ನೆರೆ ಹೊರೆಯವರೊಂದಿಗೆ ವಾದ ವಿವಾದ, ವಾಸ ಸ್ಥಾನ ಬದಲಾವಣೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ನೆರೆ ಹೊರೆಯವರೊಂದಿಗೆ ವಾದ ವಿವಾದ, ವಾಸ ಸ್ಥಾನ ಬದಲಾವಣೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ

ನೆರೆ ಹೊರೆಯವರೊಂದಿಗೆ ವಾದ ವಿವಾದ, ವಾಸ ಸ್ಥಾನ ಬದಲಾವಣೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ

12 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12th June 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ
ಮೇಷ, ವೃಷಭ, ಮಿಥುನ, ಕಟಕ ರಾಶಿ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಷಷ್ಠಿ 06.53ರವರೆಗೂ ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಮಖೆ ನಕ್ಷತ್ರವು ರಾತ್ರಿ 02.16 ರವರೆಗು ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.45

ರಾಹುಕಾಲ: 12.23 ರಿಂದ ಸಂಜೆ 01.59

ರಾಶಿಫಲ

ಮೇಷ

ಕುಟುಂಬದಲ್ಲಿ ಒಮ್ಮತದ ಮನೋಭಾವನೆ ಇರುವುದಿಲ್ಲ. ಆರೋಗ್ಯದಲ್ಲಿ ತೊಂದರೆ ಉಂಟಾಗುತ್ತದೆ. ಅನಿವಾರ್ಯವಾಗಿ ಮನೆಯನ್ನು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳುವಿರಿ. ಹಣದ ಕೊರತೆ ನಿಮ್ಮನ್ನು ಕಾಡಲಿದೆ. ಸಮಯಕ್ಕೆ ಸರಿಯಾಗಿ ಆಹಾರ ಸ್ವೀಕರಿಸಲು ಸಾಧ್ಯವಾಗದು. ಹಾಗೆಯೇ ವಿಶ್ರಾಂತಿ ದೊರಕದು. ಜನ್ಮಸ್ಥಳಕ್ಕೆ ತೆರಳಿ ವಂಶಕ್ಕೆ ಸೇರಿದ ಮನೆಯಲ್ಲಿ ಕೆಲ ದಿನ ನೆಲೆಸುವಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ನಿಮ್ಮ ತಾಯಿಗೆ ಉತ್ತಮ ಆರೋಗ್ಯವಿದ್ದು ಸುಖ ಸಂತೋಷದಿಂದ ಬಾಳುತ್ತಾರೆ. ಯಾರೊಂದಿಗೂ ಸ್ನೇಹ ಬೆಳೆಸದೆ ಒಂಟಿಯಾಗಿ ಬಾಳುವಿರಿ. ಉದ್ಯೋಗದ ಸಲುವಾಗಿ ಆತ್ಮೀಯರೊಂದಿಗೆ ವಿದೇಶಕ್ಕೆ ತೆರಳುವಿರಿ. ಕೆಲಸ ಕಾರ್ಯಗಳಲ್ಲಿ ನಿಮಗೆ ಅರಿವಿಲ್ಲದಂತೆ ತಪ್ಪುಗಳು ನಡೆಯುತ್ತವೆ. ಸುಲಭವಾಗಿ ಬೇರೆಯವರಿಂದ ಮೋಸ ಹೋಗುವಿರಿ, ಎಚ್ಚರವಿರಲಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು

ವೃಷಭ

ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ನಿಮ್ಮ ಮನಸ್ಸನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾರಿರಿ. ದಂಪತಿಗಳು ಪಾಲುದಾರಿಕೆಯ ವ್ಯಾಪಾರವನ್ನು ಆರಂಭಿಸುತ್ತಾರೆ. ರಕ್ತ ಹೀನತೆಯ ತೊಂದರೆ ಇರುತ್ತದೆ. ಕಷ್ಟವೆನಿಸುವ ಕೆಲಸ ಕಾರ್ಯಗಳನ್ನು ಮಾಡುವುದಿಲ್ಲ. ಓಡಾಟದಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ಅಥವಾ ವ್ಯಾಪಾರದಲ್ಲಿ ಲಾಭವಿರುತ್ತದೆ. ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ಪ್ರಯತ್ನಿಸಿ. ಮಕ್ಕಳಿಂದ ಕೊಂಚ ನಿರಾಸೆಯಾಗಬಹುದು. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಅವಕೃಪೆಗೆ ಒಳಗಾಗುವಿರಿ. ಆದರೆ ಮಾತುಕತೆಯಿಂದ ಪರಿಸ್ಥಿತಿ ತಿಳಿಯಾಗುತ್ತದೆ. ಚಿಕ್ಕ ಮಕ್ಕಳ ಕಾಲಿಗೆ ಪೆಟ್ಟಾಗಬಹುದು ಎಚ್ಚರಿಕೆ ಇರಲಿ. ಅವಶ್ಯಕತೆ ಇದ್ದವರಿಗೆ ಅನ್ನದಾನ ಮಾಡುವಿರಿ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವಿರಿ. ಒಮ್ಮೆ ಆರಂಭಿಸಿದ ಕೆಲಸ ಕಾರ್ಯಗಳನ್ನು ಕಷ್ಟವಾದರೂ ಪೂರ್ಣಗೊಳಿಸುವಿರಿ. ನೆರೆ ಹೊರೆಯವರೊಂದಿಗೆ ಅನಾವಶ್ಯಕವಾದ ವಾದ ವಿವಾದಗಳು ಇರುತ್ತವೆ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಮಿಥುನ

