ಕೈ ಕಾಲುಗಳಿಗೆ ಪೆಟ್ಟಾಗುವ ಸಾಧ್ಯತೆ, ಸಂಗಾತಿಯ ಆರೋಗ್ಯದಲ್ಲಿ ಏರುಪೇರು; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
15 ಜೂನ್ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ)
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(15th June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ
ತಿಥಿ: ನವಮಿ ರಾತ್ರಿ 12.37ರವರೆಗೂ ಇದ್ದು ನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ : ಉತ್ತರ ನಕ್ಷತ್ರವು ಬೆಳಗ್ಗೆ 07.24 ರವರೆಗೆ ಇದ್ದು ನಂತರ ಹಸ್ತ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.46
ರಾಹುಕಾಲ: ಬೆಳಗ್ಗೆ 09.11 ರಿಂದ 10.47
ರಾಶಿಫಲ
ಧನಸ್ಸು
ಉತ್ತಮ ಆದಾಯವಿರುತ್ತದೆ. ಆದರೆ ಖರ್ಚು ವೆಚ್ಚಗಳ ಮೇಲೆ ನಿಯಂತ್ರಣವಿರುವುದಿಲ್ಲ. ಒಳ್ಳೆಯ ನಡವಳಿಕೆಯಿಂದ ಎಲ್ಲರ ವಿಶ್ವಾಸ ಗಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಲಾಭ ದೊರೆಯುವುದಿಲ್ಲ. ಆದರೂ ತೊಂದರೆ ಇರುವುದಿಲ್ಲ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಸಂಗಾತಿಯ ಅರ್ಥಪೂರ್ಣ ಮಾತುಗಳು ಕುಟುಂಬದಲ್ಲಿನ ಬೇಸರವನ್ನು ದೂರ ಮಾಡುತ್ತದೆ. ನಿಮಗೆ ಉತ್ತಮ ಹಾಸ್ಯ ಪ್ರಜ್ಞೆ ಇರುತ್ತದೆ. ಕೌಟುಂಬಿಕ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ನಿಮ್ಮ ಬಳಿ ಇರುವ ಹಣವನ್ನೆಲ್ಲ ಖರ್ಚು ಮಾಡುವಿರಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಇರುತ್ತದೆ. ಕೈ ಕಾಲುಗಳಿಗೆ ಪೆಟ್ಟಾಗುವ ಸಂಭವವಿದೆ ಎಚ್ಚರಿಕೆ ಇರಲಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಮಕರ
ಅವಶ್ಯಕತೆ ಇದ್ದರೆ ಮಾತ್ರ ಹಣ ಖರ್ಚು ಮಾಡುವಿರಿ. ಆತ್ಮೀಯರೊಂದಿಗೆ ದೊಡ್ಡ ಪ್ರಮಾಣದಲ್ಲಿ ವ್ಯಾಪಾರವೊಂದನ್ನು ಆರಂಭಿಸುವ ಯೋಚನೆ ಮಾಡುವಿರಿ. ಸೋದರರು ಆತಂಕದ ಕ್ಷಣಗಳನ್ನು ಎದುರಿಸುತ್ತಾರೆ. ಮಾನಸಿಕ ಒತ್ತಡದ ಕಾರಣ ಸೋದರೊಂದಿಗೆ ಮನಸ್ತಾಪ ಉಂಟಾಗುತ್ತದೆ. ತಾಯಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕುಟುಂಬದಲ್ಲಿ ಪರಸ್ಪರ ವಾದ ವಿವಾದದ ಕಾರಣ ಶಾಂತಿ ನೆಮ್ಮದಿ ಇರುವುದಿಲ್ಲ. ಕಲಾವಿದರಿಗೆ ಅನಿರೀಕ್ಷಿತ ಜನ ಲಾಭ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಯೋಚನೆ ಇರುತ್ತದೆ. ಗೃಹಿಣಿಯರಿಗೆ ಇಂದು ಉತ್ತಮ ದಿನವಾಗಲಿದೆ. ಮನಒಪ್ಪುವ ಕೆಲಸಗಳನ್ನು ಆಯ್ಕೆ ಮಾಡುವಿರಿ. ವಿದ್ಯಾರ್ಥಿಗಳು ತಮ್ಮ ಮನದ ಆಶೋತ್ತರಗಳನ್ನು ಈಡೇರಿಸಿಕೊಳ್ಳುತ್ತಾರೆ.
ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ತಿಳಿ ಹಸಿರು
ಕುಂಭ
ಮಕ್ಕಳ ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ಕೆಲಸ ಕಾರ್ಯಗಳ ವಿಚಾರದಲ್ಲಿ ತಪ್ಪು ನಿರ್ಧಾರ ಕೈಗೊಳ್ಳುವಿರಿ. ಸಂಗಾತಿಯಿಂದ ಎಲ್ಲಾ ರೀತಿಯ ಅನುಕೂಲತೆ ದೊರೆಯುತ್ತದೆ. ಮಹಿಳೆಯರ ಜೀವನದಲ್ಲಿ ನಿರೀಕ್ಷಿತ ಬದಲಾವಣೆಗಳು ಉಂಟಾಗಲಿವೆ. ಧರ್ಮ ಗುರುಗಳನ್ನು ಭೇಟಿ ಮಾಡಲು ತೆರಳುವಿರಿ. ವಿದ್ಯಾರ್ಥಿಗಳು ಸಂತಸದಿಂದ ಕಲಿಕೆಯ ಹಾದಿಯಲ್ಲಿ ಸಾಗುತ್ತಾರೆ. ಕಾನೂನಿಗೆ ಸಂಬಂಧಪಟ್ಟ ವಿಚಾರದಲ್ಲಿ ಅನುಕೂಲತೆ ಕಂಡು ಬರುತ್ತದೆ. ರಾಜಕೀಯದಲ್ಲಿ ಉತ್ತಮ ಅವಕಾಶ ದೊರೆಯುತ್ತದೆ. ನಿಮ್ಮ ಸ್ನೇಹಮಯ ಗುಣದಿಂದ ವಿರೋಧಿಗಳ ಮನಸ್ಸನ್ನು ಗೆಲ್ಲುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಹುಟ್ಟೂರಿಗೆ ಭೇಟಿ ನೀಡುವಿರಿ. ಬೇಸಾಯದಲ್ಲಿ ಆಸಕ್ತಿ ಮೂಡುತ್ತದೆ.
ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ನಸು ಗೆಂಪು ಬಣ್ಣ
ಮೀನ
ಸೋದರನ ಕೆಲಸ ಕಾರ್ಯದ ಸಲುವಾಗಿ ಅನಗತ್ಯ ತಿರುಗಾಟವಿರುತ್ತದೆ. ನಿಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ಭಾಗಶಃ ಯಶಸ್ಸು ದೊರೆಯುತ್ತದೆ. ನಿರಾಸೆಗೆ ಒಳಗಾಗದೆ ಆಶಾ ಭಾವನೆಯಿಂದ ಮುಂದುವರೆಯುವಿರಿ. ಕೀಲುಗಳಲ್ಲಿ ನೋವು ಕಂಡು ಬರುತ್ತದೆ. ಆತಂಕದ ಸನ್ನಿವೇಶದಲ್ಲಿ ಬುದ್ಧಿವಂತಿಕೆಯಿಂದ ಕಷ್ಟದಿಂದ ಪಾರಾಗುವಿರಿ. ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಬಹುದಿನದ ನಂತರ ಆತ್ಮೀಯರೊಬ್ಬರನ್ನು ಭೇಟಿ ಮಾಡುವಿರಿ. ದಾಂಪತ್ಯದಲ್ಲಿ ಇದ್ದ ಒಡಕು ದೂರವಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಬರುವ ಫಲಿತಾಂಶ ನಿಮ್ಮ ಪರವಾಗಿರುತ್ತದೆ. ನಿರುದ್ಯೋಗಿಗಳಿಗೆ ದೊಡ್ಡ ಸಂಸ್ಥೆಯಲ್ಲಿ ಶಿಥಿಲಗೊಂಡ ವಂಶದ ಮನೆ ಅಥವಾ ದೇವಾಲಯದ ಜವಾಬ್ದಾರಿ ವಹಿಸಿಕೊಳ್ಳುವಿರಿ.
ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