Horoscope Today: ವ್ಯಾಪಾರ ವ್ಯವಹಾರದಲ್ಲಿ ಲಾಭ, ಹಠದಿಂದ ತಪ್ಪು ಮಾಡಿ ಪಶ್ಚಾತಾಪ ಪಡುವಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವ್ಯಾಪಾರ ವ್ಯವಹಾರದಲ್ಲಿ ಲಾಭ, ಹಠದಿಂದ ತಪ್ಪು ಮಾಡಿ ಪಶ್ಚಾತಾಪ ಪಡುವಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ವ್ಯಾಪಾರ ವ್ಯವಹಾರದಲ್ಲಿ ಲಾಭ, ಹಠದಿಂದ ತಪ್ಪು ಮಾಡಿ ಪಶ್ಚಾತಾಪ ಪಡುವಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 18, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18 March 2024 Daily Horoscope).

ಮಾರ್ಚ್​ 18ರ ದಿನಭವಿಷ್ಯ
ಮಾರ್ಚ್​ 18ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಸೋಮವಾರ

ತಿಥಿ : ನವಮಿ ರಾ.02.11 ರವರೆಗು ಇರುತ್ತದೆ. ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ : ಆರ್ದ್ರೆ ನಕ್ಷತ್ರವು ರಾ.09.36 ರವರೆಗೆ ಇರುತ್ತದೆ. ಆನಂತರ ಪುನರ್ವಸು ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.24

ಸೂರ್ಯಾಸ್ತ: ಸ.06.29

ರಾಹುಕಾಲ : ಬೆ.07.30 ರಿಂದ ಬೆ.09.00

ರಾಶಿ ಫಲಗಳು

ಸಿಂಹ

ಸಿಡುಕಿನ ಕಾರಣ ಕುಟುಂಬದಲ್ಲಿ ನೆಮ್ಮದಿ ಇರುವುದಿಲ್ಲ. ಉದ್ಯೋಗದಲ್ಲಿ ಅಧಿಕಾರಿಗಳ ಸಲಹೆ ಪಾಲಿಸಿವುದು ಒಳ್ಳೆಯದು. ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ವಿದ್ಯಾರ್ಥಿಗಳು ಹಠದಿಂದ ಮುಂದಿನ ಆಯ್ಕೆಯಲ್ಲಿ ನಿರತರಾಗುತ್ತಾರೆ. ಅಶಕ್ತರಿಗೆ ಸಹಾಯ ಮಾಡುವಿರಿ. ಹಣದ ಕೊರತೆಯಿಂದ ಪಾರಾಗಲು ಉದ್ಯೋಗ ಬದಲಿಸುವಿರಿ. ಗಣ್ಯವ್ಯಕ್ತಿಗಳ ಸಹಕಾರ ದೊರೆಯುತ್ತದೆ. ರಾಜಕೀಯದಲ್ಲಿ ಯಾವುದೇ ಉನ್ನತ ಅವಕಾಶವೊಂದು ದೊರೆಯಲಿದೆ. ಆಸೆ ಆಕಾಂಕ್ಷೆಗಳನ್ನು ತೊರೆದು ವೈರಾಗ್ಯದ ಭಾವನೆ ತಾಳುವಿರಿ. ಧೈರ್ಯದಿಂದ ಸೋಲನ್ನು ಗೆಲುವಾಗಿ ಪರಿವರ್ತಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಮನೆಯಲ್ಲಿನ ಹೆಣ್ಣುಮಕ್ಕಳ ಉನ್ನತಿಗಾಗಿ ಹೆಚ್ಚಿನ ಗಮನ ನೀಡುವಿರಿ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ ಬಣ್ಣ

