Horoscope Today: ಉದ್ಯೋಗದಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫಲ, ದೂರದ ಊರಿಗೆ ಪ್ರಯಾಣ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಉದ್ಯೋಗದಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫಲ, ದೂರದ ಊರಿಗೆ ಪ್ರಯಾಣ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಉದ್ಯೋಗದಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫಲ, ದೂರದ ಊರಿಗೆ ಪ್ರಯಾಣ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

15 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15th April 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ದಿನ ಭವಿಷ್ಯ
ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (15th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ: ಸಪ್ತಮಿ 03.34 ರವರೆಗೂ ಇದ್ದು ನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು ಮಂಗಳವಾರ ಬೆಳಗ್ಗೆ 06.03 ರವರೆಗೂ ಇದ್ದು ನಂತರ ಪುಷ್ಯ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.07

ಸೂರ್ಯಾಸ್ತ: ಸಂಜೆ 06.31

ರಾಹುಕಾಲ : ಬೆಳಗ್ಗೆ 07.30 ರಿಂದ 09.00

ರಾಶಿ ಫಲ

ಮೇಷ

ಕುಟುಂಬದಲ್ಲಿ ಅಡ್ಡಿ ಆತಂಕಗಳು ದೂರವಾಗಲಿವೆ. ಒಗ್ಗಟ್ಟಿನ ಫಲವಾಗಿ ಶುಭಫಲಗಳು ದೊರೆಯುತ್ತವೆ. ಉದ್ಯೋಗದಲ್ಲಿ ಸಂದಿಗ್ಧ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ನಷ್ಟದ ಮಾತಿರದು. ಆತ್ಮೀಯ ಸ್ನೇಹಿತರೊಬ್ಬರ ಸಹಾಯ ದೊರೆಯುತ್ತದೆ. ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಶುಚಿ ರುಚಿಯಾದ ಆಹಾರ ಸೇವಿಸಿ. ಆಡುವ ಮಾತಿನಲ್ಲಿ ಇತಿ ಮಿತಿ ಇರಲಿ. ಖರ್ಚು ವೆಚ್ಚಗಳು ಹೆಚ್ಚಾಗಿಯೇ ಇರುತ್ತದೆ. ಕುಟುಂಬದವರ ಮತ್ತು ಆತ್ಮೀಯರ ಜೊತೆಯಲ್ಲಿ ದಿನ ಕಳೆಯುವಿರಿ. ಹಣದ ಕೊರತೆ ಕಾಡದು. ಮಕ್ಕಳ ವಿದ್ಯಾಭ್ಯಾಸದ ವಿಚಾರದ ಬಗ್ಗೆ ಆತುರದ ನಿರ್ಧಾರ ತೆಗೆದುಕೊಳ್ಳದಿರಿ. ತಾಯಿಯವರಿಂದ ಬೆಳ್ಳಿಯ ಪದಾರ್ಥವನ್ನು ಉಡುಗೊರೆಯಾಗಿ ಪಡೆಯುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕಂದು

ವೃಷಭ

ದಿನನಿತ್ಯದ ಜೀವನದಲ್ಲಿ ಕೆಲವೊಂದು ಬದಲಾವಣೆಗಳು ಉಂಟಾಗಲಿವೆ. ಮಕ್ಕಳೊಂದಿಗೆ ಸಂತಸದಿಂದ ದಿನವನ್ನು ಕಳೆಯುವಿರಿ. ಉದ್ಯೋಗದಲ್ಲಿ ಪ್ರಯ್ಕತ್ನಕ್ಕೆ ತಕ್ಕಂತ ಫಲಿತಾಂಶ ಪಡೆಯುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಮುನ್ನಡೆ ಸಾಧಿಸುತ್ತಾರೆ. ತಾಯಿಯ ಜೊತೆಯಲ್ಲಿ ಹಣಕಾಸಿನ ವಿಚಾರದಲ್ಲಿ ವಾದ ನಡೆಯುತ್ತದೆ. ಹಿರಿಯ ನಾಗರಿಕರಿಗೆ ಉತ್ತಮ ಫಲಗಳು ದೊರೆಯುತ್ತವೆ. ರುಚಿಕರವಾದ ಭೋಜನ ಮತ್ತು ವಿಶ್ರಾಂತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಹಣ ಸಂಪಾದಿಸುವಿರಿ. ಕಷ್ಟದ ಕೆಲಸವನ್ನು ಮಾಡುವುದಿಲ್ಲ. ಉದ್ಯೋಗವನ್ನು ಬದಲಾಯಿಸುವ ಅವಕಾಶ ದೊರೆಯುತ್ತದೆ. ದೂರದ ಊರಿಗೆ ಪ್ರಯಾಣ ಮಾಡುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಪ್ಪು ಬಣ್ಣ

