ಕನ್ನಡ ಸುದ್ದಿ  /  Astrology  /  Horoscope Today Astrology Prediction 18th April 2024 Leo Virgo Libra Scorpio Daily Horoscope Sts

Horoscope Today: ದಂಪತಿ ನಡುವೆ ಹಣಕಾಸಿನ ವಿಚಾರವಾಗಿ ಭಿನ್ನಾಭಿಪ್ರಾಯ, ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ; ಏ. 18ರ ದಿನ ಭವಿಷ್ಯ

18th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18th April 2024 Daily Horoscope)

 ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ : ದಶಮಿ ಸಂಜೆ 06.37 ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ಬೆಳಗ್ಗೆ 09.21 ರವರೆಗೂ ಇದ್ದು ನಂತರ ಮಖೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.31

ರಾಹುಕಾಲ : 01.30 ರಿಂದ ಹ.03.00

ರಾಶಿಫಲ

ಸಿಂಹ

ಅತಿಯಾದ ಆತ್ಮವಿಶ್ವಾಸದಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಬಿಡುವಿನ ದಿನವಾದರೂ ಹೆಚ್ಚಿನ ಜವಾಬ್ದಾರಿಯ ಕಾರಣ ಉದ್ಯೋಗಕ್ಕೆ ತೆರಳುವಿರಿ. ಖರ್ಚು ವೆಚ್ಚಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಕುಟುಂಬದ ಕೆಲಸ ಕಾರ್ಯಗಳಲ್ಲಿ ಶುಭಫಲಗಳನ್ನು ಪಡೆಯುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಮಕ್ಕಳ ಜೊತೆಯಲ್ಲಿ ಸಂತೋಷದಿಂದ ವೇಳೆ ಕಳಿಯುವಿರಿ. ಸಂಬಂಧಿಕರಿಂದ ಮಕ್ಕಳಿಗೆ ವಿಶೇಷ ಉಡುಗೊರೆ ದೊರೆಯಲಿದೆ. ಗೃಹಬಳಕೆಯ ಪದಾರ್ಥಗಳ ವ್ಯಾಪಾರದಲ್ಲಿ ಹೇರಳ ಸಂಪಾದನೆ ಇರುತ್ತದೆ. ವಿದ್ಯಾರ್ಥಿಗಳಿಗೆ ಶುಭವಿದೆ. ಎದೆಯಲ್ಲಿ ಉರಿಯ ಅನುಭವವಾಗುತ್ತದೆ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು :ಪೂರ್ವ

ಅದೃಷ್ಟದ ಬಣ್ಣ : ಬಿಳಿ ಬಣ್ಣ

ಕನ್ಯಾ

ಪರಿಸ್ಥಿತಿಯ ಒತ್ತಡದಿಂದ ಉದ್ಯೋಗ ಬದಲಾಯಿಸುವಿರಿ. ಪ್ರಮುಖ ಸಭೆಯೊಂದಕ್ಕೆ ಗೈರುಹಾಜರಾಗುವಿರಿ. ಹಣಕಾಸಿನ ಕೊರತೆ ಕಂಡುಬರುತ್ತದೆ. ವಾಹನಗಳ ಮಾರಾಟದಲ್ಲಿ ಲಾಭ ಗಳಿಸುವಿರಿ. ಹಣಕಾಸಿನ ಸಂಸ್ಥೆಯಿಂದ ಹಣದ ಸಹಾಯ ದೊರೆಯುತ್ತದೆ. ಸ್ವಂತ ಉದ್ಧಿಮೆ ಇದ್ದಲ್ಲಿ ಉದ್ಯೋಗಸ್ಥರಿಗೆ ವಿಶೇಷವಾದ ಸೌಲಭ್ಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಹಳೆ ಸ್ನೇಹಿತರ ಭೇಟಿಯ ಅವಕಾಶ ಲಭಿಸುತ್ತದೆ. ಸಂಬಂಧಿಯೊಬ್ಬರ ನಡುವಿನ ಹಣಕಾಸಿನ ವಿವಾದವೊಂದು ಸುಖಾಂತ್ಯಗೊಳ್ಳುತ್ತವೆ. ಒಂದಕ್ಕಿಂತಲೂ ಹೆಚ್ಚು ಆದಾಯ ಇರುತ್ತದೆ. ಹೊಸ ಮನೆಯನ್ನು ಕೊಳ್ಳುವ ಅಥವ ಕಟ್ಟುವ ಕೆಲಸವನ್ನು ಆರಂಭಿಸುವಿರಿ. ದಂಪತಿಗಳ ಮಧ್ಯೆ ಹಣಕಾಸಿನ ವಿಚಾರವಾಗಿ ಭಿನಾಭಿಪ್ರಾಯ ಮೂಡಲಿದೆ

