Horoscope Today: ಅತಿಯಾದ ಆತ್ಮವಿಶ್ವಾಸದಿಂದ ಸಮಸ್ಯೆ, ಸಾಲದ ವ್ಯವಹಾರದಿಂದ ಮನಸ್ಸಿಗೆ ಬೇಸರ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
14 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (14th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (14th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ
ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಮಂಗಳವಾರ
ತಿಥಿ: ಸಪ್ತಮಿ ಬೆ 05.38 ರವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.
ನಕ್ಷತ್ರ: ಪುಷ್ಯ ನಕ್ಷತ್ರವು 02.51 ರವರೆಗೂ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.55
ಸೂರ್ಯಾಸ್ತ: ಸಂಜೆ 06.36
ರಾಹುಕಾಲ: 03.30 ರಿಂದ 05.05
ರಾಶಿಫಲ
ಮೇಷ
ಬಹುದಿನದಿಂದ ಕಾಣುತ್ತಿದ್ದ ಕನಸೊಂದು ನನಸಾಗಲಿದೆ. ಅತಿಯಾದ ಆತ್ಮವಿಶ್ವಾಸದಿಂದ ಸಮಸ್ಯೆಯೊಂದನ್ನು ಎದುರಿಸುವಿರಿ. ಸಾಲದ ವ್ಯವಹಾರವು ವಿವಾದಕ್ಕೆ ಕಾರಣವಾಗುತ್ತದೆ. ಬಂಧು ಬಳಗದಿಂದ ನಿಮಗೆ ಇಷ್ಟವೆನಿಸುವ ವರ್ತಮಾನವನ್ನು ಬರಲಿದೆ. ಉದ್ಯೋಗದಲ್ಲಿ ಸಮಸ್ಯೆ ಎದುರಾದರೂ ಅದನ್ನು ಪರಿಹರಿಸಬಲ್ಲಿರಿ. ನಿಮ್ಮ ಅರಿವಿಗೆ ಬಾರದಂತೆ ತಪ್ಪು ನಿರ್ಧಾರವನ್ನು ಕೈಗೊಳ್ಳುವಿರಿ. ಹಿರಿಯ ಅಧಿಕಾರಿಗಳ ಅವಕೃಪೆಗೆ ಪಾತ್ರರಾಗಬೇಕಾಗುತ್ತದೆ. ಆತುರ ಪಡದೆ, ಕೋಪ ತೋರದೆ ಮಾತನಾಡಿದರೆ ಅನೇಕ ಸಮಸ್ಯೆಗಳು ಪರಿಹಾರ ಗೊಳ್ಳುತ್ತವೆ. ನವವಿವಾಹಿತರಿಗೆ ಶುಭ ವರ್ತಮಾನ ಬರಲಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಒತ್ತಡವಿಲ್ಲದೆ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಹೆಚ್ಚಿನ ಆಸೆ ಆಕಾಂಕ್ಷೆಗಳು ನಿರಾಸೆ ಉಂಟುಮಾಡುತ್ತವೆ.
ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ವೃಷಭ
ಗೆಲ್ಲಲೇಬೇಕೆಂಬ ಹುಮ್ಮಸ್ಸಿನಿಂದ ದಿನದ ಕೆಲಸವನ್ನು ಆರಂಭಿಸುವಿರಿ. ನಿಮ್ಮದೇ ಆಗ ತಪ್ಪಿನ ಕಾರಣ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಎಲ್ಲರೊಂದಿಗೆ ಸ್ನೇಹದಿಂದ ವರ್ತಿಸಿದಲ್ಲಿ ಶಾಂತಿ ನೆಮ್ಮದಿಯಿಂದ ಬಾಳಬಹುದು. ಕಷ್ಟದ ಕೆಲಸ ಕಾರ್ಯಗಳು ಎದುರಾಗಲಿದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಯಾರೊಬ್ಬರೂ ನಿಮ್ಮೊಂದಿಗೆ ಮನಬಿಚ್ಚಿ ಮಾತನಾಡಲು ಸಾಧ್ಯವಾಗದು. ಮನದಲ್ಲಿರುವ ವಿಚಾರಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳುವುದಿಲ್ಲ. ಕುಟುಂಬದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಇರುವ ಆದಾಯದಲ್ಲಿಯೇ ಹಣ ಉಳಿಸಲು ಯಶಸ್ವಿಯಾಗುವಿರಿ. ಸಂಗಾತಿಯೊಂದಿಗೆ ಅನಾವಶ್ಯಕ ವಾದ ವಿವಾದ ಎದುರಾಗಲಿವೆ. ನಿಮ್ಮ ಮಕ್ಕಳು ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪಲಿದ್ದಾರೆ. ಬೇರೆಯವರಿಗೆ ನೀಡುವ ಸಲಹೆ ಸೂಚನೆಗಳು ನಿಮಗೆ ವ್ಯತಿರಿಕ್ತ ಫಲಿತಾಂಶಗಳನ್ನು ನೀಡುತ್ತವೆ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಬೂದು
ಮಿಥುನ
ಜನಾಕರ್ಷಕ ವ್ಯಕ್ತಿತ್ವವು ನಿಮ್ಮನ್ನು ಆವರಿಸುತ್ತದೆ. ಕಷ್ಟವಿಲ್ಲದೆ ಹಣ ಗಳಿಸಬೇಕೆಂಬ ಪ್ರಯತ್ನದಲ್ಲಿ ತೊಡಗುವಿರಿ. ನ್ಯಾಯ ನೀತಿಯ ಪಕ್ಷಪಾತಿಗಳು. ನಿಮ್ಮ ನಿರ್ಧಾರಗಳು ಯಾರಿಗೂ ಹಾನಿಯನ್ನು ಉಂಟುಮಾಡುವುದಿಲ್ಲ. ಕುಟುಂಬದವರಿಂದ ದಿನವಿಡೀ ಸಂತೋಷದಿಂದ ಇರುವಿರಿ. ಸಂಗಾತಿಯ ರೀತಿ ನೀತಿಗಳು ಬೇಸರ ಉಂಟುಮಾಡುತ್ತದೆ. ಕೆಟ್ಟದ್ದನ್ನು ಮರೆಯುವ ಗುಣವಿರುವ ಕಾರಣ ನೆಮ್ಮದಿ ಇರುತ್ತದೆ. ನಿಮ್ಮ ಮನದ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ಕುಟುಂಬದಲ್ಲಿ ಇದ್ದ ಅಪನಂಬಿಕೆ ಕಡಿಮೆಯಾಗುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ಕುಟುಂಬದ ಧಾರ್ಮಿಕ ವಿಧಿ ವಿಧಾನಗಳನ್ನು ಯಶಸ್ವಿಗೊಳಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಆಕಾಶ ನೀಲಿ
ಕಟಕ
ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸುತ್ತಾರೆ. ಸಮಯವನ್ನು ಗೌರವಿಸುವ ನೀವು ಸದಾ ಕಾಲ ಚುರುಕುತನದಿಂದ ವರ್ತಿಸುವಿರಿ. ನಿಮ್ಮ ಗುರಿಯು ಕೇವಲ ಹಣ ಗಳಿಕೆ ಆಗಿರುವುದಿಲ್ಲ. ಕೇವಲ ಕುಟುಂಬದವರಲ್ಲದೆ ನೆರೆಹೊರೆಯವರನ್ನು ಪ್ರೀತಿ ವಿಶ್ವಾಸದಿಂದ ಕಾಣುವಿರಿ. ಎಲ್ಲರ ಸಲಹೆಯನ್ನು ಕೇಳಿ ಸರಿಯಾದ ಮಾರ್ಗದಲ್ಲಿ ನಡೆಯುವಿರಿ. ತಾನಾಗಿಯೇ ಸಮಾಜದಲ್ಲಿ ನಿಮಗೆ ಗೌರವಯುತ ಸ್ಥಾನಮಾನ ದೊರೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಶ್ರದ್ಧೆಯನ್ನು ತೋರುವುದಿಲ್ಲ. ನಿಮಗೆ ಆಗದ ಕೆಲಸಗಳನ್ನು ನಯವಾಗಿ ತಿರಸ್ಕರಿಸುವಿರಿ. ಸಂಗಾತಿಯೊಂದಿಗೆ ಸುಖ ಸಂತೋಷದಿಂದ ಜೀವನ ನಡೆಸುವಿರಿ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).