Horoscope Today: ಕುಟುಂಬದ ಹಣಕಾಸಿನ ಸಮಸ್ಯೆ ದೊರವಾಗಲಿದೆ, ಉದ್ಯೋಗದ ಒತ್ತಡ ಕಡಿಮೆಯಾಗುತ್ತೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬದ ಹಣಕಾಸಿನ ಸಮಸ್ಯೆ ದೊರವಾಗಲಿದೆ, ಉದ್ಯೋಗದ ಒತ್ತಡ ಕಡಿಮೆಯಾಗುತ್ತೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

Horoscope Today: ಕುಟುಂಬದ ಹಣಕಾಸಿನ ಸಮಸ್ಯೆ ದೊರವಾಗಲಿದೆ, ಉದ್ಯೋಗದ ಒತ್ತಡ ಕಡಿಮೆಯಾಗುತ್ತೆ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ

12 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (12th May 2024 Daily Horoscope).

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ದಿನ ಭವಿಷ್ಯ ತಿಳಿಯಿರಿ.
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ದಿನ ಭವಿಷ್ಯ ತಿಳಿಯಿರಿ.

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (12th May 2024 Horoscope)

ಇಂದಿನ ಪಂಚಾಂಗ

ಶ್ರೀಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ: ಪಂಚಮಿ ರಾ. 04.11 ರವರೆಗು ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ: ಆರ್ದ್ರೆ ನಕ್ಷತ್ರವು ಮಧ್ಯಾಹ್ನ 12.038 ರವರೆಗೆ ಇರುತ್ತದೆ. ಆನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.05.55

ಸೂರ್ಯಾಸ್ತ: ಸ.06.36

ರಾಹುಕಾಲ: ಸ. 05.04 ರಿಂದ ಸ. 06.39

ಧನಸ್ಸು ರಾಶಿ

ಕುಟುಂಬದಲ್ಲಿ ಒಮ್ಮತದಗುಣ ವೈಭವಯುತ ಜೀವನಕ್ಕೆ ನಾಂದಿಯಾಗುತ್ತದೆ. ತಾಯಿಗೆ ತವರುಮನೆಯಿಂದ ಹಣದ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಸುಲಭವಾಗಿ ಯಶಸ್ಸನ್ನು ಕಾಣುತ್ತಾರೆ. ನಿಮ್ಮ ಪ್ರಯತ್ನದಿಂದಾಗಿ ಕುಟುಂಬದ ಹಣಕಾಸಿನ ತೊಂದರೆ ದೂರವಾಗಲಿದೆ. ತಂದೆಯವರ ಆರೋಗ್ಯದಲ್ಲಿ ತೊಂದರೆ ಇದ್ದರೂ ಅದರಿಂದ ಪಾರಾಗುತ್ತಾರೆ. ಹೊಸ ವಾಹನ ಕೊಳ್ಳುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭವಿದೆ. ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸುತ್ತಾರೆ. ಕಮಿಷನ್ ಆಧಾರಿತ ಉಪವೃತ್ತಿಯೊಂದನ್ನು ಆರಂಭಿಸುವಿರಿ. ಬೇರೆಯವರ ಹಣಕಾಸಿನ ವ್ಯವಹಾರದಿಂದ ತೊಂದರೆ ಅನುಭವಿಸುವಿರಿ. ಆತ್ಮೀಯರ ಆಗಮನ ಸಂತಸ ನೀಡಲಿದೆ.

ಪರಿಹಾರ: ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಮಕರ ರಾಶಿ

ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ದೃಢ ಮನಸ್ಸಿನಿಂದ ಎದುರಿಸುವಿರಿ. ಕುಟುಂಬದ ಕೆಲಸ ಕಾರ್ಯಗಳಲ್ಲಿ ಎಲ್ಲರ ಸಹಕಾರ ದೊರೆಯುತ್ತದೆ. ಸೋದರರೊಬ್ಬರು ಆತುರದಿಂದ ಉದ್ಯೋಗವನ್ನು ಬದಲಾಯಿಸಿ ತೊಂದರೆಗೆ ಒಳಗಾಗುತ್ತಾರೆ. ತಾಯಿಯವರಿಂದ ಒಡವೆಗಳು ಬಳುವಳಿಯಾಗಿ ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮ ಅವಶ್ಯಕತೆ ಹೆಚ್ಚಾಗುವ ಕಾರಣ ವೇತನವೂ ಹೆಚ್ಚುತ್ತದೆ. ವಿದ್ಯಾರ್ಥಿಗಳಿಗೆ ರುಚಿಕರ ಆಹಾರ ಮತ್ತು ನಿದ್ದೆಯ ಮೇಲೆ ವ್ಯಾಮೋಹ ಹೆಚ್ಚಾಗುತ್ತದೆ. ಭೂ ವ್ಯವಹಾರದಲ್ಲಿ ಲಾಭವಿದೆ. ಮಕ್ಕಳ ಜವಾಬ್ದಾರಿಯು ಹೆಚ್ಚುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 12

