ಅನಾರೋಗ್ಯ ಕಾಡಲಿದೆ, ಸ್ತ್ರೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಅನಾರೋಗ್ಯ ಕಾಡಲಿದೆ, ಸ್ತ್ರೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಅನಾರೋಗ್ಯ ಕಾಡಲಿದೆ, ಸ್ತ್ರೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

14 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (14th June 2024 Daily Horoscope).

ಅನಾರೋಗ್ಯ ಕಾಡಲಿದೆ, ಸ್ತ್ರೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ
ಅನಾರೋಗ್ಯ ಕಾಡಲಿದೆ, ಸ್ತ್ರೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ : ಅಷ್ಟಮಿ ರಾ. 10.36ರವರೆಗೂ ಇರುತ್ತದೆ ನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರ ನಕ್ಷತ್ರವು ದಿನಪೂರ್ತಿ ಇರುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಬೆಳಗ್ಗೆ 06.45

ರಾಹುಕಾಲ: 10.47 ರಿಂದ 12.23

ರಾಶಿಫಲ

ಸಿಂಹ

ಪರಿಸ್ಥಿತಿಯ ಒತ್ತಡಕ್ಕೆ ಮಣಿದು ಕೋಪದಿಂದ ಮಾತನಾಡುವಿರಿ. ಹಿರಿಯ ವ್ಯಕ್ತಿಗಳ ಸಹಾಯ ಸಹಕಾರ ನಿಮ್ಮಲ್ಲಿನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನರಕ್ಕೆ ಸಂಬಂಧಪಟ್ಟ ದೋಷವಿರುವವರು ವೈದ್ಯರನ್ನು ಭೇಟಿ ಮಾಡಬೇಕಾಗಬಹುದು. ನಿಮ್ಮೆದುರು ನಿಮ್ಮ ವಿರೋಧಿಗಳಿಗೆ ಸೋಲುಂಟಾಗುವುದು ಖಚಿತ. ಚರ್ಮದ ಸಮಸ್ಯೆಯಿಂದ ಬಳಲುವಿರಿ. ಮತ್ತೊಬ್ಬರ ವಿಶ್ವಾಸವನ್ನು ಕಳೆದುಕೊಳ್ಳಬೇಕಾಗುತ್ತದೆ. ದುಡುಕದೆ ಸಹನೆಯಿಂದ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಅವಕಾಶವೊಂದು ದೊರೆಯುತ್ತದೆ. ಹಣಕಾಸಿನ ಕೊರತೆ ಉಂಟಾಗುತ್ತದೆ. ದಂಪತಿಗಳ ನಡುವೆ ಉತ್ತಮ ಹೊಂದಾಣಿಕೆ ಇರುತ್ತದೆ. ಸ್ತ್ರೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಸ್ಥಾನಮಾನ ಲಭಿಸಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ :5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಬೂದು ಬಣ್ಣ

ಕನ್ಯಾ

ಬಂಧು ಬಳಗದವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವಿರಿ. ಹೊಸ ಬಗೆಯ ಆಹಾರ ಸೇವನೆಯಲ್ಲಿ ಇಷ್ಟಪಡುವಿರಿ. ದಂಪತಿ ನಡುವೆ ಉತ್ತಮ ಬಾಂಧವ್ಯ ರೂಪಗೊಳ್ಳುತ್ತದೆ. ಕಷ್ಟವೆನಿಸಿದರೂ ಹಣ ಉಳಿತಾಯ ಮಾಡುವಿರಿ. ನಿಮ್ಮ ಗೌರವವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುವಿರಿ. ಅನಾರೋಗ್ಯದಿಂದ ಬಳಲುವಿರಿ. ಬಲಹೀನತೆ ನಿಮ್ಮನ್ನು ಕಾಡುತ್ತದೆ. ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿ ಮಾಡುವಿರಿ. ಪ್ರಾಚೀನ ಶಾಸ್ತ್ರಗಳ ಅಧ್ಯಯನ ಮಾಡುವಿರಿ. ಸಮಯವನ್ನು ಗೌರವಿಸುವ ನೀವು ಯಾವುದಾದರೂ ಒಂದು ಕೆಲಸದಲ್ಲಿ ಸದಾ ತೊಡಗುವಿರಿ. ನಿಮ್ಮ ಮನದಲ್ಲಿರುವ ವಿಚಾರವನ್ನು ಯಾರಿಗೂ ತಿಳಿಸುವುದಿಲ್ಲ. ನಿಮ್ಮ ಬಗ್ಗೆ ನಿಮಗೆ ನಂಬಿಕೆ ಇರುವುದಿಲ್ಲ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ : ಆಕಾಶ ನೀಲಿ ಬಣ್ಣ