ತೆಗೆದುಕೊಳ್ಳುವ ನಿರ್ಧಾರಗಳೆಲ್ಲ ಸರಿ ಎಂಬ ಭಾವನೆ ನಿಮ್ಮಲ್ಲಿ ಇರುತ್ತದೆ. ಹಟದ ಗುಣ ಇರುತ್ತದೆ. ಇದರಿಂದ ನಿತ್ಯ ಜೀವನದಲ್ಲಿ ಅಲ್ಪ ಪ್ರಮಾಣದ ಹಿನ್ನೆಡೆ ಲಭಿಸುತ್ತದೆ. ನಿಮ್ಮ ಕುಟುಂಬದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಗೌರವಯುತ ಸ್ಥಾನವನ್ನು ಪಡೆಯುತ್ತಾರೆ. ಬಹುದಿನದಿಂದ ನಡೆಯುತ್ತಿದ್ದ ಕಾನೂನು ಸಮರವೊಂದು ಮಾತುಕತೆಯಿಂದ ಅಂತ್ಯವಾಗುತ್ತದೆ. ಪಿತ್ತ ದೋಷ ನಿಮ್ಮನ್ನು ಕಾಡುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸುವಿರಿ. ಯಾವುದೇ ಕೆಲಸವನ್ನು ಸುಲಭವಾಗಿ ಮಾಡಬಲ್ಲಿರಿ. ಸಂತಾನ ಲಾಭವಿದೆ. ಕುಟುಂಬದ ಒಮ್ಮತದ ನಿರ್ಧಾರಕ್ಕೆ ವಿರೋಧಿಗಳು ತಲೆಬಾಗುತ್ತಾರೆ. ಹಳೆಯ ಚರ್ಮದ ದೋಷವು ಉತ್ತಮ ಚಿಕಿತ್ಸೆಯಿಂದ ಗುಣ ಹೊಂದಲಿದೆ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ..

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಇತರರಿಗೆ ಅಸಾಧ್ಯವೆನಿಸುವ ಕೆಲಸ ಕಾರ್ಯಗಳನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಮಾಜದಲ್ಲಿ ನಿಮಗೆ ವಿಶೇಷ ಸ್ಥಾನಮಾನ ದೊರೆಯುತ್ತದೆ. ನಿಮ್ಮ ವಾದದ ಮುಂದೆ ವಿರೋಧಿಗಳ ಆಟ ನಡೆಯುವುದಿಲ್ಲ. ಸಂತಾನ ಲಾಭವಿದೆ. ಸ್ವಂತ ವಾಹನಕೊಳ್ಳುವ ಸಾಧ್ಯತೆಗಳಿವೆ. ಜೀವನದಲ್ಲಿ ಶಾಂತಿ ನೆಮ್ಮದಿ ತುಂಬಿರುತ್ತದೆ. ಸ್ನಾಯುವಿನ ನೋವಿನಿಂದ ಬಳಲುವಿರಿ. ಮಕ್ಕಳನ್ನು ಪ್ರೀತಿ ಮಮತೆಯಿಂದ ನೋಡಿಕೊಳ್ಳುವಿರಿ. ಸೋದರನ ವಿಶೇಷ ಬುದ್ಧಿವಂತಿಕೆ ನಿಮಗೆ ಸಹಕಾರಿಯಾಗುತ್ತದೆ. ನರನಿಶ್ಯಕ್ತಿ ಇರುತ್ತದೆ. ಸಂಗಾತಿಗೆ ದೇಹದ ಗಾತ್ರವೇ ದೊಡ್ಡ ಸವಾಲಾಗುತ್ತದೆ. ಕೆಲವೊಮ್ಮೆ ಸಂಗಾತಿಯೊಂದಿಗೆ ಅನಾವಶ್ಯಕವಾಗಿ ವಾದದಲ್ಲಿ ತೊಡಗುವಿರಿ. ವಿದೇಶಕ್ಕೆ ತೆರಳುವ ಯೋಗ ದೊರೆಯುತ್ತದೆ.

ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :7

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.