Horoscope Today: ಸಾಲದ ವ್ಯವಹಾರ ಸಲ್ಲ, ದಾಂಪತ್ಯ ಜೀವನದ ವಿವಾದಕ್ಕೆ ಅಂತ್ಯ ಸಿಗಲಿದೆ; ಸಿಂಹದಿಂದ ವೃಶ್ಚಿಕರಾಶಿವರೆಗಿನ ರಾಶಿಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಾಲದ ವ್ಯವಹಾರ ಸಲ್ಲ, ದಾಂಪತ್ಯ ಜೀವನದ ವಿವಾದಕ್ಕೆ ಅಂತ್ಯ ಸಿಗಲಿದೆ; ಸಿಂಹದಿಂದ ವೃಶ್ಚಿಕರಾಶಿವರೆಗಿನ ರಾಶಿಭವಿಷ್ಯ

Horoscope Today: ಸಾಲದ ವ್ಯವಹಾರ ಸಲ್ಲ, ದಾಂಪತ್ಯ ಜೀವನದ ವಿವಾದಕ್ಕೆ ಅಂತ್ಯ ಸಿಗಲಿದೆ; ಸಿಂಹದಿಂದ ವೃಶ್ಚಿಕರಾಶಿವರೆಗಿನ ರಾಶಿಭವಿಷ್ಯ

11 ಏಪ್ರಿಲ್ 2024 ಗುರುವಾರ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (11th April 2024 Daily Horoscope)

ಏಪ್ರಿಲ್‌ 11ರ ದಿನಭವಿಷ್ಯ ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಏಪ್ರಿಲ್‌ 11ರ ದಿನಭವಿಷ್ಯ ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್‌. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th April 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಗುರುವಾರ

ತಿಥಿ: ತದಿಗೆ ಸಂಜೆ 6.18ರವರೆಗೂ ಇರುತ್ತದೆ. ಅನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ: ಕೃತ್ತಿಕ ನಕ್ಷತ್ರವು ಬೆಳಗಿನ ಜಾವ 5.03ರವರೆಗೂ ಇರುತ್ತದೆ. ಅನಂತರ ರೋಹಿಣಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.09

ಸೂರ್ಯಾಸ್ತ: ಸಂಜೆ 6.31

ರಾಹುಕಾಲ: ಮಧ್ಯಾಹ್ನ 1.30 ರಿಂದ ಮಧ್ಯಾಹ್ನ 3.00

ಸಿಂಹ

ಯಾವುದೇ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಸ್ಥಿರವಾದ ಮನಸ್ಸಿನಿಂದ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಕುಟುಂಬದಲ್ಲಿನ ಮುಖ್ಯ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಸ್ವಗೃಹ ಭೂಲಾಭವಿದೆ. ತಂದೆಯವರ ಸಹಾಯ ದೊರೆಯುತ್ತದೆ. ಅನಾವಶ್ಯಕ ವಾದ ವಿವಾದದಿಂದ ಕುಟುಂಬದಲ್ಲಿ ಬಿಗುವಿನ ವಾತಾವರಣ ಉಂಟಾಗಲಿದೆ. ಉದ್ಯೋಗದಲ್ಲಿ ಸುಲಭವಾಗಿ ಯಶಸ್ಸನ್ನು ಗಳಿಸುವಿರಿ. ಹಣದ ಲೆಕ್ಕಾಚಾರ ಸಂಸ್ಥೆಯಲ್ಲಿ ಉನ್ನತ ಅಧಿಕಾರ ಲಭಿಸುತ್ತದೆ. ವಿದ್ಯಾರ್ಥಿಗಳು ವ್ಯಾಸಂಗದಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಸಾಲದ ವ್ಯವಹಾರ ಮಾಡದಿರಿ. ದೀರ್ಘಕಾಲದ ಪ್ರವಾಸಕ್ಕೆ ತೆರಳುವಿರಿ. ಅತಿಯಾದ ಆತ್ಮವಿಶ್ವಾಸ ಬೇಡ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ

ಕನ್ಯಾ

ಮಾತನಾಡುವ ಮುನ್ನ ಒಮ್ಮೆ ಯೋಚಿಸಿ ನೋಡಿ. ಅನಾವಶ್ಯಕ ಖರ್ಚು ವೆಚ್ಚದ ಮೇಲೆ ಹಿಡಿತವಿರಲಿ. ಚಾಡಿ ಮಾತನ್ನು ನಂಬಿ ತೊಂದರೆ ಎದುರಿಸುವಿರಿ. ಆರೋಗ್ಯದಲ್ಲಿ ಏರಿಳಿತಗಳು ಇರುತ್ತವೆ. ಉದ್ಯೋಗದಲ್ಲಿನ ಬೇಸರ ಮರೆಯಾಗಿ ಹೊಸ ಯೋಜನೆಗಳು ದೊರೆಯುತ್ತವೆ. ಕುಟುಂಬದಲ್ಲಿ ಆತಂಕದ ಸನ್ನಿವೇಶ ಎದುರಾಗುತ್ತದೆ. ವಿದ್ಯಾರ್ಥಿಗಳು ಸ್ಥಿರವಾದ ಮನಸ್ಸಿನಿಂದ ವ್ಯಾಸಂಗದಲ್ಲಿ ಮುಂದುವರೆಯುತ್ತಾರೆ. ಸೋದರನಿಗೆ ದೂರದ ಸ್ಥಳದಲ್ಲಿ ಕೆಲಸ ಸಿಗುತ್ತದೆ. ಕವಿಗಳು ಮತ್ತು ಕತೆಗಾರರಿಗೆ ವಿಶೇಷವಾದ ಗೌರವಾದರಗಳು ಲಭಿಸುತ್ತವೆ. ಹೊಸ ವ್ಯಾಪಾರ ವ್ಯವಹಾರಗಳನ್ನು ಆರಂಭಿಸುವ ವಿಚಾರ ಮುಂದೆ ಹೋಗಲಿದೆ. ದಾಂಪತ್ಯ ಜೀವನದಲ್ಲಿನ ವಿವಾದವು ಕೊನೆಗೊಳ್ಳುತ್ತವೆ.

ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ತುಲಾ

ವಿಶ್ರಾಂತಿ ಇಲ್ಲದ ದುಡಿಮೆ ಬೇಸರವನ್ನು ಉಂಟು ಮಾಡುತ್ತದೆ. ಮನದಲ್ಲಿ ವೈರಾಗ್ಯದ ಭಾವನೆ ಮೂಡುತ್ತದೆ. ಸಮಾಜಸೇವೆಯಲ್ಲಿ ಆಸಕ್ತಿ ಮೂಡುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುವರು. ದಿನನಿತ್ಯಕ್ಕೆ ಅವಶ್ಯಕವಾದ ಯಂತ್ರೋಪಕರಣಗಳ ಸರಬರಾಜಿನಲ್ಲಿ ಹೆಚ್ಚಿನ ಲಾಭಾಂಶ ದೊರೆಯಲಿದೆ. ಕುಟುಂಬದಲ್ಲಿ ವಿರಸದ ವಾತಾವರಣ ಉಂಟಾಗುತ್ತದೆ. ವಿರೋಧಿಗಳ ಬಗ್ಗೆ ಎಚ್ಚರಿಕೆ ವಹಿಸಿ. ಆದಾಯ ಹೆಚ್ಚಿಸಿಕೊಳ್ಳುವ ದೃಷ್ಠಿಯಿಂದ ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಸಹೋದರಿಯ ವಿವಾಹ ಮಾತುಕತೆ ನಡೆಯುತ್ತದೆ. ವಂಶದ ಆಸ್ತಿಯಲ್ಲಿ ಪಾಲು ದೊರೆಯುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ ಬಣ್ಣ

ವೃಶ್ಚಿಕ

ಆರಂಭಿಸಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆಸಕ್ತಿ ತೋರಿಸುವಿರಿ. ಅಂತರರಾಷ್ಟ್ರೀಯ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಕುಟುಂಬದ ಹಿರಿಯರ ಕೆಲಸವೊಂದನ್ನು ಮುಂದುವರಿಸುವಿರಿ. ಹೆಚ್ಚಿನ ಪ್ರಯತ್ನದಿಂದ ವಿದ್ಯಾರ್ಥಿಗಳು ನಿರೀಕ್ಷಿತ ಮಟ್ಟ ತಲುಪಲಿದ್ದಾರೆ. ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ಯಂತ್ರೋಪಕರಣಗಳ ಮಾರಾಟದಲ್ಲಿ ಲಾಭವಿರುತ್ತದೆ. ಅನಾವಶ್ಯಕ ವಾದ ವಿವಾದಗಳಿಂದ ಮಾನಸಿಕ ಒತ್ತಡ ಹೆಚ್ಚುತ್ತದೆ. ವಾಹನ ಚಾಲನೆ ಮಾಡುವಾಗ ಎಚ್ಚರ ವಹಿಸಿ. ಶುಚಿ ಇಲ್ಲದ ನೀರಿನ ಸೇವನೆಯಿಂದ ಆರೋಗ್ಯದಲ್ಲಿ ತೊಂದರೆ ಎದುರಾಗಬಹುದು. ಧಾರ್ಮಿಕ ಅನುಯಾಯಿಗಳಿಗೆ ಸಹಾಯ ಮಾಡುವಿರಿ. ರಕ್ತದೊತ್ತಡದ ತೊಂದರೆ ಇದ್ದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ: ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

 

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 85468 65832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.