Horoscope Today: ಹೆದರಿಕೆಯ ಗುಣವಿದ್ದರೂ ಹಟದಿಂದ ಕೆಲಸ ಸಾಧಿಸುವಿರಿ, ಸಂತಾನ ಲಾಭವಿದೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹೆದರಿಕೆಯ ಗುಣವಿದ್ದರೂ ಹಟದಿಂದ ಕೆಲಸ ಸಾಧಿಸುವಿರಿ, ಸಂತಾನ ಲಾಭವಿದೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today: ಹೆದರಿಕೆಯ ಗುಣವಿದ್ದರೂ ಹಟದಿಂದ ಕೆಲಸ ಸಾಧಿಸುವಿರಿ, ಸಂತಾನ ಲಾಭವಿದೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

11 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (11th June 2024 Horoscope).

ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ ತಿಳಿಯಿರಿ
ಧನು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಮಂಗಳವಾರ

ತಿಥಿ: ಪಂಚಮಿ ಸಾ. 05.29 ರವರೆಗೂ ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ: ಆಶ್ಲೇಷ ನಕ್ಷತ್ರವು ರಾ. 12.08 ರವರೆಗು ಇರುತ್ತದೆ. ಆನಂತರ ಮಖ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: ಹ. 03.35 ರಿಂದ ಸ. 05.11

ಧನಸ್ಸು ರಾಶಿ

ಅನಿಯಮಿತ ಆಹಾರ ಸೇವನೆಯಿಂದ ಅಜೀರ್ಣತೆ ಉಂಟಾಗುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಕಂಡುಬರಲಿವೆ. ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಸಹನೆಯಿಂದ ಜೀವನದಲ್ಲಿ ಮುಂದುವರೆಯುವಿರಿ. ಆತ್ಮೀಯರೊಬ್ಬರ ಸಹಾಯದಿಂದ ಉದ್ಯೋಗವನ್ನು ಬದಲಿಸುವಿರಿ. ಸ್ಥಿರವಾದ ಮನಸ್ಥಿತಿ ಇರುವುದಿಲ್ಲ. ಕುಟುಂಬದ ಕೆಲಸಕಾರ್ಯಗಳಿಗೆ ಪ್ರಥಮ ಆದ್ಯತೆ ನೀಡುವಿರಿ. ಜನ್ಮದ ತೊಂದರೆ ಉಂಟಾಗಬಹುದು. ಉತ್ತಮ ದೇಹದಾಡ್ಯತೆ ಪಡೆಯುವಿರಿ. ಹಣದ ಕೊರತೆ ಉಂಟಾಗುವುದಿಲ್ಲ. ಹೊಸ ಅವಕಾಶಗಳಿಗಾಗಿ ಎದುರು ನೋಡುವಿರಿ. ಸಾರ್ವಜನಿಕ ಸಭೆಸಮಾರಂಭಗಳಲ್ಲಿ ಭಾಗವಹಿಸುವಿರಿ. ಹಿರಿಯರ ಸಹಾಯ ಸಹಕಾರ ದೊರೆಯುತ್ತದೆ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ

ಮಕರ ರಾಶಿ

ಸಂತಾನ ಲಾಭವಿದೆ. ಕಣ್ಣಿನ ತೊಂದರೆ ಇದ್ದಲ್ಲಿ ನಿವಾರಣೆಯಾಗುತ್ತದೆ. ವಿವಿಧ ಮೂಲಗಳಿಂದ ಹಣಗಳಿಸುವಿರಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ಯಾವುದೇ ರೀತಿಯ ಹಿನ್ನಡೆ ಕಾಣುವುದಿಲ್ಲ. ಕಷ್ಟಪಟ್ಟು ದುಡಿಯುವ ಕಾರಣ ತೊಂದರೆ ಇರುವುದಿಲ್ಲ. ಸ್ವಂತ ಪ್ರತಿಭೆ ಮತ್ತು ಸ್ವ ಪ್ರಯತ್ನದ ಬಗ್ಗೆ ಹೆಚ್ಚಿನ ನಂಬಿಕೆ ಇರುತ್ತದೆ. ಯಂತ್ರೋಪಕರಣಗಳ ರಾಜನಿಂದ ಉತ್ತಮ ಲಾಭ ಅಂಶ ಗಳಿಸುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಮಾತ್ರ ಯಶಗಳಿಸಲು ಸಾಧ್ಯ. ನಿಮ್ಮ ಮನಸ್ಸಿಗೆ ಇಷ್ಟವೆನಿಸುವ ಒಡವೆ ವಸ್ತುಗಳನ್ನು ಕೊಳ್ಳುವಿರಿ. ಕುಟುಂಬದ ಸದಸ್ಯರ ಜೊತೆಗೆ ದೀರ್ಘಕಾಲದ ಪ್ರವಾಸ ಏರ್ಪಡಿಸುವಿರಿ. ವಂಶದ ಆಸ್ಥಿಯಲ್ಲಿ ನಿರೀಕ್ಷಿತ ಪಾಲು ದೊರೆಯುತ್ತದೆ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ನೇರಳೆ

