ಪ್ರವಾಸದ ವೇಳೆ ತೊಂದರೆ ಎದುರಾಗಲಿದೆ ಎಚ್ಚರದಿಂದಿರಿ, ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಜುಲೈ 11ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th July 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಗುರುವಾರ
ತಿಥಿ : ಪಂಚಮಿ ಬೆಳಗ್ಗೆ 08.05 ರವರೆಗು ಇದ್ದು ನಂತರ ಷಷ್ಠಿ ಆರಂಭವಾಗುತ್ತದೆ.
ನಕ್ಷತ್ರ : ಪುಬ್ಬ ನಕ್ಷತ್ರವು 12.05 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರ ಇರುತ್ತದೆ.
ಸೂರ್ಯೋದಯ: ಬೆಳಗ್ಗೆ 06.00
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: 02.04 ರಿಂದ 03.40
ರಾಶಿಫಲ
ಸಿಂಹ
ಸಹನೆ ಇಲ್ಲದ ಗುಣ ನಿಮ್ಮನ್ನು ತಪ್ಪು ದಾರಿಗೆ ಎಳೆದೊಯ್ಯಬಹುದು. ಗುರು ಹಿರಿಯರ ಬುದ್ಧಿ ಮಾತನ್ನು ಕೇಳಿದರೆ ಯಾವುದೇ ಸಮಸ್ಯೆ ಉದ್ಭವಿಸದು. ಪ್ರವಾಸದ ವೇಳೆ ತೊಂದರೆ ಎದುರಾಗಲಿದೆ ಎಚ್ಚರಿಕೆ ಇರಲಿ. ಕುಟುಂಬದಲ್ಲಿ ಎಲ್ಲರೊಂದಿಗೆ ಉತ್ತಮ ಸಾಮರಸ್ಯ ಇರಲಿದೆ. ಉದ್ಯೋಗದಲ್ಲಿ ವಿಶಿಷ್ಟ ಸ್ಥಾನಮಾನ ಲಭಿಸುತ್ತದೆ. ವಿದ್ಯಾರ್ಥಿಗಳು ಕಲಿಕೆಯೊಡನೆ ಮನರಂಜನೆಯಲ್ಲಿಯೂ ಮುಳುಗಲಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಸಮಸ್ಯೆ ಎದುರಾದಾಗ ಕುಟುಂಬದವರು ನಿಮ್ಮ ಸಹಾಯಕ್ಕೆ ಬರಲಿದ್ದಾರೆ. ನೆರೆಹೊರೆಯ ಜನರೊಂದಿಗೆ ಉತ್ತಮ ಸಂಪರ್ಕ ಸಾಧಿಸುವಿರಿ. ಮಕ್ಕಳ ಆರೋಗ್ಯದಲ್ಲಿ ಏರಿಳಿತ ಇರುತ್ತದೆ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ
ಕನ್ಯಾ
ಮನೆಯಲ್ಲಿ ನಡೆಯುವ ಕೆಲವು ಘಟನೆಗಳು ನೆಮ್ಮದಿಯನ್ನು ಹಾಳು ಮಾಡುತ್ತದೆ. ನಿಮ್ಮ ಪ್ರತಿಯೊಂದು ಕೆಲಸದಲ್ಲೂ ಕುಟುಂಬದ ಸದಸ್ಯರು ಸಹಕಾರ ದೊರೆಯುತ್ತದೆ. ಉದ್ಯೋಗದಲ್ಲಿ ತೊಂದರೆ ಆಗದು ಮತ್ತು ಪ್ರಗತಿಯೂ ಕಂಡುಬರುವುದಿಲ್ಲ. ಹಣಕಾಸಿನ ಪರಿಸ್ಥಿತಿಯನ್ನು ಸರಿದೂಗಿಸಲು ಯಶಸ್ವಿಯಾಗುವಿರಿ. ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಲಾಭವಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಗುಣಮಟ್ಟ ಕಾಪಾಡಿಕೊಳ್ಳುತ್ತಾರೆ. ಕುಟುಂಬದ ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರಲಿದೆ. ಕ್ರಮೇಣವಾಗಿ ನಿಮ್ಮ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ನೂತನ ವಾಹನ ಲಾಭವಿದೆ.
