Horoscope Today: ಇಷ್ಟಪಟ್ಟು ತಿನ್ನುವ ಆಹಾರದಿಂದಲೇ ಕಷ್ಟ, ಈ ರಾಶಿಯವರು ಆರೋಗ್ಯದ ಕಡೆ ಗಮನ ನೀಡಬೇಕು; ಮೇ 17ರ ದಿನ ಭವಿಷ್ಯ
17 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (17th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (17th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶುಕ್ರವಾರ
ತಿಥಿ: ನವಮಿ ಬೆಳಗ್ಗೆ 08.48 ರವರೆಗೂ ಇರುತ್ತದೆ. ಆನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ: ಪುಬ್ಬ ನಕ್ಷತ್ರವು ರಾತ್ರಿ 09.20 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.54
ಸೂರ್ಯಾಸ್ತ: ಸಂಜೆ 06.37
ರಾಹುಕಾಲ: 10.45 ರಿಂದ 12.20
ರಾಶಿಫಲ
ಸಿಂಹ
ಧೃತಿಗೆಡದೆ ಧೈರ್ಯದಿಂದ ಕುಟುಂಬದ ಸಮಸ್ಯೆಯನ್ನು ಬಗೆಹರಿಸುವಿರಿ. ನಿಮ್ಮ ಹಣಕಾಸಿನ ನಿರ್ವಹಣೆಯ ವೈಖರಿ ಎಲ್ಲರಲ್ಲಿ ಆಚ್ಚರಿಯನ್ನು ಉಂಟುಮಾಡುತ್ತದೆ. ಸೋಲನ್ನು ಗೆಲುವಾಗಿ ಪರಿವರ್ತಿಸುವ ಕಲೆ ತಿಳಿದಿರುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಅನಿರೀಕ್ಷಿತ ಧನಲಾಭ ಉಂಟಾಗುತ್ತದೆ. ಸಮಾಜದ ನಾಯಕತ್ವದ ಹೊಣೆ ನಿಮ್ಮದಾಗಲಿದೆ. ಮಕ್ಕಳ ತಪ್ಪನ್ನು ತಿದ್ದುವ ಜವಾಬ್ದಾರಿ ನಿಮ್ಮದಾಗಲಿದೆ. ಮನಸ್ಸಿಗೆ ಸರಿಕಂಡ ಕೆಲಸ ಮಾಡುವಿರಿ. ವಿದ್ಯಾರ್ಥಿಗಳು ಸದಾಕಾಲ ಕಲಿಕೆಯಲ್ಲಿ ಮುಂಚೂಣಿಯಲ್ಲಿ ಇರುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಆಸಕ್ತಿ ತೋರುವುದಿಲ್ಲ. ದುಬಾರಿ ಬೆಲೆಯ ಒಡವೆ ವಸ್ತ್ರವನ್ನು ಕೊಳ್ಳುವಿರಿ.
ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಕನ್ಯಾ
ಮಾನಸಿಕ ಒತ್ತಡಕ್ಕೆ ಮಣಿಯದೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ವಿಯಾಗುವಿರಿ. ತಾಯಿಯವರಿಗೆ ಸಂಬಂಧಿಸಿದ ಹಣಕಾಸಿನ ವಿವಾದ ಸುಖಾಂತ್ಯಗೊಳ್ಳಲಿದೆ. ಮನದಲ್ಲಿ ವೈರಾಗ್ಯದ ಭಾವನೆ ಬರುತ್ತದೆ. ಸಾಲದ ವ್ಯವಹಾರದಲ್ಲಿ ಆತ್ಮೀಯರ ಜೊತೆ ವಿವಾದ ಉಂಟಾಗಲಿದೆ. ಹಣದ ಕೊರತೆಯನ್ನು ನೀಗಿಸಲು ಸ್ವಂತ ವ್ಯಾಪಾರವನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ದೂರವಾಗಿ ನೆಮ್ಮದಿ ನೆಲೆಸಿರುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗದಲ್ಲಿ ಮುಂದುವರೆಯುತ್ತಾರೆ. ಮಿತಿ ಇಲ್ಲದ ಆಹಾರ ಸೇವನೆಯಿಂದ ಅಜೀರ್ಣದ ತೊಂದರೆ ಉಂಟಾಗಬಹುದು. ಹೊಸ ವ್ಯಾಪಾರವನ್ನು ಆರಂಭಿಸದಿರಿ. ದುಬಾರಿ ವಸ್ತ್ರವನ್ನು ಕೊಳ್ಳುವಿರಿ. ಪಾಲುಗಾರಿಕೆ ವ್ಯಾಪಾರದಲ್ಲಿ ಮನಸ್ಸಿರುವುದಿಲ್ಲ.
ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಹಾಲಿನ ಬಣ್ಣ
ತುಲಾ
ಸರಿ ತಪ್ಪನ್ನು ಅರಿತು ಕೆಲಸ ಕಾರ್ಯದಲ್ಲಿ ತೊಡಗುವಿರಿ. ಕುಟುಂಬದಲ್ಲಿ ನಿಮ್ಮ ನಿರ್ಧಾರಗಳಿಗೆ ಪೂರ್ಣ ಬೆಂಬಲ ದೊರೆಯುತ್ತದೆ. ಕಾನೂನು ಸಂಬಂಧಿತ ಉದ್ಯೋಗ ದೊರೆಯುತ್ತದೆ. ಕೌಟುಂಬಿಕ ವಿವಾದದಲ್ಲಿ ಜಯ ಗಳಿಸುವಿರಿ. ಐಷಾರಾಮಿ ವಾಹನವನ್ನು ಕೊಳ್ಳುವಿರಿ. ಕುಟುಂಬದಲ್ಲಿ ಬೇಸರದ ಸನ್ನಿವೇಶವೊಂದು ನಡೆಯುತ್ತದೆ. ಒಳ್ಳೆಯ ಮಾತಿನ ಕಾರಣ ಸ್ನೇಹಿತರು ಹೆಚ್ಚುತ್ತಾರೆ. ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ದೊರೆಯಲಿದೆ. ಅನಿರೀಕ್ಷಿತವಾಗಿ ವಾಣಿಜ್ಯ ಸಂಸ್ಥೆಯ ಒಡೆತನ ದೊರೆಯುತ್ತದೆ. ಶಾಂತಿ ಸಂಧಾನ ನಡೆಸುವಲ್ಲಿ ಯಶಸ್ವಿಯಾಗುವಿರಿ. ವಿಶ್ರಾಂತಿ ಇಲ್ಲದೆ ಬೇಸರಗೊಳ್ಳುವಿರಿ. ಧಾರ್ಮಿಕ ಕೇಂದ್ರಕ್ಕೆ ಆಸರೆಯಾಗಿ ನಿಲ್ಲುವಿರಿ. ವಾಹನೆ ಚಾಲನೆ ಮಾಡುವ ವೇಳೆ ಎಚ್ಚರ ಇರಲಿ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬೂದು ಬಣ್ಣ
ವೃಶ್ಚಿಕ
ಆರೋಗ್ಯ ಸುಧಾರಿಸುತ್ತದೆ. ಅತಿಯಾದ ಆತ್ಮವಿಶ್ವಾಸದಿಂದ ತೊಂದರೆಗೆ ಸಿಲುಕುವಿರಿ. ಬಂಧು ಬಳಗದವರ ಜೊತೆಯಲ್ಲಿ ಉತ್ತಮ ಅನುಬಂಧ ಇರಲಿದೆ. ಹೊಸದಾಗಿ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಅಡ್ಡಿ ಆತಂಕಗಳು ಉಂಟಾಗಲಿದೆ. ಆದರೆ ಧೈರ್ಯವೇ ನಿಮ್ಮನ್ನು ಪಾರುಮಾಡುತ್ತದೆ. ದುಡುಕುತನದಿಂದ, ಈಗ ಮಾಡುತ್ತಿರುವ ಉದ್ಯೋಗವನ್ನು ಬದಲಿಸುವಿರಿ. ಕುಟುಂಬದವರ ಜೊತೆ ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಭಾಗಶ: ಯಶಸ್ವಿಯಾಗುವಿರಿ. ಶಾಂತಿಯಿಂದ ವರ್ತಿಸಿ ಆಪತ್ತಿನಿಂದ ಪಾರಾಗುವಿರಿ. ವಿದ್ಯಾರ್ಥಿಗಳು ಅಡ್ಡಿ ಆತಂಕಗಳನ್ನು ಎದುರಿಸಿದ ನಂತರ ಯಶಸ್ಸನ್ನು ಕಾಣುತ್ತಾರೆ. ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಆಕಾಶ ನೀಲಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
