Horoscope Today: ಈ ರಾಶಿಯವರಿಗೆ ಇಂದು ದೊರೆಯಲಿದೆ ಶಿವನ ಅನುಗ್ರಹ, ಎಲ್ಲಾ ಕೆಲಸದಲ್ಲೂ ದೊರೆಯಲಿದೆ ಯಶಸ್ಸು; ಮೇ 13ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಈ ರಾಶಿಯವರಿಗೆ ಇಂದು ದೊರೆಯಲಿದೆ ಶಿವನ ಅನುಗ್ರಹ, ಎಲ್ಲಾ ಕೆಲಸದಲ್ಲೂ ದೊರೆಯಲಿದೆ ಯಶಸ್ಸು; ಮೇ 13ರ ರಾಶಿಫಲ

Horoscope Today: ಈ ರಾಶಿಯವರಿಗೆ ಇಂದು ದೊರೆಯಲಿದೆ ಶಿವನ ಅನುಗ್ರಹ, ಎಲ್ಲಾ ಕೆಲಸದಲ್ಲೂ ದೊರೆಯಲಿದೆ ಯಶಸ್ಸು; ಮೇ 13ರ ರಾಶಿಫಲ

13 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (13th May 2024 Daily Horoscope).

ಮೇ 13ರ ರಾಶಿಫಲ
ಮೇ 13ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(13th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ಷಷ್ಠಿ ರಾತ್ರಿ 04.40 ರವರೆಗು ಇರುತ್ತದೆ. ಆನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು 01.29 ರವರೆಗು ಇರುತ್ತದೆ. ಆನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.36

ರಾಹುಕಾಲ: ಬೆಳಗ್ಗೆ 07.35 ರಿಂದ 09.10

ರಾಶಿಫಲ

ಧನಸ್ಸು

ಆತ್ಮವಿಶ್ವಾಸದ ಕೊರತೆಯಿಂದ ಸಭೆ ಸಮಾರಂಭಗಳಿಂದ ದೂರ ಉಳಿಯುವಿರಿ. ಸ್ವತಂತ್ರವಾಗಿ ಕೆಲಸ ಕಾರ್ಯಗಳನ್ನು ನೆರವೇರಿಸಲು ವಿಫಲರಾಗುವಿರಿ. ಖರ್ಚು ವೆಚ್ಚಗಳು ಮಿತಿ ಮೀರುವ ಸಾಧ್ಯತೆಗಳಿವೆ. ದಿನಾಂತ್ಯಕ್ಕೆ ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ದಾಂಪತ್ಯದಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಇರಲಿದೆ. ಮಕ್ಕಳ ವಿದ್ಯಾಭ್ಯಾಸ ಅಥವಾ ವಿವಾಹಕ್ಕೆ ಹೆಚ್ಚಿನ ಹಣದ ಅವಶ್ಯಕತೆ ಕಂಡು ಬರುತ್ತದೆ. ಉದ್ಯೋಗದಲ್ಲಿನ ಒತ್ತಡದಿಂದ ಕುಟುಂಬದ ಬಗ್ಗೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ಆರೋಗ್ಯದ ಬಗ್ಗೆ ಗಮನವಹಿಸಿ. ಅವಿವಾಹಿತರು ಗೊಂದಲದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಯಾವುದೇ ವಿಚಾರವಾದರೂ ದೃಢವಾದ ತೀರ್ಮಾನವನ್ನು ತೆಗೆದುಕೊಳ್ಳಲು ವಿಫಲರಾಗುವಿರಿ. ಆತ್ಮೀಯರ ಆಗಮನದಿಂದ ಮನಸ್ಸಿಗೆ ಸಂತಸ ಉಂಟಾಗುತ್ತದೆ. ನಿಮ್ಮ ತಪ್ಪಿಗೆ ಬೇರೆಯವರನ್ನು ದೂಷಿಸುವಿರಿ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಪ್ಪು

