Horoscope Today: ಅನಾವಶ್ಯಕ ಖರ್ಚಿನಿಂದ ಆರ್ಥಿಕ ಸಮಸ್ಯೆ, ಕುಟುಂಬದಲ್ಲಿ ಸಂದಿಗ್ಧ ವಾತಾವರಣ; ಮೇ 17ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅನಾವಶ್ಯಕ ಖರ್ಚಿನಿಂದ ಆರ್ಥಿಕ ಸಮಸ್ಯೆ, ಕುಟುಂಬದಲ್ಲಿ ಸಂದಿಗ್ಧ ವಾತಾವರಣ; ಮೇ 17ರ ರಾಶಿಫಲ

Horoscope Today: ಅನಾವಶ್ಯಕ ಖರ್ಚಿನಿಂದ ಆರ್ಥಿಕ ಸಮಸ್ಯೆ, ಕುಟುಂಬದಲ್ಲಿ ಸಂದಿಗ್ಧ ವಾತಾವರಣ; ಮೇ 17ರ ರಾಶಿಫಲ

17 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17th May 2024 Daily Horoscope).

ಮೇ 17ರ ರಾಶಿಫಲ
ಮೇ 17ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶುಕ್ರವಾರ

ತಿಥಿ: ನವಮಿ ಬೆಳಗ್ಗೆ 08.48 ರವರೆಗೂ ಇರುತ್ತದೆ. ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ: ಪುಬ್ಬ ನಕ್ಷತ್ರವು ರಾತ್ರಿ 09.20 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.54

ಸೂರ್ಯಾಸ್ತ: ಸಂಜೆ 06.37

ರಾಹುಕಾಲ: 10.45 ರಿಂದ 12.20

ರಾಶಿಫಲ

ಮೇಷ

ಕಾರ್ಯ ನಿಮಿತ್ತ ಕುಟುಂಬದವರಿಂದ ದೂರ ಉಳಿಯಬೇಕಾಗುತ್ತದೆ. ಬಹಳ ದಿನಗಳ ಪ್ರಯತ್ನದಿಂದ ಸ್ವಂತ ಮನೆ ಅಥವ ಜಮೀನನ್ನು ಕೊಳ್ಳುವಿರಿ. ಸರ್ಕಾರಿ ಅನುದಾನಿತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವೃತ್ತಿಕ್ಷೇತ್ರದಲ್ಲಿ ವಿರೋಧ ಉಂಟಾದರೂ ಸಮರ್ಥವಾಗಿ ಎದುರಿಸಬಲ್ಲಿರಿ. ದುಡುಕಿನ ನಿರ್ಧಾರದಿಂದ ಕೂಡಿಟ್ಟ ಹಣ ವೆಚ್ಚವಾಗುತ್ತದೆ. ಆಪ್ತ ಸ್ನೇಹಿತರಿಗೆ ಅನಿವಾರ್ಯವಾಗಿ ಹಣದ ಸಹಾಯ ಮಾಡುವಿರಿ. ನಿಮ್ಮೆಲ್ಲಾ ಕೆಲಸಗಳಲ್ಲಿ ಮಕ್ಕಳ ಸಹಾಯ ಸಹಕಾರ ಸದಾ ದೊರೆಯುತ್ತದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸವು ಹೊಸ ಜೀವನವನ್ನು ರೂಪಿಸುತ್ತದೆ. ಸಿಡುಕಿನಿಂದ ವರ್ತಿಸದೆ ಸಹನೆಯಿಂದ ವರ್ತಿಸಿ. ಸಾಲದ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಂದು

ವೃಷಭ

ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸಲು ವಿಫಲರಾಗುವಿರಿ. ಕುಟುಂಬದಲ್ಲಿ ಸಂದಿಗ್ಧ ಸಂದರ್ಭವೊಂದು ಎದುರಾಗುತ್ತದೆ. ಬೇರೆಯವರ ಮಾತನ್ನು ಮೊದಲು ಅರ್ಥಮಾಡಿಕೊಳ್ಳಿ. ವಿವಾಹದ ಮಾತುಕತೆ ಅಪೂರ್ಣವಾಗುತ್ತದೆ. ದೈಹಿಕ ದೌರ್ಬಲ್ಯ ನಿಮ್ಮನ್ನು ಕಾಡುತ್ತದೆ. ಹೆಚ್ಚಿನ ವೇತನ ದೊರೆತು ಉದ್ಯೋಗವನ್ನು ಬದಲಾಯಿಸುವಿರಿ. ಆತ್ಮೀಯರೊಬ್ಬರ ಹಣಕಾಸಿನ ಸಮಸ್ಯೆಯನ್ನು ಪರಿಹರಿಸುವಿರಿ. ವಿದ್ಯಾರ್ಥಿಗಳು ಉತ್ಸಾಹದಿಂದ ವಿದ್ಯಾಭ್ಯಾಸವನ್ನು ಮುಂದುವರೆಸುವರು. ಸೋದರರ ಜೊತೆಗೂಡಿ ಪಾಲುದಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಆತ್ಮೀಯರ ವ್ಯಾಪಾರದಲ್ಲಿ ಸಹಕಾರ ನೀಡುವಿರಿ. ಕೀಲು ನೋವಿನ ತೊಂದರೆ ನಿಮ್ಮನ್ನು ಕಾಡಲಿದೆ. ವಯೋವೃದ್ಧರಿಗೆ ನೆರವಾಗುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು

ಮಿಥುನ

ಅನಾವಶ್ಯಕವಾದ ಅನುಮಾನ ಕುಟುಂಬದ ಸ್ವಾಸ್ಥ್ಯವನ್ನು ಕೆಡಿಸುತ್ತದೆ. ಉತ್ತಮ ಆರೋಗ್ಯ ಉಳಿಸಿಕೊಳ್ಳಲು ದೈಹಿಕ ವ್ಯಾಯಾಮವನ್ನು ಅವಲಂಬಿಸುವಿರಿ. ಉದ್ಯೋಗದಲ್ಲಿ ಬೇಸರಗೊಂಡು ವೃತ್ತಿ ಬದಲಾವಣೆ ಮಾಡುವಿರಿ. ವಿದ್ಯಾರ್ಥಿಗಳು ದೃಢಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುವರು. ಹಿರಿಯರ ಆರೋಗ್ಯದಲ್ಲಿ ಏರಿಳಿತ ಉಂಟಾಗಬಹುದು. ಉಸಿರಿನ ತೊಂದರೆ ಇದ್ದಲ್ಲಿ ಎಚ್ಚರಿಕೆ ವಹಿಸಿ. ವ್ಯಾಪಾರ ವ್ಯವಹಾರದಲ್ಲಿ ಆದಾಯದ ಕೊರತೆ ಇರುವುದಿಲ್ಲ ಆದರೆ ಉಳಿತಾಯ ಸಾಧ್ಯವಾಗದು. ಶುಭ ಕಾರ್ಯದ ಬಗ್ಗೆ ಮಾತುಕತೆ ನಡೆಯುತ್ತದೆ. ಸಮಾಜದಲ್ಲಿ ನಿಮ್ಮ ನೆನಪು ಉಳಿಯುವ ಕೆಲಸವೊಂದನ್ನು ಮಾಡುವಿರಿ. ಬೆಳ್ಳಿಯ ವಸ್ತುವೊಂದು ಆತ್ಮೀಯರಿಂದ ಉಡುಗೊರೆಯಾಗಿ ದೊರೆಯಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಕಟಕ

ಆತ್ಮವಿಶ್ವಾಸದಿಂದ ಕ್ಲಿಷ್ಟಕರವಾದ ಕೆಲಸವನ್ನೂ ಮಾಡಬಲ್ಲಿರಿ. ಅಕಸ್ಮಿಕವಾಗಿ ಮಾಡುವ ತಪ್ಪು ಕುಟುಂಬದಲ್ಲಿ ಬೇಸರ ಉಂಟುಮಾಡಲಿದೆ. ಕೆಲಸದ ಒತ್ತಡ ಹೆಚ್ಚಾಗಿ ವಿಶ್ರಾಂತಿ ದೂರವಾಗುತ್ತದೆ. ಮನದಲ್ಲಿ ಯಾವುದೋ ಯೋಚನೆ ಸದಾ ಕಾಡುತ್ತದೆ. ಬೇರೆಯವರ ನಿರ್ದಾರವನ್ನು ಸುಲಭವಾಗಿ ಒಪ್ಪುವುದಿಲ್ಲ. ಕುಟುಂಬದಲ್ಲಿ ನೆಮ್ಮದಿ ನೆಲೆಸಿರುತ್ತದೆ. ಹಣದ ಕೊರತೆ ಉಂಟಾಗುತ್ತದೆ. ಅನಗತ್ಯ ತಿರುಗಾಟದಿಂದ ಬೇಸರಕ್ಕೆ ಒಳಗಾಗುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭಗಳಿಸುವಿರಿ. ಸ್ನೇಹಿತರ ಜೊತೆಗೂಡಿ ಸಾಹಸ ಕ್ರೀಡೆಯಲ್ಲಿ ತೊಡಗುವಿರಿ. ವಿದ್ಯಾರ್ಥಿಗಳ ಆಸೆ ಈಡೇರುತ್ತದೆ. ಕಫದ ತೊಂದರೆ ಇರುತ್ತದೆ. ಬೇರೆಯವರಿಗೆ ಬುದ್ಧಿವಾದ ಹೇಳುವಲ್ಲಿ ನಿರತರಾಗುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.