Horoscope Today: ನಿಮ್ಮ ಕೆಲಸ ಕಾರ್ಯಗಳಿಗೆ ಬಾಳ ಸಂಗಾತಿಯಿಂದ ಆಕ್ಷೇಪ, ಪರಿಸ್ಥಿತಿಯನ್ನು ತಾಳ್ಮೆಯಿಂದ ನಿಭಾಯಿಸಿ;ಮಾರ್ಚ್ 13ರ ದಿನಭವಿಷ್ಯ
13 ಮಾರ್ಚ್ 2024, ಬುಧವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th March 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಬುಧವಾರ
ತಿಥಿ: ತದಿಗೆ ಬೆಳಗ್ಗೆ 08.25 ವರೆಗೂ ಇರುತ್ತದೆ ನಂತರ ಉಪರಿ ಚೌತಿ ಇರುತ್ತದೆ.
ನಕ್ಷತ್ರ: ಅಶ್ವಿನಿ ನಕ್ಷತ್ರವು ರಾ.11.06 ರವರೆಗೆ ಇರುತ್ತದೆ ಆನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ06.29
ಸೂರ್ಯಾಸ್ತ: ಸಂಜೆ 06.29
ರಾಹುಕಾಲ: ಮಧ್ಯಾಹ್ನ 12.00 ರಿಂದ 01.30
ಮೇಷ
ಮನದ ಆತಂಕ ಮರೆಯಾಗಿ ಉತ್ತಮ ಆರೋಗ್ಯ ದೊರೆಯಲಿದೆ. ಸ್ವಂತ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಕುಟುಂಬದ ವಾತಾವರಣ ಎಲ್ಲರಿಗೂ ಸ್ಪೂರ್ತಿದಾಯಕವಾಗಿರುತ್ತದೆ. ಸಂಪಾದಿಸಿದ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಬಹು ಹಿಂದಿನ ದಿನದ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಿರಿ. ಉದ್ಯೋಗದಲ್ಲಿ ನಿರೀಕ್ಷಿಸಿದ ಅನುಕೂಲತೆಗಳು ದೊರೆಯಲಿವೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಬುದ್ದಿವಂತಿಕೆಯಿಂದ ವ್ಯವಹರಿಸಿ. ಹೊಗಳುಮಾತಿಗೆ ಮರುಳಾಗದಿರಿ. ಕುಟುಂಬದ ಸದಸ್ಯರ ಜೊತೆ ಸಂತಸದಿಂದ ಸಮಯ ಕಳೆಯುವಿರಿ. ದಾಂಪತ್ಯದಲ್ಲಿ ಪರಸ್ಪರ ಅನ್ಯೋನ್ಯತೆ ಮತ್ತು ನಂಬಿಕೆ ಇರುತ್ತದೆ.
ಪರಿಹಾರ : ಕಪ್ಪುಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಉತ್ತರ
ಬಣ್ಣ: ಕಿತ್ತಳೆ
ವೃಷಭ
ನಿಮ್ಮ ಆಕರ್ಷಕ ಮಾತು ಎಲ್ಲರ ಗಮನ ಸೆಳೆಯುತ್ತದೆ. ಎಲ್ಲರ ಸಹಾಯವು ನಿಮಗಿರುವ ಕಾರಣ ಕುಟುಂಬದಲ್ಲೂ ನೆಮ್ಮದಿ ಇರುತ್ತದೆ. ಸಮಯ ಪ್ರಜ್ಞೆ ಮತ್ತು ಹಾಸ್ಯದ ಮನೋಭಾವ ಉತ್ತಮ ಬಾಂಧವ್ಯಕ್ಕೆ ಕಾರಣವಾಗುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ಉದ್ಯೋಗದಲ್ಲಿ ಪ್ರತಿ ವಿಚಾರವನ್ನು ಹಾಸ್ಯದ ದೃಷ್ಟಿಕೋನದಿಂದ ನೋಡಬೇಡಿ. ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ಹೊಸ ಉದ್ಯೋಗಕ್ಕಾಗಿ ಆತ್ಮೀಯರ ಸಹಾಯ ಬಯಸುವಿರಿ. ಆರಂಭಿಸಿದ ಕೆಲಸ ಕಾರ್ಯಗಳನ್ನು ಪರಿಪೂರ್ಣಗೊಳಿಸಿ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಸಂಗಾತಿಯ ಸಹಾಯ ಸಹಕಾರದಿಂದ ನೆರವೇರಲಿದೆ. ಯಾವುದೇ ಕೆಲಸವನ್ನು ಅನಾವಶ್ಯಕವಾಗಿ ಮುಂದೂಡಬೇಡಿ.
ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಹಳದಿ
ಮಿಥುನ
ಬಿಡುವಿಲ್ಲದ ಕೆಲಸ ಕಾರ್ಯಗಳ ನಡುವೆ ಸಂತೋಷಕೂಟಗಳಲ್ಲಿ ಭಾಗವಹಿಸುವಿರಿ. ಒಂದೇ ರೀತಿಯ ಜೀವನವನ್ನು ಇಷ್ಟಪಡದೆ ಸ್ನೇಹದಿಂದ ಬಾಳುವಿರಿ. ಮನೆಯ ಸೌಂದರ್ಯವನ್ನು ಹೆಚ್ಚಿಸಲು ಹೆಚ್ಚಿನ ಹಣ ಖರ್ಚು ಮಾಡುವಿರಿ. ಆತ್ಮೀಯರು ನಿಮ್ಮೊಂದಿಗೆ ಸಮಯ ಕಳೆಯಲು ಬಯಸುತ್ತಾರೆ. ನಿಮ್ಮ ಕೆಲಸ ಕಾರ್ಯಗಳಿಗೆ ಬಾಳ ಸಂಗಾತಿಯಿಂದ ಆಕ್ಷೇಪ ವ್ಯಕ್ತವಾಗಬಹುದು. ಸುಲಭವಾಗಿ ಯಾವುದೇ ಕೆಲಸವನ್ನು ಮಾಡಲಾರಿರಿ. ಉದ್ಯೋಗದಲ್ಲಿ ಉಂಟಾಗುವ ಅನಿರೀಕ್ಷಿತ ತಿರುವವುಗಳು ನಿಮ್ಮ ಪರವಾಗಿರುತ್ತದೆ. ನಿಮ್ಮಲ್ಲಿರುವ ವಿಶೇಷ ಪ್ರತಿಭೆಯು ಸಮಾಜದಲ್ಲಿ ವಿಶಿಷ್ಟ ಸ್ಥಾನ ತಂದು ನೀಡುತ್ತದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ಹೊಸ ಯೋಜನೆಯನ್ನು ರೂಪಿಸುತ್ತಾರೆ. ಆಪತ್ಕಾಲದಲ್ಲಿ ಇದ್ದವರಿಗೆ ಹಣ ಸಹಾಯ ಮಾಡುವಿರಿ.
ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಸಿರು
ಕಟಕ
ಕಷ್ಟಪಟ್ಟು ದುಡಿದ ಹಣವನ್ನು ಕುಟುಂಬದ ಸದಸ್ಯರ ಮನರಂಜನೆಗಾಗಿ ಖರ್ಚು ಮಾಡುವಿರಿ. ಕುಟುಂಬದಲ್ಲಿ ಸಂತೋಷದ ಸನ್ನಿವೇಶವು ಎದುರಾಗುತ್ತದೆ. ಅನಾವಶ್ಯಕ ಚರ್ಚು ವೆಚ್ಚಗಳನ್ನು ಕಡಿತಗೊಳಿಸುವಿರಿ. ಕುಟುಂಬದಲ್ಲಿರುತ್ತದೆ ಒಮ್ಮತವಿರುತ್ತದೆ. ಪ್ರತಿಯೊಂದು ಖರ್ಚುವೆಚ್ಚಗಳನ್ನು ಎಲ್ಲರೂ ಹಂಚಿಕೊಳ್ಳುವ ಕಾರಣ ಹಣದ ಕೊರತೆ ಕಾಣುವುದಿಲ್ಲ. ಕೇವಲ ಕುಟುಂಬವಲ್ಲದೆ ಉದ್ಯೋಗದ ನಿರ್ವಹಣೆಯ ಜವಾಬ್ದಾರಿಯನ್ನು ಒಪ್ಪಿಕೊಳ್ಳುವಿರಿ. ಬೇರೆಯವರ ಕೆಲಸ ಕಾರ್ಯಗಳನ್ನು ಅನಾವಶ್ಯಕವಾಗಿ ಟೀಕಿಸುವಿರಿ. ಸ್ನೇಹ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ದಂಪತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ. ಶಿಕ್ಷಣಕ್ಕೆ ಸಂಬಂಧಿಸಿದ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಲಾಭವಿದೆ. ದಿನನಿತ್ಯ ಬಳಸುವ ಪದಾರ್ಥಗಳ ದುರಸ್ಥಿಗೆ ಹಣ ಒದಗಿಸಬೇಕಾಗುತ್ತದೆ.
ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