ಕನ್ಯಾ

ಕುಟುಂಬದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಉದ್ಯೋಗದ ಕಾರಣ ವಿದೇಶಕ್ಕೆ ಬೇಟಿ ನೀಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಡ್ಡಿ ಆತಂಕಗಳು ಇರುತ್ತದೆ. ವಿದ್ಯಾರ್ಥಿಗಳು ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ಗಳಿಸುತ್ತಾರೆ. ಆತುರದ ಬುದ್ಧಿಯಿಂದ ತೊಂದರೆ ಅನುಭವಿಸುವಿರಿ. ರಾಜಕೀಯಕ್ಷೇತ್ರದಲ್ಲಿ ಸಮಾನ್ಯಮಟ್ಟದ ಪಲಿತಾಂಶಗಳು ದೊರೆಯುತ್ತದೆ. ಹಠದಿಂದ ತಪ್ಪು ಮಾಡಿ ನಂತರ ಪಶ್ಚಾತಾಪ ಪಡುವಿರಿ. ತಂದೆಯವರು ಭೂವಿವಾದಕ್ಕೆ ಪರಿಹಾರ ಕಂಡುಹಿಡಿಯುವಿರಿ. ಆತ್ಮೀಯರ ಒಡಗೂಡಿ ಮಾಡುವ ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭವಿರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಆತ್ಮೀಯರ ವಿವಾಹಕ್ಕೆ ಸಹಾಯಮಾಡುವಿರಿ. ಬೇಸರ ಉಂಟಾಗುವಂತೆ ಮಾತನಾಡುವಿರಿ. ಬೇರೆಯವನ್ನು ಟೀಕಿಸುವ ಮೊದಲು ಅವರ ವಿಶ್ವಾಸ ಗಳಿಸಲು ಪ್ರಯತ್ನಿಸಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ತುಲಾ

ಕುಟುಂಬದ ಸಮಸ್ಯೆಯೊಂದು ನಿಮ್ಮಿಂದಾಗಿ ಪರಿಹಾರಗೊಳ್ಳಲಿದೆ. ಉದ್ಯೋಗದಲ್ಲಿ ಉನ್ನತ ಅಧಿಕಾರವನ್ನುಗಳಿಸುವಿರಿ. ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಗುರಿಯನ್ನು ತಲುಪಲಿದ್ದಾರೆ. ಸಮಾಜದಲ್ಲಿ ಗಣ್ಯವ್ಯಕ್ತಿಯ ಸ್ಥಾನ ಮಾನ ದೊರೆಯುತ್ತದೆ. ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ನಿಮ್ಮದಾಗಿಸಿಕೊಳ್ಳುವಿರಿ. ನಯವಾದ ಮಾತು ಕತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ವ್ಯಾಪಾರದ ದೃಷ್ಠಿಯಿಂದ ಹೊಸ ವಾಹನವನ್ನು ಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಕುಟುಂಬದಲ್ಲಿನ ಸಹಾಯ ಸಹಕಾರ ನಿಮಗೆ ದೊರೆಯುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯುತ್ತದೆ. ಪಕ್ಷಿಗಳು ಪ್ರಾಣಿಗಳನ್ನು ಸಾಕುವ ಆಸೆ ಮೂಡುತ್ತದೆ. ಬಡವರಿಗೆ ಆಹಾರ ನೀಡುವಲ್ಲಿ ಸಂತಸ ಕಾಣುವಿರಿ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಶ್ಚಿಕ

ಮುಂಗೋಪದ ಕಾರಣ ಕುಟುಂಬದಲ್ಲಿ ಗಂಭೀರದ ವಾತಾವರಣ ಇರಲಿದೆ. ಅಧಿಕಾರ ವರ್ಗದ ಅಸಂಬದ್ದ ಮಾತಿಗೆ ಬೇಸರಗೊಂಡು ಉದ್ಯೋಗವನ್ನು ಬದಲಿಸುವಿರಿ. ಮಕ್ಕಳ ವಿದ್ಯಾಭ್ಯಾಸಕ್ಕೆ ಮೊದಲ ಆಧ್ಯತೆ ನೀಡುವಿರಿ. ಆತ್ಮೀಯರು ಹಣದ ಸಹಾಯ ಮಾಡುತ್ತಾರೆ. ತಂದೆಯವರ ವಂಶದ ಆಸ್ತಿಯ ವಿವಾದ ಬಗೆಹರಿಯುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಒಡನೆ ಕಲಿವ ಅಭ್ಯಾಸ ಬೆಳೆಸಿಕೊಳ್ಳಬೇಕು. ದಿನದಾಂತ್ಯಕ್ಕೆ ಹಣದ ಕೊರೆತೆ ಉಂಟಾಗುತ್ತದೆ. ಸುಲಭವಾಗಿ ಬೇರೆಯವರ ಪ್ರಭಾವಕ್ಕೆ ಒಳಗಾಗುವಿರಿ. ಅಂತಾರಾಷ್ಟ್ರೀಯ ಭಾಷೆ ಕಲಿವ ಅವಕಾಶ ದೊರೆಯಲಿದೆ. ಸಾಲದ ವ್ಯವಹಾರದಲ್ಲಿ ಮನಸ್ತಾಪ ಉಂಟಾಗಲಿದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

-----------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.