ದೂರವಾಗಿದ್ದ ಸೋದರರು ಮರಳಿ ಬರಲಿದ್ದಾರೆ, ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ದೂರವಾಗಿದ್ದ ಸೋದರರು ಮರಳಿ ಬರಲಿದ್ದಾರೆ, ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ದೂರವಾಗಿದ್ದ ಸೋದರರು ಮರಳಿ ಬರಲಿದ್ದಾರೆ, ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜುಲೈ 11ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ದೂರವಾಗಿದ್ದ ಸೋದರರು ಮರಳಿ ಬರಲಿದ್ದಾರೆ, ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ದೂರವಾಗಿದ್ದ ಸೋದರರು ಮರಳಿ ಬರಲಿದ್ದಾರೆ, ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(11th July 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ : ಪಂಚಮಿ ಬೆಳಗ್ಗೆ 08.05 ರವರೆಗು ಇದ್ದು ನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ : ಪುಬ್ಬ ನಕ್ಷತ್ರವು 12.05 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 06.00

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: 02.04 ರಿಂದ 03.40

ರಾಶಿಫಲ

ಧನಸ್ಸು

ಮಕ್ಕಳ ವಿಚಾರದಲ್ಲಿ ಹೊಸ ಆಸೆ ಮೂಡಲಿದೆ. ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ವಾತಾವರಣ ಇರುತ್ತದೆ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವಿರಿ. ಸ್ವಂತ ಹಣಕಾಸಿನ ಸಂಸ್ಥೆಯನ್ನು ಆರಂಭಿಸುವ ಕನಸು ನನಸಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆ ಮತ್ತು ಹೆಚ್ಚಿನ ಆಸಕ್ತಿಯಿಂದ ಕಲಿಕೆಯಲ್ಲಿ ಮುಂದಿರುತ್ತಾರೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಮಕ್ಕಳ ಮನಸ್ಸನ್ನು ಪ್ರೀತಿಯಿಂದ ಬದಲಿಸುವಿರಿ. ಕಲಾವಿದರಿಗೆ ವಿಶೇಷ ಅವಕಾಶ ಗೌರವ ಲಭಿಸುತ್ತದೆ. ಆಪತ್ತಿನಲ್ಲಿ ಇದ್ದವರಿಗೆ ಹಣದ ಸಹಾಯ ಮಾಡುವಿರಿ. ತಂದೆಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಸಂಗಾತಿಯ ಜೊತೆ ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಮಕರ

ಕಷ್ಟಪಟ್ಟು ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಯಶಸ್ಸಿಗಾಗಿ ಕಷ್ಟಪಟ್ಟು ದುಡಿಯುವಿರಿ. ಸಹನೆಯ ಮಾತುಕತೆಯಿಂದ ತೊಂದರೆಯನ್ನು ಗೆಲ್ಲುವಿರಿ. ತಂದೆಯವರ ದುಡುಕಿನ ಮಾತಿನಿಂದಾಗಿ ವಾಗ್ವಾದ ಉಂಟಾಗುವುದು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ಉದ್ಯೋಗದಲ್ಲಿ ಪ್ರತಿಷ್ಠಿತ ಸ್ಥಾನಮಾನ ದೊರೆಯುತ್ತದೆ. ತಪ್ಪು ಅಭಿಪ್ರಾಯದಿಂದ ದೂರವಾಗಿದ್ದ ಸೋದರರು ಪ್ರೀತಿಯಿಂದ ಮತ್ತೆ ಮರಳಿ ಬರಲಿದ್ದಾರೆ. ಸಹಪಾಠಿಗಳ ಜೊತೆಗೂಡಿ ಕಿರು ಪ್ರವಾಸ ಕೈಗೊಳ್ಳುವಿರಿ. ಸೋದರಿಗೆ ಹಣದ ಸಹಾಯವನ್ನು ಮಾಡುವಿರಿ. ಹಸಿದ ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡಿ ಸಂತಸಗೊಳ್ಳುವಿರಿ.

ಪರಿಹಾರ : ಹಿರಿಯ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕುಂಭ

ಕುಟುಂಬಕ್ಕೆ ಅವಶ್ಯಕವೆನಿಸಿದ ಕೆಲಸ ಕಾರ್ಯಗಳನ್ನು ಚುರುಕಿನಿಂದ ಮಾಡುವಿರಿ. ನಿಮ್ಮ ಹಟದ ಗುಣಕ್ಕೆ ಬೇಸತ್ತು ಕುಟುಂಬದ ಸದಸ್ಯರು ಮೌನ ವಹಿಸುತ್ತಾರೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಉಂಟಾಗದೆ ಸ್ಥಿರತೆ ಲಭಿಸುತ್ತದೆ. ಅನಿವಾರ್ಯವಾಗಿ ಉದ್ಯೋಗ ಬದಲಿಸುವಿರಿ. ಆತ್ಮೀಯರಿಂದ ಸಾಲ ಮಾಡುವಿರಿ. ವಿದ್ಯಾರ್ಥಿಗಳಿಗಗೆ ಓದಿನ ಬಗ್ಗೆ ಆಸಕ್ತಿ ಇರುವುದಿಲ್ಲ. ವಂಶಾದಾರಿತ ವ್ಯಾಪಾರದಲ್ಲಿ ಉತ್ತಮ ಆದಾಯ ಇರುತ್ತದೆ. ಆತ್ಮವಿಶ್ವಾಸದ ಕೊರತೆ ಕಂಡು ಬರದು. ಅನಾವಶ್ಯಕ ವಿಚಾರಗಳಿಗಾಗಿ ಹಣ ಖರ್ಚು ಮಾಡುವಿರಿ. ಅರೆ ತಲೆನೋವಿನ ತೊಂದರೆಯಿಂದ ಬಳಲುವಿರಿ. ಅನಾಥಾಶ್ರಮಕ್ಕೆ ದೇಣಿಗೆ ನೀಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಮೀನ

ಎಲ್ಲವೂ ಒಳ್ಳೆಯದೇ ಆಗುತ್ತದೆ ಎಂಬ ನಿರೀಕ್ಷೆ ಹುಸಿಯಾಗದು. ಕೌಟುಂಬಿಕ ವಿಚಾರದಲ್ಲಿ ಯಶಸ್ಸು ಗಳಿಸುವಿರಿ. ಅಪೂರ್ಣಕೊಂಡ ಕೆಲಸ ಕಾರ್ಯಗಳನ್ನು ಬೇಸರದಿಂದಲೇ ಮುಂದೂಡುವಿರಿ. ಆತ್ಮವಿಶ್ವಾಸದಿಂದ ಮಾಡುವ ಕೆಲಸಗಳಲ್ಲಿ ಯಶಸ್ಸು ಇರುತ್ತದೆ. ಉದ್ಯೋಗದಲ್ಲಿ ನೀರಸ ವಾತಾವರಣವಿರುತ್ತದೆ. ಸ್ವಂತ ಬುದ್ಧಿಯಿಂದ ಕೆಲಸ ಕಾರ್ಯದಲ್ಲಿ ಮುಂದುವರಿಯುವಿರಿ. ವಿದ್ಯಾರ್ಥಿಗಳು ಮಾತಿನ ಮೇಲೆ ಹತೋಟಿ ಸಾಧಿಸಬೇಕು. ಸೋದರಿ ಕಷ್ಟಪಟ್ಟು ಮನೆ ಕಟ್ಟುತ್ತಾರೆ. ಹೊಸ ಕಾರ್ಯವನ್ನು ಆರಂಭಿಸುವ ಮನಸ್ಸಿರದು. ದುರಾಸೆ ತೊರೆದು ದೊರೆಯುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲಿದ್ದೀರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.