ಶುಭ ಕಾರ್ಯಗಳಿಗೆ ಹಣ ಖರ್ಚು, ದಂಪತಿ ನಡುವೆ ಉತ್ತಮ ಬಾಂಧವ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಶುಭ ಕಾರ್ಯಗಳಿಗೆ ಹಣ ಖರ್ಚು, ದಂಪತಿ ನಡುವೆ ಉತ್ತಮ ಬಾಂಧವ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಶುಭ ಕಾರ್ಯಗಳಿಗೆ ಹಣ ಖರ್ಚು, ದಂಪತಿ ನಡುವೆ ಉತ್ತಮ ಬಾಂಧವ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

17 ಜೂನ್‌ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17 June 2024 Daily Horoscope).

ಶುಭ ಕಾರ್ಯಗಳಿಗೆ ಹಣ ಖರ್ಚು, ದಂಪತಿ ನಡುವೆ ಉತ್ತಮ ಬಾಂಧವ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಶುಭ ಕಾರ್ಯಗಳಿಗೆ ಹಣ ಖರ್ಚು, ದಂಪತಿ ನಡುವೆ ಉತ್ತಮ ಬಾಂಧವ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಸೋಮವಾರ

ತಿಥಿ : ಏಕಾದಶಿ ರಾತ್ರಿ12.04ರವರೆಗೂ ಇರುತ್ತದೆ. ಆನಂತರ ದ್ವಾದಶಿ ಆರಂಭವಾಗುತ್ತದೆ.

ನಕ್ಷತ್ರ : ಚಿತ್ತೆ ನಕ್ಷತ್ರವು .12.19 ರವರೆಗೆ ಇದ್ದು ಆನಂತರ ಸ್ವಾತಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ05.52

ಸೂರ್ಯಾಸ್ತ: ಸಂಜೆ 06.47

ರಾಹುಕಾಲ: ಬೆಳಗ್ಗೆ07.36 ರಿಂದ 09.12

ರಾಶಿಫಲ

ಮೇಷ

ಮಾಡಿದ ತಪ್ಪನ್ನು ಸರಿಪಡಿಸಿಕೊಂಡು ದಿನದ ಕೆಲಸವನ್ನು ಅರಂಭಿಸುವಿರಿ. ಎಲ್ಲರ ಜೊತೆ ಸಂತಸದಿಂದ ಬಾಳುವಿರಿ. ನಿಮ್ಮ ಕೀರ್ತಿ ಪ್ರತಿಷ್ಟೆಯನ್ನು ಉಳಿಸಿಕೊಳ್ಳುವ ಕೆಲಸವನ್ನು ಆಯ್ದುಕೊಳ್ಳುವಿರಿ. ಬದಲಾಗುವ ಪರಿಸ್ಥಿತಿಗೆ ಅನುಗುಣವಾಗಿ ನಡೆವ ಕಾರಣ ಯಾವುದೇ ತೊಂದರೆ ಇರದು. ಎಲ್ಲರ ಜೊತೆ ಮೌನದಿಂದ ನಡೆದುಕೊಳ್ಳುವಿರಿ. ಕುಟುಂಬದ ವರಮಾನದಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ. ಆರೋಗ್ಯ ಸ್ಥಿರವಾಗಿರುತ್ತದೆ. ಹೆಚ್ಚಿನ ಪ್ರಯತ್ನದಿಂದ ಕೆಲಸ ಕಾರ್ಯಗಳನ್ನು ಮಾಡುವಿರಿ. ಮಡದಿ ಮಕ್ಕಳ ಜೊತೆ ಸಂತೋಷದಿಂದ ಬಾಳುವಿರಿ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ

ವೃಷಭ

ಪ್ರಯತ್ನಶೀಲರರಾದ ನಿಮಗೆ ಯಾವುದೇ ಕೆಲಸ ಅಸಾಧ್ಯವಾಗುವುದಿಲ್ಲ. ಬೇರೆಯವರ ಮನಸ್ಸಿಗೆ ನೋವುಂಟುಮಾಡದೆ ಕೆಲಸ ಕಾರ್ಯಗಳನ್ನು ಪೂರೈಸುವಿರಿ. ಜನ ಸಾಮಾನ್ಯರ ಜೊತೆ ಆತ್ಮೀಯತೆಯಿಂದ ಬಾಳುವಿರಿ. ಸಹೋದ್ಯೋಗಿಗಳ ಜೊತೆ ಆತ್ಮೀಯವಾಗಿ ಬೆರೆತು ಎಲ್ಲರ ಮನ ಗೆಲ್ಲುವಿರಿ. ಕೈ ಕಾಲುಗಳಲ್ಲಿ ನೋವಿರುತ್ತದೆ. ಬಂಧು ಬಳಗದವರ ತೊಂದರೆಯನ್ನು ಬಗೆಹರಿಸುವಿರಿ. ಖರ್ಚು ವೆಚ್ಚಗಳು ಕಡಿಮೆ ಆಗುತ್ತದೆ. ಬೇರೆಯವರ ಸಲಹೆಯನ್ನು ಒಪ್ಪುವಿರಿ. ಚಿಕ್ಕಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತದೆ. ಹೊಸ ನಿರೀಕ್ಷೆಗಳು ಕಾರ್ಯರೂಪಕ್ಕೆ ಬರಲಿವೆ. ವಂಶದ ಹಿರಿಯರ ಆಗಮನ ಖುಷಿ ನೀಡಲಿದೆ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿ

ಮಿಥುನ

ಕುಟುಂಬದ ಎಲ್ಲರೂ ಒಂದೇ ಸೂರಿನಲ್ಲಿ ನೆಲೆಸುವ ಅವಕಾಶ ದೊರೆಯುತ್ತದೆ. ಸ್ವಂತ ಪ್ರಯತ್ನದಿಂದ ಮಕ್ಕಳು ಯಶಸ್ಸಿನ ಹಾದಿಯಲ್ಲಿ ನಡೆಯುತ್ತಾರೆ. ಹಿರಿಯರ ಮಾತನ್ನು ಒಪ್ಪುವ ಕಾರಣ ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಪ್ರತಿಯೊಂದು ವಿಚಾರದಲ್ಲೂ ಹೆಚ್ಚಿನ ಆಸಕ್ತಿ ತೋರುವಿರಿ. ಮುಂಗೋಪ ನಿಯಂತ್ರಿಸಿ. ದಂಪತಿ ನಡುವೆ ಉತ್ತಮ ಬಾಂಧವ್ಯ ಇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರ ಸಹಾಯ ದೊರೆಯುತ್ತದೆ. ಹಣಕಾಸಿನ ವ್ಯವಹಾರ ಉತ್ತಮವಾಗಿರಲಿದೆ. ಹಣಕಾಸನ್ನು ಉಳಿಸುವ ಯೋಜನೆಗೆ ಸೋದರನ ಸಹಕಾರ ದೊರೆಯುತ್ತದೆ. ನಿಮಗೆ ಅರಿವಿಲ್ಲದಂತೆ ಹಣವನ್ನು ಖರ್ಚು ಮಾಡುವಿರಿ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕಟಕ

ಮನಸ್ಸಿನ ಬೇಸರ ದೂರವಾಗುವ ಸನ್ನಿವೇಶ ಎದುರಾಗುತ್ತದೆ. ಸರಳ ಜೀವನದಿಂದ ಎಲರ ಗಮನ ಸೆಳೆಯುವಿರಿ. ಬೇರೆಯವರ ಮನಸ್ಸನ್ನು ನೋಯಿಸದಂತೆ ನಡೆದುಕೊಳ್ಳುವಿರಿ. ವಾದ ವಿವಾದದಲ್ಲಿ ನಿಮ್ಮನ್ನು ಗೆಲ್ಲಲಾಗುವುದಿಲ್ಲ. ಗೃಹಿಣಿಯರ ಸಹಯೋಗದಲ್ಲಿ ಗುಡಿಕೈಗಾರಿಕೆಯನ್ನು ಆರಂಭಿಸುವ ಯೋಜನೆ ರೂಪಿಸುವಿರಿ. ಶಾಂತಿ ಸಂಧಾನ ನಡೆಸುವಲ್ಲಿ ಪ್ರಮುಖ ಪಾತ್ರವಹಿಸುವಿರಿ. ಒಮ್ಮೆ ತೆಗೆದುಕೊಂಡ ತೀರ್ಮಾನವನ್ನು ಬದಲಾಯಿಸುವುದಿಲ್ಲ. ಮಕ್ಕಳ ಜೊತೆ ಪ್ರೀತಿಯಿಂದ ವರ್ತಿಸುವಿರಿ. ಶುಭಕಾರ್ಯಗಳಿಗೆ ಹಣ ಖರ್ಚು ಮಾಡುವಿರಿ. ಸಾಲದ ವ್ಯವಹಾರದಲ್ಲಿ ಆಸಕ್ತಿ ಇರುವುದಿಲ್ಲ. ಸ್ವತಂತ್ರವಾಗಿ ಜೀವನ ನಿರ್ವಹಿಸುವಿರಿ.

ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.