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ ಹಳದಿ
ತುಲಾ
ಯಶಸ್ಸಿನ ಕಾರಣ ಸಂತಸವನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಸಮಾಜದಲ್ಲಿ ನಿಮ್ಮ ಸ್ಥಾನಮಾನಕ್ಕೆ ಧಕ್ಕೆ ಬರುವ ಯಾವುದೇ ವಿಚಾರ ನಡೆಯುವುದಿಲ್ಲ. ಊಹಾಪೋಹದ ಮಾತುಗಳನ್ನು ನಂಬದಿರಿ. ಆತ್ಮೀಯರ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕರ್ತವ್ಯಕ್ಕೆ ತಕ್ಕಂಥ ಉತ್ತಮ ಪ್ರತಿಫಲ ದೊರೆಯುತ್ತವೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಗಿಯುವ ಮುನ್ನವೇ ಉದ್ಯೋಗ ಲಭಿಸುತ್ತದೆ. ಆತ್ಮೀಯರಿಂದ ಹಣಕಾಸಿನ ಸಹಾಯ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಸ್ಥಿರ ಆದಾಯ ದೊರೆಯುತ್ತದೆ. ಮನೆಯಲ್ಲಿ ಸಾಕಿರುವ ಪ್ರಾಣಿಗಳಿಗೆ ವಿಶೇಷ ಅನುಕೂಲತೆ ಕಲ್ಪಿಸುವಿರಿ. ವಯೋವೃದ್ದರಿಗೆ ಆಹಾರ ನೀಡಿ ಗೌರವಿಸುವಿರಿ.
ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ ಹಸಿರು
ವೃಶ್ಚಿಕ
ಹಟ ತೊರೆದು ಸಹನೆಯಿಂದ ವರ್ತಿಸಿದಲ್ಲಿ ಶುಭ ಫಲಗಳು ದೊರೆಯುತ್ತವೆ. ತೆಗೆದುಕೊಂಡ ತೀರ್ಮಾನಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದು. ಕುಟುಂಬದಲ್ಲಿ ಸ್ನೇಹಮಯ ವಾತಾವರಣ ಇರಲಿದೆ. ಮಕ್ಕಳ ಸಹಾಯ ಸಹಕಾರ ನಿಮಗಿರುತ್ತದೆ. ಉದ್ಯೋಗದಲ್ಲಿನ ಬಿಗುವಿನ ವಾತಾವರಣ ಉಂಟಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಸ್ಪೂರ್ತಿಯ ಅಗತ್ಯ ಇದೆ. ಹೊಸ ವ್ಯಾಪಾರ ವ್ಯವಹಾರವನ್ನು ಆರಂಭಿಸುವ ಯೋಜನೆ ಮುಂದೂಡುವಿರಿ. ಪ್ರವಾಸಕ್ಕೆ ತೆರಳಲು ಇದು ಸಕಾಲವಲ್ಲ. ಸ್ವಂತ ವ್ಯಾಪಾರವಿದ್ದಲ್ಲಿ ಮಧ್ಯಮ ಆದಾಯ ದೊರೆಯುತ್ತದೆ. ಸಂಬಂಧಿಕರ ಸಹಾಯದಿಂದ ಹಣದ ಕೊರತೆ ಕಡಿಮೆಯಾಗುತ್ತದೆ. ಗುರುಹಿರಿಯರ ಆಶೀರ್ವಾದ ದೊರೆಯಲಿದೆ.
ಪರಿಹಾರ : ಸಿಹಿಯನ್ನು ತಿಂದು ನೀರು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
