Horoscope Today: ವಾಹನಗಳ ಬಗ್ಗೆ ಆಸಕ್ತಿ ಕಡಿಮೆ, ಕುಟುಂಬದಲ್ಲಿನ ಬದಲಾವಣೆ ನೆಮ್ಮದಿ ನೀಡುತ್ತೆ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
12 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12th May 2024 Daily Horoscope).

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th May 2024 Horoscope)
ಇಂದಿನ ಪಂಚಾಂಗ
ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಭಾನುವಾರ
ತಿಥಿ: ಪಂಚಮಿ ರಾ. 04.11 ರವರೆಗು ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.
ನಕ್ಷತ್ರ: ಆರ್ದ್ರೆ ನಕ್ಷತ್ರವು ಮಧ್ಯಾಹ್ನ 12.038 ರವರೆಗೆ ಇರುತ್ತದೆ. ಆನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.05.55
ಸೂರ್ಯಾಸ್ತ: ಸ.06.36
ರಾಹುಕಾಲ: ಸ. 05.04 ರಿಂದ ಸ. 06.39
ಮೇಷ ರಾಶಿ
ಕುಟುಂಬದ ಒಟ್ಟು ಆದಾಯದಲ್ಲಿ ಪ್ರಗತಿ ಕಂಡುಬರುತ್ತದೆ. ಶುಭ್ರವಾದ ಮನಸ್ಸಿನಿಂದ ಜನರ ವಿಶ್ವಾಸ ಗೆಲ್ಲುವಿರಿ. ಹಣವನ್ನು ಉಳಿಸುವ ಯೋಜನೆಗೆ ಚಾಲನೆ ದೊರೆಯುತ್ತದೆ . ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಿರಿ. ವಾಹನಗಳ ಬಗ್ಗೆ ಆಸಕ್ತಿ ಕಡಿಮೆ. ಸಂತಾನಲಾಭವಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕಂತಹ ಫಲ ದೊರೆಯಲಿದೆ. ವಿವಾಹ ಕಾರ್ಯದಲ್ಲಿ ಅನಾವಶ್ಯಕ ಮನಸ್ತಾಪ ಇರುತ್ತದೆ. ಉದ್ಯೋಗದಲ್ಲಿ ಎಲ್ಲರ ಜೊತೆಯಲ್ಲಿ ಸ್ನೇಹ ಪ್ರೀತಿಯಿಂದ ವರ್ತಿಸುವಿರಿ. ಅನುಚಿತ ಮಾತುಕತೆಯಿಂದ ಬೇಸರದ ಸನ್ನಿವೇಶ ಎದುರಾಗಲಿದೆ. ಅತಿಯಾದ ಆತ್ಮವಿಶ್ವಾಸದಿಂದ ತಪ್ಪುನಿರ್ಧಾಗಳನ್ನು ತೆಗೆದುಕೊಳ್ಳುವಿರಿ. ವಂಶಸ್ಥರ ಹಿರಿಯರ ಆಸ್ತಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ.
ಪರಿಹಾರ: ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ
ವೃಷಭ ರಾಶಿ
ನೀವು ಸಮಯೋಚಿತ ಮಾತುಕತೆಯಿಂದ ವಿರೋಧಿಗಳ ಮನಸ್ಸನ್ನು ಗೆಲ್ಲುವಿರಿ. ಯಾರ ಮಾತನ್ನೂ ಕೇಳದೆ ಮನದ ಮಾತಿಗೆ ಬೆಲೆ ನೀಡುವಿರಿ. ಕುಟುಂಬದಲ್ಲಿನ ವಾದ ವಿವಾದಗಳಿಗೆ ಕಡಿವಾಣ ಹಾಕುವಿರಿ. ಖರ್ಚುವೆಚ್ಚಗಳನ್ನು ಸರಿದೂಗಿಸುವಷ್ಟು ಆದಾಯ ಇರುತ್ತದೆ. ಕುಟುಂಬದಲ್ಲಿ ಆಶಾದಾಯಕ ಬದಲಾವಣೆಗಳು ನೆಮ್ಮದಿಯನ್ನು ನೀಡುತ್ತದೆ. ಉದ್ಯೋಗದಲ್ಲಿ ಆನುಕೂಲಕರ ಬದಲಾವಣೆಗಳು ಉಂಟಾಗುತ್ತದೆ. ವ್ಯಾಪಾರ ವ್ಯವಹಾರಗಳ ಆದಾಯದಲ್ಲಿ ಹೆಚ್ಚಳ ಉಂಟಾಗುತ್ತದೆ. ವಿದ್ಯಾರ್ಥಿಗಳು ದ್ವಂದ್ವ ಮನಸ್ಸಿನ ಕಾರಣ ಮನದಲ್ಲಿ ಆತಂಕ ಇರುತ್ತದೆ. ಮನದ ಬೇಸರದಿಂದ ಏಕಾಂಗಿತನವನ್ನು ಬಯಸುವಿರಿ. ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ.
ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಮಿಥುನ ರಾಶಿ
ಯಾತ್ರಾಸ್ಥಳಕ್ಕೆ ಕುಟುಂಬದವರೊಡನೆ ಸಂಚಾರವಿರುತ್ತದೆ. ಹೆಚ್ಚಿನ ವರಮಾನವನ್ನು ಗುರಿಯಾಗಿಸುವ ಕಾರಣ ಉದ್ಯೋಗವನ್ನು ಬದಲಾಯಿಸುವಿರಿ. ಕುಟುಂಬದ ಹಿರಿಯರಿಗೆ ರಕ್ತಸಂಬಂದಿಕರಿಂದ ತೊಂದರೆ ಉಂಟಾಗುತ್ತದೆ. ಯಂತ್ರದಿಂದ ತೊಂದರೆ ಆಗಲಿದೆ ಎಚ್ಚರಿಕೆ ಇರಲಿ. ವೃತ್ತಿಕ್ಷೇತ್ರದಲ್ಲಿ ವಿಶೇಷ ಸ್ಥಾನ ಮಾನ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ನಷ್ಟ ಸಮ ಪ್ರಮಾಣದಲ್ಲಿ ಇರುತ್ತದೆ. ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನ ಲಭಿಸುತ್ತದೆ. ಮನದ ಇಚ್ಚೆಯಂತೆ ಮನೆ ಕಟ್ಟಿಸಲು ಹೆಚ್ಚಿನ ಹಣ ಬೇಕಾಗುತ್ತದೆ. ಪ್ರಾಚಿನ ಕಾಲದ ಮಾದರಿ ಜೀವನದ ಬಗ್ಗೆ ಅಧ್ಯಯನ ಮಾಡುವಿರಿ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ತೋರುವಿರಿ. ಚಿನ್ನ ಬೆಳ್ಳಿಯ ವಸ್ತುಗಳಿಗೆ ಹೆಚ್ಚಿನ ಹಣ ವೆಚ್ಚವಾಗುತ್ತದೆ.
ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ಕಟಕ ರಾಶಿ
ಆತುರದ ನಿರ್ಧಾರದಿಂದ ಕುಟುಂಬದ ವಿವಾದವೊಂದು ದೂರವಾಗುವುದು. ಗಣ್ಯವ್ಯಕ್ತಿಗಳ ಸಹಾಯದಿಂದ ಧಾರ್ಮಿಕ ಸಂಸ್ಥೆಯೊಂದರಲ್ಲಿ ಉದ್ಯೋಗ ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ಸೋದರರ ನಡುವೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಭೂ ಅಭಿವೃದ್ಧಿ ಕೆಲಸ ಕಾರ್ಯದಲ್ಲಿ ತಂದೆಯವರಿಗೆ ಸಹಾಯ ಮಾಡುವಿರಿ. ಮನಸ್ಸಿಗಾದ ಬೇಸರದಿಂದ ವೈರಾಗ್ಯದ ಭಾವನೆ ಉಂಟಾಗುತ್ತದೆ. ತೋಟಗಾರಿಕೆಯಲ್ಲಿ ಆಸಕ್ತಿ ಉಂಟಾಗಲಿದೆ. ಆತ್ಮೀಯರ ಹಣದ ಕೊರತೆ ನೀಗಿಸಲು ಪ್ರಯತ್ನಿಸುವಿರಿ. ತಾಯಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಖರ್ಚಿನ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ಮಕ್ಕಳ ವಿಚಾರದಲ್ಲಿ ಶುಭಫಲಗಳು ದೊರೆಯುತ್ತವೆ.
ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).