Horoscope Today: ಭೂ ಸಂಬಂಧಿತ ವ್ಯಾಪಾರ ವಹಿವಾಟಿನಲ್ಲಿ ಲಾಭ, ವಿದೇಶದಲ್ಲಿ ಉದ್ಯೋಗ ದೊರೆಯುವ ಸಾಧ್ಯತೆ; ಮೇ 15ರ ರಾಶಿಫಲ
15 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (15th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(15th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಬುಧವಾರ
ತಿಥಿ: ಅಷ್ಟಮಿ ದಿನಪೂರ್ತಿ ಇರುತ್ತದೆ
ನಕ್ಷತ್ರ: ಆಶ್ಲೇಷ ನಕ್ಷತ್ರವು 04.40ರವರೆಗೂ ಇದ್ದು ನಂತರ ಮಖ ನಕ್ಷತ್ರವು ಆರಂಭವಾಗುತ್ತದೆ
ಸೂರ್ಯೋದಯ: ಬೆಳಗ್ಗೆ 05.54
ಸೂರ್ಯಾಸ್ತ: ಸಂಜೆ 06.37
ರಾಹುಕಾಲ: 12.20 ರಿಂದ 01.55
ರಾಶಿಫಲ
ಧನಸ್ಸು
ಮಕ್ಕಳಿಗೆ ಉಸಿರಾಟದ ತೊಂದರೆ ಇರಬಹುದು. ನಿಮ್ಮಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ. ಕುಟುಂಬದ ಸದಸ್ಯರ ಜೊತೆ ಕಿರು ಪ್ರವಾಸಕ್ಕೆ ತೆರಳುವಿರಿ. ಬಂಧು ಬಳಗದಿಂದ ಸಹಾಯ ದೊರೆಯದು. ದೃಢವಾದ ಸಂಕಲ್ಪವಿದ್ದರೆ ಯಾವುದೇ ಕೆಲಸವನ್ನು ಮಾಡಬಲ್ಲರು. ಕಷ್ಟ ನಷ್ಟಗಳಿಗೆ ಹೆದರದೆ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಅರೆಮನಸ್ಸಿನಿಂದ ಉದ್ಯೋಗ ಬದಲಿಸುವಿರಿ. ಉದ್ಯೋಗದಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆತರೆ ವಿಶೇಷ ಸಾಧನೆ ಮಾಡಬಲ್ಲರು. ಆತ್ಮೀಯರ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವಿರಿ. ವಿದೇಶ ಪ್ರವಾಸದ ಬಗ್ಗೆ ನಿಶ್ಚಯಿಸುವಿರಿ. ಆರೋಗ್ಯದಲ್ಲಿ ತೊಂದರೆ ಕಂಡು ಬರದು.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬಿಳಿ
ಮಕರ
ಸಂಗಾತಿ ಆರೋಗ್ಯದಲ್ಲಿನ ತೊಂದರೆ ನಿವಾರಣೆ ಆಗಲಿದೆ. ಉದ್ಯೋಗದಲ್ಲಿ ಆತಂಕದ ಪರಿಸ್ಥಿತಿ ಎದುರಾಗಬಹುದು. ಸಹೋದ್ಯೋಗಿಗಳ ಸಹಾಯದಿಂದ ಉದ್ಯೋಗ ಬದಲಿಸುವಿರಿ. ಗೃಹಿಣಿಯರಿಗೆ ವಿಶ್ರಾಂತಿ ಇಲ್ಲದ ದುಡಿಮೆ ಇರುತ್ತದೆ. ಮನಸ್ಸಿಗೆ ಮುದ ನೀಡುವ ಹವ್ಯಾಸದಲ್ಲಿ ತೊಡಗುವಿರಿ. ಬೇಸರವಾದರೂ ಒತ್ತಾಯಕ್ಕೆ ಮಣಿದು ಉದ್ಯೋಗ ಬದಲಾಯಿಸುವ ಯೋಚನೆ ಕೈಬಿಡುವಿರಿ. ಮನೆಮಂದಿಯ ಜೊತೆಗೂಡಿ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಸಮಾಜದಲ್ಲಿ ಉನ್ನತ ಗೌರವ ಲಭಿಸುತ್ತದೆ. ವಾಹನದಿಂದ ತೊಂದರೆ ಎದುರಾಗಬಹುದು ಎಚ್ಚರಿಕೆ ಇರಲಿ. ಧಾರ್ಮಿಕ ಕಾರ್ಯಗಳಲ್ಲಿ ವಿಶೇಷ ಆಸಕ್ತಿ ತೋರುವಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ನಿರೀಕ್ಷೆ ಕಾಣದಿರಿ.