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಕುಂಭ ರಾಶಿ

ದುಡುಕಿನ ಮಾತಿನಿಂದ ದೂರವಿದ್ದು ಶಾಂತಿ ಸಂಯಮದಿಂದ ಕೆಲಸವನ್ನು ಸಾಧಿಸುವಿರಿ. ಮನದ ವಿಚಾರವನ್ನು ಯಾರಿಗು ತಿಳಿಸದ ಕಾರಣ ತೊಂದರೆ ಇರುವುದಿಲ್ಲ. ನಿಮ್ಮ ಮನಸ್ಸಿನ ಆಸೆ ಆಕಾಂಕ್ಷೆಗಳು ಈಡೇರಲಿವೆ. ಹಣ ಉಳಿಸುವ ಸಲುವಾಗಿ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಉದ್ಯೋಗದಲ್ಲಿ ಇದ್ದ ಒತ್ತಡವು ಮರೆಯಾಗುತ್ತದೆ. ಗೆಲುವಿನ ಕಾರಣ ವಿದ್ಯಾರ್ಥಿಗಳು ನೆಮ್ಮದಿಯಿಂದ ಇರುತ್ತಾರೆ. ಯಾರ ಸಹಾಯವನ್ನೂ ನಿರೀಕ್ಷಿಸದೆ ಸ್ವತಂತ್ರವಾಗಿ ಮುಂದುವರೆಯುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಗಾಳಿ ವರ್ತಮಾನವನ್ನು ನಂಬದಿರಿ. ಜಗಳ ಕದನ ಮಾಡದೇ ಶಾಂತಿಯಿಂದ ಕೆಲಸ ಸಾಧಿಸುವಿರಿ. ದೂರದ ಸಂಬಂಧಿಕರೊಂದಿಗೆ ಭೂವಿವಾದವೊಂದು ಎದುರಾಗಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮೀನ ರಾಶಿ

ಬಹುದಿನದಿಂದ ಇದ್ದ ಮನದಾಸೆಯೊಂದು ಈಡೇರಲಿದೆ. ಹಣಕಾಸಿನ ವಿವಾದದಿಂದ ದೂರ ಉಳಿಯುವಿರಿ. ಮುಂಗೋಪ ಬಿಟ್ಟು ಸ್ನೇಹ ಪ್ರೀತಿಯಿಂದ ವ್ಯವಹರಿಸಿ ಗೆಲುವು ಸಾಧಿಸುವಿರಿ. ಹಣಕಾಸಿನ ವ್ಯವಹಾರದ ಸಂಸ್ಥೆಯನ್ನು ಆರಂಭಿಸುವ ಯೋಚನೆ ಮಾಡುವಿರಿ. ಬಂಧು ಬಳಗದವರು ಅನಾವಶ್ಯಕವಾಗಿ ನಿಮ್ಮ ಬಗ್ಗೆ ಸುದ್ಧಿ ಹರಡುತ್ತಾರೆ. ಗಾಯನ ಕ್ಷೇತ್ರದಲ್ಲಿ ಇದ್ದಲ್ಲಿ ಉತ್ತಮ ಅವಕಾಶ ಪಡೆಯುವಿರಿ. ಆಧುನಿಕತೆ ಒಗ್ಗಿಕೊಂಡು ನಡೆಯ ಬೇಕಾಗುತ್ತದೆ. ಜನರಿಂದ ಉನ್ನತ ಗೌರವ ದೊರೆಯುತ್ತದೆ. ಅನಿವಾರ್ಯತೆ ಇರುವವರಿಗೆ ಹಣದ ಸಹಾಯ ಮಾಡುವಿರಿ. ಸಾಲದ ವ್ಯವಹಾರದಿಂದ ತೊಂದರೆ ಇರುತ್ತದೆ.

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.