ಮನದ ಆಸೆಗಳು ಈಡೇರುವ ಸಮಯ, ಮತ್ತೊಬ್ಬರಿಗೆ ಸಾಧ್ಯವಾಗದ ಕೆಲಸವನ್ನು ನೀವು ಸಾಧಿಸಿ ತೋರಿಸುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಜುಲೈ 13ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(13th July 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಶನಿವಾರ
ತಿಥಿ : ಸಪ್ತಮಿ 12.01 ರವರೆಗೂ ಇದ್ದು ನಂತರ ಅಷ್ಠಮಿ ಆರಂಭವಾಗುತ್ತದೆ.
ನಕ್ಷತ್ರ : ಹಸ್ತ ನಕ್ಷತ್ರವು ಸಂಜೆ 05.14 ರವರೆಗು ಇದ್ದು ನಂತರ ಚಿತ್ತೆ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.00
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: ಬೆಳಗ್ಗೆ 09.16 ರಿಂದ 10.52
ರಾಶಿಫಲ
ಧನಸ್ಸು
ಜೀವನದಲ್ಲಿ ಹೊಸ ರೀತಿಯ ಬದಲಾವಣೆಗಳು ಮುದ ನೀಡಲಿವೆ. ನಿಮ್ಮ ಮನದ ಆಸೆಗಳು ಈಡೇರುತ್ತವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ವಿದೇಶಿ ಸಂಸ್ಥೆಯ ಪ್ರಾದೇಶಿಕ ಕಛೇರಿಯ ಆಡಳಿತ ನಿಮ್ಮದಾಗುತ್ತದೆ. ಸ್ವಂತ ಕೆಲಸ ಕಾರ್ಯಗಳಿಗಾಗಿ ಹಿರಿಯರಿಂದ ಹಣಕಾಸಿನ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಚಂಚಲವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ತಾಯಿಯವರ ಆರೋಗ್ಯದಲ್ಲಿ ತೊಂದರೆ ಇರಲಿದೆ. ಮಕ್ಕಳು ವಯಸ್ಸಿಗೆ ಮೀರಿದ ಪ್ರತಿಭೆಯನ್ನು ತೋರಿಸುತ್ತಾರೆ. ಕಲಾವಿದರ ಕಷ್ಟದ ದಿನಗಳು ದೂರವಾಗಲಿವೆ. ಆಪತ್ತಿನಲ್ಲಿರುವ ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಕೆಲಸದ ನಡುವೆ ಆರೋಗ್ಯದ ಬಗ್ಗೆ ಗಮನವಿರಲಿ.
ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಬೂದು ಬಣ್ಣ
ಮಕರ
ಕಷ್ಟಪಟ್ಟು ಕೆಲಸ ಮಾಡುವ ನಿಮಗೆ ಎಲ್ಲರ ಮೆಚ್ಚುಗೆ ದೊರೆಯುತ್ತದೆ. ಯಾವುದೇ ಆಳುಕಿಲ್ಲದೆ ಸೋಲನ್ನು ಒಪ್ಪಿಕೊಳ್ಳುವಿರಿ. ಬೇರೆಯವರಿಗೆ ಅಸಾಧ್ಯ ಎನಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಕೆಲಸದಲ್ಲಿ ತೊಂದರೆ ಉಂಟುಮಾಡಲಿದೆ. ಶಾಂತಿ ಸಹನೆಯ ಚೌಕಟ್ಟಿನಲ್ಲಿ ಕುಟುಂಬದ ವಿವಾದಗಳಿಗೆ ಪರಿಹಾರ ಕಂಡುಹಿಡಿಯುವಿರಿ. ಮಕ್ಕಳ ದುಡಿಕಿನಿಂದ ನೆರೆಹೊರೆಯವರಲ್ಲಿ ವಾಗ್ವಾದ ಉಂಟಾಗುವುದು. ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆ ಇರುವುದಿಲ್ಲ. ಸಂಗಾತಿಯ ಜೊತೆ ಕಿರು ಪ್ರವಾಸ ಕೈಗೊಳ್ಳುವಿರಿ. ಸಾರ್ವಜನಿಕ ಸಂಸ್ಥೆಗೆ ಹಣದ ಸಹಾಯವನ್ನು ಮಾಡುವಿರಿ. ಹಸಿದವರಿಗೆ ಆಹಾರ ನೀಡುವಲ್ಲಿ ಸಂತಸ ಪಡುವಿರಿ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಂದು
ಕುಂಭ
ಅರೆಮನಸ್ಸಿನಿಂದ ಅವಶ್ಯಕವಿರುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ನಿಮ್ಮ ಹಟದ ಗುಣಕ್ಕೆ ಬೇಸತ್ತು ಕುಟುಂಬದ ಸದಸ್ಯರು ಮೌನ ವಹಿಸುತ್ತಾರೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಉಂಟಾಗದು. ಹೆಚ್ಚಿನ ನಿರೀಕ್ಷೆಯ ಕಾರಣ ಉದ್ಯೋಗವ ಬದಲಿಸುವಿರಿ. ಮಾಡದ ತಪ್ಪನ್ನು ಒಪ್ಪಬೇಕಾದ ಪ್ರಮೇಯ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರಾಸಕ್ತಿ ತೋರುತ್ತಾರೆ. ವ್ಯಾಪಾರ ವ್ಯವಹಾರದ ಆದಾಯದ ಬಗ್ಗೆ ಹೆಚ್ಚಿನ ಒಲವು ತೋರುವುದಿಲ್ಲ. ಅನಾವಶ್ಯಕ ಖರ್ಚು ವೆಚ್ಚದಿಂದ ಬೇಸರಗೊಳ್ಳುವಿರಿ. ಸಂಗಾತಿಯ ಸಹಕಾರದಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಅರೆ ತಲೆನೋವಿನ ತೊಂದರೆ ಇರುತ್ತದೆ. ಮಕ್ಕಳಿಗೆ ವಾಹನವನ್ನು ಉಡುಗೊರೆಯಾಗಿ ನೀಡುವಿರಿ
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಮೀನ
ಎಲ್ಲವೂ ಸದಾ ಒಳಿತನ್ನೇ ಬಯಸುವಿರಿ. ಹೊಸ ನಿರೀಕ್ಷೆಯೊಂದಿಗೆ ಉದ್ಯೋಗ ಬದಲಿಸುವಿರಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂಥ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡಿಕೊಳ್ಳುವಿರಿ. ಪ್ರತಿಯೊಂದು ವಿಚಾರದಲ್ಲಿಯೂ ಯಶಸ್ಸನ್ನು ಗಳಿಸುವಿರಿ. ಸಹನೆ ಕಳೆದುಕೊಂಡು ಕೆಲಸ ಕಾರ್ಯಗಳನ್ನು ಮುಂದೂಡುವಿರಿ. ಆತ್ಮೀಯರ ಸಹಾಯ ಸಹಕಾರ ಇರುತ್ತದೆ. ಕುಟುಂಬದಲ್ಲಿ ನೀರಸ ವಾತಾವರಣವಿರುತ್ತದೆ. ಸ್ವಂತ ಬುದ್ಧಿವಂತಿಕೆಯಿಂದ ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುವಿರಿ. ವಿದ್ಯಾರ್ಥಿಗಳು ಮಾತಿನಲ್ಲೇ ಬಹುತೇಕ ಸಮಯವನ್ನು ಕಳೆಯುತ್ತಾರೆ. ವ್ಯಾಪಾರ ವ್ಯವಹಾರವನ್ನು ಆರಂಭಿಸಲು ಮನಸ್ಸಿರದು. ದುರಾಸೆಯಿಂದ ವರ್ತಿಸುವುವಿಲ್ಲ. ನಡೆಯಲು ಅಶಕ್ತರಾದವರಿಗೆ ಸಹಾಯ ಮಾಡುವಿರಿ.
ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ತಿಳಿ ಹಸಿರು ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