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಬೂದು ಬಣ್ಣ
ಕುಂಭ
ಮಾಡುವ ಕೆಲಸ ಕಾರ್ಯಗಳನ್ನು ಮನಸ್ಸಿಟ್ಟು ನಿರ್ವಹಿಸುವಿರಿ. ತಡವಾದರೂ ಆರಂಭಿಸಿದ ಕೆಲಸಗಳಲ್ಲಿ ಯಶಸ್ಸು ದೊರೆಯುತ್ತದೆ. ಬೇರೆಯವರಾದರೂ ಚಿಕ್ಕ ಪುಟ್ಟ ಮಕ್ಕಳನ್ನು ಮಮತೆಯಿಂದ ಕಾಣುವಿರಿ. ಉದ್ಯೋಗದಲ್ಲಿ ಗುರಿ ತಲುಪಲು ಹೆಚ್ಚಿನ ಪ್ರಯತ್ನ ಬೇಕಾಗುತ್ತದೆ. ಆತ್ಮೀಯರ ಸಲಹೆಯನ್ನು ಪಾಲಿಸುವುದರಿಂದ ಕುಟುಂಬದಲ್ಲಿ ಪ್ರೀತಿಯ ಮನೋಭಾವನೆ ನೆಲೆಸಿರುತ್ತದೆ. ಸಂಚಾರದಲ್ಲಿ ಸಂತಸದಿಂದ ದಿನವನ್ನು ಕಳೆಯುವಿರಿ. ವಿದ್ಯಾರ್ಥಿಗಳು ಗುಟ್ಟಾಗಿಯೇ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುತ್ತಾರೆ. ಸಂಬಧವಿಲ್ಲದ ಹಣದ ವಿವಾದದಲ್ಲಿ ಸಿಲುಕುವ ಸಾಧ್ಯತೆ ಇದೆ. ಸಂಬಂಧಿಕರಿಂದ ದೂರ ಉಳಿಯಲು ಬಯಸುವಿರಿ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ಪೂರ್ಣಗೊಳ್ಳುವುದಿಲ್ಲ.
ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಆಕಾಶ ನೀಲಿ
ಮೀನ
ವಿದೇಶದಲ್ಲಿ ಉದ್ಯೋಗ ಗಳಿಸಲು ಪ್ರಯತ್ನಿಸುವಿರಿ. ಕುಟುಂಬದವರೊಡನೆ ದೀರ್ಘಕಾಲದ ಪ್ರಯಾಣ ಮಾಡುವಿರಿ. ಶೀತ ವಾಯುವಿನ ತೊಂದರೆ ಇರುತ್ತದೆ. ಸಮಯಕ್ಕೆ ಸರಿಯಾಗಿ ಸ್ವಂತ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದು. ಅನಾಯಾಸವಾಗಿ ವೃತ್ತಿಯಲ್ಲಿ ಯಶಸ್ಸನ್ನು ಗಳಿಸುವಿರಿ. ಕುಟುಂಬದಲ್ಲಿ ನಡೆಯಲಿರುವ ವಿವಾಹ ಕಾರ್ಯದ ವಿವಾದವನ್ನು ದೂರ ಮಾಡುವಿರಿ. ಉತ್ತಮ ಯೋಚನಾಶಕ್ತಿ ಹೊಸ ಅವಕಾಶಗಳನ್ನು ರೂಪಿಸುತ್ತವೆ. ವ್ಯವಸಾಯದಲ್ಲಿ ಆಸಕ್ತಿ ಇರಲಿದೆ. ಭೂ ಸಂಬಂಧಿತ ವ್ಯಾಪಾರ ವಹಿವಾಟಿನಲ್ಲಿ ಲಾಭವಿರುತ್ತದೆ. ಸಾರ್ವಜನಿಕ ಸಂಸ್ಥೆಯ ನಿರ್ವಹಣೆಯ ಅಧಿಕಾರ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಅಧ್ಯಯನ ಮುಗಿವ ಮುನ್ನವೇ ಉದ್ಯೋಗಲಭಿಸುತ್ತದೆ.
ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