. ಅನುಭವಗಳಿಂದ ಪಾಠ ಕಲಿತು ಯಶಸ್ಸಿನ ಬೆನ್ನೇರುವಿರಿ. ಸಂಗಾತಿಗೆ ಇಷ್ಟವೆವನಿಸುವ ಒಡವೆ ವಸ್ತ್ರಗಳಿಗೆ ಹಣವನ್ನು ಖರ್ಚು ಮಾಡುವಿರಿ. ಕುಟುಂಬದ ಪುರಾತನ ಕಾಲದ ಮನೆಯನ್ನು ನವೀಕರಿಸುವಿರಿ. ಮಕ್ಕಳ ಸಂತೋಷವನ್ನು ಗುರಿಯಾಗಿರಿಸಿಕೊಂಡು ಯಾತ್ರಾ ಸ್ಥಳಕ್ಕೆ ತೆರಳುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೇರಳೆ ಬಣ್ಣ

-------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.