Horoscope Today: ಹಣದ ವಿಚಾರದಲ್ಲಿ ದಿಟ್ಟ ನಿಲುವು, ಮನರಂಜನೆಗೆ ಆದ್ಯತೆ ನೀಡುತ್ತೀರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯರ ದಿನ ಭವಿಷ್ಯ
16 ಜುಲೈ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16th July 2024 Horoscope).
ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (16th July 2024 Horoscope)
ಇಂದಿನ ಪಂಚಾಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮಋತು-ಆಷಾಡ ಮಾಸ-ಶುಕ್ಲಪಕ್ಷ-ಮಂಗಳವಾರ
ತಿಥಿ: ದಶಮಿ ಹ. 04.47 ರವರೆಗು ಇರುತ್ತದೆ. ಆನಂತರ ಏಕಾದಶಿ ಆರಂಭವಾಗುತ್ತದೆ.
ನಕ್ಷತ್ರ: ವಿಶಾಖ ನಕ್ಷತ್ರವು ರಾ. 11.41 ರವರೆಗು ಇದ್ದು ಆನಂತರ ಅನೂರಾಧ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.01
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: ಮಧ್ಯಾಹ್ನ 03.41 ರಿಂದ ಸಂಜೆ 05.17
ಸಿಂಹ ರಾಶಿ
ಆತುರದ ತೀರ್ಮಾನಗಳು ನಿರಾಸೆಗೆ ಕಾರಣವಾಗುತ್ತದೆ. ಕುಟುಂಬದ ಹಿರಿಯರ ಸಲಹೆ, ಸೂಚನೆಗಳನ್ನು ಪಾಲಿಸಿದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ವಹಿಸುವುದು ಒಳ್ಳೆಯದು. ಉದ್ಯೋಗದಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ನಿಮಸ್ಯೆ ದೂರವಾಗಲಿದೆ. ಸಂತಸದ ಕ್ಷಣವೊಂದು ನಿಮ್ಮದಾಗಲಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಯಶಸ್ಸನ್ನು ಗಳಿಸುತ್ತಾರೆ. ಕುಟುಂಬದ ಸದಸ್ಯರೊಂದಿಗೆ ಬೇಸರ ಕಳೆಯಲು ಮನರಂಜನಾ ಸ್ಥಳಕ್ಕೆ ತೆರಳುವಿರಿ. ನವವಿವಾಹಿತರಿಗೆ ಸಂತಾನ ಲಾಭವಿದೆ. ಸೋದರಿಯ ಕುಟುಂಬದಲ್ಲಿ ಆಹ್ಲಾದಕರ ವಾತಾವರಣ ಮರುಕಳಿಸುತ್ತದೆ.
ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಬೂದು ಬಣ್ಣ
ಕನ್ಯಾ ರಾಶಿ
ಸ್ನೇಹಿತರು ಸಂಬಂಧಿಕರೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸುವಿರಿ. ಸಂತೋಷಕೂಟವನ್ನು ಏರ್ಪಡಿಸಲು ಹಣವನ್ನು ಖರ್ಚು ಮಾಡುವಿರಿ. ಆಹಾರ ಸೇವನೆಯಲ್ಲಿ ಇತಿ ಮಿತಿ ಇರದೆ ಹೋದಲ್ಲಿ ಅನಾರೋಗ್ಯ ಉಂಟಾಗುತ್ತದೆ. ನೀವು ತೆಗೆದುಕೊಳ್ಳುವ ತಪ್ಪು ನಿರ್ಧಾರದಿಂದ ಉದ್ಯೋಗದಲ್ಲಿ ಬದಲಾವಣೆ ಎದುರಾಗುತ್ತದೆ. ವಿದ್ಯಾರ್ಥಿಗಳು ಆತಂಕದ ಪರಿಸ್ಥಿತಿಯನ್ನು ಎದುರಿಸಲಿದ್ದಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿನ ನಿರೀಕ್ಷೆ ನಿಜವಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.
ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 9
ಅಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಂದು
ತುಲಾ ರಾಶಿ
ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬೆರೆಯುವಿರಿ. ನಿಮ್ಮ ಜೀವನ ನಿರ್ವಹಣೆಯ ಪರಿ ಎಲ್ಲರ ಮನ ಗೆಲ್ಲುತ್ತದೆ. ಸಮಾಜದಲ್ಲಿ ಜನಮೆಚ್ಚುವ ಕೆಲಸಗಳನ್ನು ಮಾಡುವಿರಿ. ನಾಯಕನ ಸ್ಥಾನಮಾನ ಗಳಿಸಲು ಹಾತೊರೆಯುವಿರಿ. ಉದ್ಯೋಗದಲ್ಲಿ ನಿರೀಕ್ಷೆಗೂ ಮೀರಿದ ಶುಭಫಲಗಳು ದೊರೆಯಲಿವೆ. ಹಣಕಾಸಿನ ವಿಚಾರದಲ್ಲಿ ದಿಟ್ಟನಿಲುವನ್ನು ತೆಗೆದುಕೊಳ್ಳುವಿರಿ. ಪಾಲುಗಾರಿಕೆಯ ವಿಚಾರದಲ್ಲಿ ಕೆಲವರ ವಿರೋಧವನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳ ಗ್ರಹಣ ಶಕ್ತಿ ಉತ್ತಮವಾದ್ದರಿಂದ ಕಲಿಕೆಯಲ್ಲಿ ತೊಂದರೆ ಇರದು. ತಂದೆಯವರ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ದೊರೆಯುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಅಕ್ಕಿ, ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಕಪ್ಪು
ವೃಶ್ಚಿಕ ರಾಶಿ
ಬಿಡುವಲ್ಲದ ದುಡಿಮೆ ಮನಕ್ಕೆ ಬೇಸರವನ್ನು ಉಂಟುಮಾಡುತ್ತದೆ. ಯೋಗ ಮತ್ತು ವ್ಯಾಯಾಮದಿಂದ ದೈಹಿಕ ಶಕ್ತಿಯು ಹೆಚ್ಚುತ್ತದೆ. ಒಂಟಿತನ ಬೇಸರ ಉಂಟುಮಾಡುತ್ತದೆ. ಕುಟುಂಬದಲ್ಲಿ ಉತ್ತಮ ಆತ್ಮೀಯತೆ ಇರುತ್ತದೆ. ಹಣಕಾಸಿನ ಕೊರತೆಯನ್ನು ಎದುರಿಸುವಿರಿ. ಉದ್ಯೋಗದಲ್ಲಿ ಎದುರಾಗುವ ಪರಿಸ್ಥಿತಿಗೆ ಹೊಂದಿಕೊಂಡು ನಡೆಯುವಿರಿ. ಮನರಂಜನೆಗೆ ಮೊದಲ ಆದ್ಯತೆಯನ್ನು ನೀಡುವಿರಿ. ಪ್ರವಾಸದಲ್ಲಿಯೇ ಹೆಚ್ಚಿನ ವೇಳೆಯನ್ನು ಕಳೆಯುವಿರಿ. ಹಣಕಾಸಿನ ವ್ಯವಹಾರದಲ್ಲಿ ತೊಂದರೆ ಇಲ್ಲದೆ ಹೋದರೂ ಎಚ್ಚರಿಕೆ ಇರಲಿ. ವೈವಾಹಿಕ ಜೀವನ ಸುಖಮಯವಾಗಿರುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ತಿಳಿ ಹಸಿರು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ವಿಭಾಗ