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಬೂದು ಬಣ್ಣ

ತುಲಾ

ಅಪರೂಪಕ್ಕೆ ದೊರೆವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಿರಿ. ಮಕ್ಕಳ ವಿದ್ಯಾಭ್ಯಾಸದ ಸಲುವಾಗಿ ಅನಿವಾರ್ಯವಾಗಿ ಪರಸ್ಥಳಕ್ಕೆ ತೆರಳುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕಿನ ನಿರ್ಧಾರವನ್ನು ತಗೆದುಕೊಳ್ಳದಿರಿ. ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಹಾರದಲ್ಲಿ ಹೆಚ್ಚಿನ ಹಣ ಗಳಿಸುವಿರಿ. ವಿದ್ಯಾರ್ಜನೆಯ ನಡುವೆ ಮನರಂಜನೆಯತ್ತ ವಾಲುವಿರಿ. ತಾಯಿಯವರ ಜೊತೆಗೂಡಿ ಹೊಸ ವ್ಯಾಪಾರ ಆರಂಭಿಸುವ ಸೂಚನೆಗಳಿವೆ. ಬೇಸರ ದೂರ ಮಾಡಲು ಮನರಂಜನಾಕೂಟಕ್ಕೆ ತೆರಳುವಿರಿ. ದೇವಾಲಯದ ಜೀರ್ಣೋದ್ದಾರ ಕೆಲಸಕೆ ಸಹಾಯ ಮಾಡುವಿರಿ. ಮನೆಬಳಕೆಗಾಗಿ ಐಷಾರಾಮಿ ವಾಹನವನ್ನು ಕೊಳ್ಳುವಿರಿ. ಪುಣ್ಯಸ್ನಾನಕ್ಕೆ ಎಲ್ಲರೊಂದಿಗೆ ತೆರಳುವಿರಿ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಎದುರಾಗುವ ಅಡ್ಡಿ ಆತಂಕಗಳನ್ನು ಗೆಲ್ಲುವಿರಿ. ಕುಟುಂಬದ ಮುಖ್ಯ ಕೆಲಸವನ್ನು ಪೂರ್ಣಗೊಳಿಸುವಿರಿ. ಅನಿವಾರ್ಯದ ಪರಿಸ್ಥಿತಿಯಲ್ಲಿ ಬೇರೆಯವರಿಂದ ಹಣವನ್ನು ಪಡೆಯುವಿರಿ. ಅಧಿಕಾರಿಗಳಾಗಿದ್ದಲ್ಲಿ ಉದ್ಯೋಗದಲ್ಲಿ ಹೆಚ್ಚಿದ ಜವಾಬ್ದಾರಿ ನಿಮ್ಮದಾಗಲಿದೆ. ವಿದೇಶದಲ್ಲಿ ಉದ್ಯೋಗಕ್ಕೆ ದೊರೆಯುತ್ತದೆ. ಸರ್ಕಾರದ ಅದೀನದ ಸಂಘ ಸಂಸ್ಥೆಗಳ ನಿರ್ವಹಣೆ ಮಾಡುವಿರಿ. ಸಮಾಜದಲ್ಲಿ ಗೌರವ ಪಡೆಯುವಿರಿ. ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಲಿದ್ದಾರೆ. ಕೊಟ್ಟ ಮಾತಿನ ಅನುಗುಣವಾಗಿ ಸಾಮಾಜಿಕ ಕೆಲಸಗಳ ಮಾಡಬೇಕಾಗುತ್ತದೆ. ದಿನಾಂತ್ಯಕ್ಕೆ ಪೂಜಾಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಖ್ಯಾತ ವ್ಯಾಪಾರಸಂಸ್ಥೆಯ ಪಾಲುದಾರಿಕೆ ದೊರೆಯುತ್ತದೆ. ಹೊಸ ವಾಹನ ಕೊಳ್ಳುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).