ತುಲಾ

ಅತಿಯಾದ ಆಸಕ್ತಿಯಿಂದ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಬಿಡುವಿನ ವೇಳೆಯಲ್ಲಿ ಆತ್ಮಾವಲೋಕನ ಮಾಡಿಕೊಳ್ಳುವಿರಿ. ಆಹಾರ ಸೇವನೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಉಷ್ಣದ ತೊಂದರೆ ಇರುತ್ತದೆ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಮುಖ್ಯ ಪಾತ್ರ ವಹಿಸುವಿರಿ. ಯೋಗ ಪ್ರಾಣಾಯಾಮದಲ್ಲಿ ಆಸಕ್ತಿ ಮೂಡುತ್ತದೆ. ತಂದೆ ಅಥವಾ ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಜನೋಪಯೋಗಿ ಕೆಲಸಗಳನ್ನು ಮಾಡುವಿರಿ. ಸಮಾಜದಲ್ಲಿ ಪ್ರಮುಖ ಸ್ಥಾನ ಲಭಿಸುತ್ತದೆ. ಅನೇಕರಿಗೆ ಜೀವನ ನಡೆಸಲು ಸಹಾಯ ಮಾಡುವಿರಿ. ಸಾಮಾನ್ಯವಾಗಿ ಮೌನವಿರುವ ನೀವು ಮಾತನಾಡಲು ಆರಂಭಿಸಿದರೆ ಮುಕ್ತಾಯ ಇರುವುದಿಲ್ಲ. ಉತ್ತಮ ಯೋಜನೆಯಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸಲಿದ್ದೀರಿ. 

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ವೃಶ್ಚಿಕ

ಧಾರ್ಮಿಕ ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವಿರಿ. ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಿರಿ. ಸಮಾಜದಲ್ಲಿ ನಿಮಗೆ ಉನ್ನತ ಕೀರ್ತಿ ಇರುತ್ತದೆ. ಸಮಾಜದಲ್ಲಿ ನಾಯಕನ ಸ್ಥಾನ ಗಳಿಸುವಿರಿ. ನಿಮ್ಮ ಬಗ್ಗೆ ಬಂದು ಬಳಗದವರಿಗೆ ಬಹಳ ಗೌರವ ಇರುತ್ತದೆ. ವಿಶೇಷವಾದ ಕೆಲಸ ಕಾರ್ಯಗಳನ್ನು ಮಾಡುವಿರಿ. ಕೆಲಸ ಕಾರ್ಯಗಳಲ್ಲಿ ಆರಂಭದಲ್ಲಿ ಅಡಚಣೆ ಉಂಟಾಗುತ್ತದೆ. ಅನಗತ್ಯವಾದ ವಿಚಾರಗಳಿಗೆ ಓಡಾಟ ಇರುತ್ತದೆ. ಸಣ್ಣಗಾಗಲು ಆತ್ಮೀಯರೊಬ್ಬರ ಸಲಹೆಯನ್ನು ಪಡೆಯುವಿರಿ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ದಂಪತಿ ನಡುವೆ ಅನಾವಶ್ಯಕ ವಾದ ವಿವಾದ ಇರಲಿದೆ. ವಿದ್ಯಾರ್ಥಿಗಳಿಗೆ ವಿಶೇಷವಾದ ಪ್ರಾತಿನಿಧ್ಯ ಲಭಿಸುತ್ತದೆ. ದಿನನಿತ್ಯದ ಕೆಲಸಗಳಿಗೆ ಆಗತ್ಯವಾದಷ್ಟು ಹಣ ದೊರೆಯಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಎಲೆ ಹಸಿರು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.