ಮಕರ

ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತ ಸವಾಲುಗಳು ಎದುರಾಗಲಿವೆ. ಕೊಂಚ ತಡವಾದರೂ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. ಮನಸ್ಸಿನಲ್ಲಿ ಒಳ್ಳೆಯ ಭಾವನೆಗಳಿದ್ದರೂ ದುಡುಕು ಮಾತಿನಿಂದ ವಿವಾದಕ್ಕೆ ಒಳಗಾಗುವಿರಿ. ನಂಬಲು ಸಾಧ್ಯವಾಗದ ಮೂಲದಿಂದ ಹಣದ ಸಹಾಯ ದೊರೆಯುತ್ತದೆ. ಸುಲಭವಾಗಿ ನಿಮ್ಮ ಮನದ ಇಚ್ಛೆಗಳೆಲ್ಲ ನೆರವೇರುತ್ತದೆ. ಉದ್ಯೋಗದಲ್ಲಿ ಉತ್ತಮ ವೇತನ ಲಭಿಸುತ್ತದೆ. ಸಂಗಾತಿ ಮತ್ತು ಮಕ್ಕಳೊಂದಿಗೆ ಸಂತಸದಿಂದ ದಿನ ಕಳೆಯುವಿರಿ. ಕುಟುಂಬದ ಹಿರಿಯರ ಹಣದಲ್ಲಿ ನಿಮಗೆ ಸಮಪಾಲು ಲಭಿಸುತ್ತದೆ. ಸ್ವಂತ ಮನೆ ಕೊಳ್ಳುವ ಆಸೆ ನೆರವೇರಲಿದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಕುಂಭ

ಕುಟುಂಬದಲ್ಲಿ ಒಮ್ಮತದ ಸನ್ನಿವೇಶ ಇರುವುದಿಲ್ಲ. ಕುಟುಂಬದ ಹಣಕಾಸಿನ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸುವಿರಿ. ಉದ್ಯೋಗ ಬದಲಿಸುವ ಕಾರಣ ಹೆಚ್ಚಿನ ವೇತನ ಮತ್ತು ಉನ್ನತ ಹುದ್ದೆ ದೊರೆಯುತ್ತದೆ. ನಿಮ್ಮಲ್ಲಿರುವ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಆತ್ಮೀಯರ ಸಲಹೆಯನ್ನು ಒಪ್ಪುವುದರಿಂದ ಅನುಕೂಲವಾಗುತ್ತದೆ. ನಿಮ್ಮ ಸುಧೀರ್ಘ ಮಾತುಕತೆ ಎಲ್ಲರಲ್ಲೂ ಬೇಸರ ಮೂಡಿಸುತ್ತದೆ. ಆತ್ಮೀಯರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸುವುದಿಲ್ಲ. ಇದರಿಂದ ಆತಂಕದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಸಂಗಾತಿ ಮತ್ತು ಮಕ್ಕಳ ಬೇಡಿಕೆಗಳನ್ನು ಪೂರೈಸಲು ಸಫಲರಾಗುವಿರಿ. ಹೊಗಳಿಕೆಯ ಮಾತಿಗೆ ಸುಲಭವಾಗಿ ಮಣಿಯುವಿರಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರ ಧರಿಸಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸುಗೆಂಪು

ಮೀನ

ನಿಮ್ಮ ಕೆಲಸ ಕಾರ್ಯಗಳು ಮತ್ತು ತೀರ್ಮಾನಗಳ ಬಗ್ಗೆ ಹೆಚ್ಚಿನ ನಂಬಿಕೆ ಇರುತ್ತದೆ. ಮೊದಲೇ ನಿರ್ಧರಿಸಿದ್ದ ಕಾರ್ಯಕ್ರಮಗಳನ್ನು ಅನಿವಾರ್ಯವಾಗಿ ಬದಲಿಸುವಿರಿ. ಅನಗತ್ಯವಾದ ಖರ್ಚು ವೆಚ್ಚಗಳು ಬೇಸರವನ್ನು ಮೂಡಿಸುತ್ತದೆ. ಹಣದ ಕೊರತೆ ಇರಲಿದೆ. ಕುಟುಂಬದ ಮಂಗಳ ಕಾರ್ಯಕ್ರಮವನ್ನು ಮುಂದೂಡಬೇಕಾಗುತ್ತದೆ. ದಂಪತಿ ನಡುವೆ ಹಣದ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ಯೋಚನೆ ಕಡಿಮೆ ಮಾಡಿದರೆ ಮಾತ್ರ ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಬೇರೆಯವರ ತಪ್ಪನ್ನು ಮನ್ನಿಸಿದರೆ ಮಾನಸಿಕ ನೆಮ್ಮದಿ ದೊರೆಯುತ್ತದೆ. ನಿಮಗೆ ಇಷ್ಟವೆನಿಸುವಂತಹ ಹೊಸ ವಾಹನ ಕೊಳ್ಳುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.