Horoscope Today: ಸ್ಟಾಕ್‌, ಷೇರು ವ್ಯವಹಾರದಲ್ಲಿ ಲಾಭ, ಒಡಹುಟ್ಟಿದವರೊಂದಿಗೆ ಹಣದ ವಿಚಾರಕ್ಕೆ ಮನಸ್ತಾಪ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸ್ಟಾಕ್‌, ಷೇರು ವ್ಯವಹಾರದಲ್ಲಿ ಲಾಭ, ಒಡಹುಟ್ಟಿದವರೊಂದಿಗೆ ಹಣದ ವಿಚಾರಕ್ಕೆ ಮನಸ್ತಾಪ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಸ್ಟಾಕ್‌, ಷೇರು ವ್ಯವಹಾರದಲ್ಲಿ ಲಾಭ, ಒಡಹುಟ್ಟಿದವರೊಂದಿಗೆ ಹಣದ ವಿಚಾರಕ್ಕೆ ಮನಸ್ತಾಪ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

13 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th May 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ಷಷ್ಠಿ ರಾತ್ರಿ 04.40 ರವರೆಗು ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು 01.29 ರವರೆಗು ಇರುತ್ತದೆ. ಆನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.36

ರಾಹುಕಾಲ: ಬೆಳಗ್ಗೆ 07.35 ರಿಂದ 09.10

ರಾಶಿಫಲ

ಮೇಷ

ಹೊಸ ರೀತಿಯ ಕೆಲಸ ಕಾರ್ಯಗಳನ್ನು ನಿರೀಕ್ಷಿಸುವಿರಿ. ಬೇರೆಯವರ ಮೇಲೆ ಅವಲಂಬಿತವಾಗದೆ ನಿಮಗೆ ನೀವೇ ಮಾದರಿಯಾಗುವಿರಿ ಎಲ್ಲರಲ್ಲಿಯೂ ವಿಶ್ವಾಸ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುವಿರಿ. ದಿನ ನಿತ್ಯದ ಜೀವನದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ ಹಿಂದಿನ ವಾದ ವಿವಾದಗಳನ್ನು ಮರೆತು ನೆಮ್ಮದಿಯಿಂದ ಬಾಳುವಿರಿ. ಹಣಕಾಸಿನ ಸ್ಥಿತಿಗತಿಯಲ್ಲಿ ಉತ್ತಮ ಪ್ರಗತಿ ಕಂಡು ಬರುತ್ತದೆ ಆತ್ಮೀಯರಿಂದ ಉಡುಗೊರೆಯೊಂದು ದೊರೆಯಲಿದೆ. ಕುಟುಂಬದವರ ಸಹಕಾರದಿಂದ ಹೊಸ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ದಂಪತಿಗಳ ನಡುವೆ ಅನಾವಶ್ಯಕವಾದ ವಿವಾದಗಳು ಎದುರಾಗಲಿವೆ. ವಿದ್ಯಾರ್ಥಿಗಳು ಸುಲಭವಾಗಿ ನಿರೀಕ್ಷಿದ ಮಟ್ಟವನ್ನು ತಲುಪಲಿದ್ದಾರೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ

ವೃಷಭ

ತೆಗೆದುಕೊಂಡ ನಿರ್ಣಯಗಳನ್ನು ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ. ಹಟದ ಗುಣದಿಂದ ಕುಟುಂಬದಲ್ಲಿ ಬೇಸರವಿರುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ತೋರುವಿರಿ. ವಿಶ್ವಾಸದ ಮಾತುಗಳಿಂದ ಸಂತೋಷದ ಭಾವನೆ ಉಂಟು ಮಾಡುವಿರಿ. ಆತುರ ತೋರದ ಕಾರಣ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ನಿಮ್ಮ ಪ್ರತಿಭೆ ಮತ್ತು ಕೌಶಲ್ಯಕ್ಕೆ ತಕ್ಕಂತಹ ಅವಕಾಶಗಳು ದೊರೆಯಲಿವೆ. ಉತ್ತಮ ಆದಾಯವಿದ್ದರೂ ಭವಿಷ್ಯದ ಜೀವನಕ್ಕಾಗಿ ಹಣ ಉಳಿತಾಯ ಮಾಡುವಿರಿ. ಅವಿರತ ದುಡಿಮೆಯ ನಡುವೆಯೂ ವಿಶ್ರಾಂತಿ ತೆಗೆದುಕೊಳ್ಳಲು ಮರೆಯದಿರಿ. ನಿಮ್ಮ ಪ್ರೀತಿ ವಿಶ್ವಾಸದ ನಡಿಗೆ ಬೇರೆಯವರಿಗೆ ಸ್ಪೂರ್ತಿ ನೀಡುತ್ತದೆ. ಯಾರನ್ನು ದ್ವೇಷಿಸದೆ ಎಲ್ಲರನ್ನೂ ಸ್ನೇಹದ ಮನೋಭಾವನೆಯಿಂದ ಕಾಣುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು

ಮಿಥುನ

ಕೆಲಸ ಕಾರ್ಯ ಮಾಡುವ ಆಸಕ್ತಿ ಇರುವುದಿಲ್ಲ. ಬಹುತೇಕ ದಿನವನ್ನು ತಿರುಗಾಟ ಅಥವಾ ಮನರಂಜನೆಯಲ್ಲಿ ಕಳೆಯುವಿರಿ. ನಿಮಗೆ ಆಸಕ್ತಿ ಇರುವ ವಿಷಯವನ್ನು ಮಾತ್ರ ಆಯ್ಕೆ ಮಾಡುವಿರಿ. ಸ್ಟಾಕ್ ಮತ್ತು ಷೇರು ವ್ಯವಹಾರದಲ್ಲಿ ಹಣ ಹೂಡಿಕೆ ಮಾಡುವಿರಿ. ನಿಮ್ಮ ಮಾತುಕತೆಯಿಂದ ಆತ್ಮೀಯರಲ್ಲಿ ಬೇಸರ ಉಂಟಾಗುತ್ತದೆ. ಕುಟುಂಬದಲ್ಲಿ ಗಲಿಬಿಲಿಯ ವಾತಾವರಣ ಇರುತ್ತದೆ. ನಿಮ್ಮಲ್ಲಿನ ವಿಶೇಷ ಹವ್ಯಾಸಗಳಿಗೆ ಸೂಕ್ತ ವೇದಿಕೆ ದೊರೆಯುತ್ತದೆ. ಸಂಗೀತ ನಾಟ್ಯದಲ್ಲಿ ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಕಂಡುಬರುತ್ತದೆ. ಆತ್ಮೀಯರಿಗೆ ನೀಡಿದ್ದ ಹಣವು ಈಗ ಉಪಯೋಗಕ್ಕೆ ಬರುತ್ತದೆ. ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಪ್ರಯತ್ನಿಸುವಿರಿ.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಕಟಕ

ನಿಮ್ಮಲ್ಲಿನ ಹಾಸ್ಯ ಪ್ರಕೃತಿ ಕುಟುಂಬದಲ್ಲಿ ಸಂತಸವನ್ನು ಹೆಚ್ಚಿಸುತ್ತದೆ. ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯಲಿದೆ. ಬೇರೆಯವರ ಅನುಭವವೇ ನಿಮಗೆ ಉತ್ತಮ ಪಾಠವಾಗಲಿದೆ. ಸಂಪಾದಿಸಿದ ಹಣವನ್ನು ಅನಾವಶ್ಯಕವಾಗಿ ಖರ್ಚು ಮಾಡುವುದಿಲ್ಲ. ಮನದ ಬೇಸರ ದೂರವಾಗಲು ಮನರಂಜನೆಯನ್ನು ಅವಲಂಬಿಸುವಿರಿ. ಸೋದರ ಅಥವಾ ಸೋದರಿಯ ಜೊತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ. ಎಲ್ಲರನ್ನೂ ಗೌರವಿಸುವ ನೀವು ಬೇರೆಯವರಿಂದ ಬೇಸರ ಮಾತುಗಳನ್ನು ಕೇಳುವಿರಿ. ಹಣದ ಕೊರತೆ ಕಂಡುಬರುವುದಿಲ್ಲ. ಅನಿರೀಕ್ಷಿತ ಹಣ ಗಳಿಕೆ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಹೊಸ ವಾಹನವನ್ನು ಕೊಳ್ಳುವ ಯೋಚನೆ ಸದ್ಯಕ್ಕೆ ಕೈಗೂಡುವುದಿಲ್ಲ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.