ಮಿಥುನ

ಆಪತ್ತಿನ ಸಮಯದಲ್ಲಿ ಮಾತು ಬದಲಿಸಿ ವಿರೋಧಿಗಳ ದಿಕ್ಕು ತಪ್ಪಿಸುವಿರಿ. ಮೌನದಿಂದ ವಾದ ವಿವಾದಗಳನ್ನು ಆಲಿಸುವಿರಿ. ಒಂಟಿತನ ಬಾಧಿಸುತ್ತದೆ. ಗಂಟಲ ಬೇನೆಯ ತೊಂದರೆ ಉಂಟಾಗುತ್ತದೆ. ಉದ್ಯೋಗದಲ್ಲಿ ಬೇಸರದ ಸನ್ನಿವೇಶವೊಂದು ನಡೆಯುತ್ತದೆ. ಜಗಳ ಕದನವನ್ನು ಇಷ್ಟ ಪಡುವುದಿಲ್ಲ. ಸೋಲೊಪ್ಪುವುದರಲ್ಲಿ ಸಂತಸ ಕಾಣುವಿರಿ. ಎದುರಾಗುವ ಸಮಸ್ಯೆಗೆ ಧೃತಿಗೆಡದೆ ತಕ್ಕ ಪರಿಹಾರವನ್ನು ಕಂಡುಕೊಳ್ಳುವಿರಿ. ವಿದ್ಯಾರ್ಥಿಗಳು ಒಲ್ಲದ ಮನಸ್ಸಿನಿಂದ ಓದಿನಲ್ಲಿ ಮುಂದುವರೆಯಲಿದ್ದೀರಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರುತ್ತದೆ. ರಜೆಯ ಸವಿ ಸವಿಯಲು ಕಿರುಪ್ರವಾಸಕ್ಕೆ ತೆರಳುವಿರಿ. ಕೊಟ್ಟಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ತಿಳಿ ಹಸಿರು

ಕಟಕ

ಕುಟುಂಬದಲ್ಲಿನ ಹೊಂದಾಣಿಕೆ ಶಾಂತಿ ನೆಮ್ಮದಿಯನ್ನು ನೀಡುತ್ತದೆ. ಹೆಚ್ಚಿನ ಪ್ರಯತ್ನದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಲಾಭವಿದೆ. ಅತಿಯಾದ ಆತ್ಮವಿಶ್ವಾಸದಿಂದ ಮಾಡುವ ಕೆಲಸ ನಿರಾಸೆ ಉಂಟು ಮಾಡಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ತೂಕ ಇಳಿಸಿಕೊಳ್ಳಲು ಆಹಾರ ಕ್ರಮವನ್ನು ಬದಲಾಯಿಸುವಿರಿ. ಧೈರ್ಯ ಸಾಹಸದ ಗುಣ ಹೊಸ ಉದ್ಯೋಗಾವಕಾಶಗಳನ್ನು ನೀಡಲಿದೆ. . ಸಾಹಸ ಕಲಾವಿದರಿಗೆ ನೂತನ ಅವಕಾಶ ದೊರೆಯುತ್ತದೆ. ಚಿಕ್ಕ ವಯಸ್ಸಿನ ಮಕ್ಕಳಿಗೆ ಅದೃಷ್ಟವಿದೆ. ಸ್ವಂತ ಉದ್ಯಮ ಸ್ಥಾಪಿಸುವ ಮನಸ್ಸಿದ್ದರೆ ಸುಲಭ ಸಾಧ್ಯವಾಗಲಿದೆ. ಪಶು ಸಂಗೋಪನೆಯಲ್ಲಿ ಉತ್ತಮ ಆದಾಯ ಇರುತ್ತದೆ.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.