Horoscope Today: ಕಾನೂನು ಪ್ರಕ್ರಿಯೆಯಲ್ಲಿ ಜಯ, ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ದೊರೆಯಲಿದೆ; ಮೇ 16ರ ರಾಶಿಫಲ
16 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (16th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(16th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಗುರುವಾರ
ತಿಥಿ: ಅಷ್ಠಮಿ ಬೆಳಗ್ಗೆ 07.00 ರವರೆಗೂ ಇರುತ್ತದೆ. ಆನಂತರ ನವಮಿ ಆರಂಭವಾಗುತ್ತದೆ.
ನಕ್ಷತ್ರ : ಮಖೆ ನಕ್ಷತ್ರವು ಸಂಜೆ 06.52 ರವರೆಗೂ ಇರುತ್ತದೆ. ಆನಂತರ ಪುಬ್ಬ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.54
ಸೂರ್ಯಾಸ್ತ: ಸಂಜೆ 06.37
ರಾಹುಕಾಲ: 01.55 ರಿಂದ 03.30
ರಾಶಿಫಲ
ಧನಸ್ಸು
ದೊಡ್ಡಮಟ್ಟದ ವ್ಯವಹಾರದ ಜವಾಬ್ದಾರಿ ನಿಮ್ಮದಾಗುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಸುಖಜೀವನ ನಡೆಸುವಿರಿ. ಹಣದ ವ್ಯವಹಾರದಲ್ಲಿ ದೃಢವಾದ ನಿರ್ದಾರವನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ಕಾನೂನು ಪ್ರಕ್ರಿಯೆಯಲ್ಲಿ ಜಯ ಲಭಿಸುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಹೆಚ್ಚಿನ ಪ್ರಯತ್ನದಿಂದ ಯಶಸ್ಸನ್ನು ಗಳಿಸುತ್ತಾರೆ. ಧೈರ್ಯ ಸಾಹಸದ ಗುಣವನ್ನು ಬೆಳೆಸಿಕೊಳ್ಳುವಿರಿ. ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ದೊರೆಯುತ್ತದೆ. ವಾದ ವಿವಾದಕ್ಕೆ ತೆರೆ ಎಳೆದು ರಾಜಿ ಮಾಡಲು ನಿಶ್ಚಯಿಸುವಿರಿ. ಮಕ್ಕಳು ಒತ್ತಡವಿಲ್ಲದೆ ವಿದ್ಯಾರ್ಜನೆಯಲ್ಲಿ ಮುಂದುವರೆಯುವರು. ಆರಂಭದಲ್ಲಿ ಕಷ್ಟವಾದರೂ ಕೈಹಿಡಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಸ್ನೇಹಿತರಿಗೆ ನೀಡಿದ ಹಣವು ಮರು ಸಂದಾಯವಾಗುತ್ತದೆ.
ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೇರಳೆ
ಮಕರ
ದೊಡ್ಡ ಮಟ್ಟದ ಜಯವೊಂದು ನಿಮ್ಮದಾಗುತ್ತದೆ. ಎಚ್ಚರಿಕೆಯಿಂದ ಹಣದ ವ್ಯವಹಾರವನ್ನು ನಿರ್ವಹಿಸುವಿರಿ. ನಿಧಾನವೆನಿಸಿದರೂ ವಿಷಯವನ್ನು ಅರ್ಥಮಾಡಿಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳುವಿರಿ. ತಪ್ಪನ್ನು ಒಪ್ಪಿಕೊಳ್ಳುವ ಕಾರಣ ಜನರ ನಡುವೆ ಸಂತಸದಿಂದ ಇರುವಿರಿ. ವ್ಯಾಪಾರ ವ್ಯವಹಾರಲ್ಲಿ ಲಾಭ ಇರದೆ ಹೋದರೂ ನಷ್ಟವಂತೂ ಆಗುವುದಿಲ್ಲ. ತಂದೆಯವರ ಆರೋಗ್ಯದಲ್ಲಿ ಚೇತರಿಗೆ ಕಂಡುಬರುತ್ತದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸುವಿರಿ. ಅತಿಯಾದ ಒಳ್ಳೆಯತನದಿಂದ ಆತಂಕದ ಪರಿಸ್ಥಿತಿಯನ್ನು ಎದುರಿಸುವಿರಿ. ಸೋಮಾರಿತನ ದೊಡ್ಡ ಶತ್ರುವಾಗಿ ಕಾಡುತ್ತದೆ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಗುಲಾಬಿ
ಕುಂಭ
ದುಡುಕಿನ ಮಾತುಕತೆಯಿಂದ ಕುಟುಂಬದಲ್ಲಿ ನೆಮ್ಮದಿಯ ಕೊರತೆ ಇರಲಿದೆ. ಎಲ್ಲರ ಜೊತೆ ಪ್ರೀತಿ ವಿಶ್ವಾಸದಿಂದ ವರ್ತಿಸಿದಲ್ಲಿ ನಿಮಗೆ ಒಳ್ಳೆಯದು. ಪ್ರಾಚೀನ ಕಲೆಗಳನ್ನು ಅನುಸರಿಸುವವರಿಗೆ ಉತ್ತಮ ಫಲಗಳು ದೊರೆಯುತ್ತವೆ. ಬೇರೆಯವರ ಮಾತನ್ನು ಕೇಳದೆ ಹೋದರು ಹಟದ ಬುದ್ದಿ ಇರದು. ಸಂಗಾತಿಯೊಡನೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಇರುತ್ತದೆ . ಆತ್ಮೀಯರ ಸಹಾಯದಿಂದ ಭೂ ಅಭಿವೃದ್ಧಿ ಕಾರ್ಯದಲ್ಲಿ ಯಶಸ್ವಿಯಾಗುವಿರಿ. ಗೃಹೋಪಯೋಗಿ ಉಪಕರಣಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನ ತೊಂದರೆ ಬಹುಕಾಲ ಉಳಿಯದು. ಸೋದರನ ಸಲುವಾಗಿ ಹಣ ಖರ್ಚಾಗುತ್ತದೆ. ಬೇರೆಯವರಿಂದ ಹಣವನ್ನು ಸಾಲವಾಗಿ ಪಡೆಯುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬಿಳಿ
ಮೀನ
ದುಡಿದ ಹಣದಲ್ಲಿ ಬಹುಪಾಲು ಬೇರೆಯವರಿಗೆ ಖರ್ಚು ಮಾಡುವಿರಿ. ದೃಢವಾದ ಸಂಕಲ್ಪದಿಂದ ಮಾತ್ರ ಆರಂಭಿಸಿದ ಕೆಲಸದಲ್ಲಿ ಯಶಸ್ಸನ್ನು ಗಳಿಸುವಿರಿ. ಸಮಾಜಸೇವೆಯಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆಯಲಿದೆ. ಉದ್ಯೋಗದಲ್ಲಿ ಉನ್ನತ ಸ್ಥಾನ ಗಳಿಸುವಿರಿ. ಬಡ್ತಿ ದೊರೆಯುವ ಸಾದ್ಯತೆಗಳಿವೆ. ಅವಿವಾಹಿತರಿಗೆ ಹೆಚ್ಚಿನ ಪ್ರಯತ್ನದಿಂದ ವಿವಾಹ ನಿಶ್ಚಯವಾಗಲಿದೆ. ಅರ್ಥವಿಲ್ಲದ ಚಾಡಿ ಮಾತನ್ನು ನಂಬಿದಲ್ಲಿ ಅಪಾಯಕ್ಕೆ ಸಿಲುಕುವಿರಿ. ವೈಭವಯುತ ಮನೆಯನ್ನು ಕೊಳ್ಳುವ ಆಸೆ ಉಂಟಾಗಲಿದೆ. ವಾಹನ ಚಾಲನೆಯ ವೇಳೆ ತೊಂದರೆ ಆಗುತ್ತದೆ. ವಿದ್ಯಾರ್ಥಿಗಳು ವಿಶೇಷವಾದ ಸಾಧನೆ ಮಾಡುವರು. ವ್ಯಾಪಾರ ವಹಿವಾಟಿನಲ್ಲಿ ಉತ್ತಮ ಲಾಭ ದೊರೆಯುತ್ತದೆ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ 10
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ : ಬೂದು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