ಕುಂಭ ರಾಶಿ

ವಿದ್ಯಾರ್ಥಿಗಳು ಪರಸ್ಥಳದಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಾರೆ. ಅನಿರೀಕ್ಷಿತ ಧನ ಲಾಭವಿದೆ. ದೃಷ್ಟಿ ದೋಷದಿಂದ ಬಳಲುವಿರಿ. ದುಡುಕದೆ ತಾಳ್ಮೆಯಿಂದ ವರ್ತಿಸುವಿರಿ. ಇದರಿಂದಾಗಿ ನಿಮ್ಮ ವಿರೋಧಿಗಳು ಸ್ನೇಹಿತರಾಗಿ ಮಾರ್ಪಡುತ್ತಾರೆ. ಯಾರನ್ನು ಸುಲಭವಾಗಿ ನಂಬುವುದಿಲ್ಲ. ಉದ್ಯೋಗಕ್ಕೆ ಸಂಬಂಧಪಟ್ಟ ಅತಿ ಮುಖ್ಯ ವಿಚಾರಗಳನ್ನು ರಹಸ್ಯವಾಗಿ ಇಡುವಿರಿ. ಮಾತನ್ನು ಕಡಿಮೆ ಮಾಡಿ ಕೆಲಸ ಕಾರ್ಯದಲ್ಲಿ ಮುನ್ನಡೆಯುವಿರಿ. ಬಂಧು ಬಳಗದವರೊಂದಿಗೆ ಉತ್ತಮ ಸಂಬಂಧವಿರುತ್ತದೆ. ದಂಪತಿಗಳ ಮಧ್ಯೆ ಇದ್ದ ಮನಸ್ತಾಪ ದೂರವಾಗುತ್ತದೆ. ನೋಡಲು ಸುಂದರವಾಗಿ ಕಾಣುವ ವಸ್ತ್ರಗಳನ್ನು ಸಂಗಾತಿಗೆ ಉಡುಗೊರೆಯಾಗಿ ನೀಡುವಿರಿ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ

ಮೀನ ರಾಶಿ

ಸತಿಪತಿಗಳ ಮಧ್ಯೆ ಬೇಸರವಿರುತ್ತದೆ. ಹಿರಿಯ ಸೋದರನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಲಿದೆ. ಅವಶ್ಯಕತೆ ಇರುವಷ್ಟು ಹಣವನ್ನು ಸಂಪಾದಿಸಬಲ್ಲಿರಿ. ಸೋದರಿಯ ದಾಂಪತ್ಯ ಜೀವನದಲ್ಲಿನ ವಿವಾದವು ನಿಮ್ಮಿಂದ ಸುಖಾಂತ್ಯಗೊಳ್ಳಲಿದೆ. ಆತುರ ತೋರದೆ ಪ್ರತಿಯೊಂದು ವಿಚಾರಗಳನ್ನು ಅರಿತು ಕೆಲಸ ಕಾರ್ಯಗಳಲ್ಲಿ ತೊಡಗುವಿರಿ. ಸಾಹಸ ಕ್ರೀಡೆಗಳಲ್ಲಿ ತೊಡಗುವವರು ಎಚ್ಚರಿಕೆಯಿಂದ ಇರಬೇಕು. ನಿಮ್ಮನ್ನು ನಂಬಿದವರಿಗೆ ಯಾವುದೇ ರೀತಿಯ ತೊಂದರೆ ಉಂಟಾಗುವುದಿಲ್ಲ. ಹೆದರಿಕೆಯ ಗುಣವಿದ್ದರೂ ಹಠದಿಂದ ಕೆಲಸ ಸಾಧಿಸುವಿರಿ. ನಿಮ್ಮ ಕುಟುಂಬದಲ್ಲಿ ಒಬ್ಬರು ಕಷ್ಟನಷ್ಟಗಳು ಮರೆಯಾಗಿ ಸಂತೃಪ್ತಿಯ ಜೀವನ ಆರಂಭಿಸುತ್ತಾರೆ. ಉದ್ಯೋಗದಲ್ಲಿ ಉತ್ತಮ ಪ್ರಗತಿ ಕಾಣುವಿರಿ.

ಪರಿಹಾರ: